Homeಅಂಕಣಗಳುನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

- Advertisement -
- Advertisement -

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಉದಯವಾದ ಸುದ್ದಿಕೇಳಿ ಗಣಿಮಣ್ಣು ತಿಂದಷ್ಟು ಖುಷಿಯಾಯ್ತಲ್ಲಾ. ಇದಕ್ಕೆ ಕಾರಣರಾದ ಜನಾರ್ಧನ ರೆಡ್ಡಿಯವರಿಗೆ ಪೋನ್ ಮಾಡಿ ಶುಭಾಶಯ ಹೇಳಬೇಕೆನಿಸಿ ಪೋನ್ ಮಾಡಿದರೆ ರಿಂಗಾಯ್ತು. ರಿಂಗ್‌ಟೋನ್: ‘ತಿರುಪತಿ ಗಿರಿವಾಸ ಶ್ರೀ ವೆಂಕಟೇಶ, ನೀನೊಲಿದ ಮನೆ ಮನೆಯು ಲಕ್ಷ್ಮೀನಿವಾಸ….’

“ಹಲೋ ಯಾರು?”

“ನಾನು ಸಾರ್ ಪತ್ರಕರ್ತ ಯಾಹು ಅಂತ.”

“ಯಾವೂ ಅಂದ್ರೆ ಯಾರು?”

“ನಿಮ್ಮತ್ರ ಈ ಹಿಂದೆ ಒಬ್ಬ ವಕೀಲ, ಮತ್ತೊಬ್ಬ ಪತ್ರಕರ್ತ ಕಂ ಪ್ರೊಫೆಸರ್ ಇದ್ರಲ್ಲ ಸಾರ್ ಅವರ ಆತ್ಮೀಯ ಗೆಳೆಯ ಸಾರ್.”

“ಭಾಳ ಒಳ್ಳೆದು. ಏನು ಹೇಳಿ ಇವರೆ.”

“ನಿಮ್ಮನ್ನ ಅಭಿನಂದಿಸೋದಕ್ಕೆ ಪೋನ್ ಮಾಡಿದೆ ಸಾರ್. ಅಂತೂ ನಮ್ಮ ಕರ್ನಾಟಕ್ಕೆ ಇಂತದೊಂದು ಪಾರ್ಟಿ ಬೇಕಿತ್ತು ಸಾರ್.”

“ಅದಕ್ಕಾಗಿ ನಾನು ಪಾರ್ಟಿ ಸ್ಥಾಪನೆ ಮಾಡಿದೆ, ಯಾಕಂದ್ರೆ ಕಲ್ಯಾಣ ಕರ್ನಾಟಕ ಅಂತ ಹೇಳಿ ಬರೀ ನಾಮಕರಣ ಮಾಡಿದ್ರು, ಆದ್ರೆ ಅಭಿವೃದ್ಧಿ ಕೆಲಸಗಳು ಏನೂ ಆಗಿಲ್ಲ.”

“ನಿಜ ಸಾರ್ ಶ್ರೀಕೃಷ್ಣದೇವರಾಯನ ಕಾಲದಿಂದ್ಲೂ ಆಭಿವೃದ್ಧಿ ಆಗಲಿಲ್ಲ. ಕಡೆಗೆ ನಮ್ಮ ಸಂಪತ್ತನ್ನೆಲ್ಲಾ ತುಂಬಿಕೊಂಡು ಆಂಧ್ರಕ್ಕೋದ್ರು.”

“ನಾನು ಕಲ್ಯಾಣ ಕರ್ನಾಟಕನ ಅಷ್ಟೇ ಅಭಿವೃದ್ಧಿ ಮಾಡಲ್ಲ, ಇಡೀ ಕರ್ನಾಟಕನ ಅಭಿವೃದ್ಧಿ ಮಾಡತಕ್ಕಂತ ಕಾರ್ಯಕ್ರಮ ತಯಾರು ಮಾಡಿದ್ದಿನಿ.”

