Homeಅಂಕಣಗಳುಶ್ರೀನಿವಾಸ್ ಪ್ರಸಾದ್‌ಗೆ ನಿರ್ಮಲಾ ನೀತಿ ಬೋಧೆ!

ಶ್ರೀನಿವಾಸ್ ಪ್ರಸಾದ್‌ಗೆ ನಿರ್ಮಲಾ ನೀತಿ ಬೋಧೆ!

- Advertisement -
- Advertisement -

ಆಡಳಿತ ಪಕ್ಷವೊಂದು ಸರಿಯಾಗಿ ಕೆಲಸ ಮಾಡಬೇಕಾದರೆ ಸಮರ್ಥ ವಿರೋಧ ಪಕ್ಷವೂ ಬೇಕಂತೆ. ಹಾಗಾಗಿ ಕರ್ನಾಟಕದಲ್ಲಿ ಸಮರ್ಥವಾಗಿಯೇ ಕೆಲಸ ಮಾಡುತ್ತಿದ್ದ ಕಾಂಗೈ ಪಾರ್ಟಿಯ ಯಾವ ಮಾತಿಗೂ ಕಿವಿಗೊಡದೆ ನಡೆದಿದ್ದ ಬಿಜೆಪಿ ಸರಕಾರ, ರಾಹುಲ್‌ಗಾಂಧಿ ಮಾಡುತ್ತಿರುವ ಜಾಥಕ್ಕೆ ಜನ ಮುತ್ತಿಗೊಳ್ಳುತ್ತಿರುವುದನ್ನು ನೋಡಿ ಗಾಬರಿಗೊಂಡು, ತನ್ನ ಮೀಸಲಾತಿ ವಿರೋಧವನ್ನು ಬದಿಗಿಟ್ಟು ಮೀಸಲಾತಿಯನ್ನು ಜಾರಿಗೆ ತಂದುಬಿಟ್ಟಿತಲ್ಲಾ. ಈ ಕ್ರಾಂತಿಕಾರಿ ತೀರ್ಮಾನದ ಹಿಂದಿರುವ ಹಿಕಮತ್ತೇನೆಂದರೆ ಈ ಮೀಸಲಾತಿ ಜಾರಿಗೆ ಮುನ್ನ ಸದನದಲ್ಲಿ ಚರ್ಚೆಯಾಗಬೇಕು; ಆ ನಂತರ ಲೋಕಸಭೆಗೂ ಸದರಿ ಮಸೂದೆ ಹೋಗಬೇಕು; ಆ ನಂತರ ರಾಷ್ಟ್ರಪತಿಯವರ ಅಂಕಿತಕ್ಕೆ ಕಾಯಬೇಕು; ಇದೆಲ್ಲಾ ಆಗುವುದರಲ್ಲಿ ಕರ್ನಾಟಕದ ಚುನಾವಣೆಯೇ ಮುಗಿದು ಲೋಕಸಭೆ ಚುನಾವಣೆಯೂ ಬರಬಹುದು. ಆದರೆ ಯಾವ ಸಾಧನೆಯನ್ನೂ ಮಾಡದೆ ಬರಿಗೈಲಿ ಚುನಾವಣೆಗೆ ಹೊರಟಿದ್ದ ಬಿಜೆಪಿ ಕೈಗೆ ಮೀಸಲಾತಿ ಸೌಟು ಸಿಕ್ಕಿದೆ. ಬಕೇಟು ಕೂಡ ಪೂರ್ತಿ ಖಾಲಿಯಿದೆ; ಉದ್ಯೋಗವನ್ನೇ ಸೃಷ್ಟಿಸದ ಖಾಲಿ ಹುದ್ದೆ ತುಂಬದ ಬಿಜೆಪಿ ಸಂಚಿಗೆ ದಲಿತರು ಮೋಸ ಹೋಗುತ್ತಾರೋ ಇಲ್ಲವೋ ಕಾದುನೋಡಬೇಕಂತಲ್ಲಾ, ಥೂತ್ತೇರಿ.

