Homeಅಂಕಣಗಳು'ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?'

‘ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?’

- Advertisement -
- Advertisement -

ಆರೆಸ್ಸೆಸ್ ತತ್ವ ಅಳವಡಿಸಿಕೊಂಡರೆ ನಾವು ಕಾಂಗ್ರೆಸ್ ಪರವಾಗಿಯೂ ಕೆಲಸ ಮಾಡಲು ಸಿದ್ಧ ಎಂದು ಆರೆಸ್ಸೆಸ್ ಸಂಘದ ಅರುಣಕುಮಾರ ಹೇಳಿದ್ದಾರಲ್ಲಾ ಇದೊಂದು ರೀತಿ ಅಜ್ಞಾನದಿಂದ ಕೂಡಿರುವ ಮಾತು. ಕಾಂಗ್ರೆಸ್ ಹುಟ್ಟಿದಾಗಿನಿಂದಲೂ ಹಲವರು ಹಿಂದೂ ಪರವಾದ ಸಿದ್ಧಾಂತಗಳಲ್ಲೇ ಬದುಕಿದ್ದಾರೆ. ಆದರೆ ಜೈನ, ಬೌದ್ಧ, ಸಿಖ್ ಮತ್ತು ಬಸವ ತತ್ವಗಳೆಲ್ಲಾ ಹಿಂದೂಧರ್ಮದಿಂದಲೇ ಸಿಡಿದುಹೋಗಿ ಪ್ರಜ್ವಲಿಸುತ್ತಿರುವ ಧರ್ಮದ ಕಿಡಿಗಳು. ಇನ್ನೂ ಲೋಕಲ್ಲಾಗಿ ಮಾತನಾಡುವುದಾದರೆ ಕಾಂಗ್ರೆಸಿನಲ್ಲಿದ್ದು ತಮ್ಮವನೇನಾದರು ಬಿಜೆಪಿ ಕ್ಯಾಂಡಿಡೇಟ್ ಆದರೆ ಅವನಿಗೆ ಓಟು ಮಾಡುವ ಅಸಾಮಿಗಳೂ ಹೇರಳವಾಗಿದ್ದಾರೆ. ಈ ಪೈಕಿ ಎರಡು ಉದಾಹರಣೆ ಕೊಡುವುದಾದರೆ, ಚಿಕ್ಕಮಗಳೂರಲ್ಲಿ ಅನಾದಿಕಾಲದಿಂದಲೂ ಕಾಂಗ್ರೆಸ್ಸಿಗರಾಗಿರುವ ಒಕ್ಕಲಿಗರು ತಮ್ಮ ಹುಡುಗನನ್ನ ಕೈಬಿಡಲಾದೀತೆ ಎಂದು ಸಿ.ಟಿ.ರವಿಗೆ ಓಟು ಮಾಡುತ್ತಿರಲಾಗಿ, ಅತ್ತ ಶಿವಮೊಗ್ಗದ ಕಾಂಗ್ರೆಸ್ ಕುರುಬರು ಈಶ್ವರಪ್ಪ ನಮ್ಮವನೆಂದು ಓಟು ಮಾಡುವ ಉದಾಹರಣೆಗಳು ನಮ್ಮ ಮುಂದಿವೆ. ಆದರೆ ಬಿಜೆಪಿ ವಿಷಯದಲ್ಲಿ ಈ ಆಟ ನಡೆಯುವುದಿಲ್ಲ. ಅಲ್ಲಿ ಹೆರಿಗೆ ಡಾಕ್ಟರ್ ಹೆರಿಗೆ ಪೇಷಂಟ್ ಕಾಯುವಂತೆ ಬಿಜೆಪಿ ಮತದಾರರನ್ನು ಕಾಯುವ ವಾಚ್‌ಮನ್‌ಗಳು ಹೇರಳವಾಗಿದ್ದಾರಂತಲ್ಲಾ, ಥೂತ್ತೇರಿ.

