Homeಅಂಕಣಗಳುಸುಮಲತಾರದ್ದು ಈ ಶತಮಾನದ ಎರಡನೇ ದ್ರೋಹ

ಸುಮಲತಾರದ್ದು ಈ ಶತಮಾನದ ಎರಡನೇ ದ್ರೋಹ

- Advertisement -
- Advertisement -

ಮಂಡ್ಯ ಜಿಲ್ಲೆ ಜನತೆಗೆ ಸುಮಲತಾ ನಡೆ ಈ ಶತಮಾನದ ಎರಡನೇ ದ್ರೋಹವಾಗಿ ಕಾಣತೊಡಗಿದೆಯಂತಲ್ಲಾ. ಮೊದಲ ದ್ರೋಹ ಎಸ್.ಎಂ ಕೃಷ್ಣರದ್ದು. ಯಾರನ್ನು ಕೇಳಿದರೂ ತಾವು ಮೋಸ ಹೋದ ಮಾತು ಅವರಿಂದ ಹೊರಬರುತ್ತಿದೆ. ಇದಕ್ಕೆ ಅವರು ಕೊಡುವ ಕಾರಣ: ಸುಮಲತಾ ಚುನಾವಣೆ ಮುಗಿಯುವ ಹಂತದಲ್ಲಿ ಸೆರಗೊಡ್ಡಿ ಸ್ವಾಭಿಮಾನದ ಭಿಕ್ಷೆ ಬೇಡಿದರು; ಇದರಿಂದ ಕರಗಿಹೋದ ಮಂಡ್ಯದ ಜನ ತಮ್ಮ ಮನೆಯ ಮಗಳಾಗಿ ಸ್ವೀಕರಿಸಿದರು; ಅಂದು ಮುಖ್ಯಮಂತ್ರಿ ಮಗನೇ ಮೈತ್ರಿ ಸರ್ಕಾರದ ಅಭ್ಯರ್ಥಿಯಾದರೂ ಕಾಂಗ್ರೆಸ್ಸಿಗರು ಒಳಗೊಳಗೇ ಕೆಲಸ ಮಾಡಿದರು. ಭಾಷಾಭಿಮಾನಿಗಳು, ರೈತಸಂಘದವರು, ದಲಿತ ಸಂಘದ ಲೀಡರುಗಳು ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಸುಮಲತಾ ಒಂದೂಕಾಲು ಲಕ್ಷದ ಲೀಡು ಪಡೆದು ಗೆದ್ದರು. ಆದರೇನು ಗೆದ್ದ ಕ್ಷಣದಿಂದಲೇ ಅವರ ಒಡನಾಟ ಮನೆಹಾಳು ಬಿಜೆಪಿಗಳ ಜೊತೆ ಆರಂಭವಾಯ್ತು. ಈಗ ಅವರು ಹೆಚ್ಚುಕಮ್ಮಿ ಬಿಜೆಪಿ ಸೇರಿದಂತೆಯೇ ಅಂಬಂತೆ ಬಿಜೆಪಿಗೆ ಬಂಬಲ ಘೋಷಿಸಿರುವುದು ಕೂಡ ಸಕಾರಣವಾಗಿರದೆ ಇನ್ನ ವರ್ಷವಿರುವ ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಸೇರಿ ಮತದಾರರಿಗೆ ಆಘಾತ ನೀಡಿದ್ದಾರೆ. ಈಕೆಯನ್ನು ಬೆಂಬಲಿಸಿದ ಸಿನಿಮಾ ನಟರೂ ಕೂಡ ಮೋಸ ಹೋಗಿದ್ದಾರೆ. ಆದರೇನು ಇಂತಹ ಯಾವ ನೋವೂ ಅವರನ್ನು ಭಾಧಿಸಿದಂತಿಲ್ಲ. ಇವರ ಬಗ್ಗೆ ಅಪ್ರಭುದ್ಧವಾಗಿ ಮಾತನಾಡಿದ್ದ ರೇವಣ್ಣ, ಶಿವರಾಮೇಗೌಡರ ಮಾತುಗಳೇ ನಿಜವಾಗಿರುವ ಈ ಸಮಯದಲ್ಲಿ, ಶಿವರಾಮೇಗೌಡ ಸುಮಲತಾ ಒಂದೇ ವೇದಿಕೆಗೆ ಬಂದರಲ್ಲಾ ಥೂತ್ತೇರಿ.

