Homeಅಂಕಣಗಳುಭೈರಪ್ಪನವರ ಕೃತಿಗಳಿಗೆ ಒಳ್ಳೆ ವಿಮರ್ಶೆ ಬಂದಿಲ್ಲ!

ಭೈರಪ್ಪನವರ ಕೃತಿಗಳಿಗೆ ಒಳ್ಳೆ ವಿಮರ್ಶೆ ಬಂದಿಲ್ಲ!

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೀವಹತ್ಯೆಗಳು ನಡೆಯುತ್ತಿವೆ. ಪ್ರವೀಣ್ ಹತ್ಯೆ, ಭಯೋತ್ಪಾದನೆ ಬಳಸಿ ತಮ್ಮ ತಂಟೆಗೆ ಬರದಂತೆ ಎಚ್ಚರಿಸುವ ಹತ್ಯೆ ಅನ್ನುವುದಾದರೆ, ಪಾಝಿಲ್ ಹತ್ಯೆ ಪ್ರತೀಕಾರವಾಗಿ ಭಯೋತ್ಪಾದನಾ ಹತ್ಯೆಯಾಗಿಯೇ ಕಾಣುತ್ತಿದೆ. ಆದರೆ ಇವರಿಬ್ಬರೂ ಮನುಷ್ಯ ಜೀವಿಗಳು. ಈ ಹತ್ಯೆಯನ್ನು ಖಂಡಿಸುವುದರಲ್ಲಿ ತಾರತಮ್ಯ ಇರಬಾರದು. ಮನುಷ್ಯನ ಜೀವ ಯಾವಯಾವುದಕ್ಕೋ ಬಲಿಯಾಗಬಹುದು, ಆದರೆ ಮನುಷ್ಯ ಮನುಷ್ಯನನ್ನ ಕೊಲ್ಲುವುದು ಎಲ್ಲರನ್ನ ಭಯದಲ್ಲಿ ಮುಳುಗಿಸುವ ಕ್ರಿಯೆ. ರಾಜ್ಯದ ಮುಖ್ಯಮಂತ್ರಿಯಾದವರು ಎಲ್ಲ ಹತ್ಯೆಗಳನ್ನು ಖಂಡಿಸುತ್ತಾರೆ, ಸತ್ತವರ ಕುಟುಂಬಕ್ಕೆ ಸಾಂತ್ವನ ಹೇಳುತ್ತಾರೆ. ಆದರೆ ಕರ್ನಾಟಕವನ್ನಾಳುತ್ತಿರುವ ಸದ್ಯದ ನಾಯಕ ಕ್ರಿಯೆಗೆ ಪ್ರತಿಕ್ರಿಯೆಯಲ್ಲಿ ನಂಬಿಕೆ ಇಟ್ಟವರು. ಆದ್ದರಿಂದ ತಾರತಮ್ಯವೆಸಗಿದ್ದಾರೆ. ಸತ್ತವರ ಕುಟುಂಬಕ್ಕಾಗಲಿ ಪರಿಹಾರ ನೀಡುವ ವಿಷಯಕ್ಕಾಗಲಿ ಅವರು ತಾನು ಬಿಜೆಪಿ ಜನರ ರಕ್ಷಕನೇ ಹೊರತು ಇನ್ನಾರಿಗೂ ನಾಯಕನಲ್ಲ ಎಂಬುದನ್ನ ಸಾಬೀತುಪಡಿಸಿದ್ದಾರೆ. ಇದು ಈ ನಾಡಿಗೆ ಅವಮಾನ. ಚಿಂತಕ ಎಂ.ಎನ್ ರಾಯ್‌ರವರ ವಿದ್ವತ್ತಿನ ಅನುಯಾಯಿಯಾಗಿದ್ದ ಎಸ್.ಆರ್ ಬೊಮ್ಮಾಯಿಯವರ ಮಗನಿಂದ ತಂದೆಗೆ ಅವಮಾನವಾಗಿದೆ. ಅಷ್ಟಕ್ಕೂ ಈ ಬೊಮ್ಮಾಯಿಯವರು, ಸ್ವಪ್ರತಿಭೆ ಮತ್ತು ಸ್ವಪ್ರಯತ್ನದಿಂದ ಮುಖ್ಯಮಂತ್ರಿಯಾದವರಲ್ಲ; ಯಾವುದೋ ಮತಾಂದ ಕಂಪನಿ ನೇಮಿಸಿದ ಮೇನೇಜರ್. ’ನೀನು ಸುಮ್ಮನಿರು ಉಳಿದುದನ್ನ ನಾವು ನೋಡಿಕೊಳ್ಳುತ್ತೇವೆ’ ಎಂಬ ಆದೇಶ ಅವರು ನೇಮಕವಾದಾಗಿನಿಂದ ಚಾಲ್ತಿಯಲ್ಲಿದೆ. ಇವರ ಮನಸ್ಸಿಗೂ ಕಾಳಿ ಸ್ವಾಮಿ ಮನಸ್ಸಿಗೂ ಏನಾದರೂ ಸಂಬಂಧವಿದೆಯೇ ಎಂದು ಕರ್ನಾಟಕದ ಜನ ಚಿಂತೆಗೀಡಾಗಿದ್ದಾರಂತಲ್ಲಾ, ಥೂತ್ತೇರಿ..

