Homeಅಂಕಣಗಳುಕೆಲವೇ ದಿನಗಳಲ್ಲಿ ಆಡು ಕುರಿ ಕರ ಕಾಣೆಯಾಗುತ್ತವಲ್ಲಾ!

ಕೆಲವೇ ದಿನಗಳಲ್ಲಿ ಆಡು ಕುರಿ ಕರ ಕಾಣೆಯಾಗುತ್ತವಲ್ಲಾ!

- Advertisement -
- Advertisement -

ನಮ್ಮ ಸಂತೆಶಿವರದ ಲಿಂಗಣ್ಣಯ್ಯ ಭೈರಪ್ಪ ಗೊತ್ತೆ ನಿಮಗೆ? ಅದೆ ಹಿಂದೂ ಧರ್ಮದ ಪುರೋಹಿತಶಾಹಿ ಪುನರುತ್ಥಾನದ ಕಾದಂಬರಿ ಕಾರ್ಖಾನೆ. ಈ ಕಾರ್ಖಾನೆ ಈಗ ಸ್ಥಗಿತಗೊಂಡಿದೆ ಏಕೆಂದರೆ ಅವರ ತೊಂಬತ್ತೆರೆಡು ವರ್ಷದಲ್ಲಿ ಸುಳ್ಳು ಸೃಜನಶೀಲತೆ ಕಷ್ಟವಾದ್ದರಿಂದ; ಬರವಣಿಗೆ ಬತ್ತಿ ಹೋಗಿದೆ. ಇದನ್ನು ಗ್ರಹಿಸಿದ ಮೋದಿ ಗವುರಮೆಂಟು ಭೈರಪ್ಪನವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ಕೊಟ್ಟಿತು. ಜ್ಞಾನಪೀಠ ಸಿಗಲಿಲ್ಲ ಎಂದು ಕೊರಗುತ್ತಾ ವೃದ್ಧಾಪ್ಯ ಸಮೀಪಿಸಿದ ಭೈರಪ್ಪ ಈ ಸಮಯದಲ್ಲಿ ಧನಕನಕದ ಪ್ರಶಸ್ತಿಯನ್ನೇ ಎಡವಿಬಿದ್ದಂತೆ ಪದ್ಮಭೂಷಣ ದೊರೆತಿದೆ. ಈ ಸುದ್ದಿ ಕೇಳಿ ಬವಳಿ ಬಂದಂತಾದ ಭೈರಪ್ಪ ಈ ಪ್ರಶಸ್ತಿ ಕೊಟ್ಟ ಮೋದಿ 2024ರಲ್ಲಿ ಗೆದ್ದು ಪ್ರಧಾನಿಯಾಗಲಿ ಮತ್ತೆ 2029ರಲ್ಲೂ ಗೆದ್ದು ಪ್ರಧಾನಿಯಾಗಲಿ, ದುರ್ದೈವದಿಂದ ನಾನು ಅಲ್ಲಿಯವರೆಗೂ ಇರಲಾಗುವುದಿಲ್ಲ, ಆದರೂ ಅದೇನೂ ಬಹಳ ದೂರದ ಸಮಯವಲ್ಲ, ಕೇವಲ 8 ವರ್ಷ ಎಂದಿಲ್ಲವಲ್ಲ. ಮೋದಿ ಪರ ಇಂತಹ ವಕಾಲತ್ತು ವಹಿಸಿದ ಭೈರಪ್ಪ ಯಾರಾದರೂ ತಪ್ಪು ತಿಳಿದಾರೆಂದು ನಾನು ಯಾವ ಪಕ್ಷದ ಪಕ್ಷಪಾತಿಯಲ್ಲ, ಮೋದಿ ಭಕ್ತ ಅಷ್ಟೇ; ಇಂತಹ ಪ್ರಧಾನಿ ಈವರೆಗೆ ಬಂದಿರಲಿಲ್ಲ ಎಂದು ತಮ್ಮ ಅಜ್ಞಾನವನ್ನ ಅನಾವರಣ ಮಾಡಿದರಲ್ಲಾ. ಅಜ್ಞಾನ ಏಕೆಂದರೆ ನೆಹರೂ ನಂತರ ಈ ದೇಶದ ಪ್ರಧಾನಿಯಾಗಿದ್ದ ಲಾಲ್‌ಬಹದ್ದೂರ್ ಶಾಸ್ತ್ರಿ ನಿಧನರಾದಾಗ ಶಾಸ್ತ್ರಿ ಕುಟುಂಬ ಬಡತನದಲ್ಲಿತ್ತು. ಅವರಿಗೆ ಏನಾದರೂ ಸಹಾಯ ಮಾಡಬೇಕೆಂಬ ಚರ್ಚೆ ಅಂದಿನ ಸಂಸತ್ತಿನಲ್ಲಿ ನಡೆದಿತ್ತು. ಇದು ಭೈರಪ್ಪನವರ ಮತಾಂಧ ಮೆದುಳಿಗೆ ಹೊಳೆಯದ ಸಂಗತಿಯಂತಲ್ಲಾ, ಥೂತ್ತೇರಿ.

