Homeಅಂಕಣಗಳುಸಿದ್ದರಾಮಯ್ಯ ರಾವಣನಂತಲ್ಲಾ!

ಸಿದ್ದರಾಮಯ್ಯ ರಾವಣನಂತಲ್ಲಾ!

- Advertisement -
- Advertisement -

ಪಾಪಾಸು ಕಳ್ಳಿಯ ಟಿಸಿಲಿನಂತಿರುವ ಬಿಜೆಪಿಯ ಭಜರಂಗಿ ಪಡೆ ಹಿಜಾಬ್‌ಗೆ ಕೈಹಾಕಿ ಎಳೆದು ನಂತರ, ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಮರ ಅಂಗಡಿಗಳಿರಬಾರದೆಂದು ಬೊಬ್ಬೆಹೊಡೆದ ಕೂಡಲೇ ಕರ್ನಾಟಕದ ತುಂಬೆಲ್ಲಾ ಬೊಬ್ಬೆಯದನಿ ಕೇಳಿತಲ್ಲಾ. ಏಕೆಂದರೆ ಈ ಬಿಜೆಪಿ ಅಥವಾ ಇನ್ನಾವುದೇ ಅದರ ಅಂಗ ಸಂಸ್ಥೆಗಳಿಗೆಲ್ಲಾ ಸ್ವಿಚ್‌ಬೋರ್ಡಿರುವುದು ಒಂದೇ ಜಾಗದಲ್ಲಿ. ಅದನ್ನು ಒತ್ತಿದ ಕೂಡಲೇ ಇಡೀ ನಾಡಿನ ತುಂಬೆಲ್ಲಾ ಒಂದೇ ಗಳಿಗೆಯಲ್ಲಿ ಮತೀಯ ತಲೆಗಳಿಗೆ ವಿದ್ಯುತ್ ಹರಿದಂತಾಗಿ ಶಾರ್ಟ್ ಸರ್ಕ್ಯೂಟ್ ಆಗುವುದು ಹಿಂದಿನಿಂದಲೂ ನಡೆದು ಬಂದಿದೆಯಂತಲ್ಲಾ. ಆದರೇನು ಈಗ ಇಂತಹ ಸ್ವಿಚ್ ಲೈನನ್ನ ಮಾಧ್ಯಮದವರೂ ಎಳೆದುಕೊಂಡು ಇಡೀ ದಿನ ಅಳೆದು, ಸುರಿದು, ಕೇರಿ, ತೂರಿ, ಅಯ್ಯೋಪಾಪಾ ಎಂಬ ಉದ್ಘಾರಕ್ಕೆ ತುತ್ತಾಗಿವೆಯಲ್ಲಾ. ಸಿದ್ದು ಜಗದ್ಗುರುಗಳು ಕೇಸರಿ ಬಟ್ಟೆ ತಲೆ ಮೇಲೆ ಹಾಕುವುದಿಲ್ಲವೆ ಎಂಬ ಮಾತೇ ಕಾರಣವಾಗಿ, ಮಾಧ್ಯಮದವರು ಮನಸೊ ಇಚ್ಛೆ ವದರೀ ವದರೀ ಜಗದ್ಗುರುಗಳನ್ನ ಎಬ್ಬಿಸಿ ಸಿದ್ದು ಮೇಲೆ ದಾಳಿ ಮಾಡಿಸಿದವಲ್ಲಾ. ವಾಸ್ತವವಾಗಿ ರಾಮಚಂದ್ರಾಪುರ ಮಠ, ಉಡುಪಿ ಮಠದ ಯತಿಗಳಿದ್ದವರೆಲ್ಲಾ ಸುಮ್ಮನಿದ್ದು ಎಡೂರಪ್ಪನವರಿಂದ ಧನ ಸಹಾಯ ಪಡೆದ ಧರ್ಮಗುರುಗಳೇ ಸಿದ್ದು ಮೇಲೆ ಬಿದ್ದಿದ್ದು ನೋಡಿ ಈ ಬಿಜೆಪಿಗಳಿಗೆ ಪರಮಾನ್ನ ಉಂಡಷ್ಟು ಖುಷಿಯಾಯ್ತಂತಲ್ಲಾ. ಥೂತ್ತೇರಿ.

