Homeಅಂಕಣಗಳುಸಿದ್ದರಾಮಯ್ಯ ರಾವಣನಂತಲ್ಲಾ!

ಸಿದ್ದರಾಮಯ್ಯ ರಾವಣನಂತಲ್ಲಾ!

- Advertisement -
- Advertisement -

ಪಾಪಾಸು ಕಳ್ಳಿಯ ಟಿಸಿಲಿನಂತಿರುವ ಬಿಜೆಪಿಯ ಭಜರಂಗಿ ಪಡೆ ಹಿಜಾಬ್‌ಗೆ ಕೈಹಾಕಿ ಎಳೆದು ನಂತರ, ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಮರ ಅಂಗಡಿಗಳಿರಬಾರದೆಂದು ಬೊಬ್ಬೆಹೊಡೆದ ಕೂಡಲೇ ಕರ್ನಾಟಕದ ತುಂಬೆಲ್ಲಾ ಬೊಬ್ಬೆಯದನಿ ಕೇಳಿತಲ್ಲಾ. ಏಕೆಂದರೆ ಈ ಬಿಜೆಪಿ ಅಥವಾ ಇನ್ನಾವುದೇ ಅದರ ಅಂಗ ಸಂಸ್ಥೆಗಳಿಗೆಲ್ಲಾ ಸ್ವಿಚ್‌ಬೋರ್ಡಿರುವುದು ಒಂದೇ ಜಾಗದಲ್ಲಿ. ಅದನ್ನು ಒತ್ತಿದ ಕೂಡಲೇ ಇಡೀ ನಾಡಿನ ತುಂಬೆಲ್ಲಾ ಒಂದೇ ಗಳಿಗೆಯಲ್ಲಿ ಮತೀಯ ತಲೆಗಳಿಗೆ ವಿದ್ಯುತ್ ಹರಿದಂತಾಗಿ ಶಾರ್ಟ್ ಸರ್ಕ್ಯೂಟ್ ಆಗುವುದು ಹಿಂದಿನಿಂದಲೂ ನಡೆದು ಬಂದಿದೆಯಂತಲ್ಲಾ. ಆದರೇನು ಈಗ ಇಂತಹ ಸ್ವಿಚ್ ಲೈನನ್ನ ಮಾಧ್ಯಮದವರೂ ಎಳೆದುಕೊಂಡು ಇಡೀ ದಿನ ಅಳೆದು, ಸುರಿದು, ಕೇರಿ, ತೂರಿ, ಅಯ್ಯೋಪಾಪಾ ಎಂಬ ಉದ್ಘಾರಕ್ಕೆ ತುತ್ತಾಗಿವೆಯಲ್ಲಾ. ಸಿದ್ದು ಜಗದ್ಗುರುಗಳು ಕೇಸರಿ ಬಟ್ಟೆ ತಲೆ ಮೇಲೆ ಹಾಕುವುದಿಲ್ಲವೆ ಎಂಬ ಮಾತೇ ಕಾರಣವಾಗಿ, ಮಾಧ್ಯಮದವರು ಮನಸೊ ಇಚ್ಛೆ ವದರೀ ವದರೀ ಜಗದ್ಗುರುಗಳನ್ನ ಎಬ್ಬಿಸಿ ಸಿದ್ದು ಮೇಲೆ ದಾಳಿ ಮಾಡಿಸಿದವಲ್ಲಾ. ವಾಸ್ತವವಾಗಿ ರಾಮಚಂದ್ರಾಪುರ ಮಠ, ಉಡುಪಿ ಮಠದ ಯತಿಗಳಿದ್ದವರೆಲ್ಲಾ ಸುಮ್ಮನಿದ್ದು ಎಡೂರಪ್ಪನವರಿಂದ ಧನ ಸಹಾಯ ಪಡೆದ ಧರ್ಮಗುರುಗಳೇ ಸಿದ್ದು ಮೇಲೆ ಬಿದ್ದಿದ್ದು ನೋಡಿ ಈ ಬಿಜೆಪಿಗಳಿಗೆ ಪರಮಾನ್ನ ಉಂಡಷ್ಟು ಖುಷಿಯಾಯ್ತಂತಲ್ಲಾ. ಥೂತ್ತೇರಿ.

