Homeಅಂಕಣಗಳುಮೂರು ಪಾರ್ಟಿಯವರೂ ಅಳುತ್ತಿದ್ದಾರಲ್ಲಾ!

ಮೂರು ಪಾರ್ಟಿಯವರೂ ಅಳುತ್ತಿದ್ದಾರಲ್ಲಾ!

- Advertisement -
- Advertisement -

ಕರ್ನಾಟಕದ ರಾಜಕಾರಣ ಭಲೇ ಮಜವಾಗಿದೆಯಲ್ಲಾ. ಈ ಹುಚ್ಚರ ಸಂತೆಯನ್ನು ನೋಡಿ ಜನ ಎಲ್ಲಾ ಪಕ್ಷದವರನ್ನು ಶಪಿಸುವಂತಾಗಿದ್ದಾರಂತಲ್ಲಾ. ಇದಕ್ಕೆ ಹಲವಾರು ಪಕ್ಷಾಂತರಿಗಳ ಉದಾಹರಣೆ ನೋಡಬಹುದು. ಕಾಂಗ್ರೆಸ್, ಬಿಜೆಪಿ, ದಳ ಮೂರು ಪಾರ್ಟಿಗಳು ಒಂದಾದ ಸಮಯ ಇದು. ಎಲ್ಲರೂ ಒಂದೇ ತರಹ ಮಾತನಾಡುತ್ತಿದ್ದಾರೆ. ಆದರೆ ಈ ನಡುವೆ ನಡ್ಡಾ, ಶಾ, ಮೋದಿ ಕರ್ನಾಟಕದ ಕೆಲವು ರಾಜಕಾರಣಿಗಳನ್ನು ಗೋಶಾಲೆಗೆ ದೂಡಿದ್ದು ನೋಡಿದರೆ ಶಾನೆ ಅನುಮಾನವಾಗುತ್ತಿದೆಯಲ್ಲಾ. ಜನರ ತಲೆಯಲ್ಲಿ ತುಂಬಿರುವ ದೊಡ್ಡ ಅನುಮಾನವೆಂದರೆ ಇವಿಎಂ ಬಗೆಗಿನ ಸಂಶಯ. ಹೀಗಿದ್ದರೂ, ಹಳೆ ತಲೆಗಳು ಪಾರ್ಟಿಯನ್ನು ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ತರುವುದಿಲ್ಲ, ಮಾಗಿದ ರಾಜಕಾರಣಗಳಿಂದ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮನೆಹಾಳ ಕಾರ್ಯಕ್ರಮಗಳ ಅನುಷ್ಠಾನ ಕಷ್ಟ; ಇಂತಲ್ಲಿ ಜಗದೀಶ್ ಶೆಟ್ಟರ್‌ನಂತವರ ಅಗತ್ಯವಿಲ್ಲ. ಅದಿರಲಿ ಒಮ್ಮೆ ಮುಖ್ಯಮಂತ್ರಿಯಾಗಿದ್ದ ಶೆಟ್ಟರ್ ತನಗಿಂತ ಕಿರಿ ಹುಡುಗನ ಆಡಳಿತದಲ್ಲಿ ಕೇವಲ ಶಾಸಕನಾಗಿದ್ದು ಮುಂದೆಯೂ ಹಾಗೇ ಇರುತ್ತೇನೆಂದು ಹೇಳಿ ಟಿಕೆಟ್‌ಗಾಗಿ ರಚ್ಚೆ ಹಿಡಿದಿರುವುದು ಅಚ್ಚರಿಯಾಗಿದೆಯಲ್ಲಾ ಥೂತ್ತೇರಿ.

*****

ಪಾರ್ಟಿಯಿಂದ ಟಿಕೆಟ್ ಸಿಗದ ಹಲವಾರು ಜನ ಕೋಣವನ್ನು ಕಳೆದುಕೊಂಡ ಎಮ್ಮೆಯಂತೆ ಅಳುತ್ತಿದ್ದಾರೆ. ಈ ಪೈಕಿ ಉಡುಪಿ ಭಟ್ಟನ ಅಳು ನೋಡಿ ಕೃಷ್ಣನೇ ಅತ್ತ ತಿರುಗಿದನಂತೆ. ಇನ್ನ ಜಗದೀಶ್ ಶೆಟ್ಟರ ಅಳಲು ಜನಗಳನ್ನೇ ಬಿಟ್ಟಿದ್ದಾರೆ. ಎ.ಟಿ ರಾಮಸ್ವಾಮಿ ಮತ್ತು ಮುದ್ದಹನುಮೇಗೌಡರು ಒಳದುಃಖಿಗಳಾದ್ದರಿಂದ ದುಃಖ ಬಹಿರಂಗವಾಗಿ ಕಾಣಲಿಲ್ಲ. ಇನ್ನು ಶಿವಮೊಗ್ಗದ ಈಶ್ವರಪ್ಪನ ಸೊಸೆ ಅಳುವುದನ್ನು ಕೇಳಿ ಬಹಳ ಜನ ಮನೆಯ ಬಳಿಗೆ ಓಡಿಬಂದರಂತೆ. ಅಲ್ಲಿ ಈಶ್ವರಪ್ಪನೂ ದಂಗಾಗಿ ಕೂತಿದ್ದರಂತೆ. ಹೆಂಡತಿ ಆಸ್ಪತ್ರೆಯಲ್ಲಿರುವುದನ್ನಾದರೂ ಪಾರ್ಟಿ ಗ್ರಹಿಸಬೇಕಿತ್ತು; ಈಶ್ವರಪ್ಪನಿಗೆ ಎಷ್ಟು ಸಿಟ್ಟು ಬಂದಿತೆಂದರೆ ರಾಜಕಾರಣಕ್ಕೆ ನಿವೃತ್ತಿಯನ್ನೇ ಘೋಷಿಸಿಬಿಟ್ಟರು.

