Homeಅಂಕಣಗಳುಮತದಾರ ಕೊಟ್ಟ ಪೆಟ್ಟು ಮುಟ್ಟಿ ನೋಡಿಕೊಳ್ಳುವಂತಿದೆಯಲ್ಲಾ...

ಮತದಾರ ಕೊಟ್ಟ ಪೆಟ್ಟು ಮುಟ್ಟಿ ನೋಡಿಕೊಳ್ಳುವಂತಿದೆಯಲ್ಲಾ…

- Advertisement -
- Advertisement -

ಕರ್ನಾಟಕದ ಜನಸ್ತೋಮ ಮತಪೆಟ್ಟಿಗೆಯ ಮುಖಾಂತರ ಕೊಟ್ಟ ಏಟು ಮುಟ್ಟಿ ನೋಡಿಕೊಳ್ಳುವಂತಿದೆಯಲ್ಲಾ. ಹಾಗೆ ನೋಡಿದರೆ ಮುಟ್ಟಿ ನೋಡಿಕೊಳ್ಳುವವರ ಪಟ್ಟಿ ದೊಡ್ಡದಾಗಿದೆ. ಈ ಪೈಕಿ ಹೊಟ್ಟೆಪಾಡಿನ ಜ್ಯೋತಿಷಿಗಳು ಫಲಿತಾಂಶ ಬಂದಾಗ ಮನೆ ಬಾಗಿಲು ಹಾಕಿಕೊಂಡವರು ಇನ್ನೂ ತೆಗೆದಿಲ್ಲವಂತಲ್ಲಾ. ಆ ಪೈಕಿ ಪುರೋಹಿತಶಾಹಿ ಜ್ಯೋತಿಷಿಯೊಬ್ಬ ಹಣೆ ಮೈಗೆಲ್ಲಾ ತರೇವಾರಿ ಬಣ್ಣ ಬಳಿದುಕೊಂಡು, ’ಮೋದಿ ಜಾತಕ ಕುಂಡಲಿಯನ್ನು ನಾನು ಪರಿಶೀಲಿಸಿದಾಗ, ಅವರು ಹದಿನೆಂಟು ಗುಣಗಳುಳ್ಳ ನಾಯಕ, ಅವರು ಕರ್ನಾಟಕವನ್ನು ಪ್ರದಕ್ಷಿಣೆ ಮಾಡಿರುವುದರ ಪ್ರಯುಕ್ತ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗದ್ದುಗೆ ಏರಲಿದೆ’ ಎಂದಿದ್ದ. ಮತ್ತೊಬ್ಬ ನೆಲದ ಜಲ ಪತ್ತೆಹಚ್ಚುವಂತಹ ಸ್ಕೇಲು ತಯಾರಿಸಿಕೊಂಡು ಮೂರೂ ಪಾರ್ಟಿಯ ಚಿಹ್ನೆಯ ಮೇಲೆ ಹಿಡಿದಿದ್ದ ಆ ಸ್ಕೇಲು ಬಿಜೆಪಿಯ ಕಮಲದ ಎದುರು ಬಾಗಿತು ನೋಡಿ, ಬಿಜೆಪಿ ಬಿಟ್ಟು ಇನ್ನಾವ ಪಾರ್ಟಿಯೂ ಮೆಜಾರಿಟಿ ಪಡಿಯೋದಿಲ್ಲ ಎಂದ. ಮತ್ತೊಬ್ಬ ಹುಚ್ಚನಂತಿದ್ದ ಜ್ಯೋತಿಷಿ ಲಡಾಸು ಕಾರಿನ ಲೈಟಿನಂತಿದ್ದ ಎರಡು ಬಲ್ಪುಗಳ ಹಿಡಿಕೆ ತೋರಿಸಿ ತನ್ನ ಕಡೆಗೆ ತಿರುಗಿಸಿಕೊಂಡು ನೋಡಿ, ನನ್ನ ಅಂತರಾತ್ಮದಲ್ಲಿ ಕಮಲ ಮೂಡುತ್ತಿದೆ ಆದ್ದರಿಂದ ಈ ಚುನಾವಣೆ ನಂತರ ಕಮಲ ಅರಳಲಿದೆ ಎಂದ. ಈಗ ಇವರೆಲ್ಲರೂ ಬಾಗಿಲು ಬಂದ್ ಮಾಡಿಕೊಂಡು ಒಳಗಿದ್ದರೂ, ಯಾರಾದರೂ ಬಂದು ಬಾಗಿಲು ತಟ್ಟಿದರೆ ಧ್ವನಿ ಬದಲಿಸಿಕೊಂಡು ಅವರಿಲ್ಲಾ ಎನ್ನುತ್ತಿದ್ದಾರಲ್ಲಾ, ಥೂತ್ತೇರಿ.