*****

ಈ ರಾಜಕೀಯ ಹತ್ಯಾಕಾಂಡದಲ್ಲಿ ಒಬ್ಬನೇಒಬ್ಬ ಆರೆಸ್ಸೆಸ್ಸಿಗನಾಗಾಲಿ ಬಿಜೆಪಿ ಮುಖಂಡನಾಗಲೀ ಹತ್ಯೆಯಾದ ಉದಾಹರಣೆಯಿಲ್ಲ. ಏಕೆಂದರೆ ಅವರ ಜೀವ ದೇವನೂರರು ಹೇಳುವಂತೆ ಸಪ್ತ ಸಮುದ್ರದಾಚೆಯಿರುವ ಕಾಡಿನ ಮರದ ಪೊಟರೆಯಲ್ಲಿರುವ ಗಿಳಿಯ ದೇಹದಲ್ಲಿ ಸುರಕ್ಷಿತವಾಗಿದೆ. ಅದನ್ನ ರಕ್ಷಿಸುವ ಹೂಣೆ ಈ ಶೂದ್ರ ಜಾತಿ ಹುಡುಗರ-ಕಾರ್ಯಕರ್ತರ ಕರ್ತವ್ಯ. ಸಂಘಿಗಳ ಪ್ರಕಾರ ಯಾವುದು ಶಕ್ತಿವಂತ ಸಮೂಹವೊ ಅದು ಶಕ್ತಿಯಿಲ್ಲದ್ದನ್ನ ಜಯಿಸಿ ಅರಗಿಸಿಕೊಳ್ಳುತ್ತದಂತೆ. ಮುಸ್ಲಿಮರನ್ನ ಹೊಡೆದು ಓಡಿಸಿ ಎಂಬ ಸಂದೇಶವನ್ನ ಗೋಳವಲಕರನೇ ನೀಡಿ ಹೋಗಿದ್ದಾರೆ. ಸರಿಯಾದ ಜನಗಣತಿ ನಡೆದರೆ ಮುಸ್ಲಿಮರು ಮುವತ್ತು ಕೋಟಿ ದಾಟಬಲ್ಲರು. ಪ್ರಪಂಚದ ಯಾವ ದೇಶದಲ್ಲೂ ಇಷ್ಟ ಸಂಖ್ಯೆಯಲ್ಲಿ ಮುಸ್ಲಿಮರು ಇರಲಾರರು. ದಾಳಿಯಿಂದ ಭಾರತಕ್ಕೆ ಬಂದ ಮುಸ್ಲಿಮರಲ್ಲಿ ಬಂದವರು ಬರೀ ಸೈನಿಕರೇ ಹೊರತು ಅವರು ಹೆಂಡತಿ ಮಕ್ಕಳೊಂದಿಗೆ ಬಂದವರಲ್ಲ. ಕುಟುಂಬವನ್ನ ಇಲ್ಲೇ ಸಂಪಾದಿಸಿಕೊಂಡರು. ಹಿಂದೂ ಧರ್ಮದ ಜಾತೀಯತೆ ಮತ್ತು ಅಸ್ಪೃಶ್ಯತೆಯ ಅವಮಾನದಿಂದ ನೊಂದವರು ಹಾಗೂ ಅಮಿಷಕ್ಕೆ ಬಲಿಯಾದವರೆಲ್ಲಾ ಮುಸ್ಲಿಮರಾದರು. ಈಗ ಮುಸ್ಲಿಮರಾಗಿದ್ದರೂ ಅವರಿಗೆ ನೆಮ್ಮದಿಯಿಲ್ಲ. ಆದರೂ ಅವರಿಲ್ಲೇ ಇರುತ್ತಾರೆ. ಅವರು ಕೂಡ ಇಲ್ಲಿನ ದೇಶವಾಸಿಗಳೆಂಬುದನ್ನ ಅರ್ಥಪಡಿಸುತ್ತಿದ್ದಾರೆ. ಅವರ ಅಭದ್ರ ಸ್ಥಿತಿಯೇ ಅವರಲ್ಲಿ ದೈತ್ಯ ಶಕ್ತಿಯನ್ನ ಮೂಡಿಸುತ್ತದೆ. ಜನಾಂಗೀಯವಾದಿಗಳಿಗೆ ಇದು ಅರ್ಥವೇ ಆಗುತ್ತಿಲ್ಲವಂತಲ್ಲಾ, ಥೂತ್ತೇರಿ.

