Homeಅಂಕಣಗಳುನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

- Advertisement -
- Advertisement -

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಉದಯವಾದ ಸುದ್ದಿಕೇಳಿ ಗಣಿಮಣ್ಣು ತಿಂದಷ್ಟು ಖುಷಿಯಾಯ್ತಲ್ಲಾ. ಇದಕ್ಕೆ ಕಾರಣರಾದ ಜನಾರ್ಧನ ರೆಡ್ಡಿಯವರಿಗೆ ಪೋನ್ ಮಾಡಿ ಶುಭಾಶಯ ಹೇಳಬೇಕೆನಿಸಿ ಪೋನ್ ಮಾಡಿದರೆ ರಿಂಗಾಯ್ತು. ರಿಂಗ್‌ಟೋನ್: ‘ತಿರುಪತಿ ಗಿರಿವಾಸ ಶ್ರೀ ವೆಂಕಟೇಶ, ನೀನೊಲಿದ ಮನೆ ಮನೆಯು ಲಕ್ಷ್ಮೀನಿವಾಸ….’

“ಹಲೋ ಯಾರು?”

“ನಾನು ಸಾರ್ ಪತ್ರಕರ್ತ ಯಾಹು ಅಂತ.”

“ಯಾವೂ ಅಂದ್ರೆ ಯಾರು?”

“ನಿಮ್ಮತ್ರ ಈ ಹಿಂದೆ ಒಬ್ಬ ವಕೀಲ, ಮತ್ತೊಬ್ಬ ಪತ್ರಕರ್ತ ಕಂ ಪ್ರೊಫೆಸರ್ ಇದ್ರಲ್ಲ ಸಾರ್ ಅವರ ಆತ್ಮೀಯ ಗೆಳೆಯ ಸಾರ್.”

“ಭಾಳ ಒಳ್ಳೆದು. ಏನು ಹೇಳಿ ಇವರೆ.”

“ನಿಮ್ಮನ್ನ ಅಭಿನಂದಿಸೋದಕ್ಕೆ ಪೋನ್ ಮಾಡಿದೆ ಸಾರ್. ಅಂತೂ ನಮ್ಮ ಕರ್ನಾಟಕ್ಕೆ ಇಂತದೊಂದು ಪಾರ್ಟಿ ಬೇಕಿತ್ತು ಸಾರ್.”

“ಅದಕ್ಕಾಗಿ ನಾನು ಪಾರ್ಟಿ ಸ್ಥಾಪನೆ ಮಾಡಿದೆ, ಯಾಕಂದ್ರೆ ಕಲ್ಯಾಣ ಕರ್ನಾಟಕ ಅಂತ ಹೇಳಿ ಬರೀ ನಾಮಕರಣ ಮಾಡಿದ್ರು, ಆದ್ರೆ ಅಭಿವೃದ್ಧಿ ಕೆಲಸಗಳು ಏನೂ ಆಗಿಲ್ಲ.”

“ನಿಜ ಸಾರ್ ಶ್ರೀಕೃಷ್ಣದೇವರಾಯನ ಕಾಲದಿಂದ್ಲೂ ಆಭಿವೃದ್ಧಿ ಆಗಲಿಲ್ಲ. ಕಡೆಗೆ ನಮ್ಮ ಸಂಪತ್ತನ್ನೆಲ್ಲಾ ತುಂಬಿಕೊಂಡು ಆಂಧ್ರಕ್ಕೋದ್ರು.”

“ನಾನು ಕಲ್ಯಾಣ ಕರ್ನಾಟಕನ ಅಷ್ಟೇ ಅಭಿವೃದ್ಧಿ ಮಾಡಲ್ಲ, ಇಡೀ ಕರ್ನಾಟಕನ ಅಭಿವೃದ್ಧಿ ಮಾಡತಕ್ಕಂತ ಕಾರ್ಯಕ್ರಮ ತಯಾರು ಮಾಡಿದ್ದಿನಿ.”