*******

ಇನ್ನ ಬಿಜೆಪಿ ಪಾರ್ಟಿಯ ಅಧ್ಯಕ್ಷ ನಳೀನ್ ಕಟೀಲು ಎಂಬ ಬೃಹಸ್ಪತಿಗಳು ಸಿದ್ದುವನ್ನು ರಾವಣನಿಗೆ ಹೋಲಿಸಿದ್ದಾರೆ. ದಕ್ಷಿಣ ಕನ್ನಡದ ಈತ ಯಕ್ಷಗಾನವನ್ನು ನೋಡಿಯಾದರೂ ರಾವಣನ ಬಗ್ಗೆ ತಿಳಿದುಕೊಳ್ಳಬೇಕಿತ್ತು. ವಾಸ್ತವವಾಗಿ ಸಿದ್ದುಗೆ ರಾವಣನನ್ನು ಹೋಲಿಸಿದ್ದೇ ಸರಿಯಿಲ್ಲವೆಂಬುದು ರಾವಣಾಭಿಮಾನಿಗಳ ಅಭಿಪ್ರಾಯ. ರಾವಣ ಅಪ್ಪಟ ಶಿವಭಕ್ತ, ಸಂಗೀತಗಾರ, ವೀಣೆ ಶೇಷಣ್ಣನಿಗಿಂತ ಒಳ್ಳೆ ವೈಣಿಕ, ಒಳ್ಳೆಯ ನೃತ್ಯಪಟು. ಅಜೇಯನೆನಿಸಿಕೊಂಡಿದ್ದ ಒಳ್ಳೆ ಆಡಳಿತಗಾರ ಕುಬೇರನನ್ನ ಸೋಲಿಸಿ ಪುಷ್ಪಕ ವಿಮಾನವನ್ನ ಪಡೆದವನು. ಭುಜಂಗ ಸ್ತ್ರೋತ್ರ ರಚಿಸಿದ ಕರ್ತೃ. ಜ್ವಲಿಸುವ ಅಗ್ನಿಯಂತಿದ್ದ
ರಾಜಲಕ್ಷಣದಿಂದ ಶೋಭಿತನಾಗಿದ್ದ ತನ್ನ ರಾಜ್ಯದಲ್ಲಿ ಮಹಿಳಾ ಮೀಸಲಾತಿ ತಂದಿದ್ದ ಪ್ರಥಮ ದೊರೆ. ಲಂಕೆಯನ್ನ ರಕ್ಷಿಸಲು ಲಂಕಿಣಿ ನಿಲ್ಲಿಸಿದ್ದ. ದಂಡಕಾರಣ್ಯ ರಕ್ಷಿಸಲು ತಾಟಕಿ ನೇಮಿಸಿದ್ದ. ಲಂಕೆಯ ಹೆಬ್ಬಾಗಿಲು ಕಾಯಲು ಸಿಂಹಿಣಿ ನೇಮಿಸಿದ್ದ. ಅಶೋಕ ವನ ನೋಡಿಕೊಳ್ಳಲು ತ್ರಿಜಟಿಯನ್ನು ಬಿಟ್ಟಿದ್ದ. ನಮ್ಮ ಪುರಾಣಕಾಲದ ರಾವಣನೆ ಮೊದಲು ಮಹಿಳಾ ಮೀಸಲಾತಿ ಜಾರಿಗೆ ತಂದವನು. ಇಂತಹ ವಿಪ್ರೋತ್ತಮನಿಗೆ ಕುರುಬ ಸಮುದಾಯದವರ ಪೈಕಿಯಾದ ಸಿದ್ದರಾಮಯ್ಯನವರನ್ನ ಹೋಲಿಸಬಾರದಿತ್ತೆಂದು ರಾಮಾಯಣ ಪ್ರಿಯ ವಿಪ್ರೊತ್ತಮರು ಕಟಿಲರ ಬಗ್ಗೆ ಕೆಂಡಾಮಂಡಲವಾಗಿ ದ್ದಾರಂತಲ್ಲಾ. ಥೂತ್ತೇರಿ.