*****

ರಾಷ್ಟ್ರೋತ್ಥಾನ ಸಾಹಿತ್ಯದ ಅಗ್ರಲೇಖಕರಾದ ಎಸ್.ಎಲ್ ಭೈರಪ್ಪನವರು, ಕೆಲ ಲೇಖಕರು ಉತ್ತಮ ಕೃತಿಗಳನ್ನ ರಚಿಸುವಲ್ಲಿ ವಿಫಲವಾಗಿದ್ದಾರೆ ಎಂಬ ಆಪಾದನೆಯನ್ನ ಬರೀ ಬ್ರೇಮಿನ್ ವಿಮರ್ಶಕರೇ ಹೆಚ್ಚಿರುವಾಗ ಮಾಡಿದ್ದಾರಂತಲ್ಲಾ. ಹಾಗೆ ನೋಡಿದರೆ ಕನ್ನಡ ವಿಮರ್ಶಕರ ಕಟು ಟೀಕೆಯನ್ನ ಭೈರಪ್ಪನವರು ಸಕಾರಣವಾಗಿಯೇ ಎದುರಿಸಿದ್ದಾರೆ. ಅದರಲ್ಲೂ ನವ್ಯರ ಹೊಡೆತಗಳ ಎದುರು ಭೈರಪ್ಪನವರು ಮಂಕಾಗಿ ಹೋಗಿದ್ದರು. ಏಕೆಂದರೆ ಅನಂತಮೂರ್ತಿ, ಲಂಕೇಶ್, ತೇಜಸ್ವಿ, ಶಾಂತಿನಾಥ ದೇಸಾಯಿ ಇವರೆಲ್ಲಾ ಭೈರಪ್ಪನವರ ಅಗ್ರಹಾರದ ಕಾಯಿಗಳನ್ನ ಅನಾವರಣ ಮಾಡಿ ಸರಿಮಾಡಿಕೊಳ್ಳಿ ಎಂದಿದ್ದರು. ಅದರಲ್ಲೂ ನವ್ಯದಲ್ಲಿ ಹೆಚ್ಚು ದಿನ ಇರದ ತೇಜಸ್ವಿಯವರಂತೂ ಭೈರಪ್ಪನ ಆವರಣ ಕೃತಿಗೆ ಒಂದು ಸಾಲಿನ ವಿಮರ್ಶೆ ಮಾಡಿ, ’ಹೊಟ್ಟಿಗೆ ಅನ್ನ ತಿನ್ನುವವರಾರು ಇಂತಹ ಕೃತಿ ಬರೆಯಲಾರ’ ಎಂದಿದ್ದರು. ಹೀಗೆ ಭೈರಪ್ಪನವರ ಅಪಾಯಕಾರಿ ಕೃತಿಗಳ ಬಗ್ಗೆ ಎಚ್ಚರಿಸಿ ಹೋಗಿದಾರೆ. ಸರಿಯಾದ ವಿಮರ್ಶಕರಿದ್ದರೆ, ಭೈರಪ್ಪನವರ ಮಾತು ಅವರ ಹಲವು ಕಾದಂಬರಿಗಳಿಗೇ ಅನ್ವಯಿಸುತ್ತದೆಂತಲ್ಲಾ, ಥೂತ್ತೇರಿ.

