Homeಅಂಕಣಗಳುಮತದಾರ ಕೊಟ್ಟ ಪೆಟ್ಟು ಮುಟ್ಟಿ ನೋಡಿಕೊಳ್ಳುವಂತಿದೆಯಲ್ಲಾ...

ಮತದಾರ ಕೊಟ್ಟ ಪೆಟ್ಟು ಮುಟ್ಟಿ ನೋಡಿಕೊಳ್ಳುವಂತಿದೆಯಲ್ಲಾ…

- Advertisement -
- Advertisement -

ಕರ್ನಾಟಕದ ಜನಸ್ತೋಮ ಮತಪೆಟ್ಟಿಗೆಯ ಮುಖಾಂತರ ಕೊಟ್ಟ ಏಟು ಮುಟ್ಟಿ ನೋಡಿಕೊಳ್ಳುವಂತಿದೆಯಲ್ಲಾ. ಹಾಗೆ ನೋಡಿದರೆ ಮುಟ್ಟಿ ನೋಡಿಕೊಳ್ಳುವವರ ಪಟ್ಟಿ ದೊಡ್ಡದಾಗಿದೆ. ಈ ಪೈಕಿ ಹೊಟ್ಟೆಪಾಡಿನ ಜ್ಯೋತಿಷಿಗಳು ಫಲಿತಾಂಶ ಬಂದಾಗ ಮನೆ ಬಾಗಿಲು ಹಾಕಿಕೊಂಡವರು ಇನ್ನೂ ತೆಗೆದಿಲ್ಲವಂತಲ್ಲಾ. ಆ ಪೈಕಿ ಪುರೋಹಿತಶಾಹಿ ಜ್ಯೋತಿಷಿಯೊಬ್ಬ ಹಣೆ ಮೈಗೆಲ್ಲಾ ತರೇವಾರಿ ಬಣ್ಣ ಬಳಿದುಕೊಂಡು, ’ಮೋದಿ ಜಾತಕ ಕುಂಡಲಿಯನ್ನು ನಾನು ಪರಿಶೀಲಿಸಿದಾಗ, ಅವರು ಹದಿನೆಂಟು ಗುಣಗಳುಳ್ಳ ನಾಯಕ, ಅವರು ಕರ್ನಾಟಕವನ್ನು ಪ್ರದಕ್ಷಿಣೆ ಮಾಡಿರುವುದರ ಪ್ರಯುಕ್ತ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗದ್ದುಗೆ ಏರಲಿದೆ’ ಎಂದಿದ್ದ. ಮತ್ತೊಬ್ಬ ನೆಲದ ಜಲ ಪತ್ತೆಹಚ್ಚುವಂತಹ ಸ್ಕೇಲು ತಯಾರಿಸಿಕೊಂಡು ಮೂರೂ ಪಾರ್ಟಿಯ ಚಿಹ್ನೆಯ ಮೇಲೆ ಹಿಡಿದಿದ್ದ ಆ ಸ್ಕೇಲು ಬಿಜೆಪಿಯ ಕಮಲದ ಎದುರು ಬಾಗಿತು ನೋಡಿ, ಬಿಜೆಪಿ ಬಿಟ್ಟು ಇನ್ನಾವ ಪಾರ್ಟಿಯೂ ಮೆಜಾರಿಟಿ ಪಡಿಯೋದಿಲ್ಲ ಎಂದ. ಮತ್ತೊಬ್ಬ ಹುಚ್ಚನಂತಿದ್ದ ಜ್ಯೋತಿಷಿ ಲಡಾಸು ಕಾರಿನ ಲೈಟಿನಂತಿದ್ದ ಎರಡು ಬಲ್ಪುಗಳ ಹಿಡಿಕೆ ತೋರಿಸಿ ತನ್ನ ಕಡೆಗೆ ತಿರುಗಿಸಿಕೊಂಡು ನೋಡಿ, ನನ್ನ ಅಂತರಾತ್ಮದಲ್ಲಿ ಕಮಲ ಮೂಡುತ್ತಿದೆ ಆದ್ದರಿಂದ ಈ ಚುನಾವಣೆ ನಂತರ ಕಮಲ ಅರಳಲಿದೆ ಎಂದ. ಈಗ ಇವರೆಲ್ಲರೂ ಬಾಗಿಲು ಬಂದ್ ಮಾಡಿಕೊಂಡು ಒಳಗಿದ್ದರೂ, ಯಾರಾದರೂ ಬಂದು ಬಾಗಿಲು ತಟ್ಟಿದರೆ ಧ್ವನಿ ಬದಲಿಸಿಕೊಂಡು ಅವರಿಲ್ಲಾ ಎನ್ನುತ್ತಿದ್ದಾರಲ್ಲಾ, ಥೂತ್ತೇರಿ.

