Homeಅಂಕಣಗಳುಸಿದ್ದರಾಮಯ್ಯ ರಾವಣನಂತಲ್ಲಾ!

ಸಿದ್ದರಾಮಯ್ಯ ರಾವಣನಂತಲ್ಲಾ!

- Advertisement -
- Advertisement -

ಪಾಪಾಸು ಕಳ್ಳಿಯ ಟಿಸಿಲಿನಂತಿರುವ ಬಿಜೆಪಿಯ ಭಜರಂಗಿ ಪಡೆ ಹಿಜಾಬ್‌ಗೆ ಕೈಹಾಕಿ ಎಳೆದು ನಂತರ, ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಮರ ಅಂಗಡಿಗಳಿರಬಾರದೆಂದು ಬೊಬ್ಬೆಹೊಡೆದ ಕೂಡಲೇ ಕರ್ನಾಟಕದ ತುಂಬೆಲ್ಲಾ ಬೊಬ್ಬೆಯದನಿ ಕೇಳಿತಲ್ಲಾ. ಏಕೆಂದರೆ ಈ ಬಿಜೆಪಿ ಅಥವಾ ಇನ್ನಾವುದೇ ಅದರ ಅಂಗ ಸಂಸ್ಥೆಗಳಿಗೆಲ್ಲಾ ಸ್ವಿಚ್‌ಬೋರ್ಡಿರುವುದು ಒಂದೇ ಜಾಗದಲ್ಲಿ. ಅದನ್ನು ಒತ್ತಿದ ಕೂಡಲೇ ಇಡೀ ನಾಡಿನ ತುಂಬೆಲ್ಲಾ ಒಂದೇ ಗಳಿಗೆಯಲ್ಲಿ ಮತೀಯ ತಲೆಗಳಿಗೆ ವಿದ್ಯುತ್ ಹರಿದಂತಾಗಿ ಶಾರ್ಟ್ ಸರ್ಕ್ಯೂಟ್ ಆಗುವುದು ಹಿಂದಿನಿಂದಲೂ ನಡೆದು ಬಂದಿದೆಯಂತಲ್ಲಾ. ಆದರೇನು ಈಗ ಇಂತಹ ಸ್ವಿಚ್ ಲೈನನ್ನ ಮಾಧ್ಯಮದವರೂ ಎಳೆದುಕೊಂಡು ಇಡೀ ದಿನ ಅಳೆದು, ಸುರಿದು, ಕೇರಿ, ತೂರಿ, ಅಯ್ಯೋಪಾಪಾ ಎಂಬ ಉದ್ಘಾರಕ್ಕೆ ತುತ್ತಾಗಿವೆಯಲ್ಲಾ. ಸಿದ್ದು ಜಗದ್ಗುರುಗಳು ಕೇಸರಿ ಬಟ್ಟೆ ತಲೆ ಮೇಲೆ ಹಾಕುವುದಿಲ್ಲವೆ ಎಂಬ ಮಾತೇ ಕಾರಣವಾಗಿ, ಮಾಧ್ಯಮದವರು ಮನಸೊ ಇಚ್ಛೆ ವದರೀ ವದರೀ ಜಗದ್ಗುರುಗಳನ್ನ ಎಬ್ಬಿಸಿ ಸಿದ್ದು ಮೇಲೆ ದಾಳಿ ಮಾಡಿಸಿದವಲ್ಲಾ. ವಾಸ್ತವವಾಗಿ ರಾಮಚಂದ್ರಾಪುರ ಮಠ, ಉಡುಪಿ ಮಠದ ಯತಿಗಳಿದ್ದವರೆಲ್ಲಾ ಸುಮ್ಮನಿದ್ದು ಎಡೂರಪ್ಪನವರಿಂದ ಧನ ಸಹಾಯ ಪಡೆದ ಧರ್ಮಗುರುಗಳೇ ಸಿದ್ದು ಮೇಲೆ ಬಿದ್ದಿದ್ದು ನೋಡಿ ಈ ಬಿಜೆಪಿಗಳಿಗೆ ಪರಮಾನ್ನ ಉಂಡಷ್ಟು ಖುಷಿಯಾಯ್ತಂತಲ್ಲಾ. ಥೂತ್ತೇರಿ.