******

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸೋಮನಹಳ್ಳಿಯಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಕುಮಾರಣ್ಣ ಮತ್ತು ರೇವಣ್ಣ ಅಳುವುದನ್ನ ನೋಡಿದ ಜನ ದಂಗಾಗಿ ಹೋದರಂತಲ್ಲಾ. ಜನ ಸಂಘಟನಾ ಸಭೆಗಳನ್ನ ತಮ್ಮ ಜೀವಮಾನದುದ್ದಕ್ಕೂ ಮಾಡಿಕೊಂಡು ಬಂದ ದೇವೇಗೌಡರು, ತಾವೇ ರೂಪಿಸಿಕೊಂಡ ವೈರಿಗಳನ್ನ ಹತ್ತಿಕ್ಕುವ ಸಭೆಗೆ ಮೊದಲಬಾರಿಗೆ ಬರಲಾಗಲಿಲ್ಲ. ದೇವೇಗೌಡರಿಗೆ ತಮ್ಮ ಮಕ್ಕಳನ್ನ ದಾರಿ ತಪ್ಪಿಸಿದವರ ಪೈಕಿ ಚಲುವರಾಯಸ್ವಾಮಿ, ಬಾಲಕೃಷ್ಣ, ಜಮೀರ್ ಇತ್ಯಾದಿಗಳನ್ನ ಸರ್ವನಾಶಮಾಡದ ಹೊರತು ನೆಮ್ಮದಿಯಿಲ್ಲಾ. ಈಚೆಗೆ ಆ ಪಟ್ಟಿಗೆ ಕೆ.ಆರ್ ಪೇಟೆ ನಾರಾಯಣಗೌಡರು ಸೇರಿಕೊಂಡಿದ್ದಾರೆ. ಈ ನಾರಾಯಣಗೌಡರ ಕ್ಷೇತ್ರಕ್ಕೂ ಬಿಜೆಪಿಗೂ ಸಂಬಂಧವೇ ಇಲ್ಲ. ಇವರನ್ನ ಹೀನಾಯವಾಗಿ ನಡೆಸಿಕೊಂಡ ಕಾರಣವಾಗಿ ಕೆ.ಆರ್ ಪೇಟೆಯಲ್ಲಿ ಬಿಜೆಪಿ ಕಾಲೂರಿತು. ಇದರ ಜಾಡನ್ನೇ ಹಿಡಿದು ನೋಡುತ್ತಾ ಹೋದರೆ ಜೆಡಿಎಸ್ ಪಾರ್ಟಿ ಕರ್ನಾಟಕದಲ್ಲಿ ಬಿಜೆಪಿ ಕಾಲೂರುವಂತೆ ಮಾಡಲು ಬಹಳ ಶ್ರಮವಹಿಸುತ್ತಿರುವುದು ಎದ್ದು ಕಾಣುತ್ತಿದೆಯಲ್ಲಾ. ಕರ್ನಾಟಕದಲ್ಲಿ ಮೂರನೇ ಪಾರ್ಟಿಯೊಂದು ಇರಲೇಬೇಕೆಂದು, ಅದಕ್ಕಾಗಿ ಶ್ರಮಿಸಿದ್ದವರೆಲ್ಲಾ ಒಬ್ಬೊಬ್ಬರೇ ಹಲ್ಲುಕಳಚಿದಂತೆ ಬಿದ್ದುಹೋಗುತ್ತಿರುವ ಬಗ್ಗೆ ಯೋಚಿಸಿ ಕಣ್ಣೀರು ಹಾಕಬೇಕಿತ್ತು. ಅದರ ಬದಲು ಚಲುವರಾಯಸ್ವಾಮಿಯನ್ನ ಸೋಲಿಸಲೋಸ್ಕರ ಜನರನ್ನ ಭಾವುಕರನ್ನಾಗಿಸಲು ಕಣ್ಣೀರು ಹಾಕಬಾರದಿತ್ತು. ರೇವಣ್ಣ ಕುಮಾರಣ್ಣ ಅಳುವುದನ್ನ ನೋಡಿದ ನಾಗಮಂಗಲದ ಜನರು, ರೇವಣ್ಣ ಕಣ್ಣೀರು ಹಾಕಿದವರಲ್ಲ, ಅಂತಹ ಮನುಷ್ಯ ಅಳುತ್ತಿರಬೇಕಾದರೆ ಏನೋ ಭಾರಿ ಕುಟುಂಬ ಸಮಸ್ಯೆ ಇರಬೇಕೆಲ್ಲ, ಎಂದು ಗಾಬರಿ ಮುಖದಲ್ಲಿ ಚರ್ಚಿಸುತ್ತಿದ್ದಾರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: “ನಮ್ಮ ರೈಲ್ವೆ ಬೋಗಿಗಳನ್ನ ನೋಡಿದ್ದೀರಾ!”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...