*****

ಕರ್ನಾಟಕದ ಮತದಾರ ಕೊಟ್ಟ ಉತ್ತರದಲ್ಲಿ ಪ್ರಧಾನಿಯಾದವರು ಹೀಗೆ ನಡೆದುಕೊಳ್ಳಬಾರದೆಂಬ ಎಚ್ಚರಿಕೆಯಿದ್ದರೆ, ಇನ್ನು ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಹಚ್ಚಲು ಬಂದ ಶಾ, ಚುನಾವಣೆ ನಂತರ ಇಲ್ಲಿ ಗಲಭೆ ಏಳುತ್ತದೆ ಎಂದು ಧಮಕಿ ಹಾಕಿದ್ದರು. ಗೆಲ್ಲಲೋಸ್ಕರ ಯಾವ ಮಾತನ್ನಾದರೂ ಆಡುವ, ಏನನ್ನಾದರೂ ಮಾಡುವ ಶಾನ ಮಾತಾಗಲಿ, ತಂತ್ರವಾಗಲಿ ಕರ್ನಾಟಕದಲ್ಲಿ ಕೆಲಸ ಮಾಡಲಿಲ್ಲ. ಇನ್ನು ಚುನಾವಣೆ ಮುಗಿದ ಕೂಡಲೇ ತನ್ನನ್ನು ಯಾರಾದರೂ ಕರೆಸಿಕೊಳ್ಳುತ್ತಾರೆ ಎಂದು ಭಾವಿಸಿ ಸಿಂಗಾಪುರಕ್ಕೆ ಹಾರಿದ್ದ ಕುಮಾರಣ್ಣನಿಗೆ ಯಾವ ಜ್ಞಾನೋದಯವಾಯ್ತೋ ಏನೋ, ಒಂದೇ ಉಸುರಿಗೆ ಓಡಿಬಂದರೆ ಯಾರೂ ಮನೆಬಾಗಿಲಿಗೆ ಬಾರದಂತಾಗಿತ್ತಲ್ಲಾ. ಬಿಜೆಪಿಗಳು ಆಪರೇಷನ್ ಕಮಲದ ಸೊಲ್ಲೆತ್ತದಂತೆ ಮಾಡಿ, ಕುಮಾರಣ್ಣನ ಮನೆ ಬಾಗಿಲಿಗೆ ಯಾರೂ ಬರದಂತೆ ಮಾಡಿರುವ ಕರ್ನಾಟಕದ ಮತದಾರ ಇಡೀ ದೇಶಕ್ಕೆ ಬಂದು ದಿಕ್ಸೂಚಿಯನ್ನೆ ನೀಡಿದ್ದಾನಲ್ಲಾ. ಯಾವುದೇ ಚುನಾವಣೆಯಲ್ಲಿ ಕೆಲ ಅನಾಹುತಗಳು ನಡೆಯುತ್ತವೆ, ಅಂತಹ ಅನಾಹುತಗಳ ಪೈಕಿ ಶೆಟ್ಟರ್, ರಮೇಶ್‌ಕುಮಾರ್ ಮತ್ತು ಕಿಮ್ಮನೆ ರತ್ನಾಕರ್ ಸೋಲು ಕೂಡ ಸೇರಿವೆ. ಹುಬ್ಬಳ್ಳಿಯಲ್ಲಿ ಬಿಜೆಪಿ ಬೇರೂರುವಂತೆ ಮಾಡಿದ ಶೆಟ್ಟರ್‌ಗೆ ಬಿಜೆಪಿ ಬೇರನ್ನು ಅಲ್ಲಾಡಿಸಲಾಗಲಿಲ್ಲ, ಆದರೂ ಅವರ ಬಂಡಾಯ ಬೇರೆ ತರದ ಕೆಲಸ ಮಾಡಿದೆ. ಇನ್ನು ರಮೇಶ್ ಕುಮಾರ್ ಸೋಲಿಸಲು ಬಹಳ ದಿನಗಳಿಂದ ಕೆಲವರು ಕಾಯುತ್ತಿದ್ದರು. ಇನ್ನು ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ಸೋಲೂ ಇಡೀ ಕ್ಷೇತ್ರದ ಸೋಲಾಯಿತಂತಲ್ಲಾ, ಥೂತ್ತೇರಿ.