*****

ಕರ್ನಾಟಕದ ಮತದಾರ ಕೊಟ್ಟ ಉತ್ತರದಲ್ಲಿ ಪ್ರಧಾನಿಯಾದವರು ಹೀಗೆ ನಡೆದುಕೊಳ್ಳಬಾರದೆಂಬ ಎಚ್ಚರಿಕೆಯಿದ್ದರೆ, ಇನ್ನು ಸರ್ವಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಹಚ್ಚಲು ಬಂದ ಶಾ, ಚುನಾವಣೆ ನಂತರ ಇಲ್ಲಿ ಗಲಭೆ ಏಳುತ್ತದೆ ಎಂದು ಧಮಕಿ ಹಾಕಿದ್ದರು. ಗೆಲ್ಲಲೋಸ್ಕರ ಯಾವ ಮಾತನ್ನಾದರೂ ಆಡುವ, ಏನನ್ನಾದರೂ ಮಾಡುವ ಶಾನ ಮಾತಾಗಲಿ, ತಂತ್ರವಾಗಲಿ ಕರ್ನಾಟಕದಲ್ಲಿ ಕೆಲಸ ಮಾಡಲಿಲ್ಲ. ಇನ್ನು ಚುನಾವಣೆ ಮುಗಿದ ಕೂಡಲೇ ತನ್ನನ್ನು ಯಾರಾದರೂ ಕರೆಸಿಕೊಳ್ಳುತ್ತಾರೆ ಎಂದು ಭಾವಿಸಿ ಸಿಂಗಾಪುರಕ್ಕೆ ಹಾರಿದ್ದ ಕುಮಾರಣ್ಣನಿಗೆ ಯಾವ ಜ್ಞಾನೋದಯವಾಯ್ತೋ ಏನೋ, ಒಂದೇ ಉಸುರಿಗೆ ಓಡಿಬಂದರೆ ಯಾರೂ ಮನೆಬಾಗಿಲಿಗೆ ಬಾರದಂತಾಗಿತ್ತಲ್ಲಾ. ಬಿಜೆಪಿಗಳು ಆಪರೇಷನ್ ಕಮಲದ ಸೊಲ್ಲೆತ್ತದಂತೆ ಮಾಡಿ, ಕುಮಾರಣ್ಣನ ಮನೆ ಬಾಗಿಲಿಗೆ ಯಾರೂ ಬರದಂತೆ ಮಾಡಿರುವ ಕರ್ನಾಟಕದ ಮತದಾರ ಇಡೀ ದೇಶಕ್ಕೆ ಬಂದು ದಿಕ್ಸೂಚಿಯನ್ನೆ ನೀಡಿದ್ದಾನಲ್ಲಾ. ಯಾವುದೇ ಚುನಾವಣೆಯಲ್ಲಿ ಕೆಲ ಅನಾಹುತಗಳು ನಡೆಯುತ್ತವೆ, ಅಂತಹ ಅನಾಹುತಗಳ ಪೈಕಿ ಶೆಟ್ಟರ್, ರಮೇಶ್‌ಕುಮಾರ್ ಮತ್ತು ಕಿಮ್ಮನೆ ರತ್ನಾಕರ್ ಸೋಲು ಕೂಡ ಸೇರಿವೆ. ಹುಬ್ಬಳ್ಳಿಯಲ್ಲಿ ಬಿಜೆಪಿ ಬೇರೂರುವಂತೆ ಮಾಡಿದ ಶೆಟ್ಟರ್‌ಗೆ ಬಿಜೆಪಿ ಬೇರನ್ನು ಅಲ್ಲಾಡಿಸಲಾಗಲಿಲ್ಲ, ಆದರೂ ಅವರ ಬಂಡಾಯ ಬೇರೆ ತರದ ಕೆಲಸ ಮಾಡಿದೆ. ಇನ್ನು ರಮೇಶ್ ಕುಮಾರ್ ಸೋಲಿಸಲು ಬಹಳ ದಿನಗಳಿಂದ ಕೆಲವರು ಕಾಯುತ್ತಿದ್ದರು. ಇನ್ನು ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ಸೋಲೂ ಇಡೀ ಕ್ಷೇತ್ರದ ಸೋಲಾಯಿತಂತಲ್ಲಾ, ಥೂತ್ತೇರಿ.