“ಆ ಅಭಿವೃದ್ಧಿಲಿ ಗಣಿ ಗುಡ್ಡಗಳು ಇವೆಯಾ ಸಾರ್?”

“ಇಲ್ಲ, ಜನರ ಮೂಲಭೂತ ಸಮಸ್ಯೆಗಳಿವೆ.”

“ಜನರ ಸಮಸ್ಯೆ ನಿವಾರಿಸಕ್ಕೆ ಹಣ ಬೇಕಲ್ಲವ ಸಾರ್. ಅದನ್ನ ಎಲ್ಲಿಂದ ತರ್ತಿರಿ? ಕೇಂದ್ರ ಸರಕಾರ ಹಣಕೊಡಲಿಲ್ಲ ಅಂದರೆ ಯಂಗೆ ಮಾಡ್ತಿರಿ?”

“ನಾನು ಹ್ಯಾಗೊ ಮಾಡ್ತಿನಿ. ಮೊದಲಿಂದ ನಾನು ನನ್ನ ಗುರಿಲಿ ಸೋತವನಲ್ಲ, ಈಗಲೂ ಸೋಲಲ್ಲ.”

“ಸೋಲಬೇಡಿ ಸಾರ್.. ವಿಧಾನಸೌಧದ ವರಾಂಡದಲ್ಲಿ ನಿಮ್ಮ ಗ್ರೀನ್ ಕಲರ್ ರೋಲ್ಸ್‌ರಾಯ್ ಕಾರ್ ನಿಂತಿರದ್ದನ್ನ ನೋಡಕ್ಕೆ ನನ್ನ ಕಣ್ಣಿಗೆ ಹಬ್ಬ ಸಾರ್.”

“ನಾನು ನನ್ನ ರೋಲ್ಸ್‌ರಾಯ್ ಕಾರಲ್ಲಿ ಬಂದೇ ಬರ್ತಿನಿ ಯಾಹೂ.”

“ನಿಮ್ಮಂತವರ ಕಾರ್ಯಕ್ಷೇತ್ರದ ತಾಣದಂಗಿದ್ದ ಬಿಜೆಪಿ ಯಾಕೆ ಬಿಟ್ರಿ ಸಾರ್?”

“ಬಿಜೆಪಿ ಇವತ್ತು ಕರ್ನಾಟಕದಲ್ಲಿ ಅಧಿಕಾರದಲ್ಲಿ ಇದ್ರೆ ಅದು ನನ್ನಿಂದ. ಮೊದಲು ಕುಮಾರಸ್ವಾಮಿಗೆ ಏನು ಬೇಕೋ ಅದನ್ನ ಕೊಟ್ಟು ಅಧಿಕಾರದಲ್ಲಿ ಪಾಲು ಪಡೆದೆವು. ನಂತರ ಬಹುಮತ ಬರದೇ ಹೋದಾಗ ಶಾಸಕರಿಗೆ ಏನು ಬೇಕೋ ಅದು ಕೊಟ್ಟು, ಅವರಿಂದ ರಾಜಿನಾಮೆ ಕೊಡಿಸಿ ಚುನಾವಣೆ ಮಾಡಿ ಎಡೂರಪ್ಪನ್ನ ಮುಖ್ಯಮಂತ್ರಿ ಮಾಡಿದ್ದು ನಾವು. ಅದಕ್ಕಾಗಿ ನಾವು ಗಣಿಯಿಂದ ಬಂದ ಹಣವನ್ನು ಖರ್ಚು ಮಾಡಿದೆವು.”

“ಆ ನಂತರ ಸರಕಾರ ಬಂದಾಗ ಅಕ್ರಮ ಮಾಡಿ ಹಣ ಮಾಡಿಕಂಡ್ರಲ್ಲ ಸಾರ್. ಗಣಿ ಹಣನ ರಾಜಕಾರಣಕ್ಕೆ ಹಾಕಿದ್ರಿ. ಪವರ್ರಿಗೆ ಬಂದಾಗ ಗೋರಿ ಕಂಡ್ರಿ..”

