Homeಅಂಕಣಗಳು'ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?'

‘ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?’

- Advertisement -
- Advertisement -

ಆರೆಸ್ಸೆಸ್ ತತ್ವ ಅಳವಡಿಸಿಕೊಂಡರೆ ನಾವು ಕಾಂಗ್ರೆಸ್ ಪರವಾಗಿಯೂ ಕೆಲಸ ಮಾಡಲು ಸಿದ್ಧ ಎಂದು ಆರೆಸ್ಸೆಸ್ ಸಂಘದ ಅರುಣಕುಮಾರ ಹೇಳಿದ್ದಾರಲ್ಲಾ ಇದೊಂದು ರೀತಿ ಅಜ್ಞಾನದಿಂದ ಕೂಡಿರುವ ಮಾತು. ಕಾಂಗ್ರೆಸ್ ಹುಟ್ಟಿದಾಗಿನಿಂದಲೂ ಹಲವರು ಹಿಂದೂ ಪರವಾದ ಸಿದ್ಧಾಂತಗಳಲ್ಲೇ ಬದುಕಿದ್ದಾರೆ. ಆದರೆ ಜೈನ, ಬೌದ್ಧ, ಸಿಖ್ ಮತ್ತು ಬಸವ ತತ್ವಗಳೆಲ್ಲಾ ಹಿಂದೂಧರ್ಮದಿಂದಲೇ ಸಿಡಿದುಹೋಗಿ ಪ್ರಜ್ವಲಿಸುತ್ತಿರುವ ಧರ್ಮದ ಕಿಡಿಗಳು. ಇನ್ನೂ ಲೋಕಲ್ಲಾಗಿ ಮಾತನಾಡುವುದಾದರೆ ಕಾಂಗ್ರೆಸಿನಲ್ಲಿದ್ದು ತಮ್ಮವನೇನಾದರು ಬಿಜೆಪಿ ಕ್ಯಾಂಡಿಡೇಟ್ ಆದರೆ ಅವನಿಗೆ ಓಟು ಮಾಡುವ ಅಸಾಮಿಗಳೂ ಹೇರಳವಾಗಿದ್ದಾರೆ. ಈ ಪೈಕಿ ಎರಡು ಉದಾಹರಣೆ ಕೊಡುವುದಾದರೆ, ಚಿಕ್ಕಮಗಳೂರಲ್ಲಿ ಅನಾದಿಕಾಲದಿಂದಲೂ ಕಾಂಗ್ರೆಸ್ಸಿಗರಾಗಿರುವ ಒಕ್ಕಲಿಗರು ತಮ್ಮ ಹುಡುಗನನ್ನ ಕೈಬಿಡಲಾದೀತೆ ಎಂದು ಸಿ.ಟಿ.ರವಿಗೆ ಓಟು ಮಾಡುತ್ತಿರಲಾಗಿ, ಅತ್ತ ಶಿವಮೊಗ್ಗದ ಕಾಂಗ್ರೆಸ್ ಕುರುಬರು ಈಶ್ವರಪ್ಪ ನಮ್ಮವನೆಂದು ಓಟು ಮಾಡುವ ಉದಾಹರಣೆಗಳು ನಮ್ಮ ಮುಂದಿವೆ. ಆದರೆ ಬಿಜೆಪಿ ವಿಷಯದಲ್ಲಿ ಈ ಆಟ ನಡೆಯುವುದಿಲ್ಲ. ಅಲ್ಲಿ ಹೆರಿಗೆ ಡಾಕ್ಟರ್ ಹೆರಿಗೆ ಪೇಷಂಟ್ ಕಾಯುವಂತೆ ಬಿಜೆಪಿ ಮತದಾರರನ್ನು ಕಾಯುವ ವಾಚ್‌ಮನ್‌ಗಳು ಹೇರಳವಾಗಿದ್ದಾರಂತಲ್ಲಾ, ಥೂತ್ತೇರಿ.

