Homeಅಂಕಣಗಳುನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

- Advertisement -
- Advertisement -

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಉದಯವಾದ ಸುದ್ದಿಕೇಳಿ ಗಣಿಮಣ್ಣು ತಿಂದಷ್ಟು ಖುಷಿಯಾಯ್ತಲ್ಲಾ. ಇದಕ್ಕೆ ಕಾರಣರಾದ ಜನಾರ್ಧನ ರೆಡ್ಡಿಯವರಿಗೆ ಪೋನ್ ಮಾಡಿ ಶುಭಾಶಯ ಹೇಳಬೇಕೆನಿಸಿ ಪೋನ್ ಮಾಡಿದರೆ ರಿಂಗಾಯ್ತು. ರಿಂಗ್‌ಟೋನ್: ‘ತಿರುಪತಿ ಗಿರಿವಾಸ ಶ್ರೀ ವೆಂಕಟೇಶ, ನೀನೊಲಿದ ಮನೆ ಮನೆಯು ಲಕ್ಷ್ಮೀನಿವಾಸ….’

“ಹಲೋ ಯಾರು?”

“ನಾನು ಸಾರ್ ಪತ್ರಕರ್ತ ಯಾಹು ಅಂತ.”

“ಯಾವೂ ಅಂದ್ರೆ ಯಾರು?”

“ನಿಮ್ಮತ್ರ ಈ ಹಿಂದೆ ಒಬ್ಬ ವಕೀಲ, ಮತ್ತೊಬ್ಬ ಪತ್ರಕರ್ತ ಕಂ ಪ್ರೊಫೆಸರ್ ಇದ್ರಲ್ಲ ಸಾರ್ ಅವರ ಆತ್ಮೀಯ ಗೆಳೆಯ ಸಾರ್.”

“ಭಾಳ ಒಳ್ಳೆದು. ಏನು ಹೇಳಿ ಇವರೆ.”

“ನಿಮ್ಮನ್ನ ಅಭಿನಂದಿಸೋದಕ್ಕೆ ಪೋನ್ ಮಾಡಿದೆ ಸಾರ್. ಅಂತೂ ನಮ್ಮ ಕರ್ನಾಟಕ್ಕೆ ಇಂತದೊಂದು ಪಾರ್ಟಿ ಬೇಕಿತ್ತು ಸಾರ್.”

“ಅದಕ್ಕಾಗಿ ನಾನು ಪಾರ್ಟಿ ಸ್ಥಾಪನೆ ಮಾಡಿದೆ, ಯಾಕಂದ್ರೆ ಕಲ್ಯಾಣ ಕರ್ನಾಟಕ ಅಂತ ಹೇಳಿ ಬರೀ ನಾಮಕರಣ ಮಾಡಿದ್ರು, ಆದ್ರೆ ಅಭಿವೃದ್ಧಿ ಕೆಲಸಗಳು ಏನೂ ಆಗಿಲ್ಲ.”

“ನಿಜ ಸಾರ್ ಶ್ರೀಕೃಷ್ಣದೇವರಾಯನ ಕಾಲದಿಂದ್ಲೂ ಆಭಿವೃದ್ಧಿ ಆಗಲಿಲ್ಲ. ಕಡೆಗೆ ನಮ್ಮ ಸಂಪತ್ತನ್ನೆಲ್ಲಾ ತುಂಬಿಕೊಂಡು ಆಂಧ್ರಕ್ಕೋದ್ರು.”

“ನಾನು ಕಲ್ಯಾಣ ಕರ್ನಾಟಕನ ಅಷ್ಟೇ ಅಭಿವೃದ್ಧಿ ಮಾಡಲ್ಲ, ಇಡೀ ಕರ್ನಾಟಕನ ಅಭಿವೃದ್ಧಿ ಮಾಡತಕ್ಕಂತ ಕಾರ್ಯಕ್ರಮ ತಯಾರು ಮಾಡಿದ್ದಿನಿ.”