ಕೆ.ಎಸ್.ಈಶ್ವರಪ್ಪ

ಈ ತ್ಯಾಗ ಮಗನ ಭವಿಷ್ಯಕ್ಕಾಗಿ ನಡೆದದು ಎಂದೂ ಜನ ಆಡಿಕೊಂಡರು. ಇನ್ನು ಮುಂದೆ ರಾಜಕಾರಣದ ವೇದಿಕೆಯಿಂದ ’ದನ ತಿನ್ನುವವರ ಗಂಟಲು ಸೀಳಬೇಕು, ಕೈ ಕತ್ತರಿಸಬೇಕು, ಆ ಸಿದ್ದರಾಮಯ್ಯ ನಾಯಿ ಇದ್ದಂತೆ, ಆ ಡಿ.ಕೆ.ಶಿ ಹಂದಿಯಿದ್ದಂತೆ, ಮುಸ್ಲಿಂ ಗೂಂಡಾಗಳಿಗೆ ತಕ್ಕಪಾಠ ಕಲಿಸಬೇಕು, ಹೆಣ್ಣು ಮಕ್ಕಳು ರೇಪಾದ್ರೆ ನಾವೇನು ಮಾಡಕಾಗತ್ತೆ, ನಲವತ್ತು ಪರಸೆಂಟು ಕೊಡಕ್ಕಾಗದೋನು ಸುಸೈಡ್ ಮಾಡಿಕತ್ತನೆ ಅಂತ ನನಿಗೇನು ಕನಸುಬಿದ್ದಿತ್ತೆ’ ಇಂತ ಮಾತುಗಳು ಒಡಕಲು ಸೈಲೆಂನ್ಸರ್ ಪೈಪಿನಂತ ಗಾಡಿಯಿಂದ ಹೊರಬರುವುದಿಲ್ಲ ಎಂಬ ಸಮಾಧಾನ ನಾಡಿನಲ್ಲಿ ಹರಡಿದೆಯಂತಲ್ಲಾ ಥೂತ್ತೇರಿ.

*****

ಟಿಕೆಟ್ ಸಿಗದವರೆಲ್ಲಾ ತಮ್ಮದೇ ಸಾವಿನ ಸಂದೇಶ ಬಂದಂತೆ ಅಳುತ್ತಿರುವಾಗ ಪ್ರಳಯವೇ ಸಂಭವಿಸಿದರೂ ಅಳಲಾರದ ರೇವಣ್ಣನವರು ಭವಾನಿಗೆ ಟಿಕೆಟ್ ಸಿಗದ ಕಾರಣಕ್ಕೆ ಅತ್ತಿರಬಹುದೆ ಎಂಬ ಗುಮಾನಿಯಾಯ್ತು. ಅವರನ್ನೇ ಕೇಳಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್ ಟಕ್ ಟಕ್ ಟಕ್ ಟಕ್ ಟಕ್ ಟಕ್.. ಹಲೋ

“ಯಾರ್ರಿ ಅದು?”

“ನಮಸ್ಕಾರ ಸಾರ್ ನಾನು ಯಾಹು.”

“ಯಾವು ಅಂದ್ರೆ ಯಾರ್ರಿ?”

“ಪತ್ರಕರ್ತ ಸಾರ್.”

“ನಿಮ್ಮಿಂದ್ಲೆ ಕಂಡ್ರಿ ಹಿಂಗಾಗಿದ್ದು, ದಿನ ಬರದು ಬರದು ಮಡಗಿದ್ರಿ. ಈಗೇನು ಬರಿತಿರಿ?”