“ಆ ಅಭಿವೃದ್ಧಿಲಿ ಗಣಿ ಗುಡ್ಡಗಳು ಇವೆಯಾ ಸಾರ್?”

“ಇಲ್ಲ, ಜನರ ಮೂಲಭೂತ ಸಮಸ್ಯೆಗಳಿವೆ.”

“ಜನರ ಸಮಸ್ಯೆ ನಿವಾರಿಸಕ್ಕೆ ಹಣ ಬೇಕಲ್ಲವ ಸಾರ್. ಅದನ್ನ ಎಲ್ಲಿಂದ ತರ್ತಿರಿ? ಕೇಂದ್ರ ಸರಕಾರ ಹಣಕೊಡಲಿಲ್ಲ ಅಂದರೆ ಯಂಗೆ ಮಾಡ್ತಿರಿ?”

“ನಾನು ಹ್ಯಾಗೊ ಮಾಡ್ತಿನಿ. ಮೊದಲಿಂದ ನಾನು ನನ್ನ ಗುರಿಲಿ ಸೋತವನಲ್ಲ, ಈಗಲೂ ಸೋಲಲ್ಲ.”

“ಸೋಲಬೇಡಿ ಸಾರ್.. ವಿಧಾನಸೌಧದ ವರಾಂಡದಲ್ಲಿ ನಿಮ್ಮ ಗ್ರೀನ್ ಕಲರ್ ರೋಲ್ಸ್‌ರಾಯ್ ಕಾರ್ ನಿಂತಿರದ್ದನ್ನ ನೋಡಕ್ಕೆ ನನ್ನ ಕಣ್ಣಿಗೆ ಹಬ್ಬ ಸಾರ್.”

“ನಾನು ನನ್ನ ರೋಲ್ಸ್‌ರಾಯ್ ಕಾರಲ್ಲಿ ಬಂದೇ ಬರ್ತಿನಿ ಯಾಹೂ.”

“ನಿಮ್ಮಂತವರ ಕಾರ್ಯಕ್ಷೇತ್ರದ ತಾಣದಂಗಿದ್ದ ಬಿಜೆಪಿ ಯಾಕೆ ಬಿಟ್ರಿ ಸಾರ್?”

“ಬಿಜೆಪಿ ಇವತ್ತು ಕರ್ನಾಟಕದಲ್ಲಿ ಅಧಿಕಾರದಲ್ಲಿ ಇದ್ರೆ ಅದು ನನ್ನಿಂದ. ಮೊದಲು ಕುಮಾರಸ್ವಾಮಿಗೆ ಏನು ಬೇಕೋ ಅದನ್ನ ಕೊಟ್ಟು ಅಧಿಕಾರದಲ್ಲಿ ಪಾಲು ಪಡೆದೆವು. ನಂತರ ಬಹುಮತ ಬರದೇ ಹೋದಾಗ ಶಾಸಕರಿಗೆ ಏನು ಬೇಕೋ ಅದು ಕೊಟ್ಟು, ಅವರಿಂದ ರಾಜಿನಾಮೆ ಕೊಡಿಸಿ ಚುನಾವಣೆ ಮಾಡಿ ಎಡೂರಪ್ಪನ್ನ ಮುಖ್ಯಮಂತ್ರಿ ಮಾಡಿದ್ದು ನಾವು. ಅದಕ್ಕಾಗಿ ನಾವು ಗಣಿಯಿಂದ ಬಂದ ಹಣವನ್ನು ಖರ್ಚು ಮಾಡಿದೆವು.”

“ಆ ನಂತರ ಸರಕಾರ ಬಂದಾಗ ಅಕ್ರಮ ಮಾಡಿ ಹಣ ಮಾಡಿಕಂಡ್ರಲ್ಲ ಸಾರ್. ಗಣಿ ಹಣನ ರಾಜಕಾರಣಕ್ಕೆ ಹಾಕಿದ್ರಿ. ಪವರ್ರಿಗೆ ಬಂದಾಗ ಗೋರಿ ಕಂಡ್ರಿ..”

