Homeಅಂಕಣಗಳುಶ್ರೀನಿವಾಸ್ ಪ್ರಸಾದ್‌ಗೆ ನಿರ್ಮಲಾ ನೀತಿ ಬೋಧೆ!

ಶ್ರೀನಿವಾಸ್ ಪ್ರಸಾದ್‌ಗೆ ನಿರ್ಮಲಾ ನೀತಿ ಬೋಧೆ!

- Advertisement -
- Advertisement -

ಆಡಳಿತ ಪಕ್ಷವೊಂದು ಸರಿಯಾಗಿ ಕೆಲಸ ಮಾಡಬೇಕಾದರೆ ಸಮರ್ಥ ವಿರೋಧ ಪಕ್ಷವೂ ಬೇಕಂತೆ. ಹಾಗಾಗಿ ಕರ್ನಾಟಕದಲ್ಲಿ ಸಮರ್ಥವಾಗಿಯೇ ಕೆಲಸ ಮಾಡುತ್ತಿದ್ದ ಕಾಂಗೈ ಪಾರ್ಟಿಯ ಯಾವ ಮಾತಿಗೂ ಕಿವಿಗೊಡದೆ ನಡೆದಿದ್ದ ಬಿಜೆಪಿ ಸರಕಾರ, ರಾಹುಲ್‌ಗಾಂಧಿ ಮಾಡುತ್ತಿರುವ ಜಾಥಕ್ಕೆ ಜನ ಮುತ್ತಿಗೊಳ್ಳುತ್ತಿರುವುದನ್ನು ನೋಡಿ ಗಾಬರಿಗೊಂಡು, ತನ್ನ ಮೀಸಲಾತಿ ವಿರೋಧವನ್ನು ಬದಿಗಿಟ್ಟು ಮೀಸಲಾತಿಯನ್ನು ಜಾರಿಗೆ ತಂದುಬಿಟ್ಟಿತಲ್ಲಾ. ಈ ಕ್ರಾಂತಿಕಾರಿ ತೀರ್ಮಾನದ ಹಿಂದಿರುವ ಹಿಕಮತ್ತೇನೆಂದರೆ ಈ ಮೀಸಲಾತಿ ಜಾರಿಗೆ ಮುನ್ನ ಸದನದಲ್ಲಿ ಚರ್ಚೆಯಾಗಬೇಕು; ಆ ನಂತರ ಲೋಕಸಭೆಗೂ ಸದರಿ ಮಸೂದೆ ಹೋಗಬೇಕು; ಆ ನಂತರ ರಾಷ್ಟ್ರಪತಿಯವರ ಅಂಕಿತಕ್ಕೆ ಕಾಯಬೇಕು; ಇದೆಲ್ಲಾ ಆಗುವುದರಲ್ಲಿ ಕರ್ನಾಟಕದ ಚುನಾವಣೆಯೇ ಮುಗಿದು ಲೋಕಸಭೆ ಚುನಾವಣೆಯೂ ಬರಬಹುದು. ಆದರೆ ಯಾವ ಸಾಧನೆಯನ್ನೂ ಮಾಡದೆ ಬರಿಗೈಲಿ ಚುನಾವಣೆಗೆ ಹೊರಟಿದ್ದ ಬಿಜೆಪಿ ಕೈಗೆ ಮೀಸಲಾತಿ ಸೌಟು ಸಿಕ್ಕಿದೆ. ಬಕೇಟು ಕೂಡ ಪೂರ್ತಿ ಖಾಲಿಯಿದೆ; ಉದ್ಯೋಗವನ್ನೇ ಸೃಷ್ಟಿಸದ ಖಾಲಿ ಹುದ್ದೆ ತುಂಬದ ಬಿಜೆಪಿ ಸಂಚಿಗೆ ದಲಿತರು ಮೋಸ ಹೋಗುತ್ತಾರೋ ಇಲ್ಲವೋ ಕಾದುನೋಡಬೇಕಂತಲ್ಲಾ, ಥೂತ್ತೇರಿ.

