Homeಅಂಕಣಗಳುಶ್ರೀನಿವಾಸ್ ಪ್ರಸಾದ್‌ಗೆ ನಿರ್ಮಲಾ ನೀತಿ ಬೋಧೆ!

ಶ್ರೀನಿವಾಸ್ ಪ್ರಸಾದ್‌ಗೆ ನಿರ್ಮಲಾ ನೀತಿ ಬೋಧೆ!

- Advertisement -
- Advertisement -

ಆಡಳಿತ ಪಕ್ಷವೊಂದು ಸರಿಯಾಗಿ ಕೆಲಸ ಮಾಡಬೇಕಾದರೆ ಸಮರ್ಥ ವಿರೋಧ ಪಕ್ಷವೂ ಬೇಕಂತೆ. ಹಾಗಾಗಿ ಕರ್ನಾಟಕದಲ್ಲಿ ಸಮರ್ಥವಾಗಿಯೇ ಕೆಲಸ ಮಾಡುತ್ತಿದ್ದ ಕಾಂಗೈ ಪಾರ್ಟಿಯ ಯಾವ ಮಾತಿಗೂ ಕಿವಿಗೊಡದೆ ನಡೆದಿದ್ದ ಬಿಜೆಪಿ ಸರಕಾರ, ರಾಹುಲ್‌ಗಾಂಧಿ ಮಾಡುತ್ತಿರುವ ಜಾಥಕ್ಕೆ ಜನ ಮುತ್ತಿಗೊಳ್ಳುತ್ತಿರುವುದನ್ನು ನೋಡಿ ಗಾಬರಿಗೊಂಡು, ತನ್ನ ಮೀಸಲಾತಿ ವಿರೋಧವನ್ನು ಬದಿಗಿಟ್ಟು ಮೀಸಲಾತಿಯನ್ನು ಜಾರಿಗೆ ತಂದುಬಿಟ್ಟಿತಲ್ಲಾ. ಈ ಕ್ರಾಂತಿಕಾರಿ ತೀರ್ಮಾನದ ಹಿಂದಿರುವ ಹಿಕಮತ್ತೇನೆಂದರೆ ಈ ಮೀಸಲಾತಿ ಜಾರಿಗೆ ಮುನ್ನ ಸದನದಲ್ಲಿ ಚರ್ಚೆಯಾಗಬೇಕು; ಆ ನಂತರ ಲೋಕಸಭೆಗೂ ಸದರಿ ಮಸೂದೆ ಹೋಗಬೇಕು; ಆ ನಂತರ ರಾಷ್ಟ್ರಪತಿಯವರ ಅಂಕಿತಕ್ಕೆ ಕಾಯಬೇಕು; ಇದೆಲ್ಲಾ ಆಗುವುದರಲ್ಲಿ ಕರ್ನಾಟಕದ ಚುನಾವಣೆಯೇ ಮುಗಿದು ಲೋಕಸಭೆ ಚುನಾವಣೆಯೂ ಬರಬಹುದು. ಆದರೆ ಯಾವ ಸಾಧನೆಯನ್ನೂ ಮಾಡದೆ ಬರಿಗೈಲಿ ಚುನಾವಣೆಗೆ ಹೊರಟಿದ್ದ ಬಿಜೆಪಿ ಕೈಗೆ ಮೀಸಲಾತಿ ಸೌಟು ಸಿಕ್ಕಿದೆ. ಬಕೇಟು ಕೂಡ ಪೂರ್ತಿ ಖಾಲಿಯಿದೆ; ಉದ್ಯೋಗವನ್ನೇ ಸೃಷ್ಟಿಸದ ಖಾಲಿ ಹುದ್ದೆ ತುಂಬದ ಬಿಜೆಪಿ ಸಂಚಿಗೆ ದಲಿತರು ಮೋಸ ಹೋಗುತ್ತಾರೋ ಇಲ್ಲವೋ ಕಾದುನೋಡಬೇಕಂತಲ್ಲಾ, ಥೂತ್ತೇರಿ.

