Homeಅಂಕಣಗಳು'ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?'

‘ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?’

- Advertisement -
- Advertisement -

ಆರೆಸ್ಸೆಸ್ ತತ್ವ ಅಳವಡಿಸಿಕೊಂಡರೆ ನಾವು ಕಾಂಗ್ರೆಸ್ ಪರವಾಗಿಯೂ ಕೆಲಸ ಮಾಡಲು ಸಿದ್ಧ ಎಂದು ಆರೆಸ್ಸೆಸ್ ಸಂಘದ ಅರುಣಕುಮಾರ ಹೇಳಿದ್ದಾರಲ್ಲಾ ಇದೊಂದು ರೀತಿ ಅಜ್ಞಾನದಿಂದ ಕೂಡಿರುವ ಮಾತು. ಕಾಂಗ್ರೆಸ್ ಹುಟ್ಟಿದಾಗಿನಿಂದಲೂ ಹಲವರು ಹಿಂದೂ ಪರವಾದ ಸಿದ್ಧಾಂತಗಳಲ್ಲೇ ಬದುಕಿದ್ದಾರೆ. ಆದರೆ ಜೈನ, ಬೌದ್ಧ, ಸಿಖ್ ಮತ್ತು ಬಸವ ತತ್ವಗಳೆಲ್ಲಾ ಹಿಂದೂಧರ್ಮದಿಂದಲೇ ಸಿಡಿದುಹೋಗಿ ಪ್ರಜ್ವಲಿಸುತ್ತಿರುವ ಧರ್ಮದ ಕಿಡಿಗಳು. ಇನ್ನೂ ಲೋಕಲ್ಲಾಗಿ ಮಾತನಾಡುವುದಾದರೆ ಕಾಂಗ್ರೆಸಿನಲ್ಲಿದ್ದು ತಮ್ಮವನೇನಾದರು ಬಿಜೆಪಿ ಕ್ಯಾಂಡಿಡೇಟ್ ಆದರೆ ಅವನಿಗೆ ಓಟು ಮಾಡುವ ಅಸಾಮಿಗಳೂ ಹೇರಳವಾಗಿದ್ದಾರೆ. ಈ ಪೈಕಿ ಎರಡು ಉದಾಹರಣೆ ಕೊಡುವುದಾದರೆ, ಚಿಕ್ಕಮಗಳೂರಲ್ಲಿ ಅನಾದಿಕಾಲದಿಂದಲೂ ಕಾಂಗ್ರೆಸ್ಸಿಗರಾಗಿರುವ ಒಕ್ಕಲಿಗರು ತಮ್ಮ ಹುಡುಗನನ್ನ ಕೈಬಿಡಲಾದೀತೆ ಎಂದು ಸಿ.ಟಿ.ರವಿಗೆ ಓಟು ಮಾಡುತ್ತಿರಲಾಗಿ, ಅತ್ತ ಶಿವಮೊಗ್ಗದ ಕಾಂಗ್ರೆಸ್ ಕುರುಬರು ಈಶ್ವರಪ್ಪ ನಮ್ಮವನೆಂದು ಓಟು ಮಾಡುವ ಉದಾಹರಣೆಗಳು ನಮ್ಮ ಮುಂದಿವೆ. ಆದರೆ ಬಿಜೆಪಿ ವಿಷಯದಲ್ಲಿ ಈ ಆಟ ನಡೆಯುವುದಿಲ್ಲ. ಅಲ್ಲಿ ಹೆರಿಗೆ ಡಾಕ್ಟರ್ ಹೆರಿಗೆ ಪೇಷಂಟ್ ಕಾಯುವಂತೆ ಬಿಜೆಪಿ ಮತದಾರರನ್ನು ಕಾಯುವ ವಾಚ್‌ಮನ್‌ಗಳು ಹೇರಳವಾಗಿದ್ದಾರಂತಲ್ಲಾ, ಥೂತ್ತೇರಿ.