*****

ಬೊಮ್ಮಾಯಿ ಮೀಸಲಾತಿ ಬುಟ್ಟಿಗೆ ಕೈ ಹಾಕಿದ ಕೂಡಲೇ ಎಲ್ಲಾ ಜಾತಿಗಳು ಜೇನು ಬುಟ್ಟಿಯಿಂದ ಎದ್ದ ಜೇನುಹುಳುಗಳಂತೆ ಝೇಂಕಾರದ ಶಬ್ದ ಮಾಡುತ್ತ ಬೊಮ್ಮಾಯಿಯವರನ್ನು ಮುತ್ತಿಕೊಂಡವಲ್ಲಾ. ಈ ಮೊದಲು ಜನಾಂಗದ ಮುಖಂಡರಿದ್ದರೆ ಈಗ ಎಲ್ಲ ಜಾತಿಗಳಲ್ಲೂ ಸುಖ ಸಂತೋಷದ ಸುಪ್ಪತ್ತಿಗೆಯಲ್ಲಿರುವ ಜಗದ್ಗುರುಗಳೇ ಜಾತಿ ನಾಯಕರಾಗಿದ್ದಾರೆ. ಈ ಪೈಕಿ ಕರ್ನಾಟಕದ ಎರಡನೇ ದೊಡ್ಡ ಸಮುದಾಯವಾದ ಒಕ್ಕಲಿಗರ ಜಗದ್ಗುರು ನಿರ್ಮಲಾನಂದರು ಮೀಸಲಾತಿಗೆ ಕೈಯೊಡ್ಡಿ ನಮಗೆ ಕೊಡುವ ನಾಲ್ಕು ಪರಸೆಂಟು ಯಾತಕ್ಕೂ ಸಾಲುತ್ತಿಲ್ಲ ನಾವು ಹದಿನಾರು ಪರಸೆಂಟ್ ಇರುವುದರಿಂದ, ಅಷ್ಟೂ ಪರಸೆಂಟ್ ಮೀಸಲಾತಿ ಏನೂ ಬೇಡ, ಹನ್ನೆರಡು ಪರಸೆಂಟ್ ಕೊಡಿ; ಇಲ್ಲವಾದರೆ ಬೆಂಗಳೂರು ಸುತ್ತ ಭೂಮಿ ಮಾರಿಕೊಂಡು ಬೆಂಗಳೂರಿನ ಬಾರು ಕ್ಲಬ್ಬು ಹೋಟೆಲುಗಳಲ್ಲಿ ಕಳೆದುಹೋಗಿರುವ ಒಕ್ಕಲಿಗರನ್ನು ಒಟ್ಟಿಗೆ ಸೇರಿಸಿ ವಿಜಯನಗರದಿಂದ ಭೂಮಿ ಮಾರಿಕೊಂಡ ಜಾಗಕ್ಕೆ ಜಾಥ ತೆಗೆಯುತ್ತೇವೆ ಎಂದಿದ್ದಾರಲ್ಲಾ. ಬೆಂಗಳೂರು ಸುತ್ತಮುತ್ತ ಒಕ್ಕಲಿಗರು ಭೂಮಿ ಮಾರಿಕೊಂಡಿದ್ದಕ್ಕೆ ಕಾರಣ ಅಂದು ಮುಖ್ಯಮಂತ್ರಿಗಳಾಗಿದ್ದ ದೇವೇಗೌಡರು. ಭೂಮಿ ಮಾರಿಕೊಂಡ ಜನಾಂಗ ಮುಂದೇನು ಮಾಡಬೇಕೆಂಬ ಕಸುಬಿನ ಪಟ್ಟಿಯನ್ನ ಅವರೇ ತಯಾರಿಸಿ ಕೊಡಬೇಕಿತ್ತು, ಕೊಟ್ಟಿಲ್ಲ. ಅದೆಲ್ಲಕ್ಕಿಂತ ಮುಖ್ಯವಾಗಿ ನಿರ್ಮಲಾನಂದರು ಒಕ್ಕಲಿಗರ ಇತಿಹಾಸದ ಪಥ ಬಿಟ್ಟು ಉತ್ತರಪ್ರದೇಶದ ದಾರಿ ಹಿಡಿದಿದ್ದಾರೆ. ಉತ್ತರದ ಶಾ ಆದಿತ್ಯರು ಮೀಸಲಾತಿ ವಿರೋಧಿಗಳು. ನಿರ್ಮಲಾನಂದರು ಎಬ್ಬಿಸುವ ಮೀಸಲಾತಿ ಗಲಭೆ ತೀವ್ರಗೊಂಡು ಮೀಸಲಾತಿಯೇ ರದ್ದಾಗುವ ಅಪಾಯವನ್ನು ಬಿಜೆಪಿಗಳೇ ತಯಾರಿಸಿರಬಾರದೇಕೆ ಎಂದು ಶ್ರೀನಿವಾಸ್ ಪ್ರಸಾದರ ಕಡೆ ಜನ ಗುಮಾನಿ ಪಟ್ಟಿದ್ದಾರಂತಲ್ಲಾ, ಥೂತ್ತೇರಿ.