*******

ಇನ್ನ ಬಿಜೆಪಿ ಪಾರ್ಟಿಯ ಅಧ್ಯಕ್ಷ ನಳೀನ್ ಕಟೀಲು ಎಂಬ ಬೃಹಸ್ಪತಿಗಳು ಸಿದ್ದುವನ್ನು ರಾವಣನಿಗೆ ಹೋಲಿಸಿದ್ದಾರೆ. ದಕ್ಷಿಣ ಕನ್ನಡದ ಈತ ಯಕ್ಷಗಾನವನ್ನು ನೋಡಿಯಾದರೂ ರಾವಣನ ಬಗ್ಗೆ ತಿಳಿದುಕೊಳ್ಳಬೇಕಿತ್ತು. ವಾಸ್ತವವಾಗಿ ಸಿದ್ದುಗೆ ರಾವಣನನ್ನು ಹೋಲಿಸಿದ್ದೇ ಸರಿಯಿಲ್ಲವೆಂಬುದು ರಾವಣಾಭಿಮಾನಿಗಳ ಅಭಿಪ್ರಾಯ. ರಾವಣ ಅಪ್ಪಟ ಶಿವಭಕ್ತ, ಸಂಗೀತಗಾರ, ವೀಣೆ ಶೇಷಣ್ಣನಿಗಿಂತ ಒಳ್ಳೆ ವೈಣಿಕ, ಒಳ್ಳೆಯ ನೃತ್ಯಪಟು. ಅಜೇಯನೆನಿಸಿಕೊಂಡಿದ್ದ ಒಳ್ಳೆ ಆಡಳಿತಗಾರ ಕುಬೇರನನ್ನ ಸೋಲಿಸಿ ಪುಷ್ಪಕ ವಿಮಾನವನ್ನ ಪಡೆದವನು. ಭುಜಂಗ ಸ್ತ್ರೋತ್ರ ರಚಿಸಿದ ಕರ್ತೃ. ಜ್ವಲಿಸುವ ಅಗ್ನಿಯಂತಿದ್ದ
ರಾಜಲಕ್ಷಣದಿಂದ ಶೋಭಿತನಾಗಿದ್ದ ತನ್ನ ರಾಜ್ಯದಲ್ಲಿ ಮಹಿಳಾ ಮೀಸಲಾತಿ ತಂದಿದ್ದ ಪ್ರಥಮ ದೊರೆ. ಲಂಕೆಯನ್ನ ರಕ್ಷಿಸಲು ಲಂಕಿಣಿ ನಿಲ್ಲಿಸಿದ್ದ. ದಂಡಕಾರಣ್ಯ ರಕ್ಷಿಸಲು ತಾಟಕಿ ನೇಮಿಸಿದ್ದ. ಲಂಕೆಯ ಹೆಬ್ಬಾಗಿಲು ಕಾಯಲು ಸಿಂಹಿಣಿ ನೇಮಿಸಿದ್ದ. ಅಶೋಕ ವನ ನೋಡಿಕೊಳ್ಳಲು ತ್ರಿಜಟಿಯನ್ನು ಬಿಟ್ಟಿದ್ದ. ನಮ್ಮ ಪುರಾಣಕಾಲದ ರಾವಣನೆ ಮೊದಲು ಮಹಿಳಾ ಮೀಸಲಾತಿ ಜಾರಿಗೆ ತಂದವನು. ಇಂತಹ ವಿಪ್ರೋತ್ತಮನಿಗೆ ಕುರುಬ ಸಮುದಾಯದವರ ಪೈಕಿಯಾದ ಸಿದ್ದರಾಮಯ್ಯನವರನ್ನ ಹೋಲಿಸಬಾರದಿತ್ತೆಂದು ರಾಮಾಯಣ ಪ್ರಿಯ ವಿಪ್ರೊತ್ತಮರು ಕಟಿಲರ ಬಗ್ಗೆ ಕೆಂಡಾಮಂಡಲವಾಗಿ ದ್ದಾರಂತಲ್ಲಾ. ಥೂತ್ತೇರಿ.

