Homeಅಂಕಣಗಳುಸುಮಲತಾರದ್ದು ಈ ಶತಮಾನದ ಎರಡನೇ ದ್ರೋಹ

ಸುಮಲತಾರದ್ದು ಈ ಶತಮಾನದ ಎರಡನೇ ದ್ರೋಹ

- Advertisement -
- Advertisement -

ಮಂಡ್ಯ ಜಿಲ್ಲೆ ಜನತೆಗೆ ಸುಮಲತಾ ನಡೆ ಈ ಶತಮಾನದ ಎರಡನೇ ದ್ರೋಹವಾಗಿ ಕಾಣತೊಡಗಿದೆಯಂತಲ್ಲಾ. ಮೊದಲ ದ್ರೋಹ ಎಸ್.ಎಂ ಕೃಷ್ಣರದ್ದು. ಯಾರನ್ನು ಕೇಳಿದರೂ ತಾವು ಮೋಸ ಹೋದ ಮಾತು ಅವರಿಂದ ಹೊರಬರುತ್ತಿದೆ. ಇದಕ್ಕೆ ಅವರು ಕೊಡುವ ಕಾರಣ: ಸುಮಲತಾ ಚುನಾವಣೆ ಮುಗಿಯುವ ಹಂತದಲ್ಲಿ ಸೆರಗೊಡ್ಡಿ ಸ್ವಾಭಿಮಾನದ ಭಿಕ್ಷೆ ಬೇಡಿದರು; ಇದರಿಂದ ಕರಗಿಹೋದ ಮಂಡ್ಯದ ಜನ ತಮ್ಮ ಮನೆಯ ಮಗಳಾಗಿ ಸ್ವೀಕರಿಸಿದರು; ಅಂದು ಮುಖ್ಯಮಂತ್ರಿ ಮಗನೇ ಮೈತ್ರಿ ಸರ್ಕಾರದ ಅಭ್ಯರ್ಥಿಯಾದರೂ ಕಾಂಗ್ರೆಸ್ಸಿಗರು ಒಳಗೊಳಗೇ ಕೆಲಸ ಮಾಡಿದರು. ಭಾಷಾಭಿಮಾನಿಗಳು, ರೈತಸಂಘದವರು, ದಲಿತ ಸಂಘದ ಲೀಡರುಗಳು ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಸುಮಲತಾ ಒಂದೂಕಾಲು ಲಕ್ಷದ ಲೀಡು ಪಡೆದು ಗೆದ್ದರು. ಆದರೇನು ಗೆದ್ದ ಕ್ಷಣದಿಂದಲೇ ಅವರ ಒಡನಾಟ ಮನೆಹಾಳು ಬಿಜೆಪಿಗಳ ಜೊತೆ ಆರಂಭವಾಯ್ತು. ಈಗ ಅವರು ಹೆಚ್ಚುಕಮ್ಮಿ ಬಿಜೆಪಿ ಸೇರಿದಂತೆಯೇ ಅಂಬಂತೆ ಬಿಜೆಪಿಗೆ ಬಂಬಲ ಘೋಷಿಸಿರುವುದು ಕೂಡ ಸಕಾರಣವಾಗಿರದೆ ಇನ್ನ ವರ್ಷವಿರುವ ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಸೇರಿ ಮತದಾರರಿಗೆ ಆಘಾತ ನೀಡಿದ್ದಾರೆ. ಈಕೆಯನ್ನು ಬೆಂಬಲಿಸಿದ ಸಿನಿಮಾ ನಟರೂ ಕೂಡ ಮೋಸ ಹೋಗಿದ್ದಾರೆ. ಆದರೇನು ಇಂತಹ ಯಾವ ನೋವೂ ಅವರನ್ನು ಭಾಧಿಸಿದಂತಿಲ್ಲ. ಇವರ ಬಗ್ಗೆ ಅಪ್ರಭುದ್ಧವಾಗಿ ಮಾತನಾಡಿದ್ದ ರೇವಣ್ಣ, ಶಿವರಾಮೇಗೌಡರ ಮಾತುಗಳೇ ನಿಜವಾಗಿರುವ ಈ ಸಮಯದಲ್ಲಿ, ಶಿವರಾಮೇಗೌಡ ಸುಮಲತಾ ಒಂದೇ ವೇದಿಕೆಗೆ ಬಂದರಲ್ಲಾ ಥೂತ್ತೇರಿ.