“ಅದು ಸರಿ, ಪರಿಣಾಮಗಳನ್ನ ಅನುಭವಿಸಿದವರು ನಾವು, ಜೈಲಿಗೆ ಹೋಗಿದ್ದು ನಾನು, ನಮ್ಮ ತಾಯಿ ಸಮಾನರಾಗಿದ್ದ ಸುಷ್ಮಸ್ವರಾಜ್ ಕೂಡ ಅವುರ್ಯಾರೊ ನನಿಗೆ ಗೊತ್ತೆಯಿಲ್ಲ ಅಂದುಬುಟ್ರು. ಇನ್ನ ತಂದೆ ಸಮಾನರಾದ ಎಡೂರಪ್ಪನೂ ನಮ್ಮ ಸಹಾಯಕ್ಕೆ ಬರಲಿಲ್ಲ..”

“ಬರಲಿಲ್ಲ ಅಂದ್ರೆ ಅವರಿಗೂ ನಿಮ್ಮ ಮೇಲೆ ಸಿಟ್ಟಿತ್ತಲ್ಲ ಸಾರ್. ಅವರ ಆತ್ಮೀಯರಾಗಿದ್ದ ಶೋಭ ಕರಂದ್ಲಾಜೆಯವರ್ನ ಸಂಪುಟದಿಂದ ತಗಿಬೇಕು ಅಂದ್ರಿ, ತಗದ್ರು. ಇನ್ನ ನಿಮ್ಮನ್ನ ವಿಚಾರಿಸಿಗಳಕ್ಕೆ ಅಂತ ಕಳಿಸಿದ್ದ ಡಿ.ಸಿನ ಕೂಡಲೇ ವರ್ಗಮಾಡಿ ಅಂದಾಗ ಮಾಡಿದ್ರು. ಒಂದೇ ವಾರಕ್ಕೆ ಎಸ್ಪಿ ಡಿ.ಸಿ ವರ್ಗ ಮಾಡಿಸಿದ್ದು ನೀವೇ ಇರಬೇಕು.”

“ಯಾರು ಸರಕಾರವನ್ನ ತಂದ್ರೋ ಅವರಿಗೇ ಕಿರುಕುಳ ಕೊಡೋ ಅಧಿಕಾರಿಗಳನ್ನ ಹಾಕಿದ್ರೆ ಸುಮ್ಮನಿರಬೇಕಾಗುತ್ತ?”

“ಆಗಲ್ಲ ಸಾರ್. ನೀವು ಬಿಜೆಪಿ ಅನ್ನೋ ಪಾರ್ಟಿನ ಅರ್ಥಮಾಡಿಕೊಬೇಕಾಗಿತ್ತು. ಅವರ ಮೋಸದ ಇತಿಹಾಸ ದೊಡ್ಡದಿದೆ.”

“ನಂಬಿದವರ ಕತ್ತು ಕುಯ್ಯತರೆ ಅಂತ ಗೊತ್ತಿರಲಿಲ್ಲ ಕಂಡ್ರಿ.”