*****

ಈ ಚುನಾವಣೆಯ ಫಲಿತಾಂಶದಲ್ಲಿ ನಗಾಡುವ ಪ್ರಸಂಗಗಳೂ ನಡೆದಿವೆಯಲ್ಲಾ. ಹಿಂದಿನ ಸರಕಾರನ ಹ್ಯಂಗೋ ನಿಭಾಯಿಸಿ ದಡ ಮುಟ್ಟಿಸಿ ಮನಿಗೋಗನ ಎಂದಿದ್ದ ಮಾಧುಸ್ವಾಮಿಯನ್ನು ಜನ ಮನೆಗೆ ಕಳಿಸಿದ್ದಾರೆ. ಹಾಗೆಯೇ ಮುಸ್ಲಿಮರ ವಿಷಯದಲ್ಲಿ ತೀರ ತಲೆಕೆಡಿಸಿಕೊಂಡಿದ್ದ ಸಿ.ಟಿ ರವಿ, ಸಿದ್ದರಾಮಯ್ಯನವರನ್ನ ಸಿದ್ರಾಮುಲ್ಲಖಾನ್ ಎಂದು ಹೋದಲೆಲ್ಲಾ ಟೀಕಿಸಿ ಚಪ್ಪಾಳೆ ಗಿಟ್ಟಿಸುತ್ತಿದ್ದ. ಆ ಸಮಯದಲ್ಲಿ ಯಾರೋ ಒಬ್ಬ, ಕುಡಿದು ಚಿತ್ತಾಗಿ ರಸ್ತೆ ಬದಿಯಲ್ಲಿ ಅಂಗಾತ ಕುಸಿದಿದ್ದ ವ್ಯಕ್ತಿಯೊಬ್ಬನ ತಲೆಗೆ ಸಿ.ಟಿ ರವಿ ತಲೆ ಅಂಟಿಸಿ ವಾಟ್ಸಾಪಿಗೆ ಬಿಟ್ಟು ಮೆಚ್ಚುಗೆಗಳಿಸಿದ್ದ. ಆ ಸಮಯದಲ್ಲೇ ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತನೊಬ್ಬ ಈಗಲೂ ಸಿ.ಟಿ ರವಿ ಆರು ಸಾವಿರ ಓಟಿನಲ್ಲಿ ಗೆಲ್ಲುತ್ತಾರೆ ಎಂದಿದ್ದ. ಅದೇ ಆರುಸಾವಿರ ವೋಟಿನಲ್ಲಿ ಸಿ.ಟಿ ರವಿ ಸೋತಿದ್ದಕ್ಕೆ ಚಿಕ್ಕಮಗಳೂರಿನ ಕಾರ್ಯಕರ್ತರು ಗೆದ್ದ ಅಭ್ಯರ್ಥಿ ತಮ್ಮಯ್ಯನಿಗೆ ಕ್ಷೀರಾಭಿಷೇಕ ಮಾಡುವುದು ಬಿಟ್ಟು, ಭೊಜೇಗೌಡರಿಗೆ ಹಾಲಿನಾಭಿಷೇಕ ಮಾಡಿದ್ದಾರಲ್ಲಾ. ಏಕೆಂದರೆ ಕುಮಾರಣ್ಣನ ಬಲಗೈಯಾಗಿರುವ ಭೊಜೇಗೌಡರಿಗೆ ಚುನಾವಣೆಯಲ್ಲಿ ಗೆಲ್ಲುವ ಶಕ್ತಿಯಿಲ್ಲ, ಆದರೆ ಯಾರನ್ನಾದರೂ ಸೋಲಿಸುವ ಶಕ್ತಿಯಿದೆ. ಇದನ್ನರಿತ ಚಿಕ್ಕಮಗಳೂರು ಜನ ಭೋಜೇಗೌಡರಿಗೆ ಕ್ಷೀರಾಭಿಷೇಕ ಮಾಡಿದ್ದಾರಲ್ಲಾ, ಥೂತ್ತೇರಿ.

