Homeಅಂಕಣಗಳುಮತದಾರ ಕೊಟ್ಟ ಪೆಟ್ಟು ಮುಟ್ಟಿ ನೋಡಿಕೊಳ್ಳುವಂತಿದೆಯಲ್ಲಾ...

ಮತದಾರ ಕೊಟ್ಟ ಪೆಟ್ಟು ಮುಟ್ಟಿ ನೋಡಿಕೊಳ್ಳುವಂತಿದೆಯಲ್ಲಾ…

- Advertisement -
- Advertisement -

ಕರ್ನಾಟಕದ ಜನಸ್ತೋಮ ಮತಪೆಟ್ಟಿಗೆಯ ಮುಖಾಂತರ ಕೊಟ್ಟ ಏಟು ಮುಟ್ಟಿ ನೋಡಿಕೊಳ್ಳುವಂತಿದೆಯಲ್ಲಾ. ಹಾಗೆ ನೋಡಿದರೆ ಮುಟ್ಟಿ ನೋಡಿಕೊಳ್ಳುವವರ ಪಟ್ಟಿ ದೊಡ್ಡದಾಗಿದೆ. ಈ ಪೈಕಿ ಹೊಟ್ಟೆಪಾಡಿನ ಜ್ಯೋತಿಷಿಗಳು ಫಲಿತಾಂಶ ಬಂದಾಗ ಮನೆ ಬಾಗಿಲು ಹಾಕಿಕೊಂಡವರು ಇನ್ನೂ ತೆಗೆದಿಲ್ಲವಂತಲ್ಲಾ. ಆ ಪೈಕಿ ಪುರೋಹಿತಶಾಹಿ ಜ್ಯೋತಿಷಿಯೊಬ್ಬ ಹಣೆ ಮೈಗೆಲ್ಲಾ ತರೇವಾರಿ ಬಣ್ಣ ಬಳಿದುಕೊಂಡು, ’ಮೋದಿ ಜಾತಕ ಕುಂಡಲಿಯನ್ನು ನಾನು ಪರಿಶೀಲಿಸಿದಾಗ, ಅವರು ಹದಿನೆಂಟು ಗುಣಗಳುಳ್ಳ ನಾಯಕ, ಅವರು ಕರ್ನಾಟಕವನ್ನು ಪ್ರದಕ್ಷಿಣೆ ಮಾಡಿರುವುದರ ಪ್ರಯುಕ್ತ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗದ್ದುಗೆ ಏರಲಿದೆ’ ಎಂದಿದ್ದ. ಮತ್ತೊಬ್ಬ ನೆಲದ ಜಲ ಪತ್ತೆಹಚ್ಚುವಂತಹ ಸ್ಕೇಲು ತಯಾರಿಸಿಕೊಂಡು ಮೂರೂ ಪಾರ್ಟಿಯ ಚಿಹ್ನೆಯ ಮೇಲೆ ಹಿಡಿದಿದ್ದ ಆ ಸ್ಕೇಲು ಬಿಜೆಪಿಯ ಕಮಲದ ಎದುರು ಬಾಗಿತು ನೋಡಿ, ಬಿಜೆಪಿ ಬಿಟ್ಟು ಇನ್ನಾವ ಪಾರ್ಟಿಯೂ ಮೆಜಾರಿಟಿ ಪಡಿಯೋದಿಲ್ಲ ಎಂದ. ಮತ್ತೊಬ್ಬ ಹುಚ್ಚನಂತಿದ್ದ ಜ್ಯೋತಿಷಿ ಲಡಾಸು ಕಾರಿನ ಲೈಟಿನಂತಿದ್ದ ಎರಡು ಬಲ್ಪುಗಳ ಹಿಡಿಕೆ ತೋರಿಸಿ ತನ್ನ ಕಡೆಗೆ ತಿರುಗಿಸಿಕೊಂಡು ನೋಡಿ, ನನ್ನ ಅಂತರಾತ್ಮದಲ್ಲಿ ಕಮಲ ಮೂಡುತ್ತಿದೆ ಆದ್ದರಿಂದ ಈ ಚುನಾವಣೆ ನಂತರ ಕಮಲ ಅರಳಲಿದೆ ಎಂದ. ಈಗ ಇವರೆಲ್ಲರೂ ಬಾಗಿಲು ಬಂದ್ ಮಾಡಿಕೊಂಡು ಒಳಗಿದ್ದರೂ, ಯಾರಾದರೂ ಬಂದು ಬಾಗಿಲು ತಟ್ಟಿದರೆ ಧ್ವನಿ ಬದಲಿಸಿಕೊಂಡು ಅವರಿಲ್ಲಾ ಎನ್ನುತ್ತಿದ್ದಾರಲ್ಲಾ, ಥೂತ್ತೇರಿ.

