Homeಅಂಕಣಗಳು'ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?'

‘ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?’

- Advertisement -
- Advertisement -

ಆರೆಸ್ಸೆಸ್ ತತ್ವ ಅಳವಡಿಸಿಕೊಂಡರೆ ನಾವು ಕಾಂಗ್ರೆಸ್ ಪರವಾಗಿಯೂ ಕೆಲಸ ಮಾಡಲು ಸಿದ್ಧ ಎಂದು ಆರೆಸ್ಸೆಸ್ ಸಂಘದ ಅರುಣಕುಮಾರ ಹೇಳಿದ್ದಾರಲ್ಲಾ ಇದೊಂದು ರೀತಿ ಅಜ್ಞಾನದಿಂದ ಕೂಡಿರುವ ಮಾತು. ಕಾಂಗ್ರೆಸ್ ಹುಟ್ಟಿದಾಗಿನಿಂದಲೂ ಹಲವರು ಹಿಂದೂ ಪರವಾದ ಸಿದ್ಧಾಂತಗಳಲ್ಲೇ ಬದುಕಿದ್ದಾರೆ. ಆದರೆ ಜೈನ, ಬೌದ್ಧ, ಸಿಖ್ ಮತ್ತು ಬಸವ ತತ್ವಗಳೆಲ್ಲಾ ಹಿಂದೂಧರ್ಮದಿಂದಲೇ ಸಿಡಿದುಹೋಗಿ ಪ್ರಜ್ವಲಿಸುತ್ತಿರುವ ಧರ್ಮದ ಕಿಡಿಗಳು. ಇನ್ನೂ ಲೋಕಲ್ಲಾಗಿ ಮಾತನಾಡುವುದಾದರೆ ಕಾಂಗ್ರೆಸಿನಲ್ಲಿದ್ದು ತಮ್ಮವನೇನಾದರು ಬಿಜೆಪಿ ಕ್ಯಾಂಡಿಡೇಟ್ ಆದರೆ ಅವನಿಗೆ ಓಟು ಮಾಡುವ ಅಸಾಮಿಗಳೂ ಹೇರಳವಾಗಿದ್ದಾರೆ. ಈ ಪೈಕಿ ಎರಡು ಉದಾಹರಣೆ ಕೊಡುವುದಾದರೆ, ಚಿಕ್ಕಮಗಳೂರಲ್ಲಿ ಅನಾದಿಕಾಲದಿಂದಲೂ ಕಾಂಗ್ರೆಸ್ಸಿಗರಾಗಿರುವ ಒಕ್ಕಲಿಗರು ತಮ್ಮ ಹುಡುಗನನ್ನ ಕೈಬಿಡಲಾದೀತೆ ಎಂದು ಸಿ.ಟಿ.ರವಿಗೆ ಓಟು ಮಾಡುತ್ತಿರಲಾಗಿ, ಅತ್ತ ಶಿವಮೊಗ್ಗದ ಕಾಂಗ್ರೆಸ್ ಕುರುಬರು ಈಶ್ವರಪ್ಪ ನಮ್ಮವನೆಂದು ಓಟು ಮಾಡುವ ಉದಾಹರಣೆಗಳು ನಮ್ಮ ಮುಂದಿವೆ. ಆದರೆ ಬಿಜೆಪಿ ವಿಷಯದಲ್ಲಿ ಈ ಆಟ ನಡೆಯುವುದಿಲ್ಲ. ಅಲ್ಲಿ ಹೆರಿಗೆ ಡಾಕ್ಟರ್ ಹೆರಿಗೆ ಪೇಷಂಟ್ ಕಾಯುವಂತೆ ಬಿಜೆಪಿ ಮತದಾರರನ್ನು ಕಾಯುವ ವಾಚ್‌ಮನ್‌ಗಳು ಹೇರಳವಾಗಿದ್ದಾರಂತಲ್ಲಾ, ಥೂತ್ತೇರಿ.

