Homeಅಂಕಣಗಳುಸಿದ್ದರಾಮಯ್ಯ ರಾವಣನಂತಲ್ಲಾ!

ಸಿದ್ದರಾಮಯ್ಯ ರಾವಣನಂತಲ್ಲಾ!

- Advertisement -
- Advertisement -

ಪಾಪಾಸು ಕಳ್ಳಿಯ ಟಿಸಿಲಿನಂತಿರುವ ಬಿಜೆಪಿಯ ಭಜರಂಗಿ ಪಡೆ ಹಿಜಾಬ್‌ಗೆ ಕೈಹಾಕಿ ಎಳೆದು ನಂತರ, ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಮರ ಅಂಗಡಿಗಳಿರಬಾರದೆಂದು ಬೊಬ್ಬೆಹೊಡೆದ ಕೂಡಲೇ ಕರ್ನಾಟಕದ ತುಂಬೆಲ್ಲಾ ಬೊಬ್ಬೆಯದನಿ ಕೇಳಿತಲ್ಲಾ. ಏಕೆಂದರೆ ಈ ಬಿಜೆಪಿ ಅಥವಾ ಇನ್ನಾವುದೇ ಅದರ ಅಂಗ ಸಂಸ್ಥೆಗಳಿಗೆಲ್ಲಾ ಸ್ವಿಚ್‌ಬೋರ್ಡಿರುವುದು ಒಂದೇ ಜಾಗದಲ್ಲಿ. ಅದನ್ನು ಒತ್ತಿದ ಕೂಡಲೇ ಇಡೀ ನಾಡಿನ ತುಂಬೆಲ್ಲಾ ಒಂದೇ ಗಳಿಗೆಯಲ್ಲಿ ಮತೀಯ ತಲೆಗಳಿಗೆ ವಿದ್ಯುತ್ ಹರಿದಂತಾಗಿ ಶಾರ್ಟ್ ಸರ್ಕ್ಯೂಟ್ ಆಗುವುದು ಹಿಂದಿನಿಂದಲೂ ನಡೆದು ಬಂದಿದೆಯಂತಲ್ಲಾ. ಆದರೇನು ಈಗ ಇಂತಹ ಸ್ವಿಚ್ ಲೈನನ್ನ ಮಾಧ್ಯಮದವರೂ ಎಳೆದುಕೊಂಡು ಇಡೀ ದಿನ ಅಳೆದು, ಸುರಿದು, ಕೇರಿ, ತೂರಿ, ಅಯ್ಯೋಪಾಪಾ ಎಂಬ ಉದ್ಘಾರಕ್ಕೆ ತುತ್ತಾಗಿವೆಯಲ್ಲಾ. ಸಿದ್ದು ಜಗದ್ಗುರುಗಳು ಕೇಸರಿ ಬಟ್ಟೆ ತಲೆ ಮೇಲೆ ಹಾಕುವುದಿಲ್ಲವೆ ಎಂಬ ಮಾತೇ ಕಾರಣವಾಗಿ, ಮಾಧ್ಯಮದವರು ಮನಸೊ ಇಚ್ಛೆ ವದರೀ ವದರೀ ಜಗದ್ಗುರುಗಳನ್ನ ಎಬ್ಬಿಸಿ ಸಿದ್ದು ಮೇಲೆ ದಾಳಿ ಮಾಡಿಸಿದವಲ್ಲಾ. ವಾಸ್ತವವಾಗಿ ರಾಮಚಂದ್ರಾಪುರ ಮಠ, ಉಡುಪಿ ಮಠದ ಯತಿಗಳಿದ್ದವರೆಲ್ಲಾ ಸುಮ್ಮನಿದ್ದು ಎಡೂರಪ್ಪನವರಿಂದ ಧನ ಸಹಾಯ ಪಡೆದ ಧರ್ಮಗುರುಗಳೇ ಸಿದ್ದು ಮೇಲೆ ಬಿದ್ದಿದ್ದು ನೋಡಿ ಈ ಬಿಜೆಪಿಗಳಿಗೆ ಪರಮಾನ್ನ ಉಂಡಷ್ಟು ಖುಷಿಯಾಯ್ತಂತಲ್ಲಾ. ಥೂತ್ತೇರಿ.