*****

ಬೊಮ್ಮಾಯಿ ಮೀಸಲಾತಿ ಬುಟ್ಟಿಗೆ ಕೈ ಹಾಕಿದ ಕೂಡಲೇ ಎಲ್ಲಾ ಜಾತಿಗಳು ಜೇನು ಬುಟ್ಟಿಯಿಂದ ಎದ್ದ ಜೇನುಹುಳುಗಳಂತೆ ಝೇಂಕಾರದ ಶಬ್ದ ಮಾಡುತ್ತ ಬೊಮ್ಮಾಯಿಯವರನ್ನು ಮುತ್ತಿಕೊಂಡವಲ್ಲಾ. ಈ ಮೊದಲು ಜನಾಂಗದ ಮುಖಂಡರಿದ್ದರೆ ಈಗ ಎಲ್ಲ ಜಾತಿಗಳಲ್ಲೂ ಸುಖ ಸಂತೋಷದ ಸುಪ್ಪತ್ತಿಗೆಯಲ್ಲಿರುವ ಜಗದ್ಗುರುಗಳೇ ಜಾತಿ ನಾಯಕರಾಗಿದ್ದಾರೆ. ಈ ಪೈಕಿ ಕರ್ನಾಟಕದ ಎರಡನೇ ದೊಡ್ಡ ಸಮುದಾಯವಾದ ಒಕ್ಕಲಿಗರ ಜಗದ್ಗುರು ನಿರ್ಮಲಾನಂದರು ಮೀಸಲಾತಿಗೆ ಕೈಯೊಡ್ಡಿ ನಮಗೆ ಕೊಡುವ ನಾಲ್ಕು ಪರಸೆಂಟು ಯಾತಕ್ಕೂ ಸಾಲುತ್ತಿಲ್ಲ ನಾವು ಹದಿನಾರು ಪರಸೆಂಟ್ ಇರುವುದರಿಂದ, ಅಷ್ಟೂ ಪರಸೆಂಟ್ ಮೀಸಲಾತಿ ಏನೂ ಬೇಡ, ಹನ್ನೆರಡು ಪರಸೆಂಟ್ ಕೊಡಿ; ಇಲ್ಲವಾದರೆ ಬೆಂಗಳೂರು ಸುತ್ತ ಭೂಮಿ ಮಾರಿಕೊಂಡು ಬೆಂಗಳೂರಿನ ಬಾರು ಕ್ಲಬ್ಬು ಹೋಟೆಲುಗಳಲ್ಲಿ ಕಳೆದುಹೋಗಿರುವ ಒಕ್ಕಲಿಗರನ್ನು ಒಟ್ಟಿಗೆ ಸೇರಿಸಿ ವಿಜಯನಗರದಿಂದ ಭೂಮಿ ಮಾರಿಕೊಂಡ ಜಾಗಕ್ಕೆ ಜಾಥ ತೆಗೆಯುತ್ತೇವೆ ಎಂದಿದ್ದಾರಲ್ಲಾ. ಬೆಂಗಳೂರು ಸುತ್ತಮುತ್ತ ಒಕ್ಕಲಿಗರು ಭೂಮಿ ಮಾರಿಕೊಂಡಿದ್ದಕ್ಕೆ ಕಾರಣ ಅಂದು ಮುಖ್ಯಮಂತ್ರಿಗಳಾಗಿದ್ದ ದೇವೇಗೌಡರು. ಭೂಮಿ ಮಾರಿಕೊಂಡ ಜನಾಂಗ ಮುಂದೇನು ಮಾಡಬೇಕೆಂಬ ಕಸುಬಿನ ಪಟ್ಟಿಯನ್ನ ಅವರೇ ತಯಾರಿಸಿ ಕೊಡಬೇಕಿತ್ತು, ಕೊಟ್ಟಿಲ್ಲ. ಅದೆಲ್ಲಕ್ಕಿಂತ ಮುಖ್ಯವಾಗಿ ನಿರ್ಮಲಾನಂದರು ಒಕ್ಕಲಿಗರ ಇತಿಹಾಸದ ಪಥ ಬಿಟ್ಟು ಉತ್ತರಪ್ರದೇಶದ ದಾರಿ ಹಿಡಿದಿದ್ದಾರೆ. ಉತ್ತರದ ಶಾ ಆದಿತ್ಯರು ಮೀಸಲಾತಿ ವಿರೋಧಿಗಳು. ನಿರ್ಮಲಾನಂದರು ಎಬ್ಬಿಸುವ ಮೀಸಲಾತಿ ಗಲಭೆ ತೀವ್ರಗೊಂಡು ಮೀಸಲಾತಿಯೇ ರದ್ದಾಗುವ ಅಪಾಯವನ್ನು ಬಿಜೆಪಿಗಳೇ ತಯಾರಿಸಿರಬಾರದೇಕೆ ಎಂದು ಶ್ರೀನಿವಾಸ್ ಪ್ರಸಾದರ ಕಡೆ ಜನ ಗುಮಾನಿ ಪಟ್ಟಿದ್ದಾರಂತಲ್ಲಾ, ಥೂತ್ತೇರಿ.

