Homeಅಂಕಣಗಳುಶ್ರೀನಿವಾಸ್ ಪ್ರಸಾದ್‌ಗೆ ನಿರ್ಮಲಾ ನೀತಿ ಬೋಧೆ!

ಶ್ರೀನಿವಾಸ್ ಪ್ರಸಾದ್‌ಗೆ ನಿರ್ಮಲಾ ನೀತಿ ಬೋಧೆ!

- Advertisement -
- Advertisement -

ಆಡಳಿತ ಪಕ್ಷವೊಂದು ಸರಿಯಾಗಿ ಕೆಲಸ ಮಾಡಬೇಕಾದರೆ ಸಮರ್ಥ ವಿರೋಧ ಪಕ್ಷವೂ ಬೇಕಂತೆ. ಹಾಗಾಗಿ ಕರ್ನಾಟಕದಲ್ಲಿ ಸಮರ್ಥವಾಗಿಯೇ ಕೆಲಸ ಮಾಡುತ್ತಿದ್ದ ಕಾಂಗೈ ಪಾರ್ಟಿಯ ಯಾವ ಮಾತಿಗೂ ಕಿವಿಗೊಡದೆ ನಡೆದಿದ್ದ ಬಿಜೆಪಿ ಸರಕಾರ, ರಾಹುಲ್‌ಗಾಂಧಿ ಮಾಡುತ್ತಿರುವ ಜಾಥಕ್ಕೆ ಜನ ಮುತ್ತಿಗೊಳ್ಳುತ್ತಿರುವುದನ್ನು ನೋಡಿ ಗಾಬರಿಗೊಂಡು, ತನ್ನ ಮೀಸಲಾತಿ ವಿರೋಧವನ್ನು ಬದಿಗಿಟ್ಟು ಮೀಸಲಾತಿಯನ್ನು ಜಾರಿಗೆ ತಂದುಬಿಟ್ಟಿತಲ್ಲಾ. ಈ ಕ್ರಾಂತಿಕಾರಿ ತೀರ್ಮಾನದ ಹಿಂದಿರುವ ಹಿಕಮತ್ತೇನೆಂದರೆ ಈ ಮೀಸಲಾತಿ ಜಾರಿಗೆ ಮುನ್ನ ಸದನದಲ್ಲಿ ಚರ್ಚೆಯಾಗಬೇಕು; ಆ ನಂತರ ಲೋಕಸಭೆಗೂ ಸದರಿ ಮಸೂದೆ ಹೋಗಬೇಕು; ಆ ನಂತರ ರಾಷ್ಟ್ರಪತಿಯವರ ಅಂಕಿತಕ್ಕೆ ಕಾಯಬೇಕು; ಇದೆಲ್ಲಾ ಆಗುವುದರಲ್ಲಿ ಕರ್ನಾಟಕದ ಚುನಾವಣೆಯೇ ಮುಗಿದು ಲೋಕಸಭೆ ಚುನಾವಣೆಯೂ ಬರಬಹುದು. ಆದರೆ ಯಾವ ಸಾಧನೆಯನ್ನೂ ಮಾಡದೆ ಬರಿಗೈಲಿ ಚುನಾವಣೆಗೆ ಹೊರಟಿದ್ದ ಬಿಜೆಪಿ ಕೈಗೆ ಮೀಸಲಾತಿ ಸೌಟು ಸಿಕ್ಕಿದೆ. ಬಕೇಟು ಕೂಡ ಪೂರ್ತಿ ಖಾಲಿಯಿದೆ; ಉದ್ಯೋಗವನ್ನೇ ಸೃಷ್ಟಿಸದ ಖಾಲಿ ಹುದ್ದೆ ತುಂಬದ ಬಿಜೆಪಿ ಸಂಚಿಗೆ ದಲಿತರು ಮೋಸ ಹೋಗುತ್ತಾರೋ ಇಲ್ಲವೋ ಕಾದುನೋಡಬೇಕಂತಲ್ಲಾ, ಥೂತ್ತೇರಿ.

