Homeಅಂಕಣಗಳುಶ್ರೀನಿವಾಸ್ ಪ್ರಸಾದ್‌ಗೆ ನಿರ್ಮಲಾ ನೀತಿ ಬೋಧೆ!

ಶ್ರೀನಿವಾಸ್ ಪ್ರಸಾದ್‌ಗೆ ನಿರ್ಮಲಾ ನೀತಿ ಬೋಧೆ!

- Advertisement -
- Advertisement -

ಆಡಳಿತ ಪಕ್ಷವೊಂದು ಸರಿಯಾಗಿ ಕೆಲಸ ಮಾಡಬೇಕಾದರೆ ಸಮರ್ಥ ವಿರೋಧ ಪಕ್ಷವೂ ಬೇಕಂತೆ. ಹಾಗಾಗಿ ಕರ್ನಾಟಕದಲ್ಲಿ ಸಮರ್ಥವಾಗಿಯೇ ಕೆಲಸ ಮಾಡುತ್ತಿದ್ದ ಕಾಂಗೈ ಪಾರ್ಟಿಯ ಯಾವ ಮಾತಿಗೂ ಕಿವಿಗೊಡದೆ ನಡೆದಿದ್ದ ಬಿಜೆಪಿ ಸರಕಾರ, ರಾಹುಲ್‌ಗಾಂಧಿ ಮಾಡುತ್ತಿರುವ ಜಾಥಕ್ಕೆ ಜನ ಮುತ್ತಿಗೊಳ್ಳುತ್ತಿರುವುದನ್ನು ನೋಡಿ ಗಾಬರಿಗೊಂಡು, ತನ್ನ ಮೀಸಲಾತಿ ವಿರೋಧವನ್ನು ಬದಿಗಿಟ್ಟು ಮೀಸಲಾತಿಯನ್ನು ಜಾರಿಗೆ ತಂದುಬಿಟ್ಟಿತಲ್ಲಾ. ಈ ಕ್ರಾಂತಿಕಾರಿ ತೀರ್ಮಾನದ ಹಿಂದಿರುವ ಹಿಕಮತ್ತೇನೆಂದರೆ ಈ ಮೀಸಲಾತಿ ಜಾರಿಗೆ ಮುನ್ನ ಸದನದಲ್ಲಿ ಚರ್ಚೆಯಾಗಬೇಕು; ಆ ನಂತರ ಲೋಕಸಭೆಗೂ ಸದರಿ ಮಸೂದೆ ಹೋಗಬೇಕು; ಆ ನಂತರ ರಾಷ್ಟ್ರಪತಿಯವರ ಅಂಕಿತಕ್ಕೆ ಕಾಯಬೇಕು; ಇದೆಲ್ಲಾ ಆಗುವುದರಲ್ಲಿ ಕರ್ನಾಟಕದ ಚುನಾವಣೆಯೇ ಮುಗಿದು ಲೋಕಸಭೆ ಚುನಾವಣೆಯೂ ಬರಬಹುದು. ಆದರೆ ಯಾವ ಸಾಧನೆಯನ್ನೂ ಮಾಡದೆ ಬರಿಗೈಲಿ ಚುನಾವಣೆಗೆ ಹೊರಟಿದ್ದ ಬಿಜೆಪಿ ಕೈಗೆ ಮೀಸಲಾತಿ ಸೌಟು ಸಿಕ್ಕಿದೆ. ಬಕೇಟು ಕೂಡ ಪೂರ್ತಿ ಖಾಲಿಯಿದೆ; ಉದ್ಯೋಗವನ್ನೇ ಸೃಷ್ಟಿಸದ ಖಾಲಿ ಹುದ್ದೆ ತುಂಬದ ಬಿಜೆಪಿ ಸಂಚಿಗೆ ದಲಿತರು ಮೋಸ ಹೋಗುತ್ತಾರೋ ಇಲ್ಲವೋ ಕಾದುನೋಡಬೇಕಂತಲ್ಲಾ, ಥೂತ್ತೇರಿ.

