Homeಅಂಕಣಗಳುಟಿಪ್ಪು ವಿರೋಧಿಗಳು ತಮ್ಮವರನ್ನೇ ವಿರೋಧಿಸುತ್ತಿವೆ!

ಟಿಪ್ಪು ವಿರೋಧಿಗಳು ತಮ್ಮವರನ್ನೇ ವಿರೋಧಿಸುತ್ತಿವೆ!

- Advertisement -
- Advertisement -

ಅಧಿಕಾರಕ್ಕೆ ಬಂದಂದಿನಿಂದ ಇಲ್ಲಿಯವರೆಗೆ ಬರೀ ಹಗರಣಗಳಲ್ಲೇ ಮುಳುಗಿದ್ದ ಬಿಜೆಪಿ ಪಾರ್ಟಿಗೆ ಮಾಡಾಳು ವಿರೂಪಾಕ್ಷಪ್ಪನ ಹಗರಣ ಆರೋಪ ಮುಟ್ಟಿನೋಡಿಕೊಳ್ಳುವಂತೆ ಮಾಡಿದೆಯಲ್ಲಾ. ಆದರೇನು ಈ ಬಿಜೆಪಿಗಳನ್ನು ಯಾರೂ ಅವಮಾನ ಮಾಡಲಾಗುವುದಿಲ್ಲ. ಮರ್ಯಾದೆ ಕಳೆಯಲಾಗುವುದಿಲ್ಲ. ಮನಸ್ಸಿಗೆ ನೋವು ಮಾಡಲಾಗುವುದಿಲ್ಲ. ಸದರಿ ಹಗರಣದ ಆರೋಪಕ್ಕೆ ಮಾಧುಸ್ವಾಮಿ ಮತ್ತು ಮುಖ್ಯಮಂತ್ರಿ ಉತ್ತರ ಕೊಟ್ಟಾಗಿದೆ. ಏನೆಂದರೆ, ಲೋಕಾಯುಕ್ತದಲ್ಲಿ ನಿಮ್ಮ ಹಗರಣಗಳೂ ಹೊರಬರಲಿವೆ. ಮಗ ಮಾಡಿದ ಹಗರಣಕ್ಕೆ ಅಪ್ಪ ವಿರೂಪಾಕ್ಷನದೇನು ತಪ್ಪು. ನಿಮ್ಮ ಕಾಲದಲ್ಲಿ ಹಗರಣಗಳೇ ಆಗಿರಲಿಲ್ಲವೆ? ಹೀಗೆ. ಇಂತಹ ಉತ್ತರಗಳಿಂದ ಬಿಜೆಪಿಗಳ ಮನಸ್ಸೇನೆಂಬುದು ನಾಡಿನ ಜನಕ್ಕೆ ಅರಿವಾಗುತ್ತಿದೆ. ಅವೆಲ್ಲಕ್ಕಿಂತ ಮುಖ್ಯವಾಗಿ ಶಾ ಎಂಬಾತ ತನ್ನ ಭಾಷಣದಲ್ಲಿ ಮುಂದೆ ಲಂಚಮುಕ್ತ ಸರಕಾರ ಕೊಡುತ್ತೇವೆ ಎಂದಿದ್ದರು! ಅಲ್ಲಿಗೆ ಈವರೆಗೆ ಲಂಚ ತಿಂದ ಸರಕಾರ ನಡೆಸಿದ್ದೇವೆ ಎಂಬುದನ್ನು ಒಪ್ಪಿಕೊಡಂತಾಯ್ತು. ಈ ಬಿಜೆಪಿಗಳಿಗೆ ತಾವು ಆಡುವ ಮಾತಿನ ಅರ್ಥ ಭಾವ ಒಂದು ತಿಳಿಯುವುದಿಲ್ಲವೆಂಬುದಕ್ಕೆ ಇದು ಸಾಕ್ಷಿ. ಇನ್ನು ನಮ್ಮ ಮಾಡಾಳು ಇರಪಾಕ್ಷಿ ಕೋಟ್ಯಾಧಿಪತಿ ವಡ್ನಾಳು ರಾಜಣ್ಣನನ್ನು ಸೋಲಿಸಿ ಬಂದವರು. ಬರಲಿರುವ ಚುನಾವಣೆಯಲ್ಲಿ ಕೋಟಿಕೋಟಿ ಚೆಲ್ಲಬೇಕಿರುವುದರಿಂದ ಧನ ಸಂಗ್ರಹಕ್ಕೆ ಮಗನನ್ನು ನೇಮಿಸಿದ್ದರು ಅನಿಸುತ್ತೆ. ಮಾಡಾಳನ ಮಗನಂಥವರು ಇನ್ನು ಅದೆಷ್ಟು ಮಂದಿ ಬಿಜೆಪಿಯ ಮಂತ್ರಿ ಶಾಸಕರ ಬೆನ್ನಿಗಿದ್ದಾರೊ ಎಂಬುದು ಆ ಮಾಧುಸ್ವಾಮಿಗೇ ಗೊತ್ತಂತಿಲ್ಲಾ, ಥೂತ್ತೇರಿ.