*******

ಇನ್ನ ಬಿಜೆಪಿ ಪಾರ್ಟಿಯ ಅಧ್ಯಕ್ಷ ನಳೀನ್ ಕಟೀಲು ಎಂಬ ಬೃಹಸ್ಪತಿಗಳು ಸಿದ್ದುವನ್ನು ರಾವಣನಿಗೆ ಹೋಲಿಸಿದ್ದಾರೆ. ದಕ್ಷಿಣ ಕನ್ನಡದ ಈತ ಯಕ್ಷಗಾನವನ್ನು ನೋಡಿಯಾದರೂ ರಾವಣನ ಬಗ್ಗೆ ತಿಳಿದುಕೊಳ್ಳಬೇಕಿತ್ತು. ವಾಸ್ತವವಾಗಿ ಸಿದ್ದುಗೆ ರಾವಣನನ್ನು ಹೋಲಿಸಿದ್ದೇ ಸರಿಯಿಲ್ಲವೆಂಬುದು ರಾವಣಾಭಿಮಾನಿಗಳ ಅಭಿಪ್ರಾಯ. ರಾವಣ ಅಪ್ಪಟ ಶಿವಭಕ್ತ, ಸಂಗೀತಗಾರ, ವೀಣೆ ಶೇಷಣ್ಣನಿಗಿಂತ ಒಳ್ಳೆ ವೈಣಿಕ, ಒಳ್ಳೆಯ ನೃತ್ಯಪಟು. ಅಜೇಯನೆನಿಸಿಕೊಂಡಿದ್ದ ಒಳ್ಳೆ ಆಡಳಿತಗಾರ ಕುಬೇರನನ್ನ ಸೋಲಿಸಿ ಪುಷ್ಪಕ ವಿಮಾನವನ್ನ ಪಡೆದವನು. ಭುಜಂಗ ಸ್ತ್ರೋತ್ರ ರಚಿಸಿದ ಕರ್ತೃ. ಜ್ವಲಿಸುವ ಅಗ್ನಿಯಂತಿದ್ದ
ರಾಜಲಕ್ಷಣದಿಂದ ಶೋಭಿತನಾಗಿದ್ದ ತನ್ನ ರಾಜ್ಯದಲ್ಲಿ ಮಹಿಳಾ ಮೀಸಲಾತಿ ತಂದಿದ್ದ ಪ್ರಥಮ ದೊರೆ. ಲಂಕೆಯನ್ನ ರಕ್ಷಿಸಲು ಲಂಕಿಣಿ ನಿಲ್ಲಿಸಿದ್ದ. ದಂಡಕಾರಣ್ಯ ರಕ್ಷಿಸಲು ತಾಟಕಿ ನೇಮಿಸಿದ್ದ. ಲಂಕೆಯ ಹೆಬ್ಬಾಗಿಲು ಕಾಯಲು ಸಿಂಹಿಣಿ ನೇಮಿಸಿದ್ದ. ಅಶೋಕ ವನ ನೋಡಿಕೊಳ್ಳಲು ತ್ರಿಜಟಿಯನ್ನು ಬಿಟ್ಟಿದ್ದ. ನಮ್ಮ ಪುರಾಣಕಾಲದ ರಾವಣನೆ ಮೊದಲು ಮಹಿಳಾ ಮೀಸಲಾತಿ ಜಾರಿಗೆ ತಂದವನು. ಇಂತಹ ವಿಪ್ರೋತ್ತಮನಿಗೆ ಕುರುಬ ಸಮುದಾಯದವರ ಪೈಕಿಯಾದ ಸಿದ್ದರಾಮಯ್ಯನವರನ್ನ ಹೋಲಿಸಬಾರದಿತ್ತೆಂದು ರಾಮಾಯಣ ಪ್ರಿಯ ವಿಪ್ರೊತ್ತಮರು ಕಟಿಲರ ಬಗ್ಗೆ ಕೆಂಡಾಮಂಡಲವಾಗಿ ದ್ದಾರಂತಲ್ಲಾ. ಥೂತ್ತೇರಿ.