*****

ಕರ್ನಾಟಕದ ಮತದಾರ ಕೊಟ್ಟ ಉತ್ತರದಲ್ಲಿ ಪ್ರಧಾನಿಯಾದವರು ಹೀಗೆ ನಡೆದುಕೊಳ್ಳಬಾರದೆಂಬ ಎಚ್ಚರಿಕೆಯಿದ್ದರೆ, ಇನ್ನು ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಹಚ್ಚಲು ಬಂದ ಶಾ, ಚುನಾವಣೆ ನಂತರ ಇಲ್ಲಿ ಗಲಭೆ ಏಳುತ್ತದೆ ಎಂದು ಧಮಕಿ ಹಾಕಿದ್ದರು. ಗೆಲ್ಲಲೋಸ್ಕರ ಯಾವ ಮಾತನ್ನಾದರೂ ಆಡುವ, ಏನನ್ನಾದರೂ ಮಾಡುವ ಶಾನ ಮಾತಾಗಲಿ, ತಂತ್ರವಾಗಲಿ ಕರ್ನಾಟಕದಲ್ಲಿ ಕೆಲಸ ಮಾಡಲಿಲ್ಲ. ಇನ್ನು ಚುನಾವಣೆ ಮುಗಿದ ಕೂಡಲೇ ತನ್ನನ್ನು ಯಾರಾದರೂ ಕರೆಸಿಕೊಳ್ಳುತ್ತಾರೆ ಎಂದು ಭಾವಿಸಿ ಸಿಂಗಾಪುರಕ್ಕೆ ಹಾರಿದ್ದ ಕುಮಾರಣ್ಣನಿಗೆ ಯಾವ ಜ್ಞಾನೋದಯವಾಯ್ತೋ ಏನೋ, ಒಂದೇ ಉಸುರಿಗೆ ಓಡಿಬಂದರೆ ಯಾರೂ ಮನೆಬಾಗಿಲಿಗೆ ಬಾರದಂತಾಗಿತ್ತಲ್ಲಾ. ಬಿಜೆಪಿಗಳು ಆಪರೇಷನ್ ಕಮಲದ ಸೊಲ್ಲೆತ್ತದಂತೆ ಮಾಡಿ, ಕುಮಾರಣ್ಣನ ಮನೆ ಬಾಗಿಲಿಗೆ ಯಾರೂ ಬರದಂತೆ ಮಾಡಿರುವ ಕರ್ನಾಟಕದ ಮತದಾರ ಇಡೀ ದೇಶಕ್ಕೆ ಬಂದು ದಿಕ್ಸೂಚಿಯನ್ನೆ ನೀಡಿದ್ದಾನಲ್ಲಾ. ಯಾವುದೇ ಚುನಾವಣೆಯಲ್ಲಿ ಕೆಲ ಅನಾಹುತಗಳು ನಡೆಯುತ್ತವೆ, ಅಂತಹ ಅನಾಹುತಗಳ ಪೈಕಿ ಶೆಟ್ಟರ್, ರಮೇಶ್‌ಕುಮಾರ್ ಮತ್ತು ಕಿಮ್ಮನೆ ರತ್ನಾಕರ್ ಸೋಲು ಕೂಡ ಸೇರಿವೆ. ಹುಬ್ಬಳ್ಳಿಯಲ್ಲಿ ಬಿಜೆಪಿ ಬೇರೂರುವಂತೆ ಮಾಡಿದ ಶೆಟ್ಟರ್‌ಗೆ ಬಿಜೆಪಿ ಬೇರನ್ನು ಅಲ್ಲಾಡಿಸಲಾಗಲಿಲ್ಲ, ಆದರೂ ಅವರ ಬಂಡಾಯ ಬೇರೆ ತರದ ಕೆಲಸ ಮಾಡಿದೆ. ಇನ್ನು ರಮೇಶ್ ಕುಮಾರ್ ಸೋಲಿಸಲು ಬಹಳ ದಿನಗಳಿಂದ ಕೆಲವರು ಕಾಯುತ್ತಿದ್ದರು. ಇನ್ನು ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ಸೋಲೂ ಇಡೀ ಕ್ಷೇತ್ರದ ಸೋಲಾಯಿತಂತಲ್ಲಾ, ಥೂತ್ತೇರಿ.

