Homeಅಂಕಣಗಳುನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

- Advertisement -
- Advertisement -

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಉದಯವಾದ ಸುದ್ದಿಕೇಳಿ ಗಣಿಮಣ್ಣು ತಿಂದಷ್ಟು ಖುಷಿಯಾಯ್ತಲ್ಲಾ. ಇದಕ್ಕೆ ಕಾರಣರಾದ ಜನಾರ್ಧನ ರೆಡ್ಡಿಯವರಿಗೆ ಪೋನ್ ಮಾಡಿ ಶುಭಾಶಯ ಹೇಳಬೇಕೆನಿಸಿ ಪೋನ್ ಮಾಡಿದರೆ ರಿಂಗಾಯ್ತು. ರಿಂಗ್‌ಟೋನ್: ‘ತಿರುಪತಿ ಗಿರಿವಾಸ ಶ್ರೀ ವೆಂಕಟೇಶ, ನೀನೊಲಿದ ಮನೆ ಮನೆಯು ಲಕ್ಷ್ಮೀನಿವಾಸ….’

“ಹಲೋ ಯಾರು?”

“ನಾನು ಸಾರ್ ಪತ್ರಕರ್ತ ಯಾಹು ಅಂತ.”

“ಯಾವೂ ಅಂದ್ರೆ ಯಾರು?”

“ನಿಮ್ಮತ್ರ ಈ ಹಿಂದೆ ಒಬ್ಬ ವಕೀಲ, ಮತ್ತೊಬ್ಬ ಪತ್ರಕರ್ತ ಕಂ ಪ್ರೊಫೆಸರ್ ಇದ್ರಲ್ಲ ಸಾರ್ ಅವರ ಆತ್ಮೀಯ ಗೆಳೆಯ ಸಾರ್.”

“ಭಾಳ ಒಳ್ಳೆದು. ಏನು ಹೇಳಿ ಇವರೆ.”

“ನಿಮ್ಮನ್ನ ಅಭಿನಂದಿಸೋದಕ್ಕೆ ಪೋನ್ ಮಾಡಿದೆ ಸಾರ್. ಅಂತೂ ನಮ್ಮ ಕರ್ನಾಟಕ್ಕೆ ಇಂತದೊಂದು ಪಾರ್ಟಿ ಬೇಕಿತ್ತು ಸಾರ್.”

“ಅದಕ್ಕಾಗಿ ನಾನು ಪಾರ್ಟಿ ಸ್ಥಾಪನೆ ಮಾಡಿದೆ, ಯಾಕಂದ್ರೆ ಕಲ್ಯಾಣ ಕರ್ನಾಟಕ ಅಂತ ಹೇಳಿ ಬರೀ ನಾಮಕರಣ ಮಾಡಿದ್ರು, ಆದ್ರೆ ಅಭಿವೃದ್ಧಿ ಕೆಲಸಗಳು ಏನೂ ಆಗಿಲ್ಲ.”

“ನಿಜ ಸಾರ್ ಶ್ರೀಕೃಷ್ಣದೇವರಾಯನ ಕಾಲದಿಂದ್ಲೂ ಆಭಿವೃದ್ಧಿ ಆಗಲಿಲ್ಲ. ಕಡೆಗೆ ನಮ್ಮ ಸಂಪತ್ತನ್ನೆಲ್ಲಾ ತುಂಬಿಕೊಂಡು ಆಂಧ್ರಕ್ಕೋದ್ರು.”

“ನಾನು ಕಲ್ಯಾಣ ಕರ್ನಾಟಕನ ಅಷ್ಟೇ ಅಭಿವೃದ್ಧಿ ಮಾಡಲ್ಲ, ಇಡೀ ಕರ್ನಾಟಕನ ಅಭಿವೃದ್ಧಿ ಮಾಡತಕ್ಕಂತ ಕಾರ್ಯಕ್ರಮ ತಯಾರು ಮಾಡಿದ್ದಿನಿ.”