ನಳಿನ್

*******

ಪುರಾಣಪ್ರಿಯರು ರಾಜಕೀಯ ವಿಶ್ಲೇಷಕರ ಪ್ರಕಾರ ಸಿದ್ದು ಪ್ರೊತ್ಸಾಹಿಸಿದ್ದು ಒಂದೆರಡು ಮಹಿಳೆಯರನ್ನ ಮಾತ್ರ. ಆ ಪೈಕಿ ಜಯಮಾಲ ಮಂಜುಳ ಮಾನಸೆ, ಕೆ.ಆರ್ ಪೇಟೆ ಮೀನಾಕ್ಷಿ ಮತ್ತಿನ್ನಿಬ್ಬರು ಮಹಿಳಾ ಮಣಿಗಳನ್ನು ಬಿಟ್ಟರೆ ರಾವಣನಂತೆ ಇಡೀ ರಾಜ್ಯ ನೋಡಿಕೊಳ್ಳಲು ಮಹಿಳೆಯರನ್ನ ನೇಮಿಸಲಿಲ್ಲ. ಈ ಹೋಲಿಕೆ ತಪ್ಪು. ಇನ್ನ ಸಿದ್ದು ರಂಗದ ಕುಣಿತಕ್ಕೆ ಮೀಸಲೇ ಹೊರತು ನೃತ್ಯಪಟುವಲ್ಲ. ಇನ್ನು ವೀಣೆಗೂ ತಂಬೂರಿ ಸರೋಟ್‌ಗೂ ವ್ಯತ್ಯಾಸ ಸಿದ್ದುರವರಿಗೆ ಗೊತ್ತೋ ಇಲ್ಲವೋ ಅವರೇ ಬಲ್ಲರು. ಒಳ್ಳೆ ಆಡಳಿತಗಾರ ಎಂಬುದನ್ನ ಒಪ್ಪಿಕೊಳ್ಳಬೇಕು. ಇನ್ನು ಅವರ ಬಜೆಟ್ ಮಂಡನೆ ಭುಜಂಗ ಸ್ತ್ರೋತ್ರಕ್ಕೆ ಸಮ ಅನ್ನಬಹುದು. ಸದನದಲ್ಲಿ ಅಗ್ನಿಯಂತೆ ಜ್ವಲಿಸಿದರೂ ಜೊತೆಯಲ್ಲಿ ಕುಳಿತು ಹೊಟ್ಟೆತುಂಬಾ ಭೋಜನ ಬಾರಿಸುವ ವ್ಯಕ್ತಿ. ರಾವಣನಂತೆ ರಾಜ ಲಕ್ಷಣವೇನೂ ಸಿದ್ದು ಮುಖದಲ್ಲಿಲ್ಲ. ಇನ್ನ ಕುಬೇರನನ್ನು ಸೋಲಿಸಿ ಪುಷ್ಪಕ ವಿಮಾನ ಪಡೆದ ರಾವಣನಿಗೆ ಸಿದ್ದು ಹೋಲಿಸುವುದಾದರೆ, ದೇವು ಫ್ಯಾಮಿಲಿಯನ್ನ ಮೂಲೆಗೆ ಸರಿಸಿ ವಿರೋಧಪಕ್ಷದ ಸಾರಥ್ಯ ಪಡೆದದ್ದು. ಸೀತಾಪಹರಣದಂತ ಕೃತ್ಯ ಎಸಗಿದವರಲ್ಲ. ಆದ್ದರಿಂದ ಕಟೀಲರ ವ್ಯಾಖ್ಯಾನಕ್ಕೆ ಇತ್ತು ಸಿದ್ದು ಅಭಿಮಾನಿಗಳು ಮತ್ತು ಅತ್ತ ವಿಪ್ರೋತ್ತಮರು ಶ್ಯಾನೆ ಸಿಟ್ಟಾಗಿದ್ದಾರಂತಲ್ಲಾ.