*****

ಅರ್ಧ ಶತಮಾನದ ಹಿಂದೆ ಮೈಸೂರು ಕಡೆಯಿಂದ ಮೇಲೆದ್ದು ಬಂದ ದಲಿತ ನಕ್ಷತ್ರ ಶ್ರೀನಿವಾಸ ಪ್ರಸಾದ್ 2024ರಿಂದ ನಿವೃತ್ತಿಯಾಗುತ್ತಾರಂತಲ್ಲಾ. ಹಾಗೆ ನೋಡಿದರೆ ಅವರು ನಿವೃತ್ತಿಯಾಗಿದ್ದುದು ಸಿದ್ದರಾಮಯ್ಯನ ಸಂಪುಟದಲ್ಲಿ ಸಚಿವರಾದಾಗಲೇ. ಬಹುಮುಖ್ಯವಾದ ರೆವಿನ್ಯೂ ಖಾತೆ ಪಡೆದು ರಗ್ಗು ಹೊದ್ದು ಮಲಗಿದ್ದನ್ನು ನೋಡಿದ ಸಿದ್ದು ಖಾತೆ ಬದಲಿಸಿದರು. ಸಿಟ್ಟುಗೊಂಡ ಶ್ರೀನಿವಾಸ್ ಎದ್ದುಹೋಗಿ ಬಿಜೆಪಿ ಕದ ಬಡಿದರು. ಅವರು ಕದಬಡಿಯುತ್ತಿದ್ದಾಗ ಉತ್ತರ ಕನ್ನಡದವನೊಬ್ಬ ’ನಾವು ಸಂವಿಧಾನ ಬದಲಿಸುತ್ತೇವೆ’ ಎಂದ ವಿಕೃತ ಮಾತು ಶ್ರೀನಿವಾಸರ ಕಿವಿಗೆ ಬೀಳಲೇಯಿಲ್ಲ. ಅವರು ರಾಜಕಾರಣಕ್ಕೆ ಬಂದಾಗ ದಲಿತರು ಗುಡಿಸಲಲ್ಲಿದ್ದು ಬಡತನದಲ್ಲಿದ್ದರಂತೆ ಈಗಲೂ ಹಾಗೇ ಇರುವುದನ್ನು ನೋಡಿ ಮೋದಿಯವರಿಗೆ ತಿಳಿಸಿದರಂತೆ; ಆಗ ಅಲ್ಲೇ ಇದ್ದ ನಿರ್ಮಲಾಸೀತಾರಾಂ ಕೂಡಲೇ ಸಾರ್ ಗುಡಿಸಲಲ್ಲಿರುವ ದಲಿತರು ಅದನ್ನು ಒಳ್ಳೆಮನೇಯಲ್ಲಿದ್ದೇವೆ ಅಂದುಕೊಂಡರಾಯ್ತು. ಇನ್ನ ನಮಗೆ ಬಡತನವೇಇಲ್ಲ; ಎಳೆ ಬಾಳೆದೆಲೆಯ ಮೇಲೆ ಈಗ ತಾನೆ ಸಣ್ಣಕ್ಕಿ ಅನ್ನವನ್ನು ಹುಳಿಯಲ್ಲಿ ಕಲೆಸಿ ತುಪ್ಪ ಹಾಕಿಕೊಂಡು ಚಪ್ಪರಿಸುತ್ತ ಹಪ್ಪಳ ಸೊಂಡಿಗೆ ಪತ್ರೊಡೆ ಕಡ್ಳೆ ಪಾಯಸದೊಂದಿಗೆ ಉಂಡಿದ್ದೇವೆ ಎಂದುಕೊಂಡರಾಯ್ತು ಸಾರ್, ನಮ್ಮ ಭಾವನೆಗಳೇ ಬದಲಾಗುತ್ತವೆ. ಈಚೆಗೆ ಬಿಜೆಪಿಗೆ ಬರುತ್ತಿರುವ ಬಡವರಿಗೆ ನಾವು ಹೀಗೆಯೇ ಹೇಳುತ್ತಿದ್ದೇವೆ ಎಂದರಂತಲ್ಲಾ, ಥೂ ಥೂ ಥೂತ್ತೇರಿ.


ಇದನ್ನೂ ಓದಿ: ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...