“ಭವಾನಿಯಕ್ಕನಿಗೆ ಟಿಕೆಟ್ ಸಿಗಲಿಲ್ಲ ಅಂತ ಬೇಜಾರಾಯ್ತ ಸಾ?”

“ಆಗದಿಲವೇನ್ರಿ? ನನ್ನಂಥೋನಿಗೇ ಅಳು ಬತ್ತದೆ.”

“ಅಳು ಅದಿಮಿಕ್ಕಬಾರ್ದು ಸಾ, ಮನಸೋಯಿಚ್ಚೆ ಅತ್ತಬುಡಬೇಕು.”

“ಜನ ಏನಂತರ್ರೀ.. ನೀವೇಳಿದಂಗೆ ಅಳಕ್ಕಾಯ್ತದ?”

ಇದನ್ನೂ ಓದಿ: “ಸುದೀಪನೂ ನಲವತ್ತು ಪರಸೆಂಟಾದ ಅಂತಾರಲ್ಲಾ ಸಾರ್”

“ಸಾರ್ ಭವಾನಿಯಕ್ಕ ಒಳ್ಳೆ ಆಡಳಿತಗಾರ್ತಿ. ನಿಜಕ್ಕೂ ಆ ಭವಾನಿದೇವಿಯಂಗೆ ಕಾಣ್ತರೆ. ಕುಮಾರಣ್ಣನ ಹೆಂಡ್ತಿ ಶಾಸಕರಾಗಬಹುದು, ಅದೇ ಭವಾನಿಯಕ್ಕ ಆಗಕ್ಕಾಗಲ್ಲ ಅಂದ್ರೆ ಇದ್ಯಾವ ನ್ಯಾಯ ಸಾ?”

“ನಾನು ನಿಮ್ಮಂಗೆ ಕೇಳಿದೆ ಕಂಡ್ರಿ, ಆದ್ರೆ ಕುಮಾರ ಹಟಹಿಡಿದುಬುಟ್ಟ. ಪ್ರಕಾಸ ಅಂತ ಹಾಸನದ ಎಮ್ಮೆಲ್ಲೆ ಇದ್ದ ನೋಡು, ಅವುಂದು ಕುಮಾರಂದು ಏನೂ ಯವಾರಿತ್ತಂತೆ, ಅವುನು ಸತ್ತೋದ, ಆ ರುಣ ತೀರಿಸಕ್ಕೆ ಅವುನ ಮಗನಿಗೇ ಟಿಕೆಟ್ ಕೊಟ್ಟ. ನಾವೇನು ಮಾಡಕಾಯ್ತದೆ. ನಾನೆ ಪಾರ್ಟಿ ಪ್ರಸಿಡೆಂಟಾಗಿದ್ರೆ ಮದ್ಲು ಭವಾನಿಗೆ ಟಿಕೆಟ್ ಕೊಟ್ಟು ಅಮ್ಯಾಲೆ ಉಳದೋರಿಗೆ ಕೊಡತ್ತಿದ್ದೆ.”

“ಈ ವಿಷಯದಲ್ಲಿ ದೇವೇಗೌಡ್ರು ನಿಮ್ಮ ಪರ ಇರಲಿಲ್ವ ಸಾ?”

“ಇದ್ರು ಕಂಡ್ರೀ. ಪಾಪ ಅವುರ ತಾನೆ ಏನು ಮಾಡ್ಯಾರು, ಕುಂತು ಬುಟ್ಟವುರೆ. ಮದ್ಲಿನಂಗಿದ್ರೆ ಬುಡತಿದ್ವ ನಾವೂ”

“ಅದು ಪತ್ತೆ ಆಯ್ತ ಸಾ?”

“ಯಾವುದ್ರಿ?”

“ದೇವೇಗೌಡ್ರ ಮ್ಯಾಲೆ ಯಾವುದೋ ಕ್ಯಟ್ಟ ಕಣ್ಣು ಬಿದ್ದಿದೆ ಅಂತ ಕುಮಾರಣ್ಣ ಅತ್ತರಲ್ಲ, ಅದು ಸಾರ್.”

“ಈ ಎಲಕ್ಸನ್ ಗಲಾಟಿಲಿ ಅದ ಯಾರೂ ಅಂತ ಕಂಡಿರಲಿಲ್ಲ ಕಂಡ್ರಿ.”

ರೇವಣ್ಣ

“ಅಂಜನ ಹಾಕಿ ನೋಡಿದ್ರೆ ಗೊತ್ತಾಗದು ಸಾ. ಉಡುಪಿ ಕಡೆ ಬನ್ನಂಜೆ ಗೋವಿಂದಾಚಾರಿ ಅಂತ ಇದ್ದರು. ಅವುರ ಮನೆಲಿ ಒಂದು ಪುಸ್ತಕ ಕಳೆದೋಗಿತ್ತಂತೆ, ಅಂಜನ ಹಾಕಿ ನೋಡಿದಾಗ ಅದಿದ್ದ ಜಾಗ ಕಾಣತಂತೆ. ಅಂಗೆ ನೀವೂ ಅಂಜನ ಹಾಕಬೇಕಾಗಿತ್ತು.”