*****

ಈ ಚುನಾವಣೆಯ ಫಲಿತಾಂಶದಲ್ಲಿ ನಗಾಡುವ ಪ್ರಸಂಗಗಳೂ ನಡೆದಿವೆಯಲ್ಲಾ. ಹಿಂದಿನ ಸರಕಾರನ ಹ್ಯಂಗೋ ನಿಭಾಯಿಸಿ ದಡ ಮುಟ್ಟಿಸಿ ಮನಿಗೋಗನ ಎಂದಿದ್ದ ಮಾಧುಸ್ವಾಮಿಯನ್ನು ಜನ ಮನೆಗೆ ಕಳಿಸಿದ್ದಾರೆ. ಹಾಗೆಯೇ ಮುಸ್ಲಿಮರ ವಿಷಯದಲ್ಲಿ ತೀರ ತಲೆಕೆಡಿಸಿಕೊಂಡಿದ್ದ ಸಿ.ಟಿ ರವಿ, ಸಿದ್ದರಾಮಯ್ಯನವರನ್ನ ಸಿದ್ರಾಮುಲ್ಲಖಾನ್ ಎಂದು ಹೋದಲೆಲ್ಲಾ ಟೀಕಿಸಿ ಚಪ್ಪಾಳೆ ಗಿಟ್ಟಿಸುತ್ತಿದ್ದ. ಆ ಸಮಯದಲ್ಲಿ ಯಾರೋ ಒಬ್ಬ, ಕುಡಿದು ಚಿತ್ತಾಗಿ ರಸ್ತೆ ಬದಿಯಲ್ಲಿ ಅಂಗಾತ ಕುಸಿದಿದ್ದ ವ್ಯಕ್ತಿಯೊಬ್ಬನ ತಲೆಗೆ ಸಿ.ಟಿ ರವಿ ತಲೆ ಅಂಟಿಸಿ ವಾಟ್ಸಾಪಿಗೆ ಬಿಟ್ಟು ಮೆಚ್ಚುಗೆಗಳಿಸಿದ್ದ. ಆ ಸಮಯದಲ್ಲೇ ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತನೊಬ್ಬ ಈಗಲೂ ಸಿ.ಟಿ ರವಿ ಆರು ಸಾವಿರ ಓಟಿನಲ್ಲಿ ಗೆಲ್ಲುತ್ತಾರೆ ಎಂದಿದ್ದ. ಅದೇ ಆರುಸಾವಿರ ವೋಟಿನಲ್ಲಿ ಸಿ.ಟಿ ರವಿ ಸೋತಿದ್ದಕ್ಕೆ ಚಿಕ್ಕಮಗಳೂರಿನ ಕಾರ್ಯಕರ್ತರು ಗೆದ್ದ ಅಭ್ಯರ್ಥಿ ತಮ್ಮಯ್ಯನಿಗೆ ಕ್ಷೀರಾಭಿಷೇಕ ಮಾಡುವುದು ಬಿಟ್ಟು, ಭೊಜೇಗೌಡರಿಗೆ ಹಾಲಿನಾಭಿಷೇಕ ಮಾಡಿದ್ದಾರಲ್ಲಾ. ಏಕೆಂದರೆ ಕುಮಾರಣ್ಣನ ಬಲಗೈಯಾಗಿರುವ ಭೊಜೇಗೌಡರಿಗೆ ಚುನಾವಣೆಯಲ್ಲಿ ಗೆಲ್ಲುವ ಶಕ್ತಿಯಿಲ್ಲ, ಆದರೆ ಯಾರನ್ನಾದರೂ ಸೋಲಿಸುವ ಶಕ್ತಿಯಿದೆ. ಇದನ್ನರಿತ ಚಿಕ್ಕಮಗಳೂರು ಜನ ಭೋಜೇಗೌಡರಿಗೆ ಕ್ಷೀರಾಭಿಷೇಕ ಮಾಡಿದ್ದಾರಲ್ಲಾ, ಥೂತ್ತೇರಿ.