ನಳಿನ್

*******

ಪುರಾಣಪ್ರಿಯರು ರಾಜಕೀಯ ವಿಶ್ಲೇಷಕರ ಪ್ರಕಾರ ಸಿದ್ದು ಪ್ರೊತ್ಸಾಹಿಸಿದ್ದು ಒಂದೆರಡು ಮಹಿಳೆಯರನ್ನ ಮಾತ್ರ. ಆ ಪೈಕಿ ಜಯಮಾಲ ಮಂಜುಳ ಮಾನಸೆ, ಕೆ.ಆರ್ ಪೇಟೆ ಮೀನಾಕ್ಷಿ ಮತ್ತಿನ್ನಿಬ್ಬರು ಮಹಿಳಾ ಮಣಿಗಳನ್ನು ಬಿಟ್ಟರೆ ರಾವಣನಂತೆ ಇಡೀ ರಾಜ್ಯ ನೋಡಿಕೊಳ್ಳಲು ಮಹಿಳೆಯರನ್ನ ನೇಮಿಸಲಿಲ್ಲ. ಈ ಹೋಲಿಕೆ ತಪ್ಪು. ಇನ್ನ ಸಿದ್ದು ರಂಗದ ಕುಣಿತಕ್ಕೆ ಮೀಸಲೇ ಹೊರತು ನೃತ್ಯಪಟುವಲ್ಲ. ಇನ್ನು ವೀಣೆಗೂ ತಂಬೂರಿ ಸರೋಟ್‌ಗೂ ವ್ಯತ್ಯಾಸ ಸಿದ್ದುರವರಿಗೆ ಗೊತ್ತೋ ಇಲ್ಲವೋ ಅವರೇ ಬಲ್ಲರು. ಒಳ್ಳೆ ಆಡಳಿತಗಾರ ಎಂಬುದನ್ನ ಒಪ್ಪಿಕೊಳ್ಳಬೇಕು. ಇನ್ನು ಅವರ ಬಜೆಟ್ ಮಂಡನೆ ಭುಜಂಗ ಸ್ತ್ರೋತ್ರಕ್ಕೆ ಸಮ ಅನ್ನಬಹುದು. ಸದನದಲ್ಲಿ ಅಗ್ನಿಯಂತೆ ಜ್ವಲಿಸಿದರೂ ಜೊತೆಯಲ್ಲಿ ಕುಳಿತು ಹೊಟ್ಟೆತುಂಬಾ ಭೋಜನ ಬಾರಿಸುವ ವ್ಯಕ್ತಿ. ರಾವಣನಂತೆ ರಾಜ ಲಕ್ಷಣವೇನೂ ಸಿದ್ದು ಮುಖದಲ್ಲಿಲ್ಲ. ಇನ್ನ ಕುಬೇರನನ್ನು ಸೋಲಿಸಿ ಪುಷ್ಪಕ ವಿಮಾನ ಪಡೆದ ರಾವಣನಿಗೆ ಸಿದ್ದು ಹೋಲಿಸುವುದಾದರೆ, ದೇವು ಫ್ಯಾಮಿಲಿಯನ್ನ ಮೂಲೆಗೆ ಸರಿಸಿ ವಿರೋಧಪಕ್ಷದ ಸಾರಥ್ಯ ಪಡೆದದ್ದು. ಸೀತಾಪಹರಣದಂತ ಕೃತ್ಯ ಎಸಗಿದವರಲ್ಲ. ಆದ್ದರಿಂದ ಕಟೀಲರ ವ್ಯಾಖ್ಯಾನಕ್ಕೆ ಇತ್ತು ಸಿದ್ದು ಅಭಿಮಾನಿಗಳು ಮತ್ತು ಅತ್ತ ವಿಪ್ರೋತ್ತಮರು ಶ್ಯಾನೆ ಸಿಟ್ಟಾಗಿದ್ದಾರಂತಲ್ಲಾ.