*******

ಇನ್ನ ಬಿಜೆಪಿ ಪಾರ್ಟಿಯ ಅಧ್ಯಕ್ಷ ನಳೀನ್ ಕಟೀಲು ಎಂಬ ಬೃಹಸ್ಪತಿಗಳು ಸಿದ್ದುವನ್ನು ರಾವಣನಿಗೆ ಹೋಲಿಸಿದ್ದಾರೆ. ದಕ್ಷಿಣ ಕನ್ನಡದ ಈತ ಯಕ್ಷಗಾನವನ್ನು ನೋಡಿಯಾದರೂ ರಾವಣನ ಬಗ್ಗೆ ತಿಳಿದುಕೊಳ್ಳಬೇಕಿತ್ತು. ವಾಸ್ತವವಾಗಿ ಸಿದ್ದುಗೆ ರಾವಣನನ್ನು ಹೋಲಿಸಿದ್ದೇ ಸರಿಯಿಲ್ಲವೆಂಬುದು ರಾವಣಾಭಿಮಾನಿಗಳ ಅಭಿಪ್ರಾಯ. ರಾವಣ ಅಪ್ಪಟ ಶಿವಭಕ್ತ, ಸಂಗೀತಗಾರ, ವೀಣೆ ಶೇಷಣ್ಣನಿಗಿಂತ ಒಳ್ಳೆ ವೈಣಿಕ, ಒಳ್ಳೆಯ ನೃತ್ಯಪಟು. ಅಜೇಯನೆನಿಸಿಕೊಂಡಿದ್ದ ಒಳ್ಳೆ ಆಡಳಿತಗಾರ ಕುಬೇರನನ್ನ ಸೋಲಿಸಿ ಪುಷ್ಪಕ ವಿಮಾನವನ್ನ ಪಡೆದವನು. ಭುಜಂಗ ಸ್ತ್ರೋತ್ರ ರಚಿಸಿದ ಕರ್ತೃ. ಜ್ವಲಿಸುವ ಅಗ್ನಿಯಂತಿದ್ದ
ರಾಜಲಕ್ಷಣದಿಂದ ಶೋಭಿತನಾಗಿದ್ದ ತನ್ನ ರಾಜ್ಯದಲ್ಲಿ ಮಹಿಳಾ ಮೀಸಲಾತಿ ತಂದಿದ್ದ ಪ್ರಥಮ ದೊರೆ. ಲಂಕೆಯನ್ನ ರಕ್ಷಿಸಲು ಲಂಕಿಣಿ ನಿಲ್ಲಿಸಿದ್ದ. ದಂಡಕಾರಣ್ಯ ರಕ್ಷಿಸಲು ತಾಟಕಿ ನೇಮಿಸಿದ್ದ. ಲಂಕೆಯ ಹೆಬ್ಬಾಗಿಲು ಕಾಯಲು ಸಿಂಹಿಣಿ ನೇಮಿಸಿದ್ದ. ಅಶೋಕ ವನ ನೋಡಿಕೊಳ್ಳಲು ತ್ರಿಜಟಿಯನ್ನು ಬಿಟ್ಟಿದ್ದ. ನಮ್ಮ ಪುರಾಣಕಾಲದ ರಾವಣನೆ ಮೊದಲು ಮಹಿಳಾ ಮೀಸಲಾತಿ ಜಾರಿಗೆ ತಂದವನು. ಇಂತಹ ವಿಪ್ರೋತ್ತಮನಿಗೆ ಕುರುಬ ಸಮುದಾಯದವರ ಪೈಕಿಯಾದ ಸಿದ್ದರಾಮಯ್ಯನವರನ್ನ ಹೋಲಿಸಬಾರದಿತ್ತೆಂದು ರಾಮಾಯಣ ಪ್ರಿಯ ವಿಪ್ರೊತ್ತಮರು ಕಟಿಲರ ಬಗ್ಗೆ ಕೆಂಡಾಮಂಡಲವಾಗಿ ದ್ದಾರಂತಲ್ಲಾ. ಥೂತ್ತೇರಿ.

