Homeಅಂಕಣಗಳುಶ್ರೀನಿವಾಸ್ ಪ್ರಸಾದ್‌ಗೆ ನಿರ್ಮಲಾ ನೀತಿ ಬೋಧೆ!

ಶ್ರೀನಿವಾಸ್ ಪ್ರಸಾದ್‌ಗೆ ನಿರ್ಮಲಾ ನೀತಿ ಬೋಧೆ!

- Advertisement -
- Advertisement -

ಆಡಳಿತ ಪಕ್ಷವೊಂದು ಸರಿಯಾಗಿ ಕೆಲಸ ಮಾಡಬೇಕಾದರೆ ಸಮರ್ಥ ವಿರೋಧ ಪಕ್ಷವೂ ಬೇಕಂತೆ. ಹಾಗಾಗಿ ಕರ್ನಾಟಕದಲ್ಲಿ ಸಮರ್ಥವಾಗಿಯೇ ಕೆಲಸ ಮಾಡುತ್ತಿದ್ದ ಕಾಂಗೈ ಪಾರ್ಟಿಯ ಯಾವ ಮಾತಿಗೂ ಕಿವಿಗೊಡದೆ ನಡೆದಿದ್ದ ಬಿಜೆಪಿ ಸರಕಾರ, ರಾಹುಲ್‌ಗಾಂಧಿ ಮಾಡುತ್ತಿರುವ ಜಾಥಕ್ಕೆ ಜನ ಮುತ್ತಿಗೊಳ್ಳುತ್ತಿರುವುದನ್ನು ನೋಡಿ ಗಾಬರಿಗೊಂಡು, ತನ್ನ ಮೀಸಲಾತಿ ವಿರೋಧವನ್ನು ಬದಿಗಿಟ್ಟು ಮೀಸಲಾತಿಯನ್ನು ಜಾರಿಗೆ ತಂದುಬಿಟ್ಟಿತಲ್ಲಾ. ಈ ಕ್ರಾಂತಿಕಾರಿ ತೀರ್ಮಾನದ ಹಿಂದಿರುವ ಹಿಕಮತ್ತೇನೆಂದರೆ ಈ ಮೀಸಲಾತಿ ಜಾರಿಗೆ ಮುನ್ನ ಸದನದಲ್ಲಿ ಚರ್ಚೆಯಾಗಬೇಕು; ಆ ನಂತರ ಲೋಕಸಭೆಗೂ ಸದರಿ ಮಸೂದೆ ಹೋಗಬೇಕು; ಆ ನಂತರ ರಾಷ್ಟ್ರಪತಿಯವರ ಅಂಕಿತಕ್ಕೆ ಕಾಯಬೇಕು; ಇದೆಲ್ಲಾ ಆಗುವುದರಲ್ಲಿ ಕರ್ನಾಟಕದ ಚುನಾವಣೆಯೇ ಮುಗಿದು ಲೋಕಸಭೆ ಚುನಾವಣೆಯೂ ಬರಬಹುದು. ಆದರೆ ಯಾವ ಸಾಧನೆಯನ್ನೂ ಮಾಡದೆ ಬರಿಗೈಲಿ ಚುನಾವಣೆಗೆ ಹೊರಟಿದ್ದ ಬಿಜೆಪಿ ಕೈಗೆ ಮೀಸಲಾತಿ ಸೌಟು ಸಿಕ್ಕಿದೆ. ಬಕೇಟು ಕೂಡ ಪೂರ್ತಿ ಖಾಲಿಯಿದೆ; ಉದ್ಯೋಗವನ್ನೇ ಸೃಷ್ಟಿಸದ ಖಾಲಿ ಹುದ್ದೆ ತುಂಬದ ಬಿಜೆಪಿ ಸಂಚಿಗೆ ದಲಿತರು ಮೋಸ ಹೋಗುತ್ತಾರೋ ಇಲ್ಲವೋ ಕಾದುನೋಡಬೇಕಂತಲ್ಲಾ, ಥೂತ್ತೇರಿ.