*****

ನಮ್ಮ ಸಂಸ್ಕೃತಿ ವಿಷಯ ಮಾತನಾಡುವುದಾದರೆ, ಸಾಮಾಜಿಕವಾಗಿ ಏನೇ ನಡೆದರೂ, ಅದು ಮಹಿಳೆ ಮತ್ತು ಮಕ್ಕಳ ಮೇಲೆ ಪರಿಣಾಮ ಬೀರುತ್ತಾ ಬಂದಿರುವುದು ಅನಾದಿಕಾಲದಿಂದ ನಡೆದುಬಂದಿದೆ. ಮುರುಘಾ ಶರಣರ ಆರೋಪಿತ ದುಷ್ಕೃತ್ಯದಲ್ಲಿ ಸಿಲುಕಿದ್ದವರೆಲ್ಲಾ ಮಕ್ಕಳು. ಇನ್ನು ಪ್ರವಾಹದಿಂದ ಸಂತ್ರಸ್ತರಾಗಿ ಶಾಸಕನಿಂದ ಅನಾಗರಿಕವಾದ ಅವಾಚ್ಯ ಬೈಗುಳ ಕೇಳಿದವರು ಮಹಿಳೆ. ಈ ಪ್ರಕರಣದ ವಿಷಯದಲ್ಲಿ ಮಾಧ್ಯಮದೊಳಗಿರುವ ಶ್ಯಾನುಭೋಗರ ಮಕ್ಕಳು ಕೃತ್ಯದ ವಿಶ್ಲೇಷಣೆ ಬಿಟ್ಟು, ಕಾಂಗ್ರೆಸ್ ಕೈಗೆ ಅನಾಯಾಸವಾಗಿ ಸಿಕ್ಕ ಅಸ್ತ್ರವಿದು ಎಂದುದಲ್ಲದೆ ಶಿಸ್ತಿನ ಪಕ್ಷ ಬಿಜೆಪಿ ಏನು ಮಾಡುತ್ತದೋ ಎಂದು ಕೂಗಿವೆಯಲ್ಲಾ. ಅಂತೂ ಲಿಂಬಾವಳಿ ನಡವಳಿಕೆಯಿಂದ ಅಘಾತವಾಗಿರುವುದು ಟಿವಿಯೊಳಗಿರುವ ಸಂಘಿ ಅಂಕರ್‌ಗಳಿಗೆ. ಶಿಸ್ತಿನ ಪಕ್ಷ ಬಿಜೆಪಿ ಎನ್ನುವುದನ್ನು ವಿಶ್ಲೇಷಿಸುವುವಾದರೆ ಲಿಂಬಾವಳಿಯ ಅನಾಗರಿಕ ನಡತೆಯ ವಿಷಯದಲ್ಲಿ ಯಾವೊಬ್ಬ ಬಿಜೆಪಿಯೂ ಪ್ರತಿಕ್ರಿಯಿಸಿಲ್ಲ. ಇನ್ನು ಬಿಜೆಪಿ ಮಹಿಳೆಯರಂತೂ ಆಕೆಗೆ ತಕ್ಕಶಾಸ್ತಿಯಾಯ್ತು ಎನ್ನುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಕರ್ನಾಟಕದ ಇತಿಹಾಸದಲ್ಲಿ ಈವರೆಗೆ ಯಾವೊಬ್ಬ ಶಾಸಕನೂ ಇಷ್ಟು ಅನಾಗರಿಕವಾಗಿ ನಡೆದುಕೊಂಡಿರದ ಕಾರಣವಾಗಿ, ಪ್ರಕರಣದ ಪ್ರಮುಖ ಆರೋಪಿ ಲಿಂಬಾವಳಿಯನ್ನ ಮಾತನಾಡಿಸಬೇಕೆನಿಸಿತಲ್ಲಾ. ಆ ಕೂಡಲೇ ಪೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್ “ನಮಸ್ತೆ ಸದಾ ವತ್ಸಲೇ ಮಾತೃಭೂಮಿ”.