“ಅಂಗೈ ಹುಣ್ಣಿಗೆ ಕನ್ನಡಿ ಬೇಕೇನ್ರಿ! ನಮ್ಮಪ್ಪನಿಗೆ ಏನು ವಸಿ ಜನ ಆಗದೋರಿದ್ದರೆ, ದೇವರು ನಮ್ಮಪ್ಪ ಕಡೆ ಇದ್ದಿದ್ರಿಂದ ಅವುರೆಲ್ಲ ತೀರೋದ್ರು. ನಮ್ಮಪ್ಪ ಇನ್ನು ಗಟ್ಟಿ ಮುಟ್ಟಾಗವುರೆ.”

“ಗಟ್ಟಿ ಜೀವ ಸಾರ್ ಅದು, ಪುನಃ ತನ್ನ ಕುಟುಂಬನ ಕರ್ನಾಟಕದ ಸಿಂಹಾಸನದ ಮೇಲೆ ಕೂರಿಸೆ ಹೋಗದದು.”

“ನಮ್ಮಾಸೆನೂ ಅದೆ ಅಲವೇನ್ರಿ! ಕುಮಾರ ಮತ್ತೆ ಮುಖ್ಯಮಂತ್ರಿ ಆಗಬೇಕು, ನಾನು ಪಿಡಬ್ಲುಡಿ ಮಂತ್ರಿ ಆಗಬೇಕು ಅಂತ ಹೋರಾಡ್ತಯಿರದು.”

“ಜೊತೆಗೆ ಇಂಧನ ಖಾತೆ, ಕೆಎಂಎಫ್‌ನೂ ನೀವೇ ವಹಿಸಿಕೋಬೇಕು ಸಾರ್. ಯಾವುದೇ ಖಾತೆ ಕೊಟ್ರು ಚನ್ನಾಗಿ ನಿಭಾಯಿಸ್ತಿರಿ ನೀವು. ಆ ಶಕ್ತಿ ಇವತ್ತು ಯಾವನಿಗೂ ಇಲ್ಲ.”

“ಅಲ್ಲ ಕಂಡ್ರೀ ನಾನು ಪಿಡಬ್ಲುಡಿ ಮಂತ್ರಿಯಾಗಿದ್ದಾಗ ಬೆಂಗಳೂರು ರೋಡು ಯಂಗಿದ್ದೋ.. ಒಂದೆಒಂದು ಬಟನ್ನು (ಗುಂಡಿ) ರಸ್ತೆಲಿ ಕಾಣತಿರಲಿಲ್ಲ. ಈ ಬಿಜೆಪಿಗಳು ಬಂದು ರೋಡು ತುಂಬ ಬರೀ ಬಟನ್ನಗಳೇಯ. ಪಾರ್ಟಿ ಪರಸೆಂಟು ಅಂದ್ರೆ ಯಾವು ರೋಡು ಚನ್ನಾಗಿರತವುರಿ?”

“ನೀವು ಪುನಃ ಮಂತ್ರಿಯಾಗಿ ಪಿಡಬ್ಲುಡಿ, ಇಂಧನ ಖಾತೆ ಮತ್ತು ಕೆಎಂಎಫ್ ಪಡಕೋಬೇಕು ಸಾರ್. ಅಂಗೆ ಭವಾನಿಯಕ್ಕನ್ನ ಎಮ್ಮೆಲ್ಸಿ ಮಾಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮಾಡಬೇಕು ಸಾ.”

“ಆದ್ಕೆ ನಿಮಗೆ ತಲೆಯಿಲ್ಲ ಅನ್ನದು.”

“ಯಾಕ್ ಸಾ?”

“ಅಲ್ಲಕಂಡ್ರಿ ಅವುಳು ಜಿಲ್ಲಾ ಪಂಚಾಯ್ತಿ ಆಡಳಿತ ಮಾಡುವಾಗಲ್ವಾ, ಇಸುಗೂಲುಡುಗ್ರು ವಳ್ಳೆ ನಂಬರ್ ತಗಂಡಿದ್ದೂ, ಆದ್ಕೆ ಎಜುಕೇಶನ್ ಮಂತ್ರಿ ಮಾಡನ ಅಂತ ಇದ್ದಿನಿ. ಆ ಮಹಿಳೆ ಮಕ್ಕಳು ಕಲ್ಯಾಣ ಇಲಾಖೆ ಯಾರಿಗೆ ಬೇಕ್ರಿ?”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...