*****

ಬೊಮ್ಮಾಯಿ ಮೀಸಲಾತಿ ಬುಟ್ಟಿಗೆ ಕೈ ಹಾಕಿದ ಕೂಡಲೇ ಎಲ್ಲಾ ಜಾತಿಗಳು ಜೇನು ಬುಟ್ಟಿಯಿಂದ ಎದ್ದ ಜೇನುಹುಳುಗಳಂತೆ ಝೇಂಕಾರದ ಶಬ್ದ ಮಾಡುತ್ತ ಬೊಮ್ಮಾಯಿಯವರನ್ನು ಮುತ್ತಿಕೊಂಡವಲ್ಲಾ. ಈ ಮೊದಲು ಜನಾಂಗದ ಮುಖಂಡರಿದ್ದರೆ ಈಗ ಎಲ್ಲ ಜಾತಿಗಳಲ್ಲೂ ಸುಖ ಸಂತೋಷದ ಸುಪ್ಪತ್ತಿಗೆಯಲ್ಲಿರುವ ಜಗದ್ಗುರುಗಳೇ ಜಾತಿ ನಾಯಕರಾಗಿದ್ದಾರೆ. ಈ ಪೈಕಿ ಕರ್ನಾಟಕದ ಎರಡನೇ ದೊಡ್ಡ ಸಮುದಾಯವಾದ ಒಕ್ಕಲಿಗರ ಜಗದ್ಗುರು ನಿರ್ಮಲಾನಂದರು ಮೀಸಲಾತಿಗೆ ಕೈಯೊಡ್ಡಿ ನಮಗೆ ಕೊಡುವ ನಾಲ್ಕು ಪರಸೆಂಟು ಯಾತಕ್ಕೂ ಸಾಲುತ್ತಿಲ್ಲ ನಾವು ಹದಿನಾರು ಪರಸೆಂಟ್ ಇರುವುದರಿಂದ, ಅಷ್ಟೂ ಪರಸೆಂಟ್ ಮೀಸಲಾತಿ ಏನೂ ಬೇಡ, ಹನ್ನೆರಡು ಪರಸೆಂಟ್ ಕೊಡಿ; ಇಲ್ಲವಾದರೆ ಬೆಂಗಳೂರು ಸುತ್ತ ಭೂಮಿ ಮಾರಿಕೊಂಡು ಬೆಂಗಳೂರಿನ ಬಾರು ಕ್ಲಬ್ಬು ಹೋಟೆಲುಗಳಲ್ಲಿ ಕಳೆದುಹೋಗಿರುವ ಒಕ್ಕಲಿಗರನ್ನು ಒಟ್ಟಿಗೆ ಸೇರಿಸಿ ವಿಜಯನಗರದಿಂದ ಭೂಮಿ ಮಾರಿಕೊಂಡ ಜಾಗಕ್ಕೆ ಜಾಥ ತೆಗೆಯುತ್ತೇವೆ ಎಂದಿದ್ದಾರಲ್ಲಾ. ಬೆಂಗಳೂರು ಸುತ್ತಮುತ್ತ ಒಕ್ಕಲಿಗರು ಭೂಮಿ ಮಾರಿಕೊಂಡಿದ್ದಕ್ಕೆ ಕಾರಣ ಅಂದು ಮುಖ್ಯಮಂತ್ರಿಗಳಾಗಿದ್ದ ದೇವೇಗೌಡರು. ಭೂಮಿ ಮಾರಿಕೊಂಡ ಜನಾಂಗ ಮುಂದೇನು ಮಾಡಬೇಕೆಂಬ ಕಸುಬಿನ ಪಟ್ಟಿಯನ್ನ ಅವರೇ ತಯಾರಿಸಿ ಕೊಡಬೇಕಿತ್ತು, ಕೊಟ್ಟಿಲ್ಲ. ಅದೆಲ್ಲಕ್ಕಿಂತ ಮುಖ್ಯವಾಗಿ ನಿರ್ಮಲಾನಂದರು ಒಕ್ಕಲಿಗರ ಇತಿಹಾಸದ ಪಥ ಬಿಟ್ಟು ಉತ್ತರಪ್ರದೇಶದ ದಾರಿ ಹಿಡಿದಿದ್ದಾರೆ. ಉತ್ತರದ ಶಾ ಆದಿತ್ಯರು ಮೀಸಲಾತಿ ವಿರೋಧಿಗಳು. ನಿರ್ಮಲಾನಂದರು ಎಬ್ಬಿಸುವ ಮೀಸಲಾತಿ ಗಲಭೆ ತೀವ್ರಗೊಂಡು ಮೀಸಲಾತಿಯೇ ರದ್ದಾಗುವ ಅಪಾಯವನ್ನು ಬಿಜೆಪಿಗಳೇ ತಯಾರಿಸಿರಬಾರದೇಕೆ ಎಂದು ಶ್ರೀನಿವಾಸ್ ಪ್ರಸಾದರ ಕಡೆ ಜನ ಗುಮಾನಿ ಪಟ್ಟಿದ್ದಾರಂತಲ್ಲಾ, ಥೂತ್ತೇರಿ.

