Homeಅಂಕಣಗಳುಭೈರಪ್ಪನವರ ಕೃತಿಗಳಿಗೆ ಒಳ್ಳೆ ವಿಮರ್ಶೆ ಬಂದಿಲ್ಲ!

ಭೈರಪ್ಪನವರ ಕೃತಿಗಳಿಗೆ ಒಳ್ಳೆ ವಿಮರ್ಶೆ ಬಂದಿಲ್ಲ!

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೀವಹತ್ಯೆಗಳು ನಡೆಯುತ್ತಿವೆ. ಪ್ರವೀಣ್ ಹತ್ಯೆ, ಭಯೋತ್ಪಾದನೆ ಬಳಸಿ ತಮ್ಮ ತಂಟೆಗೆ ಬರದಂತೆ ಎಚ್ಚರಿಸುವ ಹತ್ಯೆ ಅನ್ನುವುದಾದರೆ, ಪಾಝಿಲ್ ಹತ್ಯೆ ಪ್ರತೀಕಾರವಾಗಿ ಭಯೋತ್ಪಾದನಾ ಹತ್ಯೆಯಾಗಿಯೇ ಕಾಣುತ್ತಿದೆ. ಆದರೆ ಇವರಿಬ್ಬರೂ ಮನುಷ್ಯ ಜೀವಿಗಳು. ಈ ಹತ್ಯೆಯನ್ನು ಖಂಡಿಸುವುದರಲ್ಲಿ ತಾರತಮ್ಯ ಇರಬಾರದು. ಮನುಷ್ಯನ ಜೀವ ಯಾವಯಾವುದಕ್ಕೋ ಬಲಿಯಾಗಬಹುದು, ಆದರೆ ಮನುಷ್ಯ ಮನುಷ್ಯನನ್ನ ಕೊಲ್ಲುವುದು ಎಲ್ಲರನ್ನ ಭಯದಲ್ಲಿ ಮುಳುಗಿಸುವ ಕ್ರಿಯೆ. ರಾಜ್ಯದ ಮುಖ್ಯಮಂತ್ರಿಯಾದವರು ಎಲ್ಲ ಹತ್ಯೆಗಳನ್ನು ಖಂಡಿಸುತ್ತಾರೆ, ಸತ್ತವರ ಕುಟುಂಬಕ್ಕೆ ಸಾಂತ್ವನ ಹೇಳುತ್ತಾರೆ. ಆದರೆ ಕರ್ನಾಟಕವನ್ನಾಳುತ್ತಿರುವ ಸದ್ಯದ ನಾಯಕ ಕ್ರಿಯೆಗೆ ಪ್ರತಿಕ್ರಿಯೆಯಲ್ಲಿ ನಂಬಿಕೆ ಇಟ್ಟವರು. ಆದ್ದರಿಂದ ತಾರತಮ್ಯವೆಸಗಿದ್ದಾರೆ. ಸತ್ತವರ ಕುಟುಂಬಕ್ಕಾಗಲಿ ಪರಿಹಾರ ನೀಡುವ ವಿಷಯಕ್ಕಾಗಲಿ ಅವರು ತಾನು ಬಿಜೆಪಿ ಜನರ ರಕ್ಷಕನೇ ಹೊರತು ಇನ್ನಾರಿಗೂ ನಾಯಕನಲ್ಲ ಎಂಬುದನ್ನ ಸಾಬೀತುಪಡಿಸಿದ್ದಾರೆ. ಇದು ಈ ನಾಡಿಗೆ ಅವಮಾನ. ಚಿಂತಕ ಎಂ.ಎನ್ ರಾಯ್‌ರವರ ವಿದ್ವತ್ತಿನ ಅನುಯಾಯಿಯಾಗಿದ್ದ ಎಸ್.ಆರ್ ಬೊಮ್ಮಾಯಿಯವರ ಮಗನಿಂದ ತಂದೆಗೆ ಅವಮಾನವಾಗಿದೆ. ಅಷ್ಟಕ್ಕೂ ಈ ಬೊಮ್ಮಾಯಿಯವರು, ಸ್ವಪ್ರತಿಭೆ ಮತ್ತು ಸ್ವಪ್ರಯತ್ನದಿಂದ ಮುಖ್ಯಮಂತ್ರಿಯಾದವರಲ್ಲ; ಯಾವುದೋ ಮತಾಂದ ಕಂಪನಿ ನೇಮಿಸಿದ ಮೇನೇಜರ್. ’ನೀನು ಸುಮ್ಮನಿರು ಉಳಿದುದನ್ನ ನಾವು ನೋಡಿಕೊಳ್ಳುತ್ತೇವೆ’ ಎಂಬ ಆದೇಶ ಅವರು ನೇಮಕವಾದಾಗಿನಿಂದ ಚಾಲ್ತಿಯಲ್ಲಿದೆ. ಇವರ ಮನಸ್ಸಿಗೂ ಕಾಳಿ ಸ್ವಾಮಿ ಮನಸ್ಸಿಗೂ ಏನಾದರೂ ಸಂಬಂಧವಿದೆಯೇ ಎಂದು ಕರ್ನಾಟಕದ ಜನ ಚಿಂತೆಗೀಡಾಗಿದ್ದಾರಂತಲ್ಲಾ, ಥೂತ್ತೇರಿ..