ಇದನ್ನೂ ಓದಿ: ಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

ಚಿಕ್ಕಮಗಳೂರು ಪ್ರದೇಶದಲ್ಲಿ ಕುಡಚಿ ಕ್ಷೇತ್ರದ ಶಾಸಕ ಶಾನೆ ಓಡಾಡುತ್ತಿದ್ದ; ಆತನ ಸುದ್ದಿ ಶಾನೆ ಕುತೂಹಲವಾಗಿದೆ. ಕುಡಚಿ ಕ್ಷೇತ್ರದ ರಾಜಕಾರಣ ಗ್ರಹಿಸಿದ ಆತ ತನ್ನ ಪೊಲೀಸ್ ಕೆಲಸಕ್ಕೆ ರಾಜೀನಾಮೆ ಬರೆದು ಚುನಾವಣೆಗೆ ನಿಂತ ಸೋತ ನಂತರ ರಾಮುಲು ಪಕ್ಷದಿಂದ ಗೆದ್ದು ನಂತರ ಬಿಜೆಪಿ ಸೇರಿದ. ಆಗ ಆತನಿಗೆ ಇನ್ನಿಲ್ಲದ ಉತ್ಸಾಹ ಅಮಲೇರಿ ಲಂಬಾಣಿಗರನ್ನೆಲ್ಲಾ ಸಂಘಟಿಸಿ ಬಿಜೆಪಿಗೆ ಎಳೆಯತೊಡಗಿದ. ಇದನ್ನರಿತ ಸಿ.ಟಿ ರವಿ ಕುಡಚಿ ಶಾಸಕನನ್ನು ಚಿಕ್ಕಮಗಳೂರಿಗೆ ಕರೆಸಿ ಲಂಬಾಣಿಗರ ಭೇಟಿ ಮಾಡಿಸಿದ ಮೇಲೆ ಅವರೆಲ್ಲಾ ಬಿಜೆಪಿಗೆ ಓಟು ಮಾಡುತ್ತಾರೆಂದು ಭಾವಿಸಿದ. ಆದರೆ ಈಗ ಕುಡಚಿ ಶಾಸಕ ರಾಜೀವ್‌ನನ್ನು ಜನ ಮನೆಗೆ ಕಳಿಸಿದ್ದಾರೆ. ಶತಮಾನಗಳಿಂದ ಪಾಂಡ್ಯಾದಲ್ಲಿ ಬದುಕಿದ್ದ ಲಂಬಾಣಿಗರ ತಾಂಡಾಗಳನ್ನು ರೆವಿನ್ಯೂ ಗ್ರಾಮ ಮಾಡಿದ್ದು ಕಾಂಗ್ರೆಸ್ ಸರಕಾರ. ಆದರೆ ಎಲ್ಲಾ ದಮನಿತ ಜಾತಿಗಳ ಬಗ್ಗೆಯೂ ಹುಸಿಯಾದ ಕಾಳಜಿ ತೋರಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ಪಡಸಾಲೆಯಲ್ಲಿ ಮಫ್ತಿ ಪೊಲೀಸನಂತೆ ಓಡಾಡುತ್ತಿದ್ದ ರಾಜೀವನನ್ನು ಜನ ಆತನ ಊರಿಗೆ ಕಳಿಸಿದ್ದಾರೆ. ಏಕೆಂದರೆ ಈತ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡಿದ್ದು ಸುದ್ದಿಯಾಗಿತ್ತು. ಈತ ಇಷ್ಟು ಬೇಗೆ ಹಾಳಾಗಬಾರದಿತ್ತು ಎಂಬುದು ಕುಡಚಿ ಜನರ ಕುಹಕವಾಗಿದೆಯಲ್ಲಾ, ಥೂತ್ತೇರಿ.