*****

ಇದ್ದಕ್ಕಿದ್ದಂತೆ ಮಂಡ್ಯ ಜಿಲ್ಲೆಯ ಉರಿಗೌಡ, ನಂಜೇಗೌಡರ ಬಗ್ಗೆ ವಕಾಲತ್ತು ವಹಿಸಿರುವ ಶೋಭಾ ಕರಂದ್ಲಾಜೆ ಎಂಬ ಸಂಶೋಧಕಿ ಎಡೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಬಲಗೈನಂತಿದ್ದವರು. ನೂರು ವರ್ಷದ ಇತಿಹಾಸವಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು (ವಿಐಎಸ್‌ಎಲ್) ಕೇಂದ್ರ ಸರಕಾರ ಮುಚ್ಚಿ ಒಂದು ಸಾವಿರ ಕುಟುಂಬಗಳು ಬೀದಿಗೆ ಬಿದ್ದಾಗ ಇವರು ಮಾತನಾಡಲಿಲ್ಲ. ವಿಐಎಸ್‌ಎಲ್ ಮುಚ್ಚಲು ಸಹಕರಿಸಿದ ಶಿವಮೊಗ್ಗದ ರಾಜಕಾರಣಿಗಳ ಮನಸ್ಸಿನ ಹಿಂದೆ ಇದ್ದ ಕುತ್ಸಿತ ಭಾವನೆಗಳು ಹಲವು: ಭದ್ರಾವತಿ ಹಿಂದಿನಿಂದ ಕಾಂಗ್ರೆಸ್ಸನ್ನು ಬೆಂಬಲಿಸಿಕೊಂಡು ಬಂದ ಕ್ಷೇತ್ರ; ಅಲ್ಲಿಗೆ ಶಿವಮೊಗ್ಗದ ಯಾವ ಮತೀಯ ಕಾಯಿಲೆಗಳೂ ತಲುಪಲಿಲ್ಲ. ಅಲ್ಲಿನ ಎಂಪಿಎಂ (ಮೈಸೂರು ಪೇಪರ್ ಮಿಲ್ಸ್) ಮತ್ತು ವಿಐಎಸ್‌ಎಲ್‌ನಲ್ಲಿನ ಬಹುತೇಕ ಕಾರ್ಮಿಕರೆಲ್ಲಾ ಒಕ್ಕಲಿಗರು. ಇವರ ಬಗ್ಗೆ ಮೊದಲಿನಿಂದಲೂ ಎಡೂರಪ್ಪನವರ ಟೀಮಿಗೆ ತಾತ್ಸಾರ. ಅದೇನೇ ಇರಲಿ ಮಂಡ್ಯಕ್ಕೆ ಬಂದು ಉರಿಗೌಡ ನಂಜೇಗೌಡರ ಬಗ್ಗೆ ಸಂಶೋಧನೆಗೆ ತೊಡಗಿರುವ ಈ ಶೋಭಾ ಕರಂದ್ಲಾಜೆ ನೂರುವರ್ಷದ ಇತಿಹಾಸವಿರುವ ವಿಐಎಸ್‌ಎಲ್ ಬಗ್ಗೆ ಈವರೆಗೂ ಚಕಾರವೆತ್ತದಿರುವುದು ಭದ್ರಾವತಿ ಜನರಿಗೆ ಬಗೆದಿರುವ ದ್ರೋಹವೆಂದು ಅರಿವು ಮಾಡಿಕೊಡಬೇಕಿದೆಯಲ್ಲಾ, ಥೂತ್ತೇರಿ.

ಇದನ್ನೂ ಓದಿ: ಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

ಇತಿಹಾಸದ ಸಮಾಧಿ ಅಗೆದು ಅಲ್ಲಿನ ಸತ್ಯಸಂಗತಿಗಳನ್ನು ಮರೆಮಾಡಿ ತಮಗೆ ಬೇಕಿರುವುದನ್ನು ಸೃಷ್ಟಿಸಿ ಸುಳ್ಳು ಹೇಳುತ್ತ ಹೋಗುವುದು ಬಿಜೆಪಿಗಳ ಹಳೆಯ ಚಾಳಿ. ಅದರಂತೆ ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನ ಬದಿಗೊತ್ತಿ ಉರಿ ಹಿಡಿದು ನಂಜುಕಾರುತ್ತ ಹೊರಟಿವೆ. ಸಂಶೋಧಕ ಹ.ಕ.ರಾಜೇಗೌಡರು ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಆಡಳಿತದ ವಿರುದ್ಧ ದಂಗೆ ಎದ್ದರು ಎಂಬ ಸಾಲನ್ನು ಹಿಡಿದುಹೊರಟಿರುವ ಬಿಜೆಪಿಯ ಮಂದಮತಿಗಳು ಒಂದಿಷ್ಟು ಧ್ಯಾನಿಸಿ ಸತ್ಯಸಂಗತಿಯನ್ನು ಗ್ರಹಿಸಿದ್ದಾರೆ. ಟಿಪ್ಪು ಸಂಪುಟದಲ್ಲಿದ್ದ ಎಂಟು ಜನ ಮಂತ್ರಿಗಳಲ್ಲಿ ಐವರು ಬ್ರಾಹ್ಮಣರಿದ್ದರು. ಅದರಲ್ಲಿ ದಿವಾನ್ ಪೂರ್ಣಯ್ಯನೂ ಬ್ರಾಹ್ಮಣ; ಇವರ ಆಣತಿಯಂತೇ ಆಡಳಿತ ನಡೆದಿದೆ. ಆ ಸಮಯದಲ್ಲಿ ಇವರುಗಳ ವರ್ಗವೆಲ್ಲಾ ಸವಲತ್ತಿನಿಂದ ಸಂತೃಪ್ತವಾಗಿದೆ. ಆದಕಾರಣ ವಿರೋಧ ವ್ಯಕ್ತವಾಗಿದೆ; ಟಿಪ್ಪು ಆಡಳಿತದ ಚುಕ್ಕಾಣಿ ಹಿಡಿದಿದ್ದ ಬ್ರಾಹ್ಮಣರು ಏನು ಮಾಡಿದರು, ಎಷ್ಟು ಜಹಗೀರಿಗಳನ್ನು ಪಡೆದು ಆ ಭೂಮಿಯಲ್ಲಿ ಒಕ್ಕಲಿಗರಿಗೆ ಬೇಸಾಯ ಮಾಡಲು ಬಿಟ್ಟು ಗರ್ಭಗುಡಿಯಲ್ಲಿ ತಾವು ಆರಾಮವಾಗಿದ್ದು ಅವಸಾನ ಹೊಂದಿದರು ಎಂಬ ಸಂಗತಿ ಉರಿಗೌಡ ನಂಜೇಗೌಡರ ಸಂಗತಿಯೊಂದಿಗೆ ಈಚೆಬರಬೇಕಾಗಿದೆಯೆಲ್ಲಾ, ಥೂತ್ತೇರಿ.