*****

ಸಂತೆಶಿವರ ಎಂಬ ಹಳ್ಳಿಯಲ್ಲಿ ಒಕ್ಕಲಿಗರು ಮತ್ತು ಕುರುಬರ ಮನೆಗಳ ನಡುವೆ ಇದ್ದು ಅವರುಗಳ ಸಹಾಯದಿಂದ ಮೇಲೆ ಬಂದ ಭೈರಪ್ಪ ತನ್ನನ್ನು ಸಾಕಿ ಸಲಹಿದ ಈ ಜನರ ಬಗ್ಗೆ ಎಂದೂ ಮಾತನಾಡದೆ ಶ್ರಮಿಸಿದ್ದೆಲ್ಲಾ ತಮ್ಮ ಕೋಮಿನ ಬ್ರಾಹ್ಮಣರ ಉದ್ಧಾರಕ್ಕೆ ಮತ್ತು ಸಂಘ ಪರಿವಾರದ ಏಳ್ಗೆಗೆ. ಇನ್ನೊಂದು ಐತಿಹಾಸಿಕವಾದ ಸತ್ಯ ಯಾವುದೆಂದರೆ, ನಮ್ಮ ನೆಲದ ಯಾವ ಜಾತಿಗೇ ಆಗಲಿ ಭೈರಪ್ಪನವರ ಪರಿವಾರ ಎಂದೂ ಅಣ್ಣತಮ್ಮಂದಿರಾಗಿ ನಡೆದುಕೊಂಡಿಲ್ಲ, ಆ ಭಾವನೆಯೂ ಅವರಿಗೆ ಬರುವುದಿಲ್ಲ. ಹಾಗಾಗಿ ಸಂತೆಶಿವರದ ಜನಗಳೆಂದೂ ಭೈರಪ್ಪನವರಿಗೆ ಅಣ್ಣ ತಮ್ಮಂದಿರಾಗಿ ಗೋಚರವಾಗಲಿಲ್ಲ. ಬದಲಿಗೆ ಮೈಸೂರಲ್ಲಿ ಬೀಡು

ಭೈರಪ್ಪ

ಬಿಟ್ಟಿದ್ದ ಬ್ರಾಹ್ಮಣ ಸಮುದಾಯದವರಿಗೆ ಬಂಧುವಾದರು; ಅದ್ದರಿಂದ ದೈತ್ಯ ಬರಹಗಾರನಾದರೂ ಮಾನವತಾವಾದಿಯಾಗಲಿಲ್ಲ. ಇನ್ನು ಭೈರಪ್ಪನವರ ಬಾಯಲ್ಲಿ ಮೋದಿ ಜಪ ಆರಂಭವಾಗಿರುವಾಗಲೇ ಬಿಬಿಸಿ ಗುಜರಾತ್ ಗಲಭೆಗೆ ಸಂಬಂಧಿಸಿದ ಸಾಕ್ಷಚಿತ್ರ ಬಿಡುಗಡೆ ಮಾಡಿಬಿಟ್ಟಿದ್ದಾರಲ್ಲಾ. ಭೈರಪ್ಪನವರ ಉತ್ತರಕಾಂಡದ ಮಾತುಗಳನ್ನೇ ಜೋರು ದನಿಯಲ್ಲಿ ಮಾತನಾಡುತ್ತಿರುವ ಭಗವಾನ್ ಮತ್ತೆ ’ರಾಮ ದೇವರಲ್ಲ ನರಮನುಷ್ಯ’ ಇತ್ಯಾದಿ ಮಾತನಾಡಿ ಮಾಧ್ಯಮದ ಮೂರ್ಖರು ಮತ್ತು ಮತಾಂಧರಿಂದ ಉಗ್ರ ಟೀಕೆಗೆ ಒಳಗಾಗಿದ್ದಾರೆ. ಈ ಭಗವಾನ್ ತಮ್ಮ ಅಭಿಪ್ರಾಯ ಅದುಮಿಟ್ಟುಕೊಂಡು ಭೈರಪ್ಪ ಬರೆದ ಉತ್ತರಕಾಂಡ ಓದಲು ಹೇಳಿದರೆ ಎಷ್ಟು ಒಳ್ಳೆಯದಲ್ಲವೆ ಎಂಬುದು ಬುದ್ಧಿಜೀವಿಗಳ ಬುದ್ಧಿವಾದವಾಗಿದೆಯಲ್ಲಾ, ಥೂತ್ತೇರಿ.