*****

ಈ ಚುನಾವಣೆಯ ಫಲಿತಾಂಶದಲ್ಲಿ ನಗಾಡುವ ಪ್ರಸಂಗಗಳೂ ನಡೆದಿವೆಯಲ್ಲಾ. ಹಿಂದಿನ ಸರಕಾರನ ಹ್ಯಂಗೋ ನಿಭಾಯಿಸಿ ದಡ ಮುಟ್ಟಿಸಿ ಮನಿಗೋಗನ ಎಂದಿದ್ದ ಮಾಧುಸ್ವಾಮಿಯನ್ನು ಜನ ಮನೆಗೆ ಕಳಿಸಿದ್ದಾರೆ. ಹಾಗೆಯೇ ಮುಸ್ಲಿಮರ ವಿಷಯದಲ್ಲಿ ತೀರ ತಲೆಕೆಡಿಸಿಕೊಂಡಿದ್ದ ಸಿ.ಟಿ ರವಿ, ಸಿದ್ದರಾಮಯ್ಯನವರನ್ನ ಸಿದ್ರಾಮುಲ್ಲಖಾನ್ ಎಂದು ಹೋದಲೆಲ್ಲಾ ಟೀಕಿಸಿ ಚಪ್ಪಾಳೆ ಗಿಟ್ಟಿಸುತ್ತಿದ್ದ. ಆ ಸಮಯದಲ್ಲಿ ಯಾರೋ ಒಬ್ಬ, ಕುಡಿದು ಚಿತ್ತಾಗಿ ರಸ್ತೆ ಬದಿಯಲ್ಲಿ ಅಂಗಾತ ಕುಸಿದಿದ್ದ ವ್ಯಕ್ತಿಯೊಬ್ಬನ ತಲೆಗೆ ಸಿ.ಟಿ ರವಿ ತಲೆ ಅಂಟಿಸಿ ವಾಟ್ಸಾಪಿಗೆ ಬಿಟ್ಟು ಮೆಚ್ಚುಗೆಗಳಿಸಿದ್ದ. ಆ ಸಮಯದಲ್ಲೇ ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತನೊಬ್ಬ ಈಗಲೂ ಸಿ.ಟಿ ರವಿ ಆರು ಸಾವಿರ ಓಟಿನಲ್ಲಿ ಗೆಲ್ಲುತ್ತಾರೆ ಎಂದಿದ್ದ. ಅದೇ ಆರುಸಾವಿರ ವೋಟಿನಲ್ಲಿ ಸಿ.ಟಿ ರವಿ ಸೋತಿದ್ದಕ್ಕೆ ಚಿಕ್ಕಮಗಳೂರಿನ ಕಾರ್ಯಕರ್ತರು ಗೆದ್ದ ಅಭ್ಯರ್ಥಿ ತಮ್ಮಯ್ಯನಿಗೆ ಕ್ಷೀರಾಭಿಷೇಕ ಮಾಡುವುದು ಬಿಟ್ಟು, ಭೊಜೇಗೌಡರಿಗೆ ಹಾಲಿನಾಭಿಷೇಕ ಮಾಡಿದ್ದಾರಲ್ಲಾ. ಏಕೆಂದರೆ ಕುಮಾರಣ್ಣನ ಬಲಗೈಯಾಗಿರುವ ಭೊಜೇಗೌಡರಿಗೆ ಚುನಾವಣೆಯಲ್ಲಿ ಗೆಲ್ಲುವ ಶಕ್ತಿಯಿಲ್ಲ, ಆದರೆ ಯಾರನ್ನಾದರೂ ಸೋಲಿಸುವ ಶಕ್ತಿಯಿದೆ. ಇದನ್ನರಿತ ಚಿಕ್ಕಮಗಳೂರು ಜನ ಭೋಜೇಗೌಡರಿಗೆ ಕ್ಷೀರಾಭಿಷೇಕ ಮಾಡಿದ್ದಾರಲ್ಲಾ, ಥೂತ್ತೇರಿ.