*****

ಇದ್ದಕ್ಕಿದ್ದಂತೆ ಮಂಡ್ಯ ಜಿಲ್ಲೆಯ ಉರಿಗೌಡ, ನಂಜೇಗೌಡರ ಬಗ್ಗೆ ವಕಾಲತ್ತು ವಹಿಸಿರುವ ಶೋಭಾ ಕರಂದ್ಲಾಜೆ ಎಂಬ ಸಂಶೋಧಕಿ ಎಡೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಬಲಗೈನಂತಿದ್ದವರು. ನೂರು ವರ್ಷದ ಇತಿಹಾಸವಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು (ವಿಐಎಸ್‌ಎಲ್) ಕೇಂದ್ರ ಸರಕಾರ ಮುಚ್ಚಿ ಒಂದು ಸಾವಿರ ಕುಟುಂಬಗಳು ಬೀದಿಗೆ ಬಿದ್ದಾಗ ಇವರು ಮಾತನಾಡಲಿಲ್ಲ. ವಿಐಎಸ್‌ಎಲ್ ಮುಚ್ಚಲು ಸಹಕರಿಸಿದ ಶಿವಮೊಗ್ಗದ ರಾಜಕಾರಣಿಗಳ ಮನಸ್ಸಿನ ಹಿಂದೆ ಇದ್ದ ಕುತ್ಸಿತ ಭಾವನೆಗಳು ಹಲವು: ಭದ್ರಾವತಿ ಹಿಂದಿನಿಂದ ಕಾಂಗ್ರೆಸ್ಸನ್ನು ಬೆಂಬಲಿಸಿಕೊಂಡು ಬಂದ ಕ್ಷೇತ್ರ; ಅಲ್ಲಿಗೆ ಶಿವಮೊಗ್ಗದ ಯಾವ ಮತೀಯ ಕಾಯಿಲೆಗಳೂ ತಲುಪಲಿಲ್ಲ. ಅಲ್ಲಿನ ಎಂಪಿಎಂ (ಮೈಸೂರು ಪೇಪರ್ ಮಿಲ್ಸ್) ಮತ್ತು ವಿಐಎಸ್‌ಎಲ್‌ನಲ್ಲಿನ ಬಹುತೇಕ ಕಾರ್ಮಿಕರೆಲ್ಲಾ ಒಕ್ಕಲಿಗರು. ಇವರ ಬಗ್ಗೆ ಮೊದಲಿನಿಂದಲೂ ಎಡೂರಪ್ಪನವರ ಟೀಮಿಗೆ ತಾತ್ಸಾರ. ಅದೇನೇ ಇರಲಿ ಮಂಡ್ಯಕ್ಕೆ ಬಂದು ಉರಿಗೌಡ ನಂಜೇಗೌಡರ ಬಗ್ಗೆ ಸಂಶೋಧನೆಗೆ ತೊಡಗಿರುವ ಈ ಶೋಭಾ ಕರಂದ್ಲಾಜೆ ನೂರುವರ್ಷದ ಇತಿಹಾಸವಿರುವ ವಿಐಎಸ್‌ಎಲ್ ಬಗ್ಗೆ ಈವರೆಗೂ ಚಕಾರವೆತ್ತದಿರುವುದು ಭದ್ರಾವತಿ ಜನರಿಗೆ ಬಗೆದಿರುವ ದ್ರೋಹವೆಂದು ಅರಿವು ಮಾಡಿಕೊಡಬೇಕಿದೆಯಲ್ಲಾ, ಥೂತ್ತೇರಿ.

ಇದನ್ನೂ ಓದಿ: ಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

ಇತಿಹಾಸದ ಸಮಾಧಿ ಅಗೆದು ಅಲ್ಲಿನ ಸತ್ಯಸಂಗತಿಗಳನ್ನು ಮರೆಮಾಡಿ ತಮಗೆ ಬೇಕಿರುವುದನ್ನು ಸೃಷ್ಟಿಸಿ ಸುಳ್ಳು ಹೇಳುತ್ತ ಹೋಗುವುದು ಬಿಜೆಪಿಗಳ ಹಳೆಯ ಚಾಳಿ. ಅದರಂತೆ ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನ ಬದಿಗೊತ್ತಿ ಉರಿ ಹಿಡಿದು ನಂಜುಕಾರುತ್ತ ಹೊರಟಿವೆ. ಸಂಶೋಧಕ ಹ.ಕ.ರಾಜೇಗೌಡರು ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಆಡಳಿತದ ವಿರುದ್ಧ ದಂಗೆ ಎದ್ದರು ಎಂಬ ಸಾಲನ್ನು ಹಿಡಿದುಹೊರಟಿರುವ ಬಿಜೆಪಿಯ ಮಂದಮತಿಗಳು ಒಂದಿಷ್ಟು ಧ್ಯಾನಿಸಿ ಸತ್ಯಸಂಗತಿಯನ್ನು ಗ್ರಹಿಸಿದ್ದಾರೆ. ಟಿಪ್ಪು ಸಂಪುಟದಲ್ಲಿದ್ದ ಎಂಟು ಜನ ಮಂತ್ರಿಗಳಲ್ಲಿ ಐವರು ಬ್ರಾಹ್ಮಣರಿದ್ದರು. ಅದರಲ್ಲಿ ದಿವಾನ್ ಪೂರ್ಣಯ್ಯನೂ ಬ್ರಾಹ್ಮಣ; ಇವರ ಆಣತಿಯಂತೇ ಆಡಳಿತ ನಡೆದಿದೆ. ಆ ಸಮಯದಲ್ಲಿ ಇವರುಗಳ ವರ್ಗವೆಲ್ಲಾ ಸವಲತ್ತಿನಿಂದ ಸಂತೃಪ್ತವಾಗಿದೆ. ಆದಕಾರಣ ವಿರೋಧ ವ್ಯಕ್ತವಾಗಿದೆ; ಟಿಪ್ಪು ಆಡಳಿತದ ಚುಕ್ಕಾಣಿ ಹಿಡಿದಿದ್ದ ಬ್ರಾಹ್ಮಣರು ಏನು ಮಾಡಿದರು, ಎಷ್ಟು ಜಹಗೀರಿಗಳನ್ನು ಪಡೆದು ಆ ಭೂಮಿಯಲ್ಲಿ ಒಕ್ಕಲಿಗರಿಗೆ ಬೇಸಾಯ ಮಾಡಲು ಬಿಟ್ಟು ಗರ್ಭಗುಡಿಯಲ್ಲಿ ತಾವು ಆರಾಮವಾಗಿದ್ದು ಅವಸಾನ ಹೊಂದಿದರು ಎಂಬ ಸಂಗತಿ ಉರಿಗೌಡ ನಂಜೇಗೌಡರ ಸಂಗತಿಯೊಂದಿಗೆ ಈಚೆಬರಬೇಕಾಗಿದೆಯೆಲ್ಲಾ, ಥೂತ್ತೇರಿ.