ನಳಿನ್

*******

ಪುರಾಣಪ್ರಿಯರು ರಾಜಕೀಯ ವಿಶ್ಲೇಷಕರ ಪ್ರಕಾರ ಸಿದ್ದು ಪ್ರೊತ್ಸಾಹಿಸಿದ್ದು ಒಂದೆರಡು ಮಹಿಳೆಯರನ್ನ ಮಾತ್ರ. ಆ ಪೈಕಿ ಜಯಮಾಲ ಮಂಜುಳ ಮಾನಸೆ, ಕೆ.ಆರ್ ಪೇಟೆ ಮೀನಾಕ್ಷಿ ಮತ್ತಿನ್ನಿಬ್ಬರು ಮಹಿಳಾ ಮಣಿಗಳನ್ನು ಬಿಟ್ಟರೆ ರಾವಣನಂತೆ ಇಡೀ ರಾಜ್ಯ ನೋಡಿಕೊಳ್ಳಲು ಮಹಿಳೆಯರನ್ನ ನೇಮಿಸಲಿಲ್ಲ. ಈ ಹೋಲಿಕೆ ತಪ್ಪು. ಇನ್ನ ಸಿದ್ದು ರಂಗದ ಕುಣಿತಕ್ಕೆ ಮೀಸಲೇ ಹೊರತು ನೃತ್ಯಪಟುವಲ್ಲ. ಇನ್ನು ವೀಣೆಗೂ ತಂಬೂರಿ ಸರೋಟ್‌ಗೂ ವ್ಯತ್ಯಾಸ ಸಿದ್ದುರವರಿಗೆ ಗೊತ್ತೋ ಇಲ್ಲವೋ ಅವರೇ ಬಲ್ಲರು. ಒಳ್ಳೆ ಆಡಳಿತಗಾರ ಎಂಬುದನ್ನ ಒಪ್ಪಿಕೊಳ್ಳಬೇಕು. ಇನ್ನು ಅವರ ಬಜೆಟ್ ಮಂಡನೆ ಭುಜಂಗ ಸ್ತ್ರೋತ್ರಕ್ಕೆ ಸಮ ಅನ್ನಬಹುದು. ಸದನದಲ್ಲಿ ಅಗ್ನಿಯಂತೆ ಜ್ವಲಿಸಿದರೂ ಜೊತೆಯಲ್ಲಿ ಕುಳಿತು ಹೊಟ್ಟೆತುಂಬಾ ಭೋಜನ ಬಾರಿಸುವ ವ್ಯಕ್ತಿ. ರಾವಣನಂತೆ ರಾಜ ಲಕ್ಷಣವೇನೂ ಸಿದ್ದು ಮುಖದಲ್ಲಿಲ್ಲ. ಇನ್ನ ಕುಬೇರನನ್ನು ಸೋಲಿಸಿ ಪುಷ್ಪಕ ವಿಮಾನ ಪಡೆದ ರಾವಣನಿಗೆ ಸಿದ್ದು ಹೋಲಿಸುವುದಾದರೆ, ದೇವು ಫ್ಯಾಮಿಲಿಯನ್ನ ಮೂಲೆಗೆ ಸರಿಸಿ ವಿರೋಧಪಕ್ಷದ ಸಾರಥ್ಯ ಪಡೆದದ್ದು. ಸೀತಾಪಹರಣದಂತ ಕೃತ್ಯ ಎಸಗಿದವರಲ್ಲ. ಆದ್ದರಿಂದ ಕಟೀಲರ ವ್ಯಾಖ್ಯಾನಕ್ಕೆ ಇತ್ತು ಸಿದ್ದು ಅಭಿಮಾನಿಗಳು ಮತ್ತು ಅತ್ತ ವಿಪ್ರೋತ್ತಮರು ಶ್ಯಾನೆ ಸಿಟ್ಟಾಗಿದ್ದಾರಂತಲ್ಲಾ.