*****

ಬೊಮ್ಮಾಯಿ ಮೀಸಲಾತಿ ಬುಟ್ಟಿಗೆ ಕೈ ಹಾಕಿದ ಕೂಡಲೇ ಎಲ್ಲಾ ಜಾತಿಗಳು ಜೇನು ಬುಟ್ಟಿಯಿಂದ ಎದ್ದ ಜೇನುಹುಳುಗಳಂತೆ ಝೇಂಕಾರದ ಶಬ್ದ ಮಾಡುತ್ತ ಬೊಮ್ಮಾಯಿಯವರನ್ನು ಮುತ್ತಿಕೊಂಡವಲ್ಲಾ. ಈ ಮೊದಲು ಜನಾಂಗದ ಮುಖಂಡರಿದ್ದರೆ ಈಗ ಎಲ್ಲ ಜಾತಿಗಳಲ್ಲೂ ಸುಖ ಸಂತೋಷದ ಸುಪ್ಪತ್ತಿಗೆಯಲ್ಲಿರುವ ಜಗದ್ಗುರುಗಳೇ ಜಾತಿ ನಾಯಕರಾಗಿದ್ದಾರೆ. ಈ ಪೈಕಿ ಕರ್ನಾಟಕದ ಎರಡನೇ ದೊಡ್ಡ ಸಮುದಾಯವಾದ ಒಕ್ಕಲಿಗರ ಜಗದ್ಗುರು ನಿರ್ಮಲಾನಂದರು ಮೀಸಲಾತಿಗೆ ಕೈಯೊಡ್ಡಿ ನಮಗೆ ಕೊಡುವ ನಾಲ್ಕು ಪರಸೆಂಟು ಯಾತಕ್ಕೂ ಸಾಲುತ್ತಿಲ್ಲ ನಾವು ಹದಿನಾರು ಪರಸೆಂಟ್ ಇರುವುದರಿಂದ, ಅಷ್ಟೂ ಪರಸೆಂಟ್ ಮೀಸಲಾತಿ ಏನೂ ಬೇಡ, ಹನ್ನೆರಡು ಪರಸೆಂಟ್ ಕೊಡಿ; ಇಲ್ಲವಾದರೆ ಬೆಂಗಳೂರು ಸುತ್ತ ಭೂಮಿ ಮಾರಿಕೊಂಡು ಬೆಂಗಳೂರಿನ ಬಾರು ಕ್ಲಬ್ಬು ಹೋಟೆಲುಗಳಲ್ಲಿ ಕಳೆದುಹೋಗಿರುವ ಒಕ್ಕಲಿಗರನ್ನು ಒಟ್ಟಿಗೆ ಸೇರಿಸಿ ವಿಜಯನಗರದಿಂದ ಭೂಮಿ ಮಾರಿಕೊಂಡ ಜಾಗಕ್ಕೆ ಜಾಥ ತೆಗೆಯುತ್ತೇವೆ ಎಂದಿದ್ದಾರಲ್ಲಾ. ಬೆಂಗಳೂರು ಸುತ್ತಮುತ್ತ ಒಕ್ಕಲಿಗರು ಭೂಮಿ ಮಾರಿಕೊಂಡಿದ್ದಕ್ಕೆ ಕಾರಣ ಅಂದು ಮುಖ್ಯಮಂತ್ರಿಗಳಾಗಿದ್ದ ದೇವೇಗೌಡರು. ಭೂಮಿ ಮಾರಿಕೊಂಡ ಜನಾಂಗ ಮುಂದೇನು ಮಾಡಬೇಕೆಂಬ ಕಸುಬಿನ ಪಟ್ಟಿಯನ್ನ ಅವರೇ ತಯಾರಿಸಿ ಕೊಡಬೇಕಿತ್ತು, ಕೊಟ್ಟಿಲ್ಲ. ಅದೆಲ್ಲಕ್ಕಿಂತ ಮುಖ್ಯವಾಗಿ ನಿರ್ಮಲಾನಂದರು ಒಕ್ಕಲಿಗರ ಇತಿಹಾಸದ ಪಥ ಬಿಟ್ಟು ಉತ್ತರಪ್ರದೇಶದ ದಾರಿ ಹಿಡಿದಿದ್ದಾರೆ. ಉತ್ತರದ ಶಾ ಆದಿತ್ಯರು ಮೀಸಲಾತಿ ವಿರೋಧಿಗಳು. ನಿರ್ಮಲಾನಂದರು ಎಬ್ಬಿಸುವ ಮೀಸಲಾತಿ ಗಲಭೆ ತೀವ್ರಗೊಂಡು ಮೀಸಲಾತಿಯೇ ರದ್ದಾಗುವ ಅಪಾಯವನ್ನು ಬಿಜೆಪಿಗಳೇ ತಯಾರಿಸಿರಬಾರದೇಕೆ ಎಂದು ಶ್ರೀನಿವಾಸ್ ಪ್ರಸಾದರ ಕಡೆ ಜನ ಗುಮಾನಿ ಪಟ್ಟಿದ್ದಾರಂತಲ್ಲಾ, ಥೂತ್ತೇರಿ.