*****

ನಮ್ಮ ಸಂಸ್ಕೃತಿ ವಿಷಯ ಮಾತನಾಡುವುದಾದರೆ, ಸಾಮಾಜಿಕವಾಗಿ ಏನೇ ನಡೆದರೂ, ಅದು ಮಹಿಳೆ ಮತ್ತು ಮಕ್ಕಳ ಮೇಲೆ ಪರಿಣಾಮ ಬೀರುತ್ತಾ ಬಂದಿರುವುದು ಅನಾದಿಕಾಲದಿಂದ ನಡೆದುಬಂದಿದೆ. ಮುರುಘಾ ಶರಣರ ಆರೋಪಿತ ದುಷ್ಕೃತ್ಯದಲ್ಲಿ ಸಿಲುಕಿದ್ದವರೆಲ್ಲಾ ಮಕ್ಕಳು. ಇನ್ನು ಪ್ರವಾಹದಿಂದ ಸಂತ್ರಸ್ತರಾಗಿ ಶಾಸಕನಿಂದ ಅನಾಗರಿಕವಾದ ಅವಾಚ್ಯ ಬೈಗುಳ ಕೇಳಿದವರು ಮಹಿಳೆ. ಈ ಪ್ರಕರಣದ ವಿಷಯದಲ್ಲಿ ಮಾಧ್ಯಮದೊಳಗಿರುವ ಶ್ಯಾನುಭೋಗರ ಮಕ್ಕಳು ಕೃತ್ಯದ ವಿಶ್ಲೇಷಣೆ ಬಿಟ್ಟು, ಕಾಂಗ್ರೆಸ್ ಕೈಗೆ ಅನಾಯಾಸವಾಗಿ ಸಿಕ್ಕ ಅಸ್ತ್ರವಿದು ಎಂದುದಲ್ಲದೆ ಶಿಸ್ತಿನ ಪಕ್ಷ ಬಿಜೆಪಿ ಏನು ಮಾಡುತ್ತದೋ ಎಂದು ಕೂಗಿವೆಯಲ್ಲಾ. ಅಂತೂ ಲಿಂಬಾವಳಿ ನಡವಳಿಕೆಯಿಂದ ಅಘಾತವಾಗಿರುವುದು ಟಿವಿಯೊಳಗಿರುವ ಸಂಘಿ ಅಂಕರ್‌ಗಳಿಗೆ. ಶಿಸ್ತಿನ ಪಕ್ಷ ಬಿಜೆಪಿ ಎನ್ನುವುದನ್ನು ವಿಶ್ಲೇಷಿಸುವುವಾದರೆ ಲಿಂಬಾವಳಿಯ ಅನಾಗರಿಕ ನಡತೆಯ ವಿಷಯದಲ್ಲಿ ಯಾವೊಬ್ಬ ಬಿಜೆಪಿಯೂ ಪ್ರತಿಕ್ರಿಯಿಸಿಲ್ಲ. ಇನ್ನು ಬಿಜೆಪಿ ಮಹಿಳೆಯರಂತೂ ಆಕೆಗೆ ತಕ್ಕಶಾಸ್ತಿಯಾಯ್ತು ಎನ್ನುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಕರ್ನಾಟಕದ ಇತಿಹಾಸದಲ್ಲಿ ಈವರೆಗೆ ಯಾವೊಬ್ಬ ಶಾಸಕನೂ ಇಷ್ಟು ಅನಾಗರಿಕವಾಗಿ ನಡೆದುಕೊಂಡಿರದ ಕಾರಣವಾಗಿ, ಪ್ರಕರಣದ ಪ್ರಮುಖ ಆರೋಪಿ ಲಿಂಬಾವಳಿಯನ್ನ ಮಾತನಾಡಿಸಬೇಕೆನಿಸಿತಲ್ಲಾ. ಆ ಕೂಡಲೇ ಪೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್ “ನಮಸ್ತೆ ಸದಾ ವತ್ಸಲೇ ಮಾತೃಭೂಮಿ”.