****

ಉಡುಪಿ ಭಟ್ಟನ ಪ್ರಕರಣದಿಂದ ಹಿಡಿದು, ಮೈಸೂರು ರಾಮದಾಸ, ಅತ್ತ ಬೆಳಗಾವಿಯ ಜಾರಕಿಹೊಳಿ, ಹೊನ್ನಾಳಿಯ ರೇಣುಕಾಚಾರಿ, ಹರತಾಳು ಹಾಲಪ್ಪ ಇಂತಹವರ ಹಲವಾರು ಸಾಮಾಜಿಕ ಸಮಸ್ಯಗೆಳಿಂದ ಬಿಜೆಪಿ ನರಳಿದರೂ, ಅದು ಹೇಗೋ ಚೇತರಿಸಿಕೊಳ್ಳುತ್ತದೆಲ್ಲಾ. ಮತ್ತೆ ಹಗರಣಕ್ಕೆ ಸಂಬಂಧಪಟ್ಟವರೆಲ್ಲಾ ಚುನಾವಣೆಯಲ್ಲಿ ಗೆದ್ದು ಬರುವುದು ಸಾಮಾನ್ಯವಾಗಿದೆಯಲ್ಲಾ. ಅಧಿಕಾರ ದುರುಪಯೋಗದಿಂದ ಲೈಂಗಿಕ ಶೋಷಣೆ ಮಾಡಿದ ರೇಣುಕಾಚಾರಿ ವಿರುದ್ಧದ ಆರೋಪದ ಸುದ್ದಿಗೆ ಈ ನಾಡೇನು ಬೆಚ್ಚಲಿಲ್ಲ. ಬದಲಿಗೆ ಶಾಸಕನಾದಾಗ ಸಿಗುವ ಸವಲತ್ತು ನೋಡಿ ದಂಗುಬಡಿದರು. ಜನ ಸಂತ್ರಸ್ತರನ್ನೇ ಕುರಿತು ಆಡಿಕೊಳ್ಳುವುದು ಜಾಸ್ತಿ. ಆಗ ಈಶ್ವರಪ್ಪನೆಂಬ ಮಹಿಳಾವಾದಿ, ’ನೀವು ಆರೋಪ ಮಾಡಿದ ಮಹಿಳೆಯ ಬಗ್ಗೆ ಮಾತ್ರ ಯೋಚಿಸುತ್ತಿದ್ದೀರಿ, ಆದರೆ ರೇಣುಕಾಚಾರಿ ಪತ್ನಿಯ ಬಗ್ಗೆ ಯೋಚಿಸಿದ್ದೀರಾ?’ ಎಂದು ಪ್ರಶ್ನೆ ಕೇಳಿದ್ದರು! ಬಿಜೆಪಿ ಮತದಾರರು ಕನಿಕರದಿಂದ, ’ಪಾಪ ರೇಣುಕಾಚಾರಿಯದೇನೂ ತಪ್ಪಿಲ್ಲ’ ಎಂದುದಲ್ಲದೆ ಆತನನ್ನು ಮತ್ತೆ ಚುನಾವಣೆಯಲ್ಲಿ ಗೆಲ್ಲಿಸಿದರು. ತಮ್ಮ ನಾಯಕನ ವಿರುದ್ಧ ಬಂದ ಸುಳ್ಳು ಜಾತಿ ಸರ್ಟಿಫಿಕೇಟ್ ಆರೋಪ ಪ್ರಕರಣ, ವಂಚನೆ, ಭ್ರಷ್ಟತೆ, ವ್ಯಭಿಚಾರ ಇವೆಲ್ಲಾ ಸಮಸ್ಯೆಯೇ ಅಲ್ಲವೆಂದು ರೇಣುಕಾಚಾರಿಯನ್ನು ಗೆಲ್ಲಿಸಿ ಅರಾಮವಾಗಿರುವ ಒಂದು ವರ್ಗದ ಪ್ರಜೆಗಳ ಮನೋಗತವೇ, ಮಾಡಾಳು ಮೈಮರೆತು ಮೇದದ್ದು ಕೂಡ ಒಂದು ಅಪರಾಧವಾಗಿ ಕಾಣದಂತೆ ಕಾಯುತ್ತದಂತಲ್ಲಾ. ಮುಂದಿನ ಚುನಾವಣೆಯಲ್ಲಿ ಮಾಡಾಳರನ್ನೇ ಗೆಲ್ಲಿಸುವ ಶಪಥವನ್ನು ಅವರ ಮನೆ ಮುಂದೆ ಸೇರಿದ್ದ ಜನ ಮಾಡಿದರಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