“ಆ ಅಭಿವೃದ್ಧಿಲಿ ಗಣಿ ಗುಡ್ಡಗಳು ಇವೆಯಾ ಸಾರ್?”

“ಇಲ್ಲ, ಜನರ ಮೂಲಭೂತ ಸಮಸ್ಯೆಗಳಿವೆ.”

“ಜನರ ಸಮಸ್ಯೆ ನಿವಾರಿಸಕ್ಕೆ ಹಣ ಬೇಕಲ್ಲವ ಸಾರ್. ಅದನ್ನ ಎಲ್ಲಿಂದ ತರ್ತಿರಿ? ಕೇಂದ್ರ ಸರಕಾರ ಹಣಕೊಡಲಿಲ್ಲ ಅಂದರೆ ಯಂಗೆ ಮಾಡ್ತಿರಿ?”

“ನಾನು ಹ್ಯಾಗೊ ಮಾಡ್ತಿನಿ. ಮೊದಲಿಂದ ನಾನು ನನ್ನ ಗುರಿಲಿ ಸೋತವನಲ್ಲ, ಈಗಲೂ ಸೋಲಲ್ಲ.”

“ಸೋಲಬೇಡಿ ಸಾರ್.. ವಿಧಾನಸೌಧದ ವರಾಂಡದಲ್ಲಿ ನಿಮ್ಮ ಗ್ರೀನ್ ಕಲರ್ ರೋಲ್ಸ್‌ರಾಯ್ ಕಾರ್ ನಿಂತಿರದ್ದನ್ನ ನೋಡಕ್ಕೆ ನನ್ನ ಕಣ್ಣಿಗೆ ಹಬ್ಬ ಸಾರ್.”

“ನಾನು ನನ್ನ ರೋಲ್ಸ್‌ರಾಯ್ ಕಾರಲ್ಲಿ ಬಂದೇ ಬರ್ತಿನಿ ಯಾಹೂ.”

“ನಿಮ್ಮಂತವರ ಕಾರ್ಯಕ್ಷೇತ್ರದ ತಾಣದಂಗಿದ್ದ ಬಿಜೆಪಿ ಯಾಕೆ ಬಿಟ್ರಿ ಸಾರ್?”

“ಬಿಜೆಪಿ ಇವತ್ತು ಕರ್ನಾಟಕದಲ್ಲಿ ಅಧಿಕಾರದಲ್ಲಿ ಇದ್ರೆ ಅದು ನನ್ನಿಂದ. ಮೊದಲು ಕುಮಾರಸ್ವಾಮಿಗೆ ಏನು ಬೇಕೋ ಅದನ್ನ ಕೊಟ್ಟು ಅಧಿಕಾರದಲ್ಲಿ ಪಾಲು ಪಡೆದೆವು. ನಂತರ ಬಹುಮತ ಬರದೇ ಹೋದಾಗ ಶಾಸಕರಿಗೆ ಏನು ಬೇಕೋ ಅದು ಕೊಟ್ಟು, ಅವರಿಂದ ರಾಜಿನಾಮೆ ಕೊಡಿಸಿ ಚುನಾವಣೆ ಮಾಡಿ ಎಡೂರಪ್ಪನ್ನ ಮುಖ್ಯಮಂತ್ರಿ ಮಾಡಿದ್ದು ನಾವು. ಅದಕ್ಕಾಗಿ ನಾವು ಗಣಿಯಿಂದ ಬಂದ ಹಣವನ್ನು ಖರ್ಚು ಮಾಡಿದೆವು.”

“ಆ ನಂತರ ಸರಕಾರ ಬಂದಾಗ ಅಕ್ರಮ ಮಾಡಿ ಹಣ ಮಾಡಿಕಂಡ್ರಲ್ಲ ಸಾರ್. ಗಣಿ ಹಣನ ರಾಜಕಾರಣಕ್ಕೆ ಹಾಕಿದ್ರಿ. ಪವರ್ರಿಗೆ ಬಂದಾಗ ಗೋರಿ ಕಂಡ್ರಿ..”