*****

ಈ ರಾಜಕೀಯ ಹತ್ಯಾಕಾಂಡದಲ್ಲಿ ಒಬ್ಬನೇಒಬ್ಬ ಆರೆಸ್ಸೆಸ್ಸಿಗನಾಗಾಲಿ ಬಿಜೆಪಿ ಮುಖಂಡನಾಗಲೀ ಹತ್ಯೆಯಾದ ಉದಾಹರಣೆಯಿಲ್ಲ. ಏಕೆಂದರೆ ಅವರ ಜೀವ ದೇವನೂರರು ಹೇಳುವಂತೆ ಸಪ್ತ ಸಮುದ್ರದಾಚೆಯಿರುವ ಕಾಡಿನ ಮರದ ಪೊಟರೆಯಲ್ಲಿರುವ ಗಿಳಿಯ ದೇಹದಲ್ಲಿ ಸುರಕ್ಷಿತವಾಗಿದೆ. ಅದನ್ನ ರಕ್ಷಿಸುವ ಹೂಣೆ ಈ ಶೂದ್ರ ಜಾತಿ ಹುಡುಗರ-ಕಾರ್ಯಕರ್ತರ ಕರ್ತವ್ಯ. ಸಂಘಿಗಳ ಪ್ರಕಾರ ಯಾವುದು ಶಕ್ತಿವಂತ ಸಮೂಹವೊ ಅದು ಶಕ್ತಿಯಿಲ್ಲದ್ದನ್ನ ಜಯಿಸಿ ಅರಗಿಸಿಕೊಳ್ಳುತ್ತದಂತೆ. ಮುಸ್ಲಿಮರನ್ನ ಹೊಡೆದು ಓಡಿಸಿ ಎಂಬ ಸಂದೇಶವನ್ನ ಗೋಳವಲಕರನೇ ನೀಡಿ ಹೋಗಿದ್ದಾರೆ. ಸರಿಯಾದ ಜನಗಣತಿ ನಡೆದರೆ ಮುಸ್ಲಿಮರು ಮುವತ್ತು ಕೋಟಿ ದಾಟಬಲ್ಲರು. ಪ್ರಪಂಚದ ಯಾವ ದೇಶದಲ್ಲೂ ಇಷ್ಟ ಸಂಖ್ಯೆಯಲ್ಲಿ ಮುಸ್ಲಿಮರು ಇರಲಾರರು. ದಾಳಿಯಿಂದ ಭಾರತಕ್ಕೆ ಬಂದ ಮುಸ್ಲಿಮರಲ್ಲಿ ಬಂದವರು ಬರೀ ಸೈನಿಕರೇ ಹೊರತು ಅವರು ಹೆಂಡತಿ ಮಕ್ಕಳೊಂದಿಗೆ ಬಂದವರಲ್ಲ. ಕುಟುಂಬವನ್ನ ಇಲ್ಲೇ ಸಂಪಾದಿಸಿಕೊಂಡರು. ಹಿಂದೂ ಧರ್ಮದ ಜಾತೀಯತೆ ಮತ್ತು ಅಸ್ಪೃಶ್ಯತೆಯ ಅವಮಾನದಿಂದ ನೊಂದವರು ಹಾಗೂ ಅಮಿಷಕ್ಕೆ ಬಲಿಯಾದವರೆಲ್ಲಾ ಮುಸ್ಲಿಮರಾದರು. ಈಗ ಮುಸ್ಲಿಮರಾಗಿದ್ದರೂ ಅವರಿಗೆ ನೆಮ್ಮದಿಯಿಲ್ಲ. ಆದರೂ ಅವರಿಲ್ಲೇ ಇರುತ್ತಾರೆ. ಅವರು ಕೂಡ ಇಲ್ಲಿನ ದೇಶವಾಸಿಗಳೆಂಬುದನ್ನ ಅರ್ಥಪಡಿಸುತ್ತಿದ್ದಾರೆ. ಅವರ ಅಭದ್ರ ಸ್ಥಿತಿಯೇ ಅವರಲ್ಲಿ ದೈತ್ಯ ಶಕ್ತಿಯನ್ನ ಮೂಡಿಸುತ್ತದೆ. ಜನಾಂಗೀಯವಾದಿಗಳಿಗೆ ಇದು ಅರ್ಥವೇ ಆಗುತ್ತಿಲ್ಲವಂತಲ್ಲಾ, ಥೂತ್ತೇರಿ.