*****

ನಮ್ಮ ಸಂಸ್ಕೃತಿ ವಿಷಯ ಮಾತನಾಡುವುದಾದರೆ, ಸಾಮಾಜಿಕವಾಗಿ ಏನೇ ನಡೆದರೂ, ಅದು ಮಹಿಳೆ ಮತ್ತು ಮಕ್ಕಳ ಮೇಲೆ ಪರಿಣಾಮ ಬೀರುತ್ತಾ ಬಂದಿರುವುದು ಅನಾದಿಕಾಲದಿಂದ ನಡೆದುಬಂದಿದೆ. ಮುರುಘಾ ಶರಣರ ಆರೋಪಿತ ದುಷ್ಕೃತ್ಯದಲ್ಲಿ ಸಿಲುಕಿದ್ದವರೆಲ್ಲಾ ಮಕ್ಕಳು. ಇನ್ನು ಪ್ರವಾಹದಿಂದ ಸಂತ್ರಸ್ತರಾಗಿ ಶಾಸಕನಿಂದ ಅನಾಗರಿಕವಾದ ಅವಾಚ್ಯ ಬೈಗುಳ ಕೇಳಿದವರು ಮಹಿಳೆ. ಈ ಪ್ರಕರಣದ ವಿಷಯದಲ್ಲಿ ಮಾಧ್ಯಮದೊಳಗಿರುವ ಶ್ಯಾನುಭೋಗರ ಮಕ್ಕಳು ಕೃತ್ಯದ ವಿಶ್ಲೇಷಣೆ ಬಿಟ್ಟು, ಕಾಂಗ್ರೆಸ್ ಕೈಗೆ ಅನಾಯಾಸವಾಗಿ ಸಿಕ್ಕ ಅಸ್ತ್ರವಿದು ಎಂದುದಲ್ಲದೆ ಶಿಸ್ತಿನ ಪಕ್ಷ ಬಿಜೆಪಿ ಏನು ಮಾಡುತ್ತದೋ ಎಂದು ಕೂಗಿವೆಯಲ್ಲಾ. ಅಂತೂ ಲಿಂಬಾವಳಿ ನಡವಳಿಕೆಯಿಂದ ಅಘಾತವಾಗಿರುವುದು ಟಿವಿಯೊಳಗಿರುವ ಸಂಘಿ ಅಂಕರ್‌ಗಳಿಗೆ. ಶಿಸ್ತಿನ ಪಕ್ಷ ಬಿಜೆಪಿ ಎನ್ನುವುದನ್ನು ವಿಶ್ಲೇಷಿಸುವುವಾದರೆ ಲಿಂಬಾವಳಿಯ ಅನಾಗರಿಕ ನಡತೆಯ ವಿಷಯದಲ್ಲಿ ಯಾವೊಬ್ಬ ಬಿಜೆಪಿಯೂ ಪ್ರತಿಕ್ರಿಯಿಸಿಲ್ಲ. ಇನ್ನು ಬಿಜೆಪಿ ಮಹಿಳೆಯರಂತೂ ಆಕೆಗೆ ತಕ್ಕಶಾಸ್ತಿಯಾಯ್ತು ಎನ್ನುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಕರ್ನಾಟಕದ ಇತಿಹಾಸದಲ್ಲಿ ಈವರೆಗೆ ಯಾವೊಬ್ಬ ಶಾಸಕನೂ ಇಷ್ಟು ಅನಾಗರಿಕವಾಗಿ ನಡೆದುಕೊಂಡಿರದ ಕಾರಣವಾಗಿ, ಪ್ರಕರಣದ ಪ್ರಮುಖ ಆರೋಪಿ ಲಿಂಬಾವಳಿಯನ್ನ ಮಾತನಾಡಿಸಬೇಕೆನಿಸಿತಲ್ಲಾ. ಆ ಕೂಡಲೇ ಪೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್ “ನಮಸ್ತೆ ಸದಾ ವತ್ಸಲೇ ಮಾತೃಭೂಮಿ”.