ಇದನ್ನೂ ಓದಿ: ಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

ಚಿಕ್ಕಮಗಳೂರು ಪ್ರದೇಶದಲ್ಲಿ ಕುಡಚಿ ಕ್ಷೇತ್ರದ ಶಾಸಕ ಶಾನೆ ಓಡಾಡುತ್ತಿದ್ದ; ಆತನ ಸುದ್ದಿ ಶಾನೆ ಕುತೂಹಲವಾಗಿದೆ. ಕುಡಚಿ ಕ್ಷೇತ್ರದ ರಾಜಕಾರಣ ಗ್ರಹಿಸಿದ ಆತ ತನ್ನ ಪೊಲೀಸ್ ಕೆಲಸಕ್ಕೆ ರಾಜೀನಾಮೆ ಬರೆದು ಚುನಾವಣೆಗೆ ನಿಂತ ಸೋತ ನಂತರ ರಾಮುಲು ಪಕ್ಷದಿಂದ ಗೆದ್ದು ನಂತರ ಬಿಜೆಪಿ ಸೇರಿದ. ಆಗ ಆತನಿಗೆ ಇನ್ನಿಲ್ಲದ ಉತ್ಸಾಹ ಅಮಲೇರಿ ಲಂಬಾಣಿಗರನ್ನೆಲ್ಲಾ ಸಂಘಟಿಸಿ ಬಿಜೆಪಿಗೆ ಎಳೆಯತೊಡಗಿದ. ಇದನ್ನರಿತ ಸಿ.ಟಿ ರವಿ ಕುಡಚಿ ಶಾಸಕನನ್ನು ಚಿಕ್ಕಮಗಳೂರಿಗೆ ಕರೆಸಿ ಲಂಬಾಣಿಗರ ಭೇಟಿ ಮಾಡಿಸಿದ ಮೇಲೆ ಅವರೆಲ್ಲಾ ಬಿಜೆಪಿಗೆ ಓಟು ಮಾಡುತ್ತಾರೆಂದು ಭಾವಿಸಿದ. ಆದರೆ ಈಗ ಕುಡಚಿ ಶಾಸಕ ರಾಜೀವ್‌ನನ್ನು ಜನ ಮನೆಗೆ ಕಳಿಸಿದ್ದಾರೆ. ಶತಮಾನಗಳಿಂದ ಪಾಂಡ್ಯಾದಲ್ಲಿ ಬದುಕಿದ್ದ ಲಂಬಾಣಿಗರ ತಾಂಡಾಗಳನ್ನು ರೆವಿನ್ಯೂ ಗ್ರಾಮ ಮಾಡಿದ್ದು ಕಾಂಗ್ರೆಸ್ ಸರಕಾರ. ಆದರೆ ಎಲ್ಲಾ ದಮನಿತ ಜಾತಿಗಳ ಬಗ್ಗೆಯೂ ಹುಸಿಯಾದ ಕಾಳಜಿ ತೋರಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ಪಡಸಾಲೆಯಲ್ಲಿ ಮಫ್ತಿ ಪೊಲೀಸನಂತೆ ಓಡಾಡುತ್ತಿದ್ದ ರಾಜೀವನನ್ನು ಜನ ಆತನ ಊರಿಗೆ ಕಳಿಸಿದ್ದಾರೆ. ಏಕೆಂದರೆ ಈತ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡಿದ್ದು ಸುದ್ದಿಯಾಗಿತ್ತು. ಈತ ಇಷ್ಟು ಬೇಗೆ ಹಾಳಾಗಬಾರದಿತ್ತು ಎಂಬುದು ಕುಡಚಿ ಜನರ ಕುಹಕವಾಗಿದೆಯಲ್ಲಾ, ಥೂತ್ತೇರಿ.