*****

ರಾಷ್ಟ್ರೋತ್ಥಾನ ಸಾಹಿತ್ಯದ ಅಗ್ರಲೇಖಕರಾದ ಎಸ್.ಎಲ್ ಭೈರಪ್ಪನವರು, ಕೆಲ ಲೇಖಕರು ಉತ್ತಮ ಕೃತಿಗಳನ್ನ ರಚಿಸುವಲ್ಲಿ ವಿಫಲವಾಗಿದ್ದಾರೆ ಎಂಬ ಆಪಾದನೆಯನ್ನ ಬರೀ ಬ್ರೇಮಿನ್ ವಿಮರ್ಶಕರೇ ಹೆಚ್ಚಿರುವಾಗ ಮಾಡಿದ್ದಾರಂತಲ್ಲಾ. ಹಾಗೆ ನೋಡಿದರೆ ಕನ್ನಡ ವಿಮರ್ಶಕರ ಕಟು ಟೀಕೆಯನ್ನ ಭೈರಪ್ಪನವರು ಸಕಾರಣವಾಗಿಯೇ ಎದುರಿಸಿದ್ದಾರೆ. ಅದರಲ್ಲೂ ನವ್ಯರ ಹೊಡೆತಗಳ ಎದುರು ಭೈರಪ್ಪನವರು ಮಂಕಾಗಿ ಹೋಗಿದ್ದರು. ಏಕೆಂದರೆ ಅನಂತಮೂರ್ತಿ, ಲಂಕೇಶ್, ತೇಜಸ್ವಿ, ಶಾಂತಿನಾಥ ದೇಸಾಯಿ ಇವರೆಲ್ಲಾ ಭೈರಪ್ಪನವರ ಅಗ್ರಹಾರದ ಕಾಯಿಗಳನ್ನ ಅನಾವರಣ ಮಾಡಿ ಸರಿಮಾಡಿಕೊಳ್ಳಿ ಎಂದಿದ್ದರು. ಅದರಲ್ಲೂ ನವ್ಯದಲ್ಲಿ ಹೆಚ್ಚು ದಿನ ಇರದ ತೇಜಸ್ವಿಯವರಂತೂ ಭೈರಪ್ಪನ ಆವರಣ ಕೃತಿಗೆ ಒಂದು ಸಾಲಿನ ವಿಮರ್ಶೆ ಮಾಡಿ, ’ಹೊಟ್ಟಿಗೆ ಅನ್ನ ತಿನ್ನುವವರಾರು ಇಂತಹ ಕೃತಿ ಬರೆಯಲಾರ’ ಎಂದಿದ್ದರು. ಹೀಗೆ ಭೈರಪ್ಪನವರ ಅಪಾಯಕಾರಿ ಕೃತಿಗಳ ಬಗ್ಗೆ ಎಚ್ಚರಿಸಿ ಹೋಗಿದಾರೆ. ಸರಿಯಾದ ವಿಮರ್ಶಕರಿದ್ದರೆ, ಭೈರಪ್ಪನವರ ಮಾತು ಅವರ ಹಲವು ಕಾದಂಬರಿಗಳಿಗೇ ಅನ್ವಯಿಸುತ್ತದೆಂತಲ್ಲಾ, ಥೂತ್ತೇರಿ.