“ಕತ್ತು ಕುಯ್ಯಲ್ಲ ಸಾರ್ ಅವುರು. ನೀವೇ ಪಾಷಣ ತಿಂದು ಸಾಯಂಗೆ ಮಾಡ್ತರೆ. ಇದೇ ಎಡೂರಪ್ಪ ಜೈಲಿಗೋಗಿದ್ದಾಗ ಬೆಂಗಳೂರಿಗೆ ಅಡ್ವಾನಿ ಬಂದಿದ್ರು. ಎಡೂರಪ್ಪನ್ನ ನೋಡಕ್ಕೆ ಹೋಗಿದ್ರಾ? ಅದೇ ಅಡ್ವಾನಿ ಈಗೆಲ್ಯವುರೆ, ಬಾಬರಿ ಮಸೀದಿ ಕೆಡಹಿದ ಕಲ್ಯಾಣಸಿಂಗ ಏನಾದ್ರು, ಹುಬ್ಬಳಿ ಈದ್ಗಾ ಮೈದಾನದಲ್ಲಿ ಬಾವುಟ ಹಾರಿಸಿದ ಉಮಾಭಾರತಿ ಏನಾದ್ರು, ಶಿವಸೇನೆ ಏನಾಗಿದೆ, ಗೋವಾ ಕತೆ ಏನಾಗಿದೆ. ಕುತಂತ್ರದಿಂದ್ಲೆ ಪಾರ್ಟಿ ಕಟ್ಟಿ ಆಡಳಿತ ಮಾಡದು ಅವರ ಹುಟ್ಟುಗುಣ. ನೀವು ನಿಮ್ಮ ಬಗ್ಗೆ ಯೋಚನೆ ಮಾಡಿದ್ರೆ ಇಷ್ಟೊಂದು ಗಣಿ ಲೂಟಿ ಮಾಡೋ ಅಗತ್ಯ ಇರಲಿಲ್ಲ ಅಲ್ಲವ ಸಾರ್?”

“ಹೌದು, ಇವರಿಗೋಸ್ಕರ ಜಾಸ್ತಿ ಮಾಡಬೇಕಾಯ್ತು.”

“ಗಣಿಕಳ್ರು ಅಂತ ಹೆಸರು ಪಡದೋರು ನೀವು. ಅಧಿಕಾರ ಮಾಡ್ತ ಸರಕಾರನೆ ಕೊಳ್ಳೆ ಹೊಡಿತಾಯಿರೋರು ಅವುರು.”

“ಅದಕೆ ನಾನು ಅವರನ್ನ ಸುಮ್ಮನೆ ಬಿಡಬಾರ್ದು ಅಂತ ಕಲ್ಯಾಣ ಪ್ರಗತಿ ಪಕ್ಷ ಮಾಡಿದ್ದಿನಿ.”

“ಪ್ರಾದೇಶಿಕ ಪಕ್ಷ ಮಾಡಿದೋರ್ಯಾರು ಸಕ್ಸಸ್ ಆಗಿಲವಂತಲ್ಲಾ ಸಾರ್?”

“ಆಗಿಲ್ಲ ಅನ್ನದನ್ನ ನಾನು ಕೂಡ ಗಮನಿಸಿದ್ದೀನಿ. ಮಾನ್ಯ ಎಡೂರಪ್ಪನವರು ಮಾಡಿದ್ರು ಬಿಜೆಪಿನ ಅಧಿಕಾರದಿಂದ ದೂರ ಇಟ್ಟರು. ಆ ನಂತರ ಬಿಜೆಪಿಯವರೇ ಕರದು ಅಧಿಕಾರವನ್ನ ಕೊಟ್ರು. ನಾನು ಕೂಡ ಹಾಗೇ ಮಾಡ್ತಿನಿ ನೋಡಿ.”

“ವಿಜಯನಗರ ಸಾಮ್ರಾಜ್ಯ ಆಳಿದೋರು ತೆಲುಗರಂತೆ! ಅವರ ನಂತರ ನೀವೇನಾದ್ರು ಪವರ್ರಿಗೆ ಬಂದ್ರೆ ಮತ್ತೆ ಕಲ್ಯಾಣ ಕರ್ನಾಟಕ ಸಾಮ್ರಾಜ್ಯ ಸ್ಥಾಪನೆ ಆಗುತ್ತಲ್ಲ ಸಾರ್?”