*****

ಬೊಮ್ಮಾಯಿ ಮೀಸಲಾತಿ ಬುಟ್ಟಿಗೆ ಕೈ ಹಾಕಿದ ಕೂಡಲೇ ಎಲ್ಲಾ ಜಾತಿಗಳು ಜೇನು ಬುಟ್ಟಿಯಿಂದ ಎದ್ದ ಜೇನುಹುಳುಗಳಂತೆ ಝೇಂಕಾರದ ಶಬ್ದ ಮಾಡುತ್ತ ಬೊಮ್ಮಾಯಿಯವರನ್ನು ಮುತ್ತಿಕೊಂಡವಲ್ಲಾ. ಈ ಮೊದಲು ಜನಾಂಗದ ಮುಖಂಡರಿದ್ದರೆ ಈಗ ಎಲ್ಲ ಜಾತಿಗಳಲ್ಲೂ ಸುಖ ಸಂತೋಷದ ಸುಪ್ಪತ್ತಿಗೆಯಲ್ಲಿರುವ ಜಗದ್ಗುರುಗಳೇ ಜಾತಿ ನಾಯಕರಾಗಿದ್ದಾರೆ. ಈ ಪೈಕಿ ಕರ್ನಾಟಕದ ಎರಡನೇ ದೊಡ್ಡ ಸಮುದಾಯವಾದ ಒಕ್ಕಲಿಗರ ಜಗದ್ಗುರು ನಿರ್ಮಲಾನಂದರು ಮೀಸಲಾತಿಗೆ ಕೈಯೊಡ್ಡಿ ನಮಗೆ ಕೊಡುವ ನಾಲ್ಕು ಪರಸೆಂಟು ಯಾತಕ್ಕೂ ಸಾಲುತ್ತಿಲ್ಲ ನಾವು ಹದಿನಾರು ಪರಸೆಂಟ್ ಇರುವುದರಿಂದ, ಅಷ್ಟೂ ಪರಸೆಂಟ್ ಮೀಸಲಾತಿ ಏನೂ ಬೇಡ, ಹನ್ನೆರಡು ಪರಸೆಂಟ್ ಕೊಡಿ; ಇಲ್ಲವಾದರೆ ಬೆಂಗಳೂರು ಸುತ್ತ ಭೂಮಿ ಮಾರಿಕೊಂಡು ಬೆಂಗಳೂರಿನ ಬಾರು ಕ್ಲಬ್ಬು ಹೋಟೆಲುಗಳಲ್ಲಿ ಕಳೆದುಹೋಗಿರುವ ಒಕ್ಕಲಿಗರನ್ನು ಒಟ್ಟಿಗೆ ಸೇರಿಸಿ ವಿಜಯನಗರದಿಂದ ಭೂಮಿ ಮಾರಿಕೊಂಡ ಜಾಗಕ್ಕೆ ಜಾಥ ತೆಗೆಯುತ್ತೇವೆ ಎಂದಿದ್ದಾರಲ್ಲಾ. ಬೆಂಗಳೂರು ಸುತ್ತಮುತ್ತ ಒಕ್ಕಲಿಗರು ಭೂಮಿ ಮಾರಿಕೊಂಡಿದ್ದಕ್ಕೆ ಕಾರಣ ಅಂದು ಮುಖ್ಯಮಂತ್ರಿಗಳಾಗಿದ್ದ ದೇವೇಗೌಡರು. ಭೂಮಿ ಮಾರಿಕೊಂಡ ಜನಾಂಗ ಮುಂದೇನು ಮಾಡಬೇಕೆಂಬ ಕಸುಬಿನ ಪಟ್ಟಿಯನ್ನ ಅವರೇ ತಯಾರಿಸಿ ಕೊಡಬೇಕಿತ್ತು, ಕೊಟ್ಟಿಲ್ಲ. ಅದೆಲ್ಲಕ್ಕಿಂತ ಮುಖ್ಯವಾಗಿ ನಿರ್ಮಲಾನಂದರು ಒಕ್ಕಲಿಗರ ಇತಿಹಾಸದ ಪಥ ಬಿಟ್ಟು ಉತ್ತರಪ್ರದೇಶದ ದಾರಿ ಹಿಡಿದಿದ್ದಾರೆ. ಉತ್ತರದ ಶಾ ಆದಿತ್ಯರು ಮೀಸಲಾತಿ ವಿರೋಧಿಗಳು. ನಿರ್ಮಲಾನಂದರು ಎಬ್ಬಿಸುವ ಮೀಸಲಾತಿ ಗಲಭೆ ತೀವ್ರಗೊಂಡು ಮೀಸಲಾತಿಯೇ ರದ್ದಾಗುವ ಅಪಾಯವನ್ನು ಬಿಜೆಪಿಗಳೇ ತಯಾರಿಸಿರಬಾರದೇಕೆ ಎಂದು ಶ್ರೀನಿವಾಸ್ ಪ್ರಸಾದರ ಕಡೆ ಜನ ಗುಮಾನಿ ಪಟ್ಟಿದ್ದಾರಂತಲ್ಲಾ, ಥೂತ್ತೇರಿ.