********

ಕಟೀಲರ ಇನ್ನೊಂದು ಮಾತು, ರಾಮ ಜನರನ್ನು ನಂಬುತ್ತಿದ್ದ ಎಂಬುದು. ಇದರ ಅನಾಹುತವೆಂದರೆ ಅಗಸನ ಮಾತನ್ನು ನಂಬಿ ತುಂಬು ಗರ್ಭಿಣಿ ಸೀತೆಯನ್ನು ಕಾಡಿನ ಮಧ್ಯೆ ಬಿಟ್ಟು ಬಂದಿದ್ದು, ಮೊದಲು ಹನ್ನೆರಡು ವರ್ಷ ವನವಾಸ, ಆ ನಂತರ ಮತ್ತೆ ವನವಾಸ ಅನುಭವಿಸಿದ ಸೀತೆ ಕಡೆಗೆ ಸಾಕಪ್ಪ ಈ ರಾಮನ ಸಹವಾಸ ಎಂದು ತವರು ಮನೆಗೆ ಹೋಗಿ ತರಕಾರಿ ಬೆಳೆದುಕೊಂಡು ಕಾಲ ಹಾಕಿದಳಲ್ಲಾ. ಈ ಸಾಲುಗಳ ಬಗ್ಗೆ ಅನುಮಾನವಿದ್ದವರು ಎಸ್.ಎಲ್ ಭೈರಪ್ಪನವರ ಉತ್ತರಕಾಂಡ ಓದುವುದು ಒಳ್ಳೆಯದು. ಅಂದ ಹಾಗೆ ಅವರಣವನ್ನು ತಲೆಮೇಲೆ ಹೊತ್ತುಕೊಂಡು ಮಾರಿದೆ ಸಂಘಪರಿವಾರ ಸಮೂಹ ಉತ್ತರಕಾಂಡದ ಬಗ್ಗೆ ಉಸಿರೆತ್ತಿಲ್ಲವಂತಲ್ಲಾ. ಇದೆಲ್ಲಕಿಂತ ಮಜಾ ಅಂದರೆ ಬಷೀರಣ್ಣನವರು ರಾಮಾಯಣವನ್ನು ವ್ಯಾಖ್ಯಾನಿಸಿರುವ ಪರಿ ಭೈರಪ್ಪನವರಿಗೆ ಹತ್ತಿರವಾಗಿದೆಯಲ್ಲಾ. “ನೋಡಿ ಸಾರ್ ಒಬ್ಬ ಮನುಷ್ಯ ತಂಗಿಗಾಗಿ ತನ್ನ ಪ್ರಾಣವನ್ನೇ ಕೊಟ್ಟು ರಾಜ್ಯನೂ ಕಳಕೊಂಡ. ತಂದೆ ಮಾಡಿದ ಕೆಲ್ಸಕ್ಕೆ ರಾಜ್ಯ ಬಿಟ್ಟು ಬಂದ ರಾಮ ದೊಡ್ಡವುನೊ, ರಾವಣ ದೊಡ್ಡವುನೊ, ನೀವೇ ಹೇಳಿ ಸಾರ್. ಪಾಪ ಶೂರ್ಪನಕಿ ಸ್ಟೋರಿ ಈ ಕಾಲದಲ್ಲಿ ಅಸಿಡ್ ದಾಳಿಗೆ ತುತ್ತಾಗಿ ಬುರ್ಖಾ ಹಾಯ್ಕಂಡು ಓಡಾಡ್ತರಲ್ಲ, ಅಂತ ಹೆಂಗಸರ ಕತೆ ಆಗಿರಬೌದು, ಯಾವುದಾದ್ರು ಹುಡುಗಿ ಲವ್ ಮಾಡು ಅಂದ್ರೆ ಆಗಲ್ಲ ಸ್ವಲ್ಪ ಪ್ರಾಬ್ಲಂ ಅನ್ನಬೇಕು ಸಾರ್! ಮೂಗುಕುಯ್ದಾಕ್‌ಬುಡದ” ಎಂದು ಚಿಂತಾಕ್ರಾಂತರಾದರಲ್ಲಾ. ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...