“ಅದು ಸರಿ, ಪರಿಣಾಮಗಳನ್ನ ಅನುಭವಿಸಿದವರು ನಾವು, ಜೈಲಿಗೆ ಹೋಗಿದ್ದು ನಾನು, ನಮ್ಮ ತಾಯಿ ಸಮಾನರಾಗಿದ್ದ ಸುಷ್ಮಸ್ವರಾಜ್ ಕೂಡ ಅವುರ್ಯಾರೊ ನನಿಗೆ ಗೊತ್ತೆಯಿಲ್ಲ ಅಂದುಬುಟ್ರು. ಇನ್ನ ತಂದೆ ಸಮಾನರಾದ ಎಡೂರಪ್ಪನೂ ನಮ್ಮ ಸಹಾಯಕ್ಕೆ ಬರಲಿಲ್ಲ..”

“ಬರಲಿಲ್ಲ ಅಂದ್ರೆ ಅವರಿಗೂ ನಿಮ್ಮ ಮೇಲೆ ಸಿಟ್ಟಿತ್ತಲ್ಲ ಸಾರ್. ಅವರ ಆತ್ಮೀಯರಾಗಿದ್ದ ಶೋಭ ಕರಂದ್ಲಾಜೆಯವರ್ನ ಸಂಪುಟದಿಂದ ತಗಿಬೇಕು ಅಂದ್ರಿ, ತಗದ್ರು. ಇನ್ನ ನಿಮ್ಮನ್ನ ವಿಚಾರಿಸಿಗಳಕ್ಕೆ ಅಂತ ಕಳಿಸಿದ್ದ ಡಿ.ಸಿನ ಕೂಡಲೇ ವರ್ಗಮಾಡಿ ಅಂದಾಗ ಮಾಡಿದ್ರು. ಒಂದೇ ವಾರಕ್ಕೆ ಎಸ್ಪಿ ಡಿ.ಸಿ ವರ್ಗ ಮಾಡಿಸಿದ್ದು ನೀವೇ ಇರಬೇಕು.”

“ಯಾರು ಸರಕಾರವನ್ನ ತಂದ್ರೋ ಅವರಿಗೇ ಕಿರುಕುಳ ಕೊಡೋ ಅಧಿಕಾರಿಗಳನ್ನ ಹಾಕಿದ್ರೆ ಸುಮ್ಮನಿರಬೇಕಾಗುತ್ತ?”

“ಆಗಲ್ಲ ಸಾರ್. ನೀವು ಬಿಜೆಪಿ ಅನ್ನೋ ಪಾರ್ಟಿನ ಅರ್ಥಮಾಡಿಕೊಬೇಕಾಗಿತ್ತು. ಅವರ ಮೋಸದ ಇತಿಹಾಸ ದೊಡ್ಡದಿದೆ.”

“ನಂಬಿದವರ ಕತ್ತು ಕುಯ್ಯತರೆ ಅಂತ ಗೊತ್ತಿರಲಿಲ್ಲ ಕಂಡ್ರಿ.”