*****

ಬೊಮ್ಮಾಯಿ ಮೀಸಲಾತಿ ಬುಟ್ಟಿಗೆ ಕೈ ಹಾಕಿದ ಕೂಡಲೇ ಎಲ್ಲಾ ಜಾತಿಗಳು ಜೇನು ಬುಟ್ಟಿಯಿಂದ ಎದ್ದ ಜೇನುಹುಳುಗಳಂತೆ ಝೇಂಕಾರದ ಶಬ್ದ ಮಾಡುತ್ತ ಬೊಮ್ಮಾಯಿಯವರನ್ನು ಮುತ್ತಿಕೊಂಡವಲ್ಲಾ. ಈ ಮೊದಲು ಜನಾಂಗದ ಮುಖಂಡರಿದ್ದರೆ ಈಗ ಎಲ್ಲ ಜಾತಿಗಳಲ್ಲೂ ಸುಖ ಸಂತೋಷದ ಸುಪ್ಪತ್ತಿಗೆಯಲ್ಲಿರುವ ಜಗದ್ಗುರುಗಳೇ ಜಾತಿ ನಾಯಕರಾಗಿದ್ದಾರೆ. ಈ ಪೈಕಿ ಕರ್ನಾಟಕದ ಎರಡನೇ ದೊಡ್ಡ ಸಮುದಾಯವಾದ ಒಕ್ಕಲಿಗರ ಜಗದ್ಗುರು ನಿರ್ಮಲಾನಂದರು ಮೀಸಲಾತಿಗೆ ಕೈಯೊಡ್ಡಿ ನಮಗೆ ಕೊಡುವ ನಾಲ್ಕು ಪರಸೆಂಟು ಯಾತಕ್ಕೂ ಸಾಲುತ್ತಿಲ್ಲ ನಾವು ಹದಿನಾರು ಪರಸೆಂಟ್ ಇರುವುದರಿಂದ, ಅಷ್ಟೂ ಪರಸೆಂಟ್ ಮೀಸಲಾತಿ ಏನೂ ಬೇಡ, ಹನ್ನೆರಡು ಪರಸೆಂಟ್ ಕೊಡಿ; ಇಲ್ಲವಾದರೆ ಬೆಂಗಳೂರು ಸುತ್ತ ಭೂಮಿ ಮಾರಿಕೊಂಡು ಬೆಂಗಳೂರಿನ ಬಾರು ಕ್ಲಬ್ಬು ಹೋಟೆಲುಗಳಲ್ಲಿ ಕಳೆದುಹೋಗಿರುವ ಒಕ್ಕಲಿಗರನ್ನು ಒಟ್ಟಿಗೆ ಸೇರಿಸಿ ವಿಜಯನಗರದಿಂದ ಭೂಮಿ ಮಾರಿಕೊಂಡ ಜಾಗಕ್ಕೆ ಜಾಥ ತೆಗೆಯುತ್ತೇವೆ ಎಂದಿದ್ದಾರಲ್ಲಾ. ಬೆಂಗಳೂರು ಸುತ್ತಮುತ್ತ ಒಕ್ಕಲಿಗರು ಭೂಮಿ ಮಾರಿಕೊಂಡಿದ್ದಕ್ಕೆ ಕಾರಣ ಅಂದು ಮುಖ್ಯಮಂತ್ರಿಗಳಾಗಿದ್ದ ದೇವೇಗೌಡರು. ಭೂಮಿ ಮಾರಿಕೊಂಡ ಜನಾಂಗ ಮುಂದೇನು ಮಾಡಬೇಕೆಂಬ ಕಸುಬಿನ ಪಟ್ಟಿಯನ್ನ ಅವರೇ ತಯಾರಿಸಿ ಕೊಡಬೇಕಿತ್ತು, ಕೊಟ್ಟಿಲ್ಲ. ಅದೆಲ್ಲಕ್ಕಿಂತ ಮುಖ್ಯವಾಗಿ ನಿರ್ಮಲಾನಂದರು ಒಕ್ಕಲಿಗರ ಇತಿಹಾಸದ ಪಥ ಬಿಟ್ಟು ಉತ್ತರಪ್ರದೇಶದ ದಾರಿ ಹಿಡಿದಿದ್ದಾರೆ. ಉತ್ತರದ ಶಾ ಆದಿತ್ಯರು ಮೀಸಲಾತಿ ವಿರೋಧಿಗಳು. ನಿರ್ಮಲಾನಂದರು ಎಬ್ಬಿಸುವ ಮೀಸಲಾತಿ ಗಲಭೆ ತೀವ್ರಗೊಂಡು ಮೀಸಲಾತಿಯೇ ರದ್ದಾಗುವ ಅಪಾಯವನ್ನು ಬಿಜೆಪಿಗಳೇ ತಯಾರಿಸಿರಬಾರದೇಕೆ ಎಂದು ಶ್ರೀನಿವಾಸ್ ಪ್ರಸಾದರ ಕಡೆ ಜನ ಗುಮಾನಿ ಪಟ್ಟಿದ್ದಾರಂತಲ್ಲಾ, ಥೂತ್ತೇರಿ.