*****

ನಮ್ಮ ಸಂಸ್ಕೃತಿ ವಿಷಯ ಮಾತನಾಡುವುದಾದರೆ, ಸಾಮಾಜಿಕವಾಗಿ ಏನೇ ನಡೆದರೂ, ಅದು ಮಹಿಳೆ ಮತ್ತು ಮಕ್ಕಳ ಮೇಲೆ ಪರಿಣಾಮ ಬೀರುತ್ತಾ ಬಂದಿರುವುದು ಅನಾದಿಕಾಲದಿಂದ ನಡೆದುಬಂದಿದೆ. ಮುರುಘಾ ಶರಣರ ಆರೋಪಿತ ದುಷ್ಕೃತ್ಯದಲ್ಲಿ ಸಿಲುಕಿದ್ದವರೆಲ್ಲಾ ಮಕ್ಕಳು. ಇನ್ನು ಪ್ರವಾಹದಿಂದ ಸಂತ್ರಸ್ತರಾಗಿ ಶಾಸಕನಿಂದ ಅನಾಗರಿಕವಾದ ಅವಾಚ್ಯ ಬೈಗುಳ ಕೇಳಿದವರು ಮಹಿಳೆ. ಈ ಪ್ರಕರಣದ ವಿಷಯದಲ್ಲಿ ಮಾಧ್ಯಮದೊಳಗಿರುವ ಶ್ಯಾನುಭೋಗರ ಮಕ್ಕಳು ಕೃತ್ಯದ ವಿಶ್ಲೇಷಣೆ ಬಿಟ್ಟು, ಕಾಂಗ್ರೆಸ್ ಕೈಗೆ ಅನಾಯಾಸವಾಗಿ ಸಿಕ್ಕ ಅಸ್ತ್ರವಿದು ಎಂದುದಲ್ಲದೆ ಶಿಸ್ತಿನ ಪಕ್ಷ ಬಿಜೆಪಿ ಏನು ಮಾಡುತ್ತದೋ ಎಂದು ಕೂಗಿವೆಯಲ್ಲಾ. ಅಂತೂ ಲಿಂಬಾವಳಿ ನಡವಳಿಕೆಯಿಂದ ಅಘಾತವಾಗಿರುವುದು ಟಿವಿಯೊಳಗಿರುವ ಸಂಘಿ ಅಂಕರ್‌ಗಳಿಗೆ. ಶಿಸ್ತಿನ ಪಕ್ಷ ಬಿಜೆಪಿ ಎನ್ನುವುದನ್ನು ವಿಶ್ಲೇಷಿಸುವುವಾದರೆ ಲಿಂಬಾವಳಿಯ ಅನಾಗರಿಕ ನಡತೆಯ ವಿಷಯದಲ್ಲಿ ಯಾವೊಬ್ಬ ಬಿಜೆಪಿಯೂ ಪ್ರತಿಕ್ರಿಯಿಸಿಲ್ಲ. ಇನ್ನು ಬಿಜೆಪಿ ಮಹಿಳೆಯರಂತೂ ಆಕೆಗೆ ತಕ್ಕಶಾಸ್ತಿಯಾಯ್ತು ಎನ್ನುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಕರ್ನಾಟಕದ ಇತಿಹಾಸದಲ್ಲಿ ಈವರೆಗೆ ಯಾವೊಬ್ಬ ಶಾಸಕನೂ ಇಷ್ಟು ಅನಾಗರಿಕವಾಗಿ ನಡೆದುಕೊಂಡಿರದ ಕಾರಣವಾಗಿ, ಪ್ರಕರಣದ ಪ್ರಮುಖ ಆರೋಪಿ ಲಿಂಬಾವಳಿಯನ್ನ ಮಾತನಾಡಿಸಬೇಕೆನಿಸಿತಲ್ಲಾ. ಆ ಕೂಡಲೇ ಪೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್ “ನಮಸ್ತೆ ಸದಾ ವತ್ಸಲೇ ಮಾತೃಭೂಮಿ”.