********

ಕಟೀಲರ ಇನ್ನೊಂದು ಮಾತು, ರಾಮ ಜನರನ್ನು ನಂಬುತ್ತಿದ್ದ ಎಂಬುದು. ಇದರ ಅನಾಹುತವೆಂದರೆ ಅಗಸನ ಮಾತನ್ನು ನಂಬಿ ತುಂಬು ಗರ್ಭಿಣಿ ಸೀತೆಯನ್ನು ಕಾಡಿನ ಮಧ್ಯೆ ಬಿಟ್ಟು ಬಂದಿದ್ದು, ಮೊದಲು ಹನ್ನೆರಡು ವರ್ಷ ವನವಾಸ, ಆ ನಂತರ ಮತ್ತೆ ವನವಾಸ ಅನುಭವಿಸಿದ ಸೀತೆ ಕಡೆಗೆ ಸಾಕಪ್ಪ ಈ ರಾಮನ ಸಹವಾಸ ಎಂದು ತವರು ಮನೆಗೆ ಹೋಗಿ ತರಕಾರಿ ಬೆಳೆದುಕೊಂಡು ಕಾಲ ಹಾಕಿದಳಲ್ಲಾ. ಈ ಸಾಲುಗಳ ಬಗ್ಗೆ ಅನುಮಾನವಿದ್ದವರು ಎಸ್.ಎಲ್ ಭೈರಪ್ಪನವರ ಉತ್ತರಕಾಂಡ ಓದುವುದು ಒಳ್ಳೆಯದು. ಅಂದ ಹಾಗೆ ಅವರಣವನ್ನು ತಲೆಮೇಲೆ ಹೊತ್ತುಕೊಂಡು ಮಾರಿದೆ ಸಂಘಪರಿವಾರ ಸಮೂಹ ಉತ್ತರಕಾಂಡದ ಬಗ್ಗೆ ಉಸಿರೆತ್ತಿಲ್ಲವಂತಲ್ಲಾ. ಇದೆಲ್ಲಕಿಂತ ಮಜಾ ಅಂದರೆ ಬಷೀರಣ್ಣನವರು ರಾಮಾಯಣವನ್ನು ವ್ಯಾಖ್ಯಾನಿಸಿರುವ ಪರಿ ಭೈರಪ್ಪನವರಿಗೆ ಹತ್ತಿರವಾಗಿದೆಯಲ್ಲಾ. “ನೋಡಿ ಸಾರ್ ಒಬ್ಬ ಮನುಷ್ಯ ತಂಗಿಗಾಗಿ ತನ್ನ ಪ್ರಾಣವನ್ನೇ ಕೊಟ್ಟು ರಾಜ್ಯನೂ ಕಳಕೊಂಡ. ತಂದೆ ಮಾಡಿದ ಕೆಲ್ಸಕ್ಕೆ ರಾಜ್ಯ ಬಿಟ್ಟು ಬಂದ ರಾಮ ದೊಡ್ಡವುನೊ, ರಾವಣ ದೊಡ್ಡವುನೊ, ನೀವೇ ಹೇಳಿ ಸಾರ್. ಪಾಪ ಶೂರ್ಪನಕಿ ಸ್ಟೋರಿ ಈ ಕಾಲದಲ್ಲಿ ಅಸಿಡ್ ದಾಳಿಗೆ ತುತ್ತಾಗಿ ಬುರ್ಖಾ ಹಾಯ್ಕಂಡು ಓಡಾಡ್ತರಲ್ಲ, ಅಂತ ಹೆಂಗಸರ ಕತೆ ಆಗಿರಬೌದು, ಯಾವುದಾದ್ರು ಹುಡುಗಿ ಲವ್ ಮಾಡು ಅಂದ್ರೆ ಆಗಲ್ಲ ಸ್ವಲ್ಪ ಪ್ರಾಬ್ಲಂ ಅನ್ನಬೇಕು ಸಾರ್! ಮೂಗುಕುಯ್ದಾಕ್‌ಬುಡದ” ಎಂದು ಚಿಂತಾಕ್ರಾಂತರಾದರಲ್ಲಾ. ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...