“ಆ ಅಭಿವೃದ್ಧಿಲಿ ಗಣಿ ಗುಡ್ಡಗಳು ಇವೆಯಾ ಸಾರ್?”

“ಇಲ್ಲ, ಜನರ ಮೂಲಭೂತ ಸಮಸ್ಯೆಗಳಿವೆ.”

“ಜನರ ಸಮಸ್ಯೆ ನಿವಾರಿಸಕ್ಕೆ ಹಣ ಬೇಕಲ್ಲವ ಸಾರ್. ಅದನ್ನ ಎಲ್ಲಿಂದ ತರ್ತಿರಿ? ಕೇಂದ್ರ ಸರಕಾರ ಹಣಕೊಡಲಿಲ್ಲ ಅಂದರೆ ಯಂಗೆ ಮಾಡ್ತಿರಿ?”

“ನಾನು ಹ್ಯಾಗೊ ಮಾಡ್ತಿನಿ. ಮೊದಲಿಂದ ನಾನು ನನ್ನ ಗುರಿಲಿ ಸೋತವನಲ್ಲ, ಈಗಲೂ ಸೋಲಲ್ಲ.”

“ಸೋಲಬೇಡಿ ಸಾರ್.. ವಿಧಾನಸೌಧದ ವರಾಂಡದಲ್ಲಿ ನಿಮ್ಮ ಗ್ರೀನ್ ಕಲರ್ ರೋಲ್ಸ್‌ರಾಯ್ ಕಾರ್ ನಿಂತಿರದ್ದನ್ನ ನೋಡಕ್ಕೆ ನನ್ನ ಕಣ್ಣಿಗೆ ಹಬ್ಬ ಸಾರ್.”

“ನಾನು ನನ್ನ ರೋಲ್ಸ್‌ರಾಯ್ ಕಾರಲ್ಲಿ ಬಂದೇ ಬರ್ತಿನಿ ಯಾಹೂ.”

“ನಿಮ್ಮಂತವರ ಕಾರ್ಯಕ್ಷೇತ್ರದ ತಾಣದಂಗಿದ್ದ ಬಿಜೆಪಿ ಯಾಕೆ ಬಿಟ್ರಿ ಸಾರ್?”

“ಬಿಜೆಪಿ ಇವತ್ತು ಕರ್ನಾಟಕದಲ್ಲಿ ಅಧಿಕಾರದಲ್ಲಿ ಇದ್ರೆ ಅದು ನನ್ನಿಂದ. ಮೊದಲು ಕುಮಾರಸ್ವಾಮಿಗೆ ಏನು ಬೇಕೋ ಅದನ್ನ ಕೊಟ್ಟು ಅಧಿಕಾರದಲ್ಲಿ ಪಾಲು ಪಡೆದೆವು. ನಂತರ ಬಹುಮತ ಬರದೇ ಹೋದಾಗ ಶಾಸಕರಿಗೆ ಏನು ಬೇಕೋ ಅದು ಕೊಟ್ಟು, ಅವರಿಂದ ರಾಜಿನಾಮೆ ಕೊಡಿಸಿ ಚುನಾವಣೆ ಮಾಡಿ ಎಡೂರಪ್ಪನ್ನ ಮುಖ್ಯಮಂತ್ರಿ ಮಾಡಿದ್ದು ನಾವು. ಅದಕ್ಕಾಗಿ ನಾವು ಗಣಿಯಿಂದ ಬಂದ ಹಣವನ್ನು ಖರ್ಚು ಮಾಡಿದೆವು.”

“ಆ ನಂತರ ಸರಕಾರ ಬಂದಾಗ ಅಕ್ರಮ ಮಾಡಿ ಹಣ ಮಾಡಿಕಂಡ್ರಲ್ಲ ಸಾರ್. ಗಣಿ ಹಣನ ರಾಜಕಾರಣಕ್ಕೆ ಹಾಕಿದ್ರಿ. ಪವರ್ರಿಗೆ ಬಂದಾಗ ಗೋರಿ ಕಂಡ್ರಿ..”

“ಅದು ಸರಿ, ಪರಿಣಾಮಗಳನ್ನ ಅನುಭವಿಸಿದವರು ನಾವು, ಜೈಲಿಗೆ ಹೋಗಿದ್ದು ನಾನು, ನಮ್ಮ ತಾಯಿ ಸಮಾನರಾಗಿದ್ದ ಸುಷ್ಮಸ್ವರಾಜ್ ಕೂಡ ಅವುರ್ಯಾರೊ ನನಿಗೆ ಗೊತ್ತೆಯಿಲ್ಲ ಅಂದುಬುಟ್ರು. ಇನ್ನ ತಂದೆ ಸಮಾನರಾದ ಎಡೂರಪ್ಪನೂ ನಮ್ಮ ಸಹಾಯಕ್ಕೆ ಬರಲಿಲ್ಲ..”

“ಬರಲಿಲ್ಲ ಅಂದ್ರೆ ಅವರಿಗೂ ನಿಮ್ಮ ಮೇಲೆ ಸಿಟ್ಟಿತ್ತಲ್ಲ ಸಾರ್. ಅವರ ಆತ್ಮೀಯರಾಗಿದ್ದ ಶೋಭ ಕರಂದ್ಲಾಜೆಯವರ್ನ ಸಂಪುಟದಿಂದ ತಗಿಬೇಕು ಅಂದ್ರಿ, ತಗದ್ರು. ಇನ್ನ ನಿಮ್ಮನ್ನ ವಿಚಾರಿಸಿಗಳಕ್ಕೆ ಅಂತ ಕಳಿಸಿದ್ದ ಡಿ.ಸಿನ ಕೂಡಲೇ ವರ್ಗಮಾಡಿ ಅಂದಾಗ ಮಾಡಿದ್ರು. ಒಂದೇ ವಾರಕ್ಕೆ ಎಸ್ಪಿ ಡಿ.ಸಿ ವರ್ಗ ಮಾಡಿಸಿದ್ದು ನೀವೇ ಇರಬೇಕು.”

“ಯಾರು ಸರಕಾರವನ್ನ ತಂದ್ರೋ ಅವರಿಗೇ ಕಿರುಕುಳ ಕೊಡೋ ಅಧಿಕಾರಿಗಳನ್ನ ಹಾಕಿದ್ರೆ ಸುಮ್ಮನಿರಬೇಕಾಗುತ್ತ?”

“ಆಗಲ್ಲ ಸಾರ್. ನೀವು ಬಿಜೆಪಿ ಅನ್ನೋ ಪಾರ್ಟಿನ ಅರ್ಥಮಾಡಿಕೊಬೇಕಾಗಿತ್ತು. ಅವರ ಮೋಸದ ಇತಿಹಾಸ ದೊಡ್ಡದಿದೆ.”

“ನಂಬಿದವರ ಕತ್ತು ಕುಯ್ಯತರೆ ಅಂತ ಗೊತ್ತಿರಲಿಲ್ಲ ಕಂಡ್ರಿ.”

“ಕತ್ತು ಕುಯ್ಯಲ್ಲ ಸಾರ್ ಅವುರು. ನೀವೇ ಪಾಷಣ ತಿಂದು ಸಾಯಂಗೆ ಮಾಡ್ತರೆ. ಇದೇ ಎಡೂರಪ್ಪ ಜೈಲಿಗೋಗಿದ್ದಾಗ ಬೆಂಗಳೂರಿಗೆ ಅಡ್ವಾನಿ ಬಂದಿದ್ರು. ಎಡೂರಪ್ಪನ್ನ ನೋಡಕ್ಕೆ ಹೋಗಿದ್ರಾ? ಅದೇ ಅಡ್ವಾನಿ ಈಗೆಲ್ಯವುರೆ, ಬಾಬರಿ ಮಸೀದಿ ಕೆಡಹಿದ ಕಲ್ಯಾಣಸಿಂಗ ಏನಾದ್ರು, ಹುಬ್ಬಳಿ ಈದ್ಗಾ ಮೈದಾನದಲ್ಲಿ ಬಾವುಟ ಹಾರಿಸಿದ ಉಮಾಭಾರತಿ ಏನಾದ್ರು, ಶಿವಸೇನೆ ಏನಾಗಿದೆ, ಗೋವಾ ಕತೆ ಏನಾಗಿದೆ. ಕುತಂತ್ರದಿಂದ್ಲೆ ಪಾರ್ಟಿ ಕಟ್ಟಿ ಆಡಳಿತ ಮಾಡದು ಅವರ ಹುಟ್ಟುಗುಣ. ನೀವು ನಿಮ್ಮ ಬಗ್ಗೆ ಯೋಚನೆ ಮಾಡಿದ್ರೆ ಇಷ್ಟೊಂದು ಗಣಿ ಲೂಟಿ ಮಾಡೋ ಅಗತ್ಯ ಇರಲಿಲ್ಲ ಅಲ್ಲವ ಸಾರ್?”

“ಹೌದು, ಇವರಿಗೋಸ್ಕರ ಜಾಸ್ತಿ ಮಾಡಬೇಕಾಯ್ತು.”

“ಗಣಿಕಳ್ರು ಅಂತ ಹೆಸರು ಪಡದೋರು ನೀವು. ಅಧಿಕಾರ ಮಾಡ್ತ ಸರಕಾರನೆ ಕೊಳ್ಳೆ ಹೊಡಿತಾಯಿರೋರು ಅವುರು.”

“ಅದಕೆ ನಾನು ಅವರನ್ನ ಸುಮ್ಮನೆ ಬಿಡಬಾರ್ದು ಅಂತ ಕಲ್ಯಾಣ ಪ್ರಗತಿ ಪಕ್ಷ ಮಾಡಿದ್ದಿನಿ.”

“ಪ್ರಾದೇಶಿಕ ಪಕ್ಷ ಮಾಡಿದೋರ್ಯಾರು ಸಕ್ಸಸ್ ಆಗಿಲವಂತಲ್ಲಾ ಸಾರ್?”

“ಆಗಿಲ್ಲ ಅನ್ನದನ್ನ ನಾನು ಕೂಡ ಗಮನಿಸಿದ್ದೀನಿ. ಮಾನ್ಯ ಎಡೂರಪ್ಪನವರು ಮಾಡಿದ್ರು ಬಿಜೆಪಿನ ಅಧಿಕಾರದಿಂದ ದೂರ ಇಟ್ಟರು. ಆ ನಂತರ ಬಿಜೆಪಿಯವರೇ ಕರದು ಅಧಿಕಾರವನ್ನ ಕೊಟ್ರು. ನಾನು ಕೂಡ ಹಾಗೇ ಮಾಡ್ತಿನಿ ನೋಡಿ.”

“ವಿಜಯನಗರ ಸಾಮ್ರಾಜ್ಯ ಆಳಿದೋರು ತೆಲುಗರಂತೆ! ಅವರ ನಂತರ ನೀವೇನಾದ್ರು ಪವರ್ರಿಗೆ ಬಂದ್ರೆ ಮತ್ತೆ ಕಲ್ಯಾಣ ಕರ್ನಾಟಕ ಸಾಮ್ರಾಜ್ಯ ಸ್ಥಾಪನೆ ಆಗುತ್ತಲ್ಲ ಸಾರ್?”

“ಈಗಲೂ ಕಲ್ಯಾಣ ಕರ್ನಾಟಕ ತೆಲುಗರದ್ದೇ ಆಗಿದೆ ಕಂಡ್ರಿ. ಇಲ್ಲಿನ ಜಿಲ್ಲಾಪಂಚಾಯ್ತಿ ಸದಸ್ಯರು, ಗ್ರಾಮಪಂಚಾಯ್ತಿ ಸದಸ್ಯರು, ಎಮ್ಮೆಲ್ಲೆ, ಮಂತ್ರಿಗಳೆಲ್ಲಾ ತೆಲುಗು ಭಾಷಿಕರು. ಅವರಿಗೊಬ್ಬ ಲೀಡರು ಬೇಕು ಆ ಕೊರತೆಯನ್ನ ನಾನು ತುಂಬತೀನಿ.”

“ಮತ್ತೆ ಸಮಗ್ರ ಕರ್ನಾಟಕದ ಮಾತನಾಡ್ತಿರಿ?”

“ಅದು ಕೂಡ ನಿಜ. ಇಡೀ ಕರ್ನಾಟಕ ಅಭಿವೃದ್ಧಿ ನಮ್ಮ ಕನಸು.”

“ನಿಮ್ಮ ಕನಸು ನನಸಾಗದಕ್ಕೆ ಕರ್ನಾಟಕ ಕಾಯ್ತಯಿದೆ ಸಾರ್, ನೀವು ನಿಮ್ಮ ಕಾರ್ಯಕ್ಷೇತ್ರನ ಎಲ್ಲಾ ಜಿಲ್ಲೆಗೂ ವಿಸ್ತರಿಸಿಕೊಳ್ಳೊದಾದ್ರೆ ನಿಧಿ ತರದ ಗುಡ್ಡಗಳು ನಿಂತಿವೆ, ಕನಕಪುರದ ಕಡೆ ಗ್ರಾನೈಟ್ ಬೆಟ್ಟಗಳಿವೆ, ಇನ್ನ ಪಾಂಡವಪುರದ ಕಡೆ ಪುಟ್ಟರಾಜನ ಬೆಟ್ಟಗಳಿವೆ, ಚಿಕ್ಕಮಗಳೂರಿಗೆ ಬಂದ್ರೆ ಗಣಿ ಗಿರಿಗಳ ಸಾಲೇಯಿದೆ, ಶಿವಮೊಗ್ಗದ ಕಡೆ ಕುಂದಾದ್ರಿ ಕೊಡಚಾದ್ರಿ ಬೆಟ್ಟಗಳಿವೆ. ಇನ್ನ ನಿಮ್ಮಲ್ಲೇ ಕಪ್ಪತ್ತ ಗುಡ್ಡ ಸಾಲಿದೆ. ನೀವು ಯಾವುದೇ ಜಿಲ್ಲೆಗೋದ್ರು ಗಣಿಗುಡ್ಡಗಳಿವೆ ಸಾರ್. ಅವನ್ನೆಲ್ಲಾ ನೆಲಸಮ ಮಾಡಿ ಕಲ್ಯಾಣ ರಾಜ್ಯದ ಕೃಷ್ಣದೇವರಾಯನ ಕಾಲ ಮಾಡಬಹುದು. ನಿಮ್ಮ ಖಾಸಗಿ ದರ್ಬಾರಿನಲ್ಲಿರೊ ಕುರ್ಚಿ ಮೇಲೆ ತಿರುಪತಿ ತಿಮ್ಮಪ್ಪನಿಗೆ ಮಾಡಿಸಿ ಕೊಟ್ಟಂತ ಕಿರೀಟ ಧರಿಸಿ ಕೂತಗಬಹುದು. ಆಗ ಬಿಜೆಪಿ ಕಣ್ಣು ತಪ್ಪಿಸಿ ರಾಮುಲು ಬರ್ತರೆ.”

“ರಾಮುಲು ಬಂದ್ರೆ ಅವರನ್ನೆ ಮುಖ್ಯಮಂತ್ರಿ ಮಾಡ್ತಿನಿ.”

“ನೀವು?”

“ನಾನು ಉಪಮುಖ್ಯಮಂತ್ರಿ ಮತ್ತೆ ಗಣಿಕಾತೆ ತಗೊತಿನಿ.”

ಥೂತ್ತೇರಿ.


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...