“ಕತ್ತು ಕುಯ್ಯಲ್ಲ ಸಾರ್ ಅವುರು. ನೀವೇ ಪಾಷಣ ತಿಂದು ಸಾಯಂಗೆ ಮಾಡ್ತರೆ. ಇದೇ ಎಡೂರಪ್ಪ ಜೈಲಿಗೋಗಿದ್ದಾಗ ಬೆಂಗಳೂರಿಗೆ ಅಡ್ವಾನಿ ಬಂದಿದ್ರು. ಎಡೂರಪ್ಪನ್ನ ನೋಡಕ್ಕೆ ಹೋಗಿದ್ರಾ? ಅದೇ ಅಡ್ವಾನಿ ಈಗೆಲ್ಯವುರೆ, ಬಾಬರಿ ಮಸೀದಿ ಕೆಡಹಿದ ಕಲ್ಯಾಣಸಿಂಗ ಏನಾದ್ರು, ಹುಬ್ಬಳಿ ಈದ್ಗಾ ಮೈದಾನದಲ್ಲಿ ಬಾವುಟ ಹಾರಿಸಿದ ಉಮಾಭಾರತಿ ಏನಾದ್ರು, ಶಿವಸೇನೆ ಏನಾಗಿದೆ, ಗೋವಾ ಕತೆ ಏನಾಗಿದೆ. ಕುತಂತ್ರದಿಂದ್ಲೆ ಪಾರ್ಟಿ ಕಟ್ಟಿ ಆಡಳಿತ ಮಾಡದು ಅವರ ಹುಟ್ಟುಗುಣ. ನೀವು ನಿಮ್ಮ ಬಗ್ಗೆ ಯೋಚನೆ ಮಾಡಿದ್ರೆ ಇಷ್ಟೊಂದು ಗಣಿ ಲೂಟಿ ಮಾಡೋ ಅಗತ್ಯ ಇರಲಿಲ್ಲ ಅಲ್ಲವ ಸಾರ್?”

“ಹೌದು, ಇವರಿಗೋಸ್ಕರ ಜಾಸ್ತಿ ಮಾಡಬೇಕಾಯ್ತು.”

“ಗಣಿಕಳ್ರು ಅಂತ ಹೆಸರು ಪಡದೋರು ನೀವು. ಅಧಿಕಾರ ಮಾಡ್ತ ಸರಕಾರನೆ ಕೊಳ್ಳೆ ಹೊಡಿತಾಯಿರೋರು ಅವುರು.”

“ಅದಕೆ ನಾನು ಅವರನ್ನ ಸುಮ್ಮನೆ ಬಿಡಬಾರ್ದು ಅಂತ ಕಲ್ಯಾಣ ಪ್ರಗತಿ ಪಕ್ಷ ಮಾಡಿದ್ದಿನಿ.”

“ಪ್ರಾದೇಶಿಕ ಪಕ್ಷ ಮಾಡಿದೋರ್ಯಾರು ಸಕ್ಸಸ್ ಆಗಿಲವಂತಲ್ಲಾ ಸಾರ್?”

“ಆಗಿಲ್ಲ ಅನ್ನದನ್ನ ನಾನು ಕೂಡ ಗಮನಿಸಿದ್ದೀನಿ. ಮಾನ್ಯ ಎಡೂರಪ್ಪನವರು ಮಾಡಿದ್ರು ಬಿಜೆಪಿನ ಅಧಿಕಾರದಿಂದ ದೂರ ಇಟ್ಟರು. ಆ ನಂತರ ಬಿಜೆಪಿಯವರೇ ಕರದು ಅಧಿಕಾರವನ್ನ ಕೊಟ್ರು. ನಾನು ಕೂಡ ಹಾಗೇ ಮಾಡ್ತಿನಿ ನೋಡಿ.”

“ವಿಜಯನಗರ ಸಾಮ್ರಾಜ್ಯ ಆಳಿದೋರು ತೆಲುಗರಂತೆ! ಅವರ ನಂತರ ನೀವೇನಾದ್ರು ಪವರ್ರಿಗೆ ಬಂದ್ರೆ ಮತ್ತೆ ಕಲ್ಯಾಣ ಕರ್ನಾಟಕ ಸಾಮ್ರಾಜ್ಯ ಸ್ಥಾಪನೆ ಆಗುತ್ತಲ್ಲ ಸಾರ್?”