“ಈಗಲೂ ಕಲ್ಯಾಣ ಕರ್ನಾಟಕ ತೆಲುಗರದ್ದೇ ಆಗಿದೆ ಕಂಡ್ರಿ. ಇಲ್ಲಿನ ಜಿಲ್ಲಾಪಂಚಾಯ್ತಿ ಸದಸ್ಯರು, ಗ್ರಾಮಪಂಚಾಯ್ತಿ ಸದಸ್ಯರು, ಎಮ್ಮೆಲ್ಲೆ, ಮಂತ್ರಿಗಳೆಲ್ಲಾ ತೆಲುಗು ಭಾಷಿಕರು. ಅವರಿಗೊಬ್ಬ ಲೀಡರು ಬೇಕು ಆ ಕೊರತೆಯನ್ನ ನಾನು ತುಂಬತೀನಿ.”

“ಮತ್ತೆ ಸಮಗ್ರ ಕರ್ನಾಟಕದ ಮಾತನಾಡ್ತಿರಿ?”

“ಅದು ಕೂಡ ನಿಜ. ಇಡೀ ಕರ್ನಾಟಕ ಅಭಿವೃದ್ಧಿ ನಮ್ಮ ಕನಸು.”

“ನಿಮ್ಮ ಕನಸು ನನಸಾಗದಕ್ಕೆ ಕರ್ನಾಟಕ ಕಾಯ್ತಯಿದೆ ಸಾರ್, ನೀವು ನಿಮ್ಮ ಕಾರ್ಯಕ್ಷೇತ್ರನ ಎಲ್ಲಾ ಜಿಲ್ಲೆಗೂ ವಿಸ್ತರಿಸಿಕೊಳ್ಳೊದಾದ್ರೆ ನಿಧಿ ತರದ ಗುಡ್ಡಗಳು ನಿಂತಿವೆ, ಕನಕಪುರದ ಕಡೆ ಗ್ರಾನೈಟ್ ಬೆಟ್ಟಗಳಿವೆ, ಇನ್ನ ಪಾಂಡವಪುರದ ಕಡೆ ಪುಟ್ಟರಾಜನ ಬೆಟ್ಟಗಳಿವೆ, ಚಿಕ್ಕಮಗಳೂರಿಗೆ ಬಂದ್ರೆ ಗಣಿ ಗಿರಿಗಳ ಸಾಲೇಯಿದೆ, ಶಿವಮೊಗ್ಗದ ಕಡೆ ಕುಂದಾದ್ರಿ ಕೊಡಚಾದ್ರಿ ಬೆಟ್ಟಗಳಿವೆ. ಇನ್ನ ನಿಮ್ಮಲ್ಲೇ ಕಪ್ಪತ್ತ ಗುಡ್ಡ ಸಾಲಿದೆ. ನೀವು ಯಾವುದೇ ಜಿಲ್ಲೆಗೋದ್ರು ಗಣಿಗುಡ್ಡಗಳಿವೆ ಸಾರ್. ಅವನ್ನೆಲ್ಲಾ ನೆಲಸಮ ಮಾಡಿ ಕಲ್ಯಾಣ ರಾಜ್ಯದ ಕೃಷ್ಣದೇವರಾಯನ ಕಾಲ ಮಾಡಬಹುದು. ನಿಮ್ಮ ಖಾಸಗಿ ದರ್ಬಾರಿನಲ್ಲಿರೊ ಕುರ್ಚಿ ಮೇಲೆ ತಿರುಪತಿ ತಿಮ್ಮಪ್ಪನಿಗೆ ಮಾಡಿಸಿ ಕೊಟ್ಟಂತ ಕಿರೀಟ ಧರಿಸಿ ಕೂತಗಬಹುದು. ಆಗ ಬಿಜೆಪಿ ಕಣ್ಣು ತಪ್ಪಿಸಿ ರಾಮುಲು ಬರ್ತರೆ.”

“ರಾಮುಲು ಬಂದ್ರೆ ಅವರನ್ನೆ ಮುಖ್ಯಮಂತ್ರಿ ಮಾಡ್ತಿನಿ.”

“ನೀವು?”

“ನಾನು ಉಪಮುಖ್ಯಮಂತ್ರಿ ಮತ್ತೆ ಗಣಿಕಾತೆ ತಗೊತಿನಿ.”

ಥೂತ್ತೇರಿ.


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...