****

ಈ ಜಗತ್ತಿಗೆ ಶ್ರೇಷ್ಠ ರಾಜಕೀಯ ವ್ಯವಸ್ಥೆ ಎಂದರೆ ಅದು ಪ್ರಜಾತಂತ್ರ. ಇಂತಹ ವ್ಯವಸ್ಥೆಯನ್ನು ದುರುಳವಾಗಿ ಬಳಸಿಕೊಂಡ ಬಿಜೆಪಿಗಳು ಏನೆಲ್ಲಾ ಅನಾಹುತ ಸಾಧ್ಯವೊ ಅದನ್ನೆಲ್ಲಾ ಮಾಡಿದರು. ಪ್ರಜಾತಂತ್ರ ವ್ಯವಸ್ಥೆಯಲ್ಲೇ ಚುನಾವಣೆಗೆ ಸ್ಪರ್ಧಿಸಿ ಗೆದ್ದುಬಂದು ತಮ್ಮ ಅಜೆಂಡಾಗಳನ್ನು ಕೈಗೆತ್ತಿಕೊಂಡರು. ಆರಂಭವೇ ರಥಯಾತ್ರೆ, ಇದು ಮುಗಿದನಂತರ ರಾಮಜ್ಯೋತಿ ಪಾದುಕೆ ಮತ್ತು ಇಟ್ಟಿಗೆ ಯಾತ್ರೆ ನಂತರ ಬಾಬರಿ ಮಸೀದಿಯನ್ನು ಕೆಡವಲಾಯ್ತು. ಅಲ್ಲಿಗೆ ಭಾರತದ ಪ್ರಜಾತಂತ್ರ ವ್ಯವಸ್ಥೆಯನ್ನೇ ಕೆಡವಿ ಕೋಮುಘರ್ಷಣೆಯನ್ನು ದೊಡ್ಡಮಟ್ಟದಲ್ಲಿ ಉದ್ಘಾಟಿಸಲಾಯ್ತು. ಅಂದಿನಿಂದ ನಿರಂತರವಾಗಿ ಮತೀಯ ಘರ್ಷಣೆ ನಡೆಸುತ್ತ, ಪ್ರಜಾತಂತ್ರ ಬಳಸಿಕೊಂಡು ಗೆದ್ದು ಬಂದು, ನಾವು ಸಂವಿಧಾನವನ್ನು ಬದಲಿಸಲು ಬಂದಿದ್ದೇವೆ ಎಂದು ಹೇಳಿದ ಸಂಸದನ ವಿರುದ್ಧ ಮೋದಿ ಮಾತನಾಡಲಿಲ್ಲ. ಇಲ್ಲಿನ ಶಿಕ್ಷಣ ಸಂಸ್ಥೆಗಳನ್ನು ಹಾಳುಮಾಡಿ ನ್ಯಾಯಾಂಗ ವ್ಯವಸ್ಥೆಯನ್ನು ಶಿಥಿಲಗೊಳಿಸಿ ದೇಶಕ್ಕೆ ಗಂಡಾಂತರ ತಂದಿರುವಾಗ ಆ ಬಗ್ಗೆ ಮಾತನಾಡಿದ ರಾಹುಲಗಾಂಧಿಗೇ ಪ್ರಜಾತಂತ್ರದಿಂದ ತೊಂದರೆಯಾಗಿದೆ ಎನ್ನುವ ಮೋದಿಯವರು ಪ್ರಜಾತಂತ್ರದ ಬುಡಕ್ಕೆ ಕೊಡಲಿ ಏಟು ಕೊಡುತ್ತ ಬಂದಿರುವುದು ಅರಿವಿಗೇ ಬಂದಿಲ್ಲವಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...