“ಈಗಲೂ ಕಲ್ಯಾಣ ಕರ್ನಾಟಕ ತೆಲುಗರದ್ದೇ ಆಗಿದೆ ಕಂಡ್ರಿ. ಇಲ್ಲಿನ ಜಿಲ್ಲಾಪಂಚಾಯ್ತಿ ಸದಸ್ಯರು, ಗ್ರಾಮಪಂಚಾಯ್ತಿ ಸದಸ್ಯರು, ಎಮ್ಮೆಲ್ಲೆ, ಮಂತ್ರಿಗಳೆಲ್ಲಾ ತೆಲುಗು ಭಾಷಿಕರು. ಅವರಿಗೊಬ್ಬ ಲೀಡರು ಬೇಕು ಆ ಕೊರತೆಯನ್ನ ನಾನು ತುಂಬತೀನಿ.”

“ಮತ್ತೆ ಸಮಗ್ರ ಕರ್ನಾಟಕದ ಮಾತನಾಡ್ತಿರಿ?”

“ಅದು ಕೂಡ ನಿಜ. ಇಡೀ ಕರ್ನಾಟಕ ಅಭಿವೃದ್ಧಿ ನಮ್ಮ ಕನಸು.”

“ನಿಮ್ಮ ಕನಸು ನನಸಾಗದಕ್ಕೆ ಕರ್ನಾಟಕ ಕಾಯ್ತಯಿದೆ ಸಾರ್, ನೀವು ನಿಮ್ಮ ಕಾರ್ಯಕ್ಷೇತ್ರನ ಎಲ್ಲಾ ಜಿಲ್ಲೆಗೂ ವಿಸ್ತರಿಸಿಕೊಳ್ಳೊದಾದ್ರೆ ನಿಧಿ ತರದ ಗುಡ್ಡಗಳು ನಿಂತಿವೆ, ಕನಕಪುರದ ಕಡೆ ಗ್ರಾನೈಟ್ ಬೆಟ್ಟಗಳಿವೆ, ಇನ್ನ ಪಾಂಡವಪುರದ ಕಡೆ ಪುಟ್ಟರಾಜನ ಬೆಟ್ಟಗಳಿವೆ, ಚಿಕ್ಕಮಗಳೂರಿಗೆ ಬಂದ್ರೆ ಗಣಿ ಗಿರಿಗಳ ಸಾಲೇಯಿದೆ, ಶಿವಮೊಗ್ಗದ ಕಡೆ ಕುಂದಾದ್ರಿ ಕೊಡಚಾದ್ರಿ ಬೆಟ್ಟಗಳಿವೆ. ಇನ್ನ ನಿಮ್ಮಲ್ಲೇ ಕಪ್ಪತ್ತ ಗುಡ್ಡ ಸಾಲಿದೆ. ನೀವು ಯಾವುದೇ ಜಿಲ್ಲೆಗೋದ್ರು ಗಣಿಗುಡ್ಡಗಳಿವೆ ಸಾರ್. ಅವನ್ನೆಲ್ಲಾ ನೆಲಸಮ ಮಾಡಿ ಕಲ್ಯಾಣ ರಾಜ್ಯದ ಕೃಷ್ಣದೇವರಾಯನ ಕಾಲ ಮಾಡಬಹುದು. ನಿಮ್ಮ ಖಾಸಗಿ ದರ್ಬಾರಿನಲ್ಲಿರೊ ಕುರ್ಚಿ ಮೇಲೆ ತಿರುಪತಿ ತಿಮ್ಮಪ್ಪನಿಗೆ ಮಾಡಿಸಿ ಕೊಟ್ಟಂತ ಕಿರೀಟ ಧರಿಸಿ ಕೂತಗಬಹುದು. ಆಗ ಬಿಜೆಪಿ ಕಣ್ಣು ತಪ್ಪಿಸಿ ರಾಮುಲು ಬರ್ತರೆ.”

“ರಾಮುಲು ಬಂದ್ರೆ ಅವರನ್ನೆ ಮುಖ್ಯಮಂತ್ರಿ ಮಾಡ್ತಿನಿ.”

“ನೀವು?”

“ನಾನು ಉಪಮುಖ್ಯಮಂತ್ರಿ ಮತ್ತೆ ಗಣಿಕಾತೆ ತಗೊತಿನಿ.”

ಥೂತ್ತೇರಿ.


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...