*****

ಇತ್ತ ಬಿಜೆಪಿ ರಾಜಕಾರಣದ ಸಂಗತಿಗಳು ಶಾನೆ ದುಃಖಕರವಾಗಿವೆಯಲ್ಲಾ. ಆಸ್ತಿ ಮಾಡಲೆಂದೇ ಹೋರಾಟದ ರಾಜಕಾರಣ ಮಾಡುತ್ತಾ ಬಂದು, ಮಾರಿಕೊಂಡ ಮಾಧ್ಯಮದವರಿಂದ ರಾಜಾಹುಲಿ ಬಿರುದು ಪಡೆದ ಎಡೂರಪ್ಪನವರು ತಮ್ಮ ನಿಲುಗಡೆಯ ನಿಲ್ದಾಣವನ್ನು ಘೋಷಣೆ ಮಾಡಿದ್ದಾರೆ. ಎಡೂರಪ್ಪನನ್ನು ಇಳಿಸಲು ಸಾಕಷ್ಟು ಟೀಕೆ ಸಂಗ್ರಹ ಮಾಡಿಕೊಳ್ಳಲೆಂದೇ ನೇಮಿಸಿದ್ದ ಬಸವನಗೌಡ ಪಾಟೀಲರನ್ನು ಕರೆಸಿಕೊಂಡ ಹೈಕಮಾಂಡು, “ಅಪ್ನಾ ಎಡೂರಪ್ಪಾಕ ಟೀಕೆ ಬಂದ್ ಕರೊ ಬೈಯ್ಯಾ” ಎಂದು ಹೇಳಿ ಕಳಿಸಿರುವುದರಿಂದ ಯತ್ನಾಳ್ ಮುಂದೆ ಯಾರನ್ನು ಟೀಕಿಸಬೇಕೆಂದು ಚಿಂತಿಸುತ್ತಿರುವಾಗಲೇ, ಎಡೂರಪ್ಪ ನನಗೀಗ 80ವರ್ಷ, ಹಾಗೆಂದು ಮನೆಯಲ್ಲಿ ಕೂರಲಾಗುವುದಿಲ್ಲ, ಹಾಗಾಗಿ ಯಾವುದೇ ಸಭೆ ಸಮಾರಂಭ ಇರಲಿ ಅಲ್ಲಿಗೆ ಹೋಗಿ ಬೊಮ್ಮಾಯಿ ಜೊತೆ ನಿಂತುಕೊಳ್ಳುತ್ತೇನೆ ಎಂದಿದ್ದಾರಲ್ಲಾ. ಇದರಿಂದ ಒಳಗೊಳಗೇ ಮುಜುಗರಗೊಂಡಿರುವ ಬೊಮ್ಮಾಯಿ, ತಾನೆ ಮುಂದಾಳತ್ವ ವಹಿಸಲು ಚಿಂತಿಸುತ್ತಿದ್ದಾಗಲೇ, ಎಡೂರಪ್ಪ ಮುಂದಿನ ಚುನಾವಣೆಗೆ 140 ಸೀಟು ಗೆಲ್ಲಿಸುತ್ತೇನೆ ಎಂದುಬಿಟ್ಟಿದ್ದಾರಲ್ಲಾ. ಹಾಗೆ ನೋಡಿದರೆ ಮುಖ್ಯಮಂತ್ರಿಯೊಬ್ಬ ಆ ಪದವಿಯಿಂದ ಕೆಳಗಿಳಿದ ಮೇಲೆ ಹಾಲಿ ಮುಖ್ಯಮಂತ್ರಿ ಜೊತೆ ಕಾಣಿಸಿಕೊಂಡು ತಿರುಗುತ್ತಿರುವ ದಾಖಲೆ ಎಡೂರಪ್ಪನವರಿಗೆ ಮಾತ್ರ ಸೇರುವಂತದ್ದು. ಅಲ್ಲದೆ ಎಡೂರಪ್ಪನವರ ಜೋಳಿಗೆಯಲ್ಲಿ ಹಲವಾರು ಅಳಿಸಲಾಗದ ದಾಖಲೆಗಳಿವೆ; ಅವುಗಳನ್ನ ಮುರಿಯಲು ಯಾರಿಂದಲೂ ಸಾಧ್ಯವಿಲ್ಲ. ಆ ವಿಷಯದಲ್ಲವರು ಮಾಧ್ಯಮದವರು ಕೊಟ್ಟ ರಾಜಾಹುಲಿ ಬಿರುದಿಗೆ ಯೋಗ್ಯರಂತಲ್ಲಾ, ಥೂತ್ತೇರಿ.