********

ಕಟೀಲರ ಇನ್ನೊಂದು ಮಾತು, ರಾಮ ಜನರನ್ನು ನಂಬುತ್ತಿದ್ದ ಎಂಬುದು. ಇದರ ಅನಾಹುತವೆಂದರೆ ಅಗಸನ ಮಾತನ್ನು ನಂಬಿ ತುಂಬು ಗರ್ಭಿಣಿ ಸೀತೆಯನ್ನು ಕಾಡಿನ ಮಧ್ಯೆ ಬಿಟ್ಟು ಬಂದಿದ್ದು, ಮೊದಲು ಹನ್ನೆರಡು ವರ್ಷ ವನವಾಸ, ಆ ನಂತರ ಮತ್ತೆ ವನವಾಸ ಅನುಭವಿಸಿದ ಸೀತೆ ಕಡೆಗೆ ಸಾಕಪ್ಪ ಈ ರಾಮನ ಸಹವಾಸ ಎಂದು ತವರು ಮನೆಗೆ ಹೋಗಿ ತರಕಾರಿ ಬೆಳೆದುಕೊಂಡು ಕಾಲ ಹಾಕಿದಳಲ್ಲಾ. ಈ ಸಾಲುಗಳ ಬಗ್ಗೆ ಅನುಮಾನವಿದ್ದವರು ಎಸ್.ಎಲ್ ಭೈರಪ್ಪನವರ ಉತ್ತರಕಾಂಡ ಓದುವುದು ಒಳ್ಳೆಯದು. ಅಂದ ಹಾಗೆ ಅವರಣವನ್ನು ತಲೆಮೇಲೆ ಹೊತ್ತುಕೊಂಡು ಮಾರಿದೆ ಸಂಘಪರಿವಾರ ಸಮೂಹ ಉತ್ತರಕಾಂಡದ ಬಗ್ಗೆ ಉಸಿರೆತ್ತಿಲ್ಲವಂತಲ್ಲಾ. ಇದೆಲ್ಲಕಿಂತ ಮಜಾ ಅಂದರೆ ಬಷೀರಣ್ಣನವರು ರಾಮಾಯಣವನ್ನು ವ್ಯಾಖ್ಯಾನಿಸಿರುವ ಪರಿ ಭೈರಪ್ಪನವರಿಗೆ ಹತ್ತಿರವಾಗಿದೆಯಲ್ಲಾ. “ನೋಡಿ ಸಾರ್ ಒಬ್ಬ ಮನುಷ್ಯ ತಂಗಿಗಾಗಿ ತನ್ನ ಪ್ರಾಣವನ್ನೇ ಕೊಟ್ಟು ರಾಜ್ಯನೂ ಕಳಕೊಂಡ. ತಂದೆ ಮಾಡಿದ ಕೆಲ್ಸಕ್ಕೆ ರಾಜ್ಯ ಬಿಟ್ಟು ಬಂದ ರಾಮ ದೊಡ್ಡವುನೊ, ರಾವಣ ದೊಡ್ಡವುನೊ, ನೀವೇ ಹೇಳಿ ಸಾರ್. ಪಾಪ ಶೂರ್ಪನಕಿ ಸ್ಟೋರಿ ಈ ಕಾಲದಲ್ಲಿ ಅಸಿಡ್ ದಾಳಿಗೆ ತುತ್ತಾಗಿ ಬುರ್ಖಾ ಹಾಯ್ಕಂಡು ಓಡಾಡ್ತರಲ್ಲ, ಅಂತ ಹೆಂಗಸರ ಕತೆ ಆಗಿರಬೌದು, ಯಾವುದಾದ್ರು ಹುಡುಗಿ ಲವ್ ಮಾಡು ಅಂದ್ರೆ ಆಗಲ್ಲ ಸ್ವಲ್ಪ ಪ್ರಾಬ್ಲಂ ಅನ್ನಬೇಕು ಸಾರ್! ಮೂಗುಕುಯ್ದಾಕ್‌ಬುಡದ” ಎಂದು ಚಿಂತಾಕ್ರಾಂತರಾದರಲ್ಲಾ. ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...