******

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸೋಮನಹಳ್ಳಿಯಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಕುಮಾರಣ್ಣ ಮತ್ತು ರೇವಣ್ಣ ಅಳುವುದನ್ನ ನೋಡಿದ ಜನ ದಂಗಾಗಿ ಹೋದರಂತಲ್ಲಾ. ಜನ ಸಂಘಟನಾ ಸಭೆಗಳನ್ನ ತಮ್ಮ ಜೀವಮಾನದುದ್ದಕ್ಕೂ ಮಾಡಿಕೊಂಡು ಬಂದ ದೇವೇಗೌಡರು, ತಾವೇ ರೂಪಿಸಿಕೊಂಡ ವೈರಿಗಳನ್ನ ಹತ್ತಿಕ್ಕುವ ಸಭೆಗೆ ಮೊದಲಬಾರಿಗೆ ಬರಲಾಗಲಿಲ್ಲ. ದೇವೇಗೌಡರಿಗೆ ತಮ್ಮ ಮಕ್ಕಳನ್ನ ದಾರಿ ತಪ್ಪಿಸಿದವರ ಪೈಕಿ ಚಲುವರಾಯಸ್ವಾಮಿ, ಬಾಲಕೃಷ್ಣ, ಜಮೀರ್ ಇತ್ಯಾದಿಗಳನ್ನ ಸರ್ವನಾಶಮಾಡದ ಹೊರತು ನೆಮ್ಮದಿಯಿಲ್ಲಾ. ಈಚೆಗೆ ಆ ಪಟ್ಟಿಗೆ ಕೆ.ಆರ್ ಪೇಟೆ ನಾರಾಯಣಗೌಡರು ಸೇರಿಕೊಂಡಿದ್ದಾರೆ. ಈ ನಾರಾಯಣಗೌಡರ ಕ್ಷೇತ್ರಕ್ಕೂ ಬಿಜೆಪಿಗೂ ಸಂಬಂಧವೇ ಇಲ್ಲ. ಇವರನ್ನ ಹೀನಾಯವಾಗಿ ನಡೆಸಿಕೊಂಡ ಕಾರಣವಾಗಿ ಕೆ.ಆರ್ ಪೇಟೆಯಲ್ಲಿ ಬಿಜೆಪಿ ಕಾಲೂರಿತು. ಇದರ ಜಾಡನ್ನೇ ಹಿಡಿದು ನೋಡುತ್ತಾ ಹೋದರೆ ಜೆಡಿಎಸ್ ಪಾರ್ಟಿ ಕರ್ನಾಟಕದಲ್ಲಿ ಬಿಜೆಪಿ ಕಾಲೂರುವಂತೆ ಮಾಡಲು ಬಹಳ ಶ್ರಮವಹಿಸುತ್ತಿರುವುದು ಎದ್ದು ಕಾಣುತ್ತಿದೆಯಲ್ಲಾ. ಕರ್ನಾಟಕದಲ್ಲಿ ಮೂರನೇ ಪಾರ್ಟಿಯೊಂದು ಇರಲೇಬೇಕೆಂದು, ಅದಕ್ಕಾಗಿ ಶ್ರಮಿಸಿದ್ದವರೆಲ್ಲಾ ಒಬ್ಬೊಬ್ಬರೇ ಹಲ್ಲುಕಳಚಿದಂತೆ ಬಿದ್ದುಹೋಗುತ್ತಿರುವ ಬಗ್ಗೆ ಯೋಚಿಸಿ ಕಣ್ಣೀರು ಹಾಕಬೇಕಿತ್ತು. ಅದರ ಬದಲು ಚಲುವರಾಯಸ್ವಾಮಿಯನ್ನ ಸೋಲಿಸಲೋಸ್ಕರ ಜನರನ್ನ ಭಾವುಕರನ್ನಾಗಿಸಲು ಕಣ್ಣೀರು ಹಾಕಬಾರದಿತ್ತು. ರೇವಣ್ಣ ಕುಮಾರಣ್ಣ ಅಳುವುದನ್ನ ನೋಡಿದ ನಾಗಮಂಗಲದ ಜನರು, ರೇವಣ್ಣ ಕಣ್ಣೀರು ಹಾಕಿದವರಲ್ಲ, ಅಂತಹ ಮನುಷ್ಯ ಅಳುತ್ತಿರಬೇಕಾದರೆ ಏನೋ ಭಾರಿ ಕುಟುಂಬ ಸಮಸ್ಯೆ ಇರಬೇಕೆಲ್ಲ, ಎಂದು ಗಾಬರಿ ಮುಖದಲ್ಲಿ ಚರ್ಚಿಸುತ್ತಿದ್ದಾರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: “ನಮ್ಮ ರೈಲ್ವೆ ಬೋಗಿಗಳನ್ನ ನೋಡಿದ್ದೀರಾ!”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...