*****

ಅರ್ಧ ಶತಮಾನದ ಹಿಂದೆ ಮೈಸೂರು ಕಡೆಯಿಂದ ಮೇಲೆದ್ದು ಬಂದ ದಲಿತ ನಕ್ಷತ್ರ ಶ್ರೀನಿವಾಸ ಪ್ರಸಾದ್ 2024ರಿಂದ ನಿವೃತ್ತಿಯಾಗುತ್ತಾರಂತಲ್ಲಾ. ಹಾಗೆ ನೋಡಿದರೆ ಅವರು ನಿವೃತ್ತಿಯಾಗಿದ್ದುದು ಸಿದ್ದರಾಮಯ್ಯನ ಸಂಪುಟದಲ್ಲಿ ಸಚಿವರಾದಾಗಲೇ. ಬಹುಮುಖ್ಯವಾದ ರೆವಿನ್ಯೂ ಖಾತೆ ಪಡೆದು ರಗ್ಗು ಹೊದ್ದು ಮಲಗಿದ್ದನ್ನು ನೋಡಿದ ಸಿದ್ದು ಖಾತೆ ಬದಲಿಸಿದರು. ಸಿಟ್ಟುಗೊಂಡ ಶ್ರೀನಿವಾಸ್ ಎದ್ದುಹೋಗಿ ಬಿಜೆಪಿ ಕದ ಬಡಿದರು. ಅವರು ಕದಬಡಿಯುತ್ತಿದ್ದಾಗ ಉತ್ತರ ಕನ್ನಡದವನೊಬ್ಬ ’ನಾವು ಸಂವಿಧಾನ ಬದಲಿಸುತ್ತೇವೆ’ ಎಂದ ವಿಕೃತ ಮಾತು ಶ್ರೀನಿವಾಸರ ಕಿವಿಗೆ ಬೀಳಲೇಯಿಲ್ಲ. ಅವರು ರಾಜಕಾರಣಕ್ಕೆ ಬಂದಾಗ ದಲಿತರು ಗುಡಿಸಲಲ್ಲಿದ್ದು ಬಡತನದಲ್ಲಿದ್ದರಂತೆ ಈಗಲೂ ಹಾಗೇ ಇರುವುದನ್ನು ನೋಡಿ ಮೋದಿಯವರಿಗೆ ತಿಳಿಸಿದರಂತೆ; ಆಗ ಅಲ್ಲೇ ಇದ್ದ ನಿರ್ಮಲಾಸೀತಾರಾಂ ಕೂಡಲೇ ಸಾರ್ ಗುಡಿಸಲಲ್ಲಿರುವ ದಲಿತರು ಅದನ್ನು ಒಳ್ಳೆಮನೇಯಲ್ಲಿದ್ದೇವೆ ಅಂದುಕೊಂಡರಾಯ್ತು. ಇನ್ನ ನಮಗೆ ಬಡತನವೇಇಲ್ಲ; ಎಳೆ ಬಾಳೆದೆಲೆಯ ಮೇಲೆ ಈಗ ತಾನೆ ಸಣ್ಣಕ್ಕಿ ಅನ್ನವನ್ನು ಹುಳಿಯಲ್ಲಿ ಕಲೆಸಿ ತುಪ್ಪ ಹಾಕಿಕೊಂಡು ಚಪ್ಪರಿಸುತ್ತ ಹಪ್ಪಳ ಸೊಂಡಿಗೆ ಪತ್ರೊಡೆ ಕಡ್ಳೆ ಪಾಯಸದೊಂದಿಗೆ ಉಂಡಿದ್ದೇವೆ ಎಂದುಕೊಂಡರಾಯ್ತು ಸಾರ್, ನಮ್ಮ ಭಾವನೆಗಳೇ ಬದಲಾಗುತ್ತವೆ. ಈಚೆಗೆ ಬಿಜೆಪಿಗೆ ಬರುತ್ತಿರುವ ಬಡವರಿಗೆ ನಾವು ಹೀಗೆಯೇ ಹೇಳುತ್ತಿದ್ದೇವೆ ಎಂದರಂತಲ್ಲಾ, ಥೂ ಥೂ ಥೂತ್ತೇರಿ.


ಇದನ್ನೂ ಓದಿ: ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...