****

ಇದನ್ನೂ ಓದಿ: ಎರಡು ದುಃಖದ ಸಂಗತಿ ಎದುರಾದವಲ್ಲಾ

ಮಂಡ್ಯ ಜಿಲ್ಲೆಯ ರಾಜಕಾರಣಕ್ಕೆ ಪ್ರವೇಶ ಮಾಡಿದ ಬಿಜೆಪಿ ಎಂಬ ಪಾರ್ಟಿ ಪ್ರಜಾಪ್ರಭುತ್ವದ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆಯಲು ನಾಗಮಂಗಲ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದೆಯಲ್ಲಾ. ಬಿಜೆಪಿಯಿಂದ ಸ್ಫರ್ಧಿಸಲು ಬಂದಾತ ಫೈಟರ್ ರವಿ ಎಂಬ ರೌಡಿ ಪಟ್ಟದವನು. ಚುನಾವಣೆಗೆ ನಾಗಮಂಗಲದ ಮತದಾರರನ್ನು ಕೊಳ್ಳಲು ತಂದಿರುವ ಹಣ ಎಪ್ಪತ್ತು ಕೋಟಿ ಇದೆಯಂತಲ್ಲಾ. ಇದರಲ್ಲಿ ತಾರತಮ್ಯವಿಲ್ಲದೆ ತಲೆಗೆ ಐದು ಸಾವಿರದಂತೆ ಹಂಚಿದರೆ ಆ ಮೊತ್ತ ಸರಿಯಾಗುತ್ತದಂತೆ. ಇನ್ನ ಹಂಚಲು ಬಿಟ್ಟ ಉಸ್ತುವಾರಿ ಜನರಿಗೆ ಲಕ್ಷವಂತೆ. ಈ ನಡುವೆ ಈಗಾಗಲೇ ಕಷ್ಟ ಹೇಳಿಕೊಂಡ ಜನರ ಕೈಗೆ ಹಣ ಸೇರುತ್ತಿದೆ, ಜೊತೆಗೆ ಈತ ಏರ್ಪಡಿಸುವ ಸಭೆಗೆ ಹೋದರೆ ತಲಾ 200 ರೂ. ಮತ್ತು ಬಿರಿಯಾನಿ ಊಟ. ಈಗಾಗಲೇ ಇಂತಹ ಮಾಂಸದ ಪರಿಶೆ ನೋಡಿದ ಪಕ್ಷೇತರ ಅಭ್ಯರ್ಥಿ

ಶಿವರಾಮೇಗೌಡ

ಶಿವರಾಮೇಗೌಡ ಹಾಗೂ ಜನತಾದಳದ ಸುರೇಶ್‌ಗೌಡ ಮತ್ತು ಕಾಂಗ್ರೆಸ್ಸಿನ ಚಲುವರಾಯಸ್ವಾಮಿ ದಂಗುಬಡಿದುಹೋಗಿದ್ದಾರಲ್ಲಾ. ಈ ಫೈಟರ್ ರವಿಗೆ ಫೈಟ್ ಕೊಡಲು ಈಗಾಗಲೇ ತಯಾರಾಗಿರುವ ಶಿವರಾಮೇಗೌಡ ಕೊಪ್ಪ ಹೋಬಳಿ ಮತ್ತು ಬಂಡಿಗನವಿಲೆ ಹೋಬಳಿಯಲ್ಲಿ ಮೂರು ಕಾರ್ಯಕ್ರಮಗಳನ್ನು ಮಾಡಿ ಬಾಡೂಟದ ಮಟ್ಟಿಗೆ ಫೈಟ್ ಕೊಡುತ್ತಿರಬೇಕಾದರೆ, ಅತ್ತ ಜೆಡಿಎಸ್‌ನ ಸುರೇಶ್‌ಗೌಡ ಕುಮಾರಣ್ಣ ಮತ್ತು ದ್ಯಾವೇಗೌಡರ ಬರುವಿಕೆಗಾಗಿ ಕಾಯುತಿದ್ದಾರಂತಲ್ಲಾ. ಇತ್ತ ಚಲುವರಾಯಸ್ವಾಮಿ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯರನ್ನು ಕರೆಸಲು ಸಿದ್ಧತೆ ನಡೆಸುತ್ತ ಇರಬೇಕಾದರೆ ಇವರೂ ಮಾಂಸದೂಟವನ್ನೇನಾದರೂ ಏರ್ಪಡಿಸಿದರೇ ಆ ಪ್ರಾಂತ್ಯದ ಆಡು, ಕುರಿ, ಎಮ್ಮೆ, ದನಕರುಗಳು ಕಾಣೆಯಾಗಿ ಎಲ್ಲಿ ನೋಡಿದರೂ ಬರೀ ಮನುಷ್ಯರೆ ಕಾಣುವ ಕಾಲ ಬಹಳ ದೂರವಿಲ್ಲ ಎನ್ನುವಂತಾಗಿದೆಯಲ್ಲಾ, ಥೂ ಥೂ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...