“ಹಲೋ ಯಾರ್ರಿ”

“ಸಾರ್ ನಾನು ಯಾಹು ಅಂತ, ಸಾರ್”

“ಯಾಹು ಅಂದರೆ ಯಾರ್ರಿ”

“ಪತ್ರಕರ್ತ ಸಾರ್”

“ಏನೇಳ್ರಿ”

“ನಿಮಗೆ ಧಮಕಿ ಹಾಕಿದ ಮಹಿಳೆ ಮೇಲೆ ಎಫ್‌ಐಆರ್ ಆಯ್ತಂತಲ್ಲಾ ಸಾರ್”

“ಎಫ್‌ಐಆರ್‌ಗಿಂತ ಮೊದ್ಲು ನಾಲ್ಕು ವದಿರಿ ಅವುಳಿಗೆ ಅಂತ ಹೇಳಿದ್ದೆ ನಮ್ಮ ಪೊಲೀಸರಿಗೆ”

“ಯಾಕ್ ಸಾರ್”

“ಮತ್ತೆ ಅವಳ ದುರಹಂಕಾರ ನೋಡ್ರಿ, ರಾಜಕಾಲುವೆ ಒತ್ತುವರಿ ಮಾಡಿದ್ಲು, ಅಲ್ದೆ ನನಿಗೇ ಆವಾಜ್ ಹಾಕ್ತಳೆ”

“ತಪ್ಪು ಸಾರ್ ಜನಪ್ರತಿನಿಧಿಗೆ ಆವಾಜ್ ಹಾಕಬಾರ್ದು”

“ಅದಕ್ಕೆ ಎಫ್‌ಐಆರ್ ಹಾಕಿಸಿದ್ದೀನಿ”

“ವಳೆದಾಯ್ತು ಬುಡಿ ಸಾರ್. ಇನ್ನ ಮುಂದೆ ಯಾರೂ ನಿಮ್ಮತ್ರ ಅರ್ಜಿ ಹಿಡಕೊಂಡು ಬರಲ್ಲ”

“ಜನಕ್ಕೆ ಸದರ ಕೊಡಬಾರ್ದು ಕಂಡ್ರಿ. ಶಾಸಕರು ಅಂದ್ರೆ ಭಯ ಇರಬೇಕು. ಇಲ್ಲ ಅಂದ್ರೆ ಯಲ್ಲಾದಕ್ಕೂ ಅರ್ಜಿ ತಗೊಂಡು ಬರ್ತಾರೆ”

“ಮಹಿಳಾ ಹೋರಾಟಗಾರ್ರು ಆ ಹೆಣ್ಣು ಮಗಳ ಪರ ಪ್ರತಿಭಟನೆ ಮಾಡ್ತೆ ಅವುರೆ.”

“ಮಾಡ್ಲಿ ಬುಡ್ರಿ. ಈ ಮಹಿಳೆಯರು ಆಕೆ ಪರ ಬರ್ತಾರೆ ಅಂದ್ರೆ ಇವುರು ಅವುಳ ತರದೋರೆಯಾ”

“ಅಲ್ಲ ಸಾರ್, ನಿಮ್ಮಲ್ಲಿ ಮಹಿಳೆಯರ ಬಗ್ಗೆ ಇರೋ ಗೌರವ ನೋಡಿದ್ರೆ, ನಿಮ್ಮ ಮಾತಿನ ಪರಿಣಾಮನೆ ನಿಮಗೆ ಗೊತ್ತಿಲ್ಲ ಅನ್ಸುತ್ತೆ”

“ಏನೇಳ್ತಾಯಿದ್ದಿರಿ ನೀವು”

“ಅವತ್ತಿನಿಂದ ಇವತ್ತಿನವರೆಗೂ ಶಿಸ್ತಿನ ಪಕ್ಷವಾದ ನಿಮ್ಮಲ್ಲಿ ಶೀಲವಂತನೇ ಕಾಣಲಿಲ್ಲ. ವಿಕೃತ ಮನಸ್ಸಿನವರೇ ಜಾಸ್ತಿ ಬಿಡಿ ಸಾರ್”

ಥೂತ್ತೇರಿ.


ಇದನ್ನೂ ಓದಿ: ಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...