*****

ಅರ್ಧ ಶತಮಾನದ ಹಿಂದೆ ಮೈಸೂರು ಕಡೆಯಿಂದ ಮೇಲೆದ್ದು ಬಂದ ದಲಿತ ನಕ್ಷತ್ರ ಶ್ರೀನಿವಾಸ ಪ್ರಸಾದ್ 2024ರಿಂದ ನಿವೃತ್ತಿಯಾಗುತ್ತಾರಂತಲ್ಲಾ. ಹಾಗೆ ನೋಡಿದರೆ ಅವರು ನಿವೃತ್ತಿಯಾಗಿದ್ದುದು ಸಿದ್ದರಾಮಯ್ಯನ ಸಂಪುಟದಲ್ಲಿ ಸಚಿವರಾದಾಗಲೇ. ಬಹುಮುಖ್ಯವಾದ ರೆವಿನ್ಯೂ ಖಾತೆ ಪಡೆದು ರಗ್ಗು ಹೊದ್ದು ಮಲಗಿದ್ದನ್ನು ನೋಡಿದ ಸಿದ್ದು ಖಾತೆ ಬದಲಿಸಿದರು. ಸಿಟ್ಟುಗೊಂಡ ಶ್ರೀನಿವಾಸ್ ಎದ್ದುಹೋಗಿ ಬಿಜೆಪಿ ಕದ ಬಡಿದರು. ಅವರು ಕದಬಡಿಯುತ್ತಿದ್ದಾಗ ಉತ್ತರ ಕನ್ನಡದವನೊಬ್ಬ ’ನಾವು ಸಂವಿಧಾನ ಬದಲಿಸುತ್ತೇವೆ’ ಎಂದ ವಿಕೃತ ಮಾತು ಶ್ರೀನಿವಾಸರ ಕಿವಿಗೆ ಬೀಳಲೇಯಿಲ್ಲ. ಅವರು ರಾಜಕಾರಣಕ್ಕೆ ಬಂದಾಗ ದಲಿತರು ಗುಡಿಸಲಲ್ಲಿದ್ದು ಬಡತನದಲ್ಲಿದ್ದರಂತೆ ಈಗಲೂ ಹಾಗೇ ಇರುವುದನ್ನು ನೋಡಿ ಮೋದಿಯವರಿಗೆ ತಿಳಿಸಿದರಂತೆ; ಆಗ ಅಲ್ಲೇ ಇದ್ದ ನಿರ್ಮಲಾಸೀತಾರಾಂ ಕೂಡಲೇ ಸಾರ್ ಗುಡಿಸಲಲ್ಲಿರುವ ದಲಿತರು ಅದನ್ನು ಒಳ್ಳೆಮನೇಯಲ್ಲಿದ್ದೇವೆ ಅಂದುಕೊಂಡರಾಯ್ತು. ಇನ್ನ ನಮಗೆ ಬಡತನವೇಇಲ್ಲ; ಎಳೆ ಬಾಳೆದೆಲೆಯ ಮೇಲೆ ಈಗ ತಾನೆ ಸಣ್ಣಕ್ಕಿ ಅನ್ನವನ್ನು ಹುಳಿಯಲ್ಲಿ ಕಲೆಸಿ ತುಪ್ಪ ಹಾಕಿಕೊಂಡು ಚಪ್ಪರಿಸುತ್ತ ಹಪ್ಪಳ ಸೊಂಡಿಗೆ ಪತ್ರೊಡೆ ಕಡ್ಳೆ ಪಾಯಸದೊಂದಿಗೆ ಉಂಡಿದ್ದೇವೆ ಎಂದುಕೊಂಡರಾಯ್ತು ಸಾರ್, ನಮ್ಮ ಭಾವನೆಗಳೇ ಬದಲಾಗುತ್ತವೆ. ಈಚೆಗೆ ಬಿಜೆಪಿಗೆ ಬರುತ್ತಿರುವ ಬಡವರಿಗೆ ನಾವು ಹೀಗೆಯೇ ಹೇಳುತ್ತಿದ್ದೇವೆ ಎಂದರಂತಲ್ಲಾ, ಥೂ ಥೂ ಥೂತ್ತೇರಿ.


ಇದನ್ನೂ ಓದಿ: ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...