*****

ಅರ್ಧ ಶತಮಾನದ ಹಿಂದೆ ಮೈಸೂರು ಕಡೆಯಿಂದ ಮೇಲೆದ್ದು ಬಂದ ದಲಿತ ನಕ್ಷತ್ರ ಶ್ರೀನಿವಾಸ ಪ್ರಸಾದ್ 2024ರಿಂದ ನಿವೃತ್ತಿಯಾಗುತ್ತಾರಂತಲ್ಲಾ. ಹಾಗೆ ನೋಡಿದರೆ ಅವರು ನಿವೃತ್ತಿಯಾಗಿದ್ದುದು ಸಿದ್ದರಾಮಯ್ಯನ ಸಂಪುಟದಲ್ಲಿ ಸಚಿವರಾದಾಗಲೇ. ಬಹುಮುಖ್ಯವಾದ ರೆವಿನ್ಯೂ ಖಾತೆ ಪಡೆದು ರಗ್ಗು ಹೊದ್ದು ಮಲಗಿದ್ದನ್ನು ನೋಡಿದ ಸಿದ್ದು ಖಾತೆ ಬದಲಿಸಿದರು. ಸಿಟ್ಟುಗೊಂಡ ಶ್ರೀನಿವಾಸ್ ಎದ್ದುಹೋಗಿ ಬಿಜೆಪಿ ಕದ ಬಡಿದರು. ಅವರು ಕದಬಡಿಯುತ್ತಿದ್ದಾಗ ಉತ್ತರ ಕನ್ನಡದವನೊಬ್ಬ ’ನಾವು ಸಂವಿಧಾನ ಬದಲಿಸುತ್ತೇವೆ’ ಎಂದ ವಿಕೃತ ಮಾತು ಶ್ರೀನಿವಾಸರ ಕಿವಿಗೆ ಬೀಳಲೇಯಿಲ್ಲ. ಅವರು ರಾಜಕಾರಣಕ್ಕೆ ಬಂದಾಗ ದಲಿತರು ಗುಡಿಸಲಲ್ಲಿದ್ದು ಬಡತನದಲ್ಲಿದ್ದರಂತೆ ಈಗಲೂ ಹಾಗೇ ಇರುವುದನ್ನು ನೋಡಿ ಮೋದಿಯವರಿಗೆ ತಿಳಿಸಿದರಂತೆ; ಆಗ ಅಲ್ಲೇ ಇದ್ದ ನಿರ್ಮಲಾಸೀತಾರಾಂ ಕೂಡಲೇ ಸಾರ್ ಗುಡಿಸಲಲ್ಲಿರುವ ದಲಿತರು ಅದನ್ನು ಒಳ್ಳೆಮನೇಯಲ್ಲಿದ್ದೇವೆ ಅಂದುಕೊಂಡರಾಯ್ತು. ಇನ್ನ ನಮಗೆ ಬಡತನವೇಇಲ್ಲ; ಎಳೆ ಬಾಳೆದೆಲೆಯ ಮೇಲೆ ಈಗ ತಾನೆ ಸಣ್ಣಕ್ಕಿ ಅನ್ನವನ್ನು ಹುಳಿಯಲ್ಲಿ ಕಲೆಸಿ ತುಪ್ಪ ಹಾಕಿಕೊಂಡು ಚಪ್ಪರಿಸುತ್ತ ಹಪ್ಪಳ ಸೊಂಡಿಗೆ ಪತ್ರೊಡೆ ಕಡ್ಳೆ ಪಾಯಸದೊಂದಿಗೆ ಉಂಡಿದ್ದೇವೆ ಎಂದುಕೊಂಡರಾಯ್ತು ಸಾರ್, ನಮ್ಮ ಭಾವನೆಗಳೇ ಬದಲಾಗುತ್ತವೆ. ಈಚೆಗೆ ಬಿಜೆಪಿಗೆ ಬರುತ್ತಿರುವ ಬಡವರಿಗೆ ನಾವು ಹೀಗೆಯೇ ಹೇಳುತ್ತಿದ್ದೇವೆ ಎಂದರಂತಲ್ಲಾ, ಥೂ ಥೂ ಥೂತ್ತೇರಿ.


ಇದನ್ನೂ ಓದಿ: ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...