ನಳಿನ್

*******

ಪುರಾಣಪ್ರಿಯರು ರಾಜಕೀಯ ವಿಶ್ಲೇಷಕರ ಪ್ರಕಾರ ಸಿದ್ದು ಪ್ರೊತ್ಸಾಹಿಸಿದ್ದು ಒಂದೆರಡು ಮಹಿಳೆಯರನ್ನ ಮಾತ್ರ. ಆ ಪೈಕಿ ಜಯಮಾಲ ಮಂಜುಳ ಮಾನಸೆ, ಕೆ.ಆರ್ ಪೇಟೆ ಮೀನಾಕ್ಷಿ ಮತ್ತಿನ್ನಿಬ್ಬರು ಮಹಿಳಾ ಮಣಿಗಳನ್ನು ಬಿಟ್ಟರೆ ರಾವಣನಂತೆ ಇಡೀ ರಾಜ್ಯ ನೋಡಿಕೊಳ್ಳಲು ಮಹಿಳೆಯರನ್ನ ನೇಮಿಸಲಿಲ್ಲ. ಈ ಹೋಲಿಕೆ ತಪ್ಪು. ಇನ್ನ ಸಿದ್ದು ರಂಗದ ಕುಣಿತಕ್ಕೆ ಮೀಸಲೇ ಹೊರತು ನೃತ್ಯಪಟುವಲ್ಲ. ಇನ್ನು ವೀಣೆಗೂ ತಂಬೂರಿ ಸರೋಟ್‌ಗೂ ವ್ಯತ್ಯಾಸ ಸಿದ್ದುರವರಿಗೆ ಗೊತ್ತೋ ಇಲ್ಲವೋ ಅವರೇ ಬಲ್ಲರು. ಒಳ್ಳೆ ಆಡಳಿತಗಾರ ಎಂಬುದನ್ನ ಒಪ್ಪಿಕೊಳ್ಳಬೇಕು. ಇನ್ನು ಅವರ ಬಜೆಟ್ ಮಂಡನೆ ಭುಜಂಗ ಸ್ತ್ರೋತ್ರಕ್ಕೆ ಸಮ ಅನ್ನಬಹುದು. ಸದನದಲ್ಲಿ ಅಗ್ನಿಯಂತೆ ಜ್ವಲಿಸಿದರೂ ಜೊತೆಯಲ್ಲಿ ಕುಳಿತು ಹೊಟ್ಟೆತುಂಬಾ ಭೋಜನ ಬಾರಿಸುವ ವ್ಯಕ್ತಿ. ರಾವಣನಂತೆ ರಾಜ ಲಕ್ಷಣವೇನೂ ಸಿದ್ದು ಮುಖದಲ್ಲಿಲ್ಲ. ಇನ್ನ ಕುಬೇರನನ್ನು ಸೋಲಿಸಿ ಪುಷ್ಪಕ ವಿಮಾನ ಪಡೆದ ರಾವಣನಿಗೆ ಸಿದ್ದು ಹೋಲಿಸುವುದಾದರೆ, ದೇವು ಫ್ಯಾಮಿಲಿಯನ್ನ ಮೂಲೆಗೆ ಸರಿಸಿ ವಿರೋಧಪಕ್ಷದ ಸಾರಥ್ಯ ಪಡೆದದ್ದು. ಸೀತಾಪಹರಣದಂತ ಕೃತ್ಯ ಎಸಗಿದವರಲ್ಲ. ಆದ್ದರಿಂದ ಕಟೀಲರ ವ್ಯಾಖ್ಯಾನಕ್ಕೆ ಇತ್ತು ಸಿದ್ದು ಅಭಿಮಾನಿಗಳು ಮತ್ತು ಅತ್ತ ವಿಪ್ರೋತ್ತಮರು ಶ್ಯಾನೆ ಸಿಟ್ಟಾಗಿದ್ದಾರಂತಲ್ಲಾ.