“ಹಲೋ ಯಾರ್ರಿ”

“ಸಾರ್ ನಾನು ಯಾಹು ಅಂತ, ಸಾರ್”

“ಯಾಹು ಅಂದರೆ ಯಾರ್ರಿ”

“ಪತ್ರಕರ್ತ ಸಾರ್”

“ಏನೇಳ್ರಿ”

“ನಿಮಗೆ ಧಮಕಿ ಹಾಕಿದ ಮಹಿಳೆ ಮೇಲೆ ಎಫ್‌ಐಆರ್ ಆಯ್ತಂತಲ್ಲಾ ಸಾರ್”

“ಎಫ್‌ಐಆರ್‌ಗಿಂತ ಮೊದ್ಲು ನಾಲ್ಕು ವದಿರಿ ಅವುಳಿಗೆ ಅಂತ ಹೇಳಿದ್ದೆ ನಮ್ಮ ಪೊಲೀಸರಿಗೆ”

“ಯಾಕ್ ಸಾರ್”

“ಮತ್ತೆ ಅವಳ ದುರಹಂಕಾರ ನೋಡ್ರಿ, ರಾಜಕಾಲುವೆ ಒತ್ತುವರಿ ಮಾಡಿದ್ಲು, ಅಲ್ದೆ ನನಿಗೇ ಆವಾಜ್ ಹಾಕ್ತಳೆ”

“ತಪ್ಪು ಸಾರ್ ಜನಪ್ರತಿನಿಧಿಗೆ ಆವಾಜ್ ಹಾಕಬಾರ್ದು”

“ಅದಕ್ಕೆ ಎಫ್‌ಐಆರ್ ಹಾಕಿಸಿದ್ದೀನಿ”

“ವಳೆದಾಯ್ತು ಬುಡಿ ಸಾರ್. ಇನ್ನ ಮುಂದೆ ಯಾರೂ ನಿಮ್ಮತ್ರ ಅರ್ಜಿ ಹಿಡಕೊಂಡು ಬರಲ್ಲ”

“ಜನಕ್ಕೆ ಸದರ ಕೊಡಬಾರ್ದು ಕಂಡ್ರಿ. ಶಾಸಕರು ಅಂದ್ರೆ ಭಯ ಇರಬೇಕು. ಇಲ್ಲ ಅಂದ್ರೆ ಯಲ್ಲಾದಕ್ಕೂ ಅರ್ಜಿ ತಗೊಂಡು ಬರ್ತಾರೆ”

“ಮಹಿಳಾ ಹೋರಾಟಗಾರ್ರು ಆ ಹೆಣ್ಣು ಮಗಳ ಪರ ಪ್ರತಿಭಟನೆ ಮಾಡ್ತೆ ಅವುರೆ.”

“ಮಾಡ್ಲಿ ಬುಡ್ರಿ. ಈ ಮಹಿಳೆಯರು ಆಕೆ ಪರ ಬರ್ತಾರೆ ಅಂದ್ರೆ ಇವುರು ಅವುಳ ತರದೋರೆಯಾ”

“ಅಲ್ಲ ಸಾರ್, ನಿಮ್ಮಲ್ಲಿ ಮಹಿಳೆಯರ ಬಗ್ಗೆ ಇರೋ ಗೌರವ ನೋಡಿದ್ರೆ, ನಿಮ್ಮ ಮಾತಿನ ಪರಿಣಾಮನೆ ನಿಮಗೆ ಗೊತ್ತಿಲ್ಲ ಅನ್ಸುತ್ತೆ”

“ಏನೇಳ್ತಾಯಿದ್ದಿರಿ ನೀವು”

“ಅವತ್ತಿನಿಂದ ಇವತ್ತಿನವರೆಗೂ ಶಿಸ್ತಿನ ಪಕ್ಷವಾದ ನಿಮ್ಮಲ್ಲಿ ಶೀಲವಂತನೇ ಕಾಣಲಿಲ್ಲ. ವಿಕೃತ ಮನಸ್ಸಿನವರೇ ಜಾಸ್ತಿ ಬಿಡಿ ಸಾರ್”

ಥೂತ್ತೇರಿ.


ಇದನ್ನೂ ಓದಿ: ಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....