****

ಈ ಜಗತ್ತಿಗೆ ಶ್ರೇಷ್ಠ ರಾಜಕೀಯ ವ್ಯವಸ್ಥೆ ಎಂದರೆ ಅದು ಪ್ರಜಾತಂತ್ರ. ಇಂತಹ ವ್ಯವಸ್ಥೆಯನ್ನು ದುರುಳವಾಗಿ ಬಳಸಿಕೊಂಡ ಬಿಜೆಪಿಗಳು ಏನೆಲ್ಲಾ ಅನಾಹುತ ಸಾಧ್ಯವೊ ಅದನ್ನೆಲ್ಲಾ ಮಾಡಿದರು. ಪ್ರಜಾತಂತ್ರ ವ್ಯವಸ್ಥೆಯಲ್ಲೇ ಚುನಾವಣೆಗೆ ಸ್ಪರ್ಧಿಸಿ ಗೆದ್ದುಬಂದು ತಮ್ಮ ಅಜೆಂಡಾಗಳನ್ನು ಕೈಗೆತ್ತಿಕೊಂಡರು. ಆರಂಭವೇ ರಥಯಾತ್ರೆ, ಇದು ಮುಗಿದನಂತರ ರಾಮಜ್ಯೋತಿ ಪಾದುಕೆ ಮತ್ತು ಇಟ್ಟಿಗೆ ಯಾತ್ರೆ ನಂತರ ಬಾಬರಿ ಮಸೀದಿಯನ್ನು ಕೆಡವಲಾಯ್ತು. ಅಲ್ಲಿಗೆ ಭಾರತದ ಪ್ರಜಾತಂತ್ರ ವ್ಯವಸ್ಥೆಯನ್ನೇ ಕೆಡವಿ ಕೋಮುಘರ್ಷಣೆಯನ್ನು ದೊಡ್ಡಮಟ್ಟದಲ್ಲಿ ಉದ್ಘಾಟಿಸಲಾಯ್ತು. ಅಂದಿನಿಂದ ನಿರಂತರವಾಗಿ ಮತೀಯ ಘರ್ಷಣೆ ನಡೆಸುತ್ತ, ಪ್ರಜಾತಂತ್ರ ಬಳಸಿಕೊಂಡು ಗೆದ್ದು ಬಂದು, ನಾವು ಸಂವಿಧಾನವನ್ನು ಬದಲಿಸಲು ಬಂದಿದ್ದೇವೆ ಎಂದು ಹೇಳಿದ ಸಂಸದನ ವಿರುದ್ಧ ಮೋದಿ ಮಾತನಾಡಲಿಲ್ಲ. ಇಲ್ಲಿನ ಶಿಕ್ಷಣ ಸಂಸ್ಥೆಗಳನ್ನು ಹಾಳುಮಾಡಿ ನ್ಯಾಯಾಂಗ ವ್ಯವಸ್ಥೆಯನ್ನು ಶಿಥಿಲಗೊಳಿಸಿ ದೇಶಕ್ಕೆ ಗಂಡಾಂತರ ತಂದಿರುವಾಗ ಆ ಬಗ್ಗೆ ಮಾತನಾಡಿದ ರಾಹುಲಗಾಂಧಿಗೇ ಪ್ರಜಾತಂತ್ರದಿಂದ ತೊಂದರೆಯಾಗಿದೆ ಎನ್ನುವ ಮೋದಿಯವರು ಪ್ರಜಾತಂತ್ರದ ಬುಡಕ್ಕೆ ಕೊಡಲಿ ಏಟು ಕೊಡುತ್ತ ಬಂದಿರುವುದು ಅರಿವಿಗೇ ಬಂದಿಲ್ಲವಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...