********

ಕಟೀಲರ ಇನ್ನೊಂದು ಮಾತು, ರಾಮ ಜನರನ್ನು ನಂಬುತ್ತಿದ್ದ ಎಂಬುದು. ಇದರ ಅನಾಹುತವೆಂದರೆ ಅಗಸನ ಮಾತನ್ನು ನಂಬಿ ತುಂಬು ಗರ್ಭಿಣಿ ಸೀತೆಯನ್ನು ಕಾಡಿನ ಮಧ್ಯೆ ಬಿಟ್ಟು ಬಂದಿದ್ದು, ಮೊದಲು ಹನ್ನೆರಡು ವರ್ಷ ವನವಾಸ, ಆ ನಂತರ ಮತ್ತೆ ವನವಾಸ ಅನುಭವಿಸಿದ ಸೀತೆ ಕಡೆಗೆ ಸಾಕಪ್ಪ ಈ ರಾಮನ ಸಹವಾಸ ಎಂದು ತವರು ಮನೆಗೆ ಹೋಗಿ ತರಕಾರಿ ಬೆಳೆದುಕೊಂಡು ಕಾಲ ಹಾಕಿದಳಲ್ಲಾ. ಈ ಸಾಲುಗಳ ಬಗ್ಗೆ ಅನುಮಾನವಿದ್ದವರು ಎಸ್.ಎಲ್ ಭೈರಪ್ಪನವರ ಉತ್ತರಕಾಂಡ ಓದುವುದು ಒಳ್ಳೆಯದು. ಅಂದ ಹಾಗೆ ಅವರಣವನ್ನು ತಲೆಮೇಲೆ ಹೊತ್ತುಕೊಂಡು ಮಾರಿದೆ ಸಂಘಪರಿವಾರ ಸಮೂಹ ಉತ್ತರಕಾಂಡದ ಬಗ್ಗೆ ಉಸಿರೆತ್ತಿಲ್ಲವಂತಲ್ಲಾ. ಇದೆಲ್ಲಕಿಂತ ಮಜಾ ಅಂದರೆ ಬಷೀರಣ್ಣನವರು ರಾಮಾಯಣವನ್ನು ವ್ಯಾಖ್ಯಾನಿಸಿರುವ ಪರಿ ಭೈರಪ್ಪನವರಿಗೆ ಹತ್ತಿರವಾಗಿದೆಯಲ್ಲಾ. “ನೋಡಿ ಸಾರ್ ಒಬ್ಬ ಮನುಷ್ಯ ತಂಗಿಗಾಗಿ ತನ್ನ ಪ್ರಾಣವನ್ನೇ ಕೊಟ್ಟು ರಾಜ್ಯನೂ ಕಳಕೊಂಡ. ತಂದೆ ಮಾಡಿದ ಕೆಲ್ಸಕ್ಕೆ ರಾಜ್ಯ ಬಿಟ್ಟು ಬಂದ ರಾಮ ದೊಡ್ಡವುನೊ, ರಾವಣ ದೊಡ್ಡವುನೊ, ನೀವೇ ಹೇಳಿ ಸಾರ್. ಪಾಪ ಶೂರ್ಪನಕಿ ಸ್ಟೋರಿ ಈ ಕಾಲದಲ್ಲಿ ಅಸಿಡ್ ದಾಳಿಗೆ ತುತ್ತಾಗಿ ಬುರ್ಖಾ ಹಾಯ್ಕಂಡು ಓಡಾಡ್ತರಲ್ಲ, ಅಂತ ಹೆಂಗಸರ ಕತೆ ಆಗಿರಬೌದು, ಯಾವುದಾದ್ರು ಹುಡುಗಿ ಲವ್ ಮಾಡು ಅಂದ್ರೆ ಆಗಲ್ಲ ಸ್ವಲ್ಪ ಪ್ರಾಬ್ಲಂ ಅನ್ನಬೇಕು ಸಾರ್! ಮೂಗುಕುಯ್ದಾಕ್‌ಬುಡದ” ಎಂದು ಚಿಂತಾಕ್ರಾಂತರಾದರಲ್ಲಾ. ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...