“ಹಲೋ ಯಾರ್ರಿ”

“ಸಾರ್ ನಾನು ಯಾಹು ಅಂತ, ಸಾರ್”

“ಯಾಹು ಅಂದರೆ ಯಾರ್ರಿ”

“ಪತ್ರಕರ್ತ ಸಾರ್”

“ಏನೇಳ್ರಿ”

“ನಿಮಗೆ ಧಮಕಿ ಹಾಕಿದ ಮಹಿಳೆ ಮೇಲೆ ಎಫ್‌ಐಆರ್ ಆಯ್ತಂತಲ್ಲಾ ಸಾರ್”

“ಎಫ್‌ಐಆರ್‌ಗಿಂತ ಮೊದ್ಲು ನಾಲ್ಕು ವದಿರಿ ಅವುಳಿಗೆ ಅಂತ ಹೇಳಿದ್ದೆ ನಮ್ಮ ಪೊಲೀಸರಿಗೆ”

“ಯಾಕ್ ಸಾರ್”

“ಮತ್ತೆ ಅವಳ ದುರಹಂಕಾರ ನೋಡ್ರಿ, ರಾಜಕಾಲುವೆ ಒತ್ತುವರಿ ಮಾಡಿದ್ಲು, ಅಲ್ದೆ ನನಿಗೇ ಆವಾಜ್ ಹಾಕ್ತಳೆ”

“ತಪ್ಪು ಸಾರ್ ಜನಪ್ರತಿನಿಧಿಗೆ ಆವಾಜ್ ಹಾಕಬಾರ್ದು”

“ಅದಕ್ಕೆ ಎಫ್‌ಐಆರ್ ಹಾಕಿಸಿದ್ದೀನಿ”

“ವಳೆದಾಯ್ತು ಬುಡಿ ಸಾರ್. ಇನ್ನ ಮುಂದೆ ಯಾರೂ ನಿಮ್ಮತ್ರ ಅರ್ಜಿ ಹಿಡಕೊಂಡು ಬರಲ್ಲ”

“ಜನಕ್ಕೆ ಸದರ ಕೊಡಬಾರ್ದು ಕಂಡ್ರಿ. ಶಾಸಕರು ಅಂದ್ರೆ ಭಯ ಇರಬೇಕು. ಇಲ್ಲ ಅಂದ್ರೆ ಯಲ್ಲಾದಕ್ಕೂ ಅರ್ಜಿ ತಗೊಂಡು ಬರ್ತಾರೆ”

“ಮಹಿಳಾ ಹೋರಾಟಗಾರ್ರು ಆ ಹೆಣ್ಣು ಮಗಳ ಪರ ಪ್ರತಿಭಟನೆ ಮಾಡ್ತೆ ಅವುರೆ.”

“ಮಾಡ್ಲಿ ಬುಡ್ರಿ. ಈ ಮಹಿಳೆಯರು ಆಕೆ ಪರ ಬರ್ತಾರೆ ಅಂದ್ರೆ ಇವುರು ಅವುಳ ತರದೋರೆಯಾ”

“ಅಲ್ಲ ಸಾರ್, ನಿಮ್ಮಲ್ಲಿ ಮಹಿಳೆಯರ ಬಗ್ಗೆ ಇರೋ ಗೌರವ ನೋಡಿದ್ರೆ, ನಿಮ್ಮ ಮಾತಿನ ಪರಿಣಾಮನೆ ನಿಮಗೆ ಗೊತ್ತಿಲ್ಲ ಅನ್ಸುತ್ತೆ”

“ಏನೇಳ್ತಾಯಿದ್ದಿರಿ ನೀವು”

“ಅವತ್ತಿನಿಂದ ಇವತ್ತಿನವರೆಗೂ ಶಿಸ್ತಿನ ಪಕ್ಷವಾದ ನಿಮ್ಮಲ್ಲಿ ಶೀಲವಂತನೇ ಕಾಣಲಿಲ್ಲ. ವಿಕೃತ ಮನಸ್ಸಿನವರೇ ಜಾಸ್ತಿ ಬಿಡಿ ಸಾರ್”

ಥೂತ್ತೇರಿ.


ಇದನ್ನೂ ಓದಿ: ಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...