ಇದ್ದಕ್ಕಿದ್ದಂತೆ ಬೆಲ್ಜಿಯಂನಿಂದ ಹಾರಿಬಂದ ಬಾಲು ಹೆಸರಿನ ಮನುಷ್ಯ ಕುವೆಂಪು ಯೂನಿವರ್ಸಿಟಿ ಆವರಣದಲ್ಲಿ ಹಾರಾಡಿ ಆರೆಸ್ಸೆಸ್ ಭೈಠಕ್‌ನಲ್ಲೂ ಭಾಗವಹಿಸಿ ನಿಮ್ಮಲ್ಲಿ ಸಾಹಿತಿಗಳು, ಕಲಾವಿದರು, ಬುದ್ಧಿವಂತರ ಕೊರತೆಯಿದೆ; ಆದ್ದರಿಂದ ಆ ಬಗ್ಗೆ ಎಚ್ಚರವಹಿಸಿ ಎಂದು ಹೇಳಿದ್ದಲ್ಲದೆ ಭಾರತದಲ್ಲಿ ಭೀಕರ ಜಾತೀಯತೆ ಅಸ್ಪೃಶ್ಯತೆ ಭುಗಿಲೇಳಲು ಬ್ರಿಟಿಷರು ಕಾರಣ ಎಂದು ಹೇಳು ಇಲ್ಲೊಂದೆರಡು ’ಬಾಲು’ಗಳನ್ನು ತಯಾರು ಮಾಡಿ ದೇವನೂರ, ಡಿ. ಎಸ್. ನಾಗಭೂಷಣ್ ಇಂತಹವರೆಲ್ಲಾ ಗದರಿದ ಮೇಲೆ ಮತ್ತೆ ಬೆಲ್ಜಿಯಂಗೆ ಹಾರಿಹೋದುದು ಈಗ ಇತಿಹಾಸ. ಆದರೇನು ಬೆಲ್ಜಿಯಂನಲ್ಲಿ ಕುಳಿತೇ ತನ್ನ ನಿರೂಪಣೆಯ ಜಾಲವನ್ನು ಹರಡುತ್ತಿರುವ ಬಾಲುವಿನ ಬಾಲಬಡುಕರು ಸೆಕ್ಯುಲರ್ ಪದ ಹಿಡಿದುಕೊಂಡು ಬಡಿಯತೊಡಗಿವೆ. ಇನ್ನ ಕೆಲವರು ವಿಜ್ಞಾನವು ಶಂಕರಾಚಾರ್ಯರ ವೇದಾಂತದತ್ತ ವಾಲುತ್ತಿದೆ ಎಂದು ವಾದಿಸತೊಡಗಿದರೆ ಮತ್ತೆ ಕೆಲವು ಸದ್ಯಕ್ಕೆ ತಾವು ಕೈಗೆತ್ತಿಕೊಂಡಿರುವ ಟಿಪ್ಪು ವಿಷಯದಲ್ಲಿ ಬ್ರಿಟಿಷ್ ಲೇಖಕರು ಏನು ಹೇಳಿದ್ದಾರೆಂದು ಹುಡುಕಿ ಅನಾವರಣ ಮಾಡತೊಡಗಿವೆಯಲ್ಲಾ, ಥೂತ್ತೇರಿ.