*****

ಈ ನಡುವೆ ಹರಪ್ಪನಹಳ್ಳಿ ಜನ ಎಂ.ಪಿ ಪ್ರಕಾಶ್ ಮಗಳಾದ ಲತಾರನ್ನು ಗೆಲ್ಲಿಸಿ ಪ್ರಾಯಶ್ಚಿತ್ತ ಮಾಡಿಕೊಂಡಿದ್ದಾರೆ. ಹಿಂದೆ ಹರಪ್ಪನಹಳ್ಳಿ ಜನ ಎಂ.ಪಿ ಪ್ರಕಾಶರನ್ನು ಸೋಲಿಸಿದ್ದರು ಅವರ ಮಗ ಎಂ.ಪಿ ರವಿಯನ್ನು ಸೋಲಿಸಿದ್ದರು. ಆಸ್ಪತ್ರೆಯಲ್ಲಿದ್ದರೂ ಹರಪ್ಪನಹಳ್ಳಿಯನ್ನು 371(ಜೆ)ಗೆ ಸೇರಿಸಲು ಹೋರಾಡಿ ಕೊನೆಯುಸಿರೆಳೆದ ರವಿಯ ಬಗ್ಗೆ ಹರಪ್ಪನಹಳ್ಳಿ ಜನಕ್ಕೆ ಏನನ್ನಿಸಿತೋ ಏನೋ ಕಾಂಗ್ರೆಸ್ ಟಿಕೆಟ್ ಸಿಗದೆ ಪಕ್ಷೇತರವಾಗಿ ನಿಂತ ಲತಾರನ್ನ ಗೆಲ್ಲಿಸಿದ್ದಾರೆ. ಹರಪ್ಪನಹಳ್ಳಿ ಸೊಸೆಯಾದ ಲತಾರಲ್ಲಿ ಪ್ರಕಾಶರ ಗುಣಗಳಿವೆ, ಆದ್ದರಿಂದಲೇ ಗೆದ್ದು ಬಂದಿರುವುದು. ಇನ್ನು ಮಡಿಕೇರಿ ವಿರಾಜಪೇಟೆಯ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಈ ನೆಲದಿಂದ ಬಂದ ಅಡ್ಡಂಡ ಹೆಸರಿನ ವ್ಯಕ್ತಿಯೊಬ್ಬ ಆಘಾತಗೊಂಡು ರಾಜೀನಾಮೆ ಬರೆದಿದ್ದಾನೆ. ಮೈಸೂರು ರಂಗಾಯಣದ ಪಾವಿತ್ರ್ಯ ಕಾಪಾಡುವುದು ಕಲಾವಿದರ ಕರ್ತವ್ಯ. ಐದು ವರ್ಷಗಳ ನಂತರ ಮುಸ್ಲಿಂ ರಾಜಕಾರಣಿಗಳು ವಿಧಾನಸೌಧದ ಕಾರಿಡಾರ್‌ನಲ್ಲಿ ಕಾಣುತ್ತಿದ್ದಾರೆ. ಎಲ್ಲರನ್ನೂ ಒಳಗೊಂಡು ಬೆಳೆಸಬೇಕಾದ ಪ್ರಜಾಪ್ರಭುತ್ವದ ಮಹಾವೃಕ್ಷದಲ್ಲಿ ಮುಸ್ಲಿಮರು ಬಾರದಂತೆ ನೋಡಿಕೊಂಡ ಬಿಜೆಪಿಗಳು ಇತಿಹಾಸದಲ್ಲಿ ಅಕ್ಷಮ್ಯ ಅಪರಾಧವೆಸಗಿದ್ದಾರೆ. ಈ ಬಿಜೆಪಿಗಳ ಮನಸ್ಸಿನಾಳದಲ್ಲಿ ದಲಿತರ ದ್ವೇಷವೂ ಇದೆ. ಆದರೆ ಸದ್ಯಕ್ಕೆ ಅದನ್ನ ತೋಗೊಡುವುದಿಲ್ಲ. ಈಗ ಹಠಾತ್ತನೆ ಕಲೆ, ಸಾಹಿತ್ಯ, ಸಂಗೀತ ಪುಸ್ತಕಗಳೆಲ್ಲಾ ಅರ್ಥಪೂರ್ಣವಾಗಿ ಕಾಣತೊಡಗಿವೆಯಲ್ಲಾ, ಈ ಯಕ್ಷಣಿಗೆ ವಿಸ್ಮಯವಾಗುತ್ತಿದೆಯಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...