*****

ಅರ್ಧ ಶತಮಾನದ ಹಿಂದೆ ಮೈಸೂರು ಕಡೆಯಿಂದ ಮೇಲೆದ್ದು ಬಂದ ದಲಿತ ನಕ್ಷತ್ರ ಶ್ರೀನಿವಾಸ ಪ್ರಸಾದ್ 2024ರಿಂದ ನಿವೃತ್ತಿಯಾಗುತ್ತಾರಂತಲ್ಲಾ. ಹಾಗೆ ನೋಡಿದರೆ ಅವರು ನಿವೃತ್ತಿಯಾಗಿದ್ದುದು ಸಿದ್ದರಾಮಯ್ಯನ ಸಂಪುಟದಲ್ಲಿ ಸಚಿವರಾದಾಗಲೇ. ಬಹುಮುಖ್ಯವಾದ ರೆವಿನ್ಯೂ ಖಾತೆ ಪಡೆದು ರಗ್ಗು ಹೊದ್ದು ಮಲಗಿದ್ದನ್ನು ನೋಡಿದ ಸಿದ್ದು ಖಾತೆ ಬದಲಿಸಿದರು. ಸಿಟ್ಟುಗೊಂಡ ಶ್ರೀನಿವಾಸ್ ಎದ್ದುಹೋಗಿ ಬಿಜೆಪಿ ಕದ ಬಡಿದರು. ಅವರು ಕದಬಡಿಯುತ್ತಿದ್ದಾಗ ಉತ್ತರ ಕನ್ನಡದವನೊಬ್ಬ ’ನಾವು ಸಂವಿಧಾನ ಬದಲಿಸುತ್ತೇವೆ’ ಎಂದ ವಿಕೃತ ಮಾತು ಶ್ರೀನಿವಾಸರ ಕಿವಿಗೆ ಬೀಳಲೇಯಿಲ್ಲ. ಅವರು ರಾಜಕಾರಣಕ್ಕೆ ಬಂದಾಗ ದಲಿತರು ಗುಡಿಸಲಲ್ಲಿದ್ದು ಬಡತನದಲ್ಲಿದ್ದರಂತೆ ಈಗಲೂ ಹಾಗೇ ಇರುವುದನ್ನು ನೋಡಿ ಮೋದಿಯವರಿಗೆ ತಿಳಿಸಿದರಂತೆ; ಆಗ ಅಲ್ಲೇ ಇದ್ದ ನಿರ್ಮಲಾಸೀತಾರಾಂ ಕೂಡಲೇ ಸಾರ್ ಗುಡಿಸಲಲ್ಲಿರುವ ದಲಿತರು ಅದನ್ನು ಒಳ್ಳೆಮನೇಯಲ್ಲಿದ್ದೇವೆ ಅಂದುಕೊಂಡರಾಯ್ತು. ಇನ್ನ ನಮಗೆ ಬಡತನವೇಇಲ್ಲ; ಎಳೆ ಬಾಳೆದೆಲೆಯ ಮೇಲೆ ಈಗ ತಾನೆ ಸಣ್ಣಕ್ಕಿ ಅನ್ನವನ್ನು ಹುಳಿಯಲ್ಲಿ ಕಲೆಸಿ ತುಪ್ಪ ಹಾಕಿಕೊಂಡು ಚಪ್ಪರಿಸುತ್ತ ಹಪ್ಪಳ ಸೊಂಡಿಗೆ ಪತ್ರೊಡೆ ಕಡ್ಳೆ ಪಾಯಸದೊಂದಿಗೆ ಉಂಡಿದ್ದೇವೆ ಎಂದುಕೊಂಡರಾಯ್ತು ಸಾರ್, ನಮ್ಮ ಭಾವನೆಗಳೇ ಬದಲಾಗುತ್ತವೆ. ಈಚೆಗೆ ಬಿಜೆಪಿಗೆ ಬರುತ್ತಿರುವ ಬಡವರಿಗೆ ನಾವು ಹೀಗೆಯೇ ಹೇಳುತ್ತಿದ್ದೇವೆ ಎಂದರಂತಲ್ಲಾ, ಥೂ ಥೂ ಥೂತ್ತೇರಿ.


ಇದನ್ನೂ ಓದಿ: ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...