****

ಇನ್ನೂರು ವರ್ಷದ ಹಿಂದೆ ಆಳಿಹೋದ ಟಿಪ್ಪು ಸಮಾಧಿ ಅಗೆಯುತ್ತ ಬಿಜೆಪಿಗಳು ಕುಳಿತಿರುವಾಗಲೇ ಚಿಕ್ಕಮಗಳೂರಿನ ಉರಿಗೌಡ ಮತ್ತು ಬೆಂಗಳೂರಿನ ನಂಜೇಗೌಡ ಸೇರಿಕೊಂಡು ಮಂಡ್ಯಕ್ಕೆ ಉರಿತಾಗಿಸುವ ಸುದ್ದಿ ಕೇಳಿದ ಮೋದಿ ಮಂಡ್ಯದಿಂದಲೇ ರೋಡ್ ಶೋ ಮಾಡುವ ತೀರ್ಮಾನ ತೆಗೆದುಕೊಂಡರಂತಲ್ಲಾ. ಅಷ್ಟಕ್ಕೂ ಟಿಪ್ಪು ವಿಷಯಕ್ಕೆ ಮರುಜೀವ ಕೊಡುತ್ತಿರುವ ಮಡಕೇರಿ ಕಡೆಯ ಅಡ್ನಾಡಿ ಸಂಶೋಧನೆಯ ವಾದದ ಪ್ರಕಾರ ಟಿಪ್ಪು ಸಾವಿರಾರು ಜನರನ್ನು ಇಸ್ಲಾಂ ಮತಾಂತರ ಮಾಡಿದ ಎಂದು ಬಡಿದುಕೊಳ್ಳುತ್ತಿರುವುದು. ಇದೇನು ಅಲ್ಲಗಳೆವ ಸಂಗತಿಯಲ್ಲ. ಇದಕ್ಕೆ ದಾಖಲೆಗಳಿವೆ. ಟಿಪ್ಪು ರಾಜನಾದ ಮೇಲೆ ದಂಗೆ ಎದ್ದ ಕೊಡಗಿನ ಕೆಲವರನ್ನ ಮತಾಂತರ ಮಾಡಿದ ಎನ್ನಲಾಗುತ್ತದೆ. ಆ ನಂತರ, ಟಿಪ್ಪು ಸತ್ತ ಕೂಡಲೇ ಆತ ಮತಾಂತರ ಮಾಡಿದವರನ್ನು ಮರಳಿ ಅವರ ಧರ್ಮ (ಜಾತಿ ಯಾವುದಕ್ಕೆ ಎಂಬ ಪ್ರಶ್ನೆ ಬೇರೆಯದ್ದು) ಕರೆತರಬಹುದಿತ್ತಲ್ಲವಾ? ಆ ಕೆಲಸವನ್ನು ಮಾಡದೆ ಅಂದು ಮತಾಂತರಗೊಂಡ ಕೊಡವರು ಮತ್ತು ಲಿಂಗಾಯತರನ್ನು ಇಂದು ದ್ವೇಷ ಮಾಡುತ್ತಿರುವ ಮಂದಮತಿಗಳಿಗೆ ತಾವು ತಮ್ಮವರನ್ನೇ ದ್ವೇಷ ಮಾಡುತ್ತಿದ್ದೇವೆ ಎಂಬುದು ಅರಿವಿಗೇ ಬಂದಿಲ್ಲವಲ್ಲಾ, ಥೂತ್ತೇರಿ.

****

ಇತ್ತ ಬೆಲ್ಜಿಯಂ ಬಾಲು ಕಡೆಯವರು ಟಿಪ್ಪು ಮತಾಂಧ ಮತ್ತು ಕ್ರೂರಿ ಎಂಬುದನ್ನು ಸಾಬೀತುಪಡಿಸಲೋಸ್ಕರ ಇತಿಹಾಸ ಪುಸ್ತಕಗಳನ್ನು ಕೆದಕುತ್ತಾ ಕುಳಿತಿವೆಯಂತೆ. ಅದೂ ಬ್ರಿಟಿಷ್ ಲೇಖಕರು ಬರೆದ ಕೃತಿಗಳನ್ನು. ಈ ಪೈಕಿ ಫ್ರಾನ್ಸಿಸ್ ಬುಖನನ್ ಕುರಿತು ಅಧ್ಯಯನ ಮಾಡುತ್ತಿರುವ ಸಂಘಿ ವಿದ್ವಾಂಸರು, ಅದರಲ್ಲಿ ಟಿಪ್ಪು ಬಗ್ಗೆ ಒಂದು ಸಣ್ಣ ಟೀಕೆ ಕಂಡರೂ ಅದನ್ನು ರಾಷ್ಟ್ರೋತ್ಥಾನ ಸಾಹಿತ್ಯದ ಪದಪುಂಜ ಬಳಸಿ ಮರುಕಟ್