*****

ಈ ನಡುವೆ ಹರಪ್ಪನಹಳ್ಳಿ ಜನ ಎಂ.ಪಿ ಪ್ರಕಾಶ್ ಮಗಳಾದ ಲತಾರನ್ನು ಗೆಲ್ಲಿಸಿ ಪ್ರಾಯಶ್ಚಿತ್ತ ಮಾಡಿಕೊಂಡಿದ್ದಾರೆ. ಹಿಂದೆ ಹರಪ್ಪನಹಳ್ಳಿ ಜನ ಎಂ.ಪಿ ಪ್ರಕಾಶರನ್ನು ಸೋಲಿಸಿದ್ದರು ಅವರ ಮಗ ಎಂ.ಪಿ ರವಿಯನ್ನು ಸೋಲಿಸಿದ್ದರು. ಆಸ್ಪತ್ರೆಯಲ್ಲಿದ್ದರೂ ಹರಪ್ಪನಹಳ್ಳಿಯನ್ನು 371(ಜೆ)ಗೆ ಸೇರಿಸಲು ಹೋರಾಡಿ ಕೊನೆಯುಸಿರೆಳೆದ ರವಿಯ ಬಗ್ಗೆ ಹರಪ್ಪನಹಳ್ಳಿ ಜನಕ್ಕೆ ಏನನ್ನಿಸಿತೋ ಏನೋ ಕಾಂಗ್ರೆಸ್ ಟಿಕೆಟ್ ಸಿಗದೆ ಪಕ್ಷೇತರವಾಗಿ ನಿಂತ ಲತಾರನ್ನ ಗೆಲ್ಲಿಸಿದ್ದಾರೆ. ಹರಪ್ಪನಹಳ್ಳಿ ಸೊಸೆಯಾದ ಲತಾರಲ್ಲಿ ಪ್ರಕಾಶರ ಗುಣಗಳಿವೆ, ಆದ್ದರಿಂದಲೇ ಗೆದ್ದು ಬಂದಿರುವುದು. ಇನ್ನು ಮಡಿಕೇರಿ ವಿರಾಜಪೇಟೆಯ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಈ ನೆಲದಿಂದ ಬಂದ ಅಡ್ಡಂಡ ಹೆಸರಿನ ವ್ಯಕ್ತಿಯೊಬ್ಬ ಆಘಾತಗೊಂಡು ರಾಜೀನಾಮೆ ಬರೆದಿದ್ದಾನೆ. ಮೈಸೂರು ರಂಗಾಯಣದ ಪಾವಿತ್ರ್ಯ ಕಾಪಾಡುವುದು ಕಲಾವಿದರ ಕರ್ತವ್ಯ. ಐದು ವರ್ಷಗಳ ನಂತರ ಮುಸ್ಲಿಂ ರಾಜಕಾರಣಿಗಳು ವಿಧಾನಸೌಧದ ಕಾರಿಡಾರ್‌ನಲ್ಲಿ ಕಾಣುತ್ತಿದ್ದಾರೆ. ಎಲ್ಲರನ್ನೂ ಒಳಗೊಂಡು ಬೆಳೆಸಬೇಕಾದ ಪ್ರಜಾಪ್ರಭುತ್ವದ ಮಹಾವೃಕ್ಷದಲ್ಲಿ ಮುಸ್ಲಿಮರು ಬಾರದಂತೆ ನೋಡಿಕೊಂಡ ಬಿಜೆಪಿಗಳು ಇತಿಹಾಸದಲ್ಲಿ ಅಕ್ಷಮ್ಯ ಅಪರಾಧವೆಸಗಿದ್ದಾರೆ. ಈ ಬಿಜೆಪಿಗಳ ಮನಸ್ಸಿನಾಳದಲ್ಲಿ ದಲಿತರ ದ್ವೇಷವೂ ಇದೆ. ಆದರೆ ಸದ್ಯಕ್ಕೆ ಅದನ್ನ ತೋಗೊಡುವುದಿಲ್ಲ. ಈಗ ಹಠಾತ್ತನೆ ಕಲೆ, ಸಾಹಿತ್ಯ, ಸಂಗೀತ ಪುಸ್ತಕಗಳೆಲ್ಲಾ ಅರ್ಥಪೂರ್ಣವಾಗಿ ಕಾಣತೊಡಗಿವೆಯಲ್ಲಾ, ಈ ಯಕ್ಷಣಿಗೆ ವಿಸ್ಮಯವಾಗುತ್ತಿದೆಯಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...