*****

ಅರ್ಧ ಶತಮಾನದ ಹಿಂದೆ ಮೈಸೂರು ಕಡೆಯಿಂದ ಮೇಲೆದ್ದು ಬಂದ ದಲಿತ ನಕ್ಷತ್ರ ಶ್ರೀನಿವಾಸ ಪ್ರಸಾದ್ 2024ರಿಂದ ನಿವೃತ್ತಿಯಾಗುತ್ತಾರಂತಲ್ಲಾ. ಹಾಗೆ ನೋಡಿದರೆ ಅವರು ನಿವೃತ್ತಿಯಾಗಿದ್ದುದು ಸಿದ್ದರಾಮಯ್ಯನ ಸಂಪುಟದಲ್ಲಿ ಸಚಿವರಾದಾಗಲೇ. ಬಹುಮುಖ್ಯವಾದ ರೆವಿನ್ಯೂ ಖಾತೆ ಪಡೆದು ರಗ್ಗು ಹೊದ್ದು ಮಲಗಿದ್ದನ್ನು ನೋಡಿದ ಸಿದ್ದು ಖಾತೆ ಬದಲಿಸಿದರು. ಸಿಟ್ಟುಗೊಂಡ ಶ್ರೀನಿವಾಸ್ ಎದ್ದುಹೋಗಿ ಬಿಜೆಪಿ ಕದ ಬಡಿದರು. ಅವರು ಕದಬಡಿಯುತ್ತಿದ್ದಾಗ ಉತ್ತರ ಕನ್ನಡದವನೊಬ್ಬ ’ನಾವು ಸಂವಿಧಾನ ಬದಲಿಸುತ್ತೇವೆ’ ಎಂದ ವಿಕೃತ ಮಾತು ಶ್ರೀನಿವಾಸರ ಕಿವಿಗೆ ಬೀಳಲೇಯಿಲ್ಲ. ಅವರು ರಾಜಕಾರಣಕ್ಕೆ ಬಂದಾಗ ದಲಿತರು ಗುಡಿಸಲಲ್ಲಿದ್ದು ಬಡತನದಲ್ಲಿದ್ದರಂತೆ ಈಗಲೂ ಹಾಗೇ ಇರುವುದನ್ನು ನೋಡಿ ಮೋದಿಯವರಿಗೆ ತಿಳಿಸಿದರಂತೆ; ಆಗ ಅಲ್ಲೇ ಇದ್ದ ನಿರ್ಮಲಾಸೀತಾರಾಂ ಕೂಡಲೇ ಸಾರ್ ಗುಡಿಸಲಲ್ಲಿರುವ ದಲಿತರು ಅದನ್ನು ಒಳ್ಳೆಮನೇಯಲ್ಲಿದ್ದೇವೆ ಅಂದುಕೊಂಡರಾಯ್ತು. ಇನ್ನ ನಮಗೆ ಬಡತನವೇಇಲ್ಲ; ಎಳೆ ಬಾಳೆದೆಲೆಯ ಮೇಲೆ ಈಗ ತಾನೆ ಸಣ್ಣಕ್ಕಿ ಅನ್ನವನ್ನು ಹುಳಿಯಲ್ಲಿ ಕಲೆಸಿ ತುಪ್ಪ ಹಾಕಿಕೊಂಡು ಚಪ್ಪರಿಸುತ್ತ ಹಪ್ಪಳ ಸೊಂಡಿಗೆ ಪತ್ರೊಡೆ ಕಡ್ಳೆ ಪಾಯಸದೊಂದಿಗೆ ಉಂಡಿದ್ದೇವೆ ಎಂದುಕೊಂಡರಾಯ್ತು ಸಾರ್, ನಮ್ಮ ಭಾವನೆಗಳೇ ಬದಲಾಗುತ್ತವೆ. ಈಚೆಗೆ ಬಿಜೆಪಿಗೆ ಬರುತ್ತಿರುವ ಬಡವರಿಗೆ ನಾವು ಹೀಗೆಯೇ ಹೇಳುತ್ತಿದ್ದೇವೆ ಎಂದರಂತಲ್ಲಾ, ಥೂ ಥೂ ಥೂತ್ತೇರಿ.


ಇದನ್ನೂ ಓದಿ: ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...