ಇದನ್ನೂ ಓದಿ: ಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

ಚಿಕ್ಕಮಗಳೂರು ಪ್ರದೇಶದಲ್ಲಿ ಕುಡಚಿ ಕ್ಷೇತ್ರದ ಶಾಸಕ ಶಾನೆ ಓಡಾಡುತ್ತಿದ್ದ; ಆತನ ಸುದ್ದಿ ಶಾನೆ ಕುತೂಹಲವಾಗಿದೆ. ಕುಡಚಿ ಕ್ಷೇತ್ರದ ರಾಜಕಾರಣ ಗ್ರಹಿಸಿದ ಆತ ತನ್ನ ಪೊಲೀಸ್ ಕೆಲಸಕ್ಕೆ ರಾಜೀನಾಮೆ ಬರೆದು ಚುನಾವಣೆಗೆ ನಿಂತ ಸೋತ ನಂತರ ರಾಮುಲು ಪಕ್ಷದಿಂದ ಗೆದ್ದು ನಂತರ ಬಿಜೆಪಿ ಸೇರಿದ. ಆಗ ಆತನಿಗೆ ಇನ್ನಿಲ್ಲದ ಉತ್ಸಾಹ ಅಮಲೇರಿ ಲಂಬಾಣಿಗರನ್ನೆಲ್ಲಾ ಸಂಘಟಿಸಿ ಬಿಜೆಪಿಗೆ ಎಳೆಯತೊಡಗಿದ. ಇದನ್ನರಿತ ಸಿ.ಟಿ ರವಿ ಕುಡಚಿ ಶಾಸಕನನ್ನು ಚಿಕ್ಕಮಗಳೂರಿಗೆ ಕರೆಸಿ ಲಂಬಾಣಿಗರ ಭೇಟಿ ಮಾಡಿಸಿದ ಮೇಲೆ ಅವರೆಲ್ಲಾ ಬಿಜೆಪಿಗೆ ಓಟು ಮಾಡುತ್ತಾರೆಂದು ಭಾವಿಸಿದ. ಆದರೆ ಈಗ ಕುಡಚಿ ಶಾಸಕ ರಾಜೀವ್‌ನನ್ನು ಜನ ಮನೆಗೆ ಕಳಿಸಿದ್ದಾರೆ. ಶತಮಾನಗಳಿಂದ ಪಾಂಡ್ಯಾದಲ್ಲಿ ಬದುಕಿದ್ದ ಲಂಬಾಣಿಗರ ತಾಂಡಾಗಳನ್ನು ರೆವಿನ್ಯೂ ಗ್ರಾಮ ಮಾಡಿದ್ದು ಕಾಂಗ್ರೆಸ್ ಸರಕಾರ. ಆದರೆ ಎಲ್ಲಾ ದಮನಿತ ಜಾತಿಗಳ ಬಗ್ಗೆಯೂ ಹುಸಿಯಾದ ಕಾಳಜಿ ತೋರಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ಪಡಸಾಲೆಯಲ್ಲಿ ಮಫ್ತಿ ಪೊಲೀಸನಂತೆ ಓಡಾಡುತ್ತಿದ್ದ ರಾಜೀವನನ್ನು ಜನ ಆತನ ಊರಿಗೆ ಕಳಿಸಿದ್ದಾರೆ. ಏಕೆಂದರೆ ಈತ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡಿದ್ದು ಸುದ್ದಿಯಾಗಿತ್ತು. ಈತ ಇಷ್ಟು ಬೇಗೆ ಹಾಳಾಗಬಾರದಿತ್ತು ಎಂಬುದು ಕುಡಚಿ ಜನರ ಕುಹಕವಾಗಿದೆಯಲ್ಲಾ, ಥೂತ್ತೇರಿ.