“ಹಲೋ ಯಾರ್ರಿ”

“ಸಾರ್ ನಾನು ಯಾಹು ಅಂತ, ಸಾರ್”

“ಯಾಹು ಅಂದರೆ ಯಾರ್ರಿ”

“ಪತ್ರಕರ್ತ ಸಾರ್”

“ಏನೇಳ್ರಿ”

“ನಿಮಗೆ ಧಮಕಿ ಹಾಕಿದ ಮಹಿಳೆ ಮೇಲೆ ಎಫ್‌ಐಆರ್ ಆಯ್ತಂತಲ್ಲಾ ಸಾರ್”

“ಎಫ್‌ಐಆರ್‌ಗಿಂತ ಮೊದ್ಲು ನಾಲ್ಕು ವದಿರಿ ಅವುಳಿಗೆ ಅಂತ ಹೇಳಿದ್ದೆ ನಮ್ಮ ಪೊಲೀಸರಿಗೆ”

“ಯಾಕ್ ಸಾರ್”

“ಮತ್ತೆ ಅವಳ ದುರಹಂಕಾರ ನೋಡ್ರಿ, ರಾಜಕಾಲುವೆ ಒತ್ತುವರಿ ಮಾಡಿದ್ಲು, ಅಲ್ದೆ ನನಿಗೇ ಆವಾಜ್ ಹಾಕ್ತಳೆ”

“ತಪ್ಪು ಸಾರ್ ಜನಪ್ರತಿನಿಧಿಗೆ ಆವಾಜ್ ಹಾಕಬಾರ್ದು”

“ಅದಕ್ಕೆ ಎಫ್‌ಐಆರ್ ಹಾಕಿಸಿದ್ದೀನಿ”

“ವಳೆದಾಯ್ತು ಬುಡಿ ಸಾರ್. ಇನ್ನ ಮುಂದೆ ಯಾರೂ ನಿಮ್ಮತ್ರ ಅರ್ಜಿ ಹಿಡಕೊಂಡು ಬರಲ್ಲ”

“ಜನಕ್ಕೆ ಸದರ ಕೊಡಬಾರ್ದು ಕಂಡ್ರಿ. ಶಾಸಕರು ಅಂದ್ರೆ ಭಯ ಇರಬೇಕು. ಇಲ್ಲ ಅಂದ್ರೆ ಯಲ್ಲಾದಕ್ಕೂ ಅರ್ಜಿ ತಗೊಂಡು ಬರ್ತಾರೆ”

“ಮಹಿಳಾ ಹೋರಾಟಗಾರ್ರು ಆ ಹೆಣ್ಣು ಮಗಳ ಪರ ಪ್ರತಿಭಟನೆ ಮಾಡ್ತೆ ಅವುರೆ.”

“ಮಾಡ್ಲಿ ಬುಡ್ರಿ. ಈ ಮಹಿಳೆಯರು ಆಕೆ ಪರ ಬರ್ತಾರೆ ಅಂದ್ರೆ ಇವುರು ಅವುಳ ತರದೋರೆಯಾ”

“ಅಲ್ಲ ಸಾರ್, ನಿಮ್ಮಲ್ಲಿ ಮಹಿಳೆಯರ ಬಗ್ಗೆ ಇರೋ ಗೌರವ ನೋಡಿದ್ರೆ, ನಿಮ್ಮ ಮಾತಿನ ಪರಿಣಾಮನೆ ನಿಮಗೆ ಗೊತ್ತಿಲ್ಲ ಅನ್ಸುತ್ತೆ”

“ಏನೇಳ್ತಾಯಿದ್ದಿರಿ ನೀವು”

“ಅವತ್ತಿನಿಂದ ಇವತ್ತಿನವರೆಗೂ ಶಿಸ್ತಿನ ಪಕ್ಷವಾದ ನಿಮ್ಮಲ್ಲಿ ಶೀಲವಂತನೇ ಕಾಣಲಿಲ್ಲ. ವಿಕೃತ ಮನಸ್ಸಿನವರೇ ಜಾಸ್ತಿ ಬಿಡಿ ಸಾರ್”

ಥೂತ್ತೇರಿ.


ಇದನ್ನೂ ಓದಿ: ಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....