“ಅದು ಸರಿ, ಪರಿಣಾಮಗಳನ್ನ ಅನುಭವಿಸಿದವರು ನಾವು, ಜೈಲಿಗೆ ಹೋಗಿದ್ದು ನಾನು, ನಮ್ಮ ತಾಯಿ ಸಮಾನರಾಗಿದ್ದ ಸುಷ್ಮಸ್ವರಾಜ್ ಕೂಡ ಅವುರ್ಯಾರೊ ನನಿಗೆ ಗೊತ್ತೆಯಿಲ್ಲ ಅಂದುಬುಟ್ರು. ಇನ್ನ ತಂದೆ ಸಮಾನರಾದ ಎಡೂರಪ್ಪನೂ ನಮ್ಮ ಸಹಾಯಕ್ಕೆ ಬರಲಿಲ್ಲ..”

“ಬರಲಿಲ್ಲ ಅಂದ್ರೆ ಅವರಿಗೂ ನಿಮ್ಮ ಮೇಲೆ ಸಿಟ್ಟಿತ್ತಲ್ಲ ಸಾರ್. ಅವರ ಆತ್ಮೀಯರಾಗಿದ್ದ ಶೋಭ ಕರಂದ್ಲಾಜೆಯವರ್ನ ಸಂಪುಟದಿಂದ ತಗಿಬೇಕು ಅಂದ್ರಿ, ತಗದ್ರು. ಇನ್ನ ನಿಮ್ಮನ್ನ ವಿಚಾರಿಸಿಗಳಕ್ಕೆ ಅಂತ ಕಳಿಸಿದ್ದ ಡಿ.ಸಿನ ಕೂಡಲೇ ವರ್ಗಮಾಡಿ ಅಂದಾಗ ಮಾಡಿದ್ರು. ಒಂದೇ ವಾರಕ್ಕೆ ಎಸ್ಪಿ ಡಿ.ಸಿ ವರ್ಗ ಮಾಡಿಸಿದ್ದು ನೀವೇ ಇರಬೇಕು.”

“ಯಾರು ಸರಕಾರವನ್ನ ತಂದ್ರೋ ಅವರಿಗೇ ಕಿರುಕುಳ ಕೊಡೋ ಅಧಿಕಾರಿಗಳನ್ನ ಹಾಕಿದ್ರೆ ಸುಮ್ಮನಿರಬೇಕಾಗುತ್ತ?”

“ಆಗಲ್ಲ ಸಾರ್. ನೀವು ಬಿಜೆಪಿ ಅನ್ನೋ ಪಾರ್ಟಿನ ಅರ್ಥಮಾಡಿಕೊಬೇಕಾಗಿತ್ತು. ಅವರ ಮೋಸದ ಇತಿಹಾಸ ದೊಡ್ಡದಿದೆ.”

“ನಂಬಿದವರ ಕತ್ತು ಕುಯ್ಯತರೆ ಅಂತ ಗೊತ್ತಿರಲಿಲ್ಲ ಕಂಡ್ರಿ.”

“ಕತ್ತು ಕುಯ್ಯಲ್ಲ ಸಾರ್ ಅವುರು. ನೀವೇ ಪಾಷಣ ತಿಂದು ಸಾಯಂಗೆ ಮಾಡ್ತರೆ. ಇದೇ ಎಡೂರಪ್ಪ ಜೈಲಿಗೋಗಿದ್ದಾಗ ಬೆಂಗಳೂರಿಗೆ ಅಡ್ವಾನಿ ಬಂದಿದ್ರು. ಎಡೂರಪ್ಪನ್ನ ನೋಡಕ್ಕೆ ಹೋಗಿದ್ರಾ? ಅದೇ ಅಡ್ವಾನಿ ಈಗೆಲ್ಯವುರೆ, ಬಾಬರಿ ಮಸೀದಿ ಕೆಡಹಿದ ಕಲ್ಯಾಣಸಿಂಗ ಏನಾದ್ರು, ಹುಬ್ಬಳಿ ಈದ್ಗಾ ಮೈದಾನದಲ್ಲಿ ಬಾವುಟ ಹಾರಿಸಿದ ಉಮಾಭಾರತಿ ಏನಾದ್ರು, ಶಿವಸೇನೆ ಏನಾಗಿದೆ, ಗೋವಾ ಕತೆ ಏನಾಗಿದೆ. ಕುತಂತ್ರದಿಂದ್ಲೆ ಪಾರ್ಟಿ ಕಟ್ಟಿ ಆಡಳಿತ ಮಾಡದು ಅವರ ಹುಟ್ಟುಗುಣ. ನೀವು ನಿಮ್ಮ ಬಗ್ಗೆ ಯೋಚನೆ ಮಾಡಿದ್ರೆ ಇಷ್ಟೊಂದು ಗಣಿ ಲೂಟಿ ಮಾಡೋ ಅಗತ್ಯ ಇರಲಿಲ್ಲ ಅಲ್ಲವ ಸಾರ್?”

“ಹೌದು, ಇವರಿಗೋಸ್ಕರ ಜಾಸ್ತಿ ಮಾಡಬೇಕಾಯ್ತು.”

“ಗಣಿಕಳ್ರು ಅಂತ ಹೆಸರು ಪಡದೋರು ನೀವು. ಅಧಿಕಾರ ಮಾಡ್ತ ಸರಕಾರನೆ ಕೊಳ್ಳೆ ಹೊಡಿತಾಯಿರೋರು ಅವುರು.”

“ಅದಕೆ ನಾನು ಅವರನ್ನ ಸುಮ್ಮನೆ ಬಿಡಬಾರ್ದು ಅಂತ ಕಲ್ಯಾಣ ಪ್ರಗತಿ ಪಕ್ಷ ಮಾಡಿದ್ದಿನಿ.”

“ಪ್ರಾದೇಶಿಕ ಪಕ್ಷ ಮಾಡಿದೋರ್ಯಾರು ಸಕ್ಸಸ್ ಆಗಿಲವಂತಲ್ಲಾ ಸಾರ್?”

“ಆಗಿಲ್ಲ ಅನ್ನದನ್ನ ನಾನು ಕೂಡ ಗಮನಿಸಿದ್ದೀನಿ. ಮಾನ್ಯ ಎಡೂರಪ್ಪನವರು ಮಾಡಿದ್ರು ಬಿಜೆಪಿನ ಅಧಿಕಾರದಿಂದ ದೂರ ಇಟ್ಟರು. ಆ ನಂತರ ಬಿಜೆಪಿಯವರೇ ಕರದು ಅಧಿಕಾರವನ್ನ ಕೊಟ್ರು. ನಾನು ಕೂಡ ಹಾಗೇ ಮಾಡ್ತಿನಿ ನೋಡಿ.”

“ವಿಜಯನಗರ ಸಾಮ್ರಾಜ್ಯ ಆಳಿದೋರು ತೆಲುಗರಂತೆ! ಅವರ ನಂತರ ನೀವೇನಾದ್ರು ಪವರ್ರಿಗೆ ಬಂದ್ರೆ ಮತ್ತೆ ಕಲ್ಯಾಣ ಕರ್ನಾಟಕ ಸಾಮ್ರಾಜ್ಯ ಸ್ಥಾಪನೆ ಆಗುತ್ತಲ್ಲ ಸಾರ್?”

“ಈಗಲೂ ಕಲ್ಯಾಣ ಕರ್ನಾಟಕ ತೆಲುಗರದ್ದೇ ಆಗಿದೆ ಕಂಡ್ರಿ. ಇಲ್ಲಿನ ಜಿಲ್ಲಾಪಂಚಾಯ್ತಿ ಸದಸ್ಯರು, ಗ್ರಾಮಪಂಚಾಯ್ತಿ ಸದಸ್ಯರು, ಎಮ್ಮೆಲ್ಲೆ, ಮಂತ್ರಿಗಳೆಲ್ಲಾ ತೆಲುಗು ಭಾಷಿಕರು. ಅವರಿಗೊಬ್ಬ ಲೀಡರು ಬೇಕು ಆ ಕೊರತೆಯನ್ನ ನಾನು ತುಂಬತೀನಿ.”

“ಮತ್ತೆ ಸಮಗ್ರ ಕರ್ನಾಟಕದ ಮಾತನಾಡ್ತಿರಿ?”

“ಅದು ಕೂಡ ನಿಜ. ಇಡೀ ಕರ್ನಾಟಕ ಅಭಿವೃದ್ಧಿ ನಮ್ಮ ಕನಸು.”

“ನಿಮ್ಮ ಕನಸು ನನಸಾಗದಕ್ಕೆ ಕರ್ನಾಟಕ ಕಾಯ್ತಯಿದೆ ಸಾರ್, ನೀವು ನಿಮ್ಮ ಕಾರ್ಯಕ್ಷೇತ್ರನ ಎಲ್ಲಾ ಜಿಲ್ಲೆಗೂ ವಿಸ್ತರಿಸಿಕೊಳ್ಳೊದಾದ್ರೆ ನಿಧಿ ತರದ ಗುಡ್ಡಗಳು ನಿಂತಿವೆ, ಕನಕಪುರದ ಕಡೆ ಗ್ರಾನೈಟ್ ಬೆಟ್ಟಗಳಿವೆ, ಇನ್ನ ಪಾಂಡವಪುರದ ಕಡೆ ಪುಟ್ಟರಾಜನ ಬೆಟ್ಟಗಳಿವೆ, ಚಿಕ್ಕಮಗಳೂರಿಗೆ ಬಂದ್ರೆ ಗಣಿ ಗಿರಿಗಳ ಸಾಲೇಯಿದೆ, ಶಿವಮೊಗ್ಗದ ಕಡೆ ಕುಂದಾದ್ರಿ ಕೊಡಚಾದ್ರಿ ಬೆಟ್ಟಗಳಿವೆ. ಇನ್ನ ನಿಮ್ಮಲ್ಲೇ ಕಪ್ಪತ್ತ ಗುಡ್ಡ ಸಾಲಿದೆ. ನೀವು ಯಾವುದೇ ಜಿಲ್ಲೆಗೋದ್ರು ಗಣಿಗುಡ್ಡಗಳಿವೆ ಸಾರ್. ಅವನ್ನೆಲ್ಲಾ ನೆಲಸಮ ಮಾಡಿ ಕಲ್ಯಾಣ ರಾಜ್ಯದ ಕೃಷ್ಣದೇವರಾಯನ ಕಾಲ ಮಾಡಬಹುದು. ನಿಮ್ಮ ಖಾಸಗಿ ದರ್ಬಾರಿನಲ್ಲಿರೊ ಕುರ್ಚಿ ಮೇಲೆ ತಿರುಪತಿ ತಿಮ್ಮಪ್ಪನಿಗೆ ಮಾಡಿಸಿ ಕೊಟ್ಟಂತ ಕಿರೀಟ ಧರಿಸಿ ಕೂತಗಬಹುದು. ಆಗ ಬಿಜೆಪಿ ಕಣ್ಣು ತಪ್ಪಿಸಿ ರಾಮುಲು ಬರ್ತರೆ.”

“ರಾಮುಲು ಬಂದ್ರೆ ಅವರನ್ನೆ ಮುಖ್ಯಮಂತ್ರಿ ಮಾಡ್ತಿನಿ.”

“ನೀವು?”

“ನಾನು ಉಪಮುಖ್ಯಮಂತ್ರಿ ಮತ್ತೆ ಗಣಿಕಾತೆ ತಗೊತಿನಿ.”

ಥೂತ್ತೇರಿ.


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...