*****

ಈ ನಡುವೆ ಹರಪ್ಪನಹಳ್ಳಿ ಜನ ಎಂ.ಪಿ ಪ್ರಕಾಶ್ ಮಗಳಾದ ಲತಾರನ್ನು ಗೆಲ್ಲಿಸಿ ಪ್ರಾಯಶ್ಚಿತ್ತ ಮಾಡಿಕೊಂಡಿದ್ದಾರೆ. ಹಿಂದೆ ಹರಪ್ಪನಹಳ್ಳಿ ಜನ ಎಂ.ಪಿ ಪ್ರಕಾಶರನ್ನು ಸೋಲಿಸಿದ್ದರು ಅವರ ಮಗ ಎಂ.ಪಿ ರವಿಯನ್ನು ಸೋಲಿಸಿದ್ದರು. ಆಸ್ಪತ್ರೆಯಲ್ಲಿದ್ದರೂ ಹರಪ್ಪನಹಳ್ಳಿಯನ್ನು 371(ಜೆ)ಗೆ ಸೇರಿಸಲು ಹೋರಾಡಿ ಕೊನೆಯುಸಿರೆಳೆದ ರವಿಯ ಬಗ್ಗೆ ಹರಪ್ಪನಹಳ್ಳಿ ಜನಕ್ಕೆ ಏನನ್ನಿಸಿತೋ ಏನೋ ಕಾಂಗ್ರೆಸ್ ಟಿಕೆಟ್ ಸಿಗದೆ ಪಕ್ಷೇತರವಾಗಿ ನಿಂತ ಲತಾರನ್ನ ಗೆಲ್ಲಿಸಿದ್ದಾರೆ. ಹರಪ್ಪನಹಳ್ಳಿ ಸೊಸೆಯಾದ ಲತಾರಲ್ಲಿ ಪ್ರಕಾಶರ ಗುಣಗಳಿವೆ, ಆದ್ದರಿಂದಲೇ ಗೆದ್ದು ಬಂದಿರುವುದು. ಇನ್ನು ಮಡಿಕೇರಿ ವಿರಾಜಪೇಟೆಯ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಈ ನೆಲದಿಂದ ಬಂದ ಅಡ್ಡಂಡ ಹೆಸರಿನ ವ್ಯಕ್ತಿಯೊಬ್ಬ ಆಘಾತಗೊಂಡು ರಾಜೀನಾಮೆ ಬರೆದಿದ್ದಾನೆ. ಮೈಸೂರು ರಂಗಾಯಣದ ಪಾವಿತ್ರ್ಯ ಕಾಪಾಡುವುದು ಕಲಾವಿದರ ಕರ್ತವ್ಯ. ಐದು ವರ್ಷಗಳ ನಂತರ ಮುಸ್ಲಿಂ ರಾಜಕಾರಣಿಗಳು ವಿಧಾನಸೌಧದ ಕಾರಿಡಾರ್‌ನಲ್ಲಿ ಕಾಣುತ್ತಿದ್ದಾರೆ. ಎಲ್ಲರನ್ನೂ ಒಳಗೊಂಡು ಬೆಳೆಸಬೇಕಾದ ಪ್ರಜಾಪ್ರಭುತ್ವದ ಮಹಾವೃಕ್ಷದಲ್ಲಿ ಮುಸ್ಲಿಮರು ಬಾರದಂತೆ ನೋಡಿಕೊಂಡ ಬಿಜೆಪಿಗಳು ಇತಿಹಾಸದಲ್ಲಿ ಅಕ್ಷಮ್ಯ ಅಪರಾಧವೆಸಗಿದ್ದಾರೆ. ಈ ಬಿಜೆಪಿಗಳ ಮನಸ್ಸಿನಾಳದಲ್ಲಿ ದಲಿತರ ದ್ವೇಷವೂ ಇದೆ. ಆದರೆ ಸದ್ಯಕ್ಕೆ ಅದನ್ನ ತೋಗೊಡುವುದಿಲ್ಲ. ಈಗ ಹಠಾತ್ತನೆ ಕಲೆ, ಸಾಹಿತ್ಯ, ಸಂಗೀತ ಪುಸ್ತಕಗಳೆಲ್ಲಾ ಅರ್ಥಪೂರ್ಣವಾಗಿ ಕಾಣತೊಡಗಿವೆಯಲ್ಲಾ, ಈ ಯಕ್ಷಣಿಗೆ ವಿಸ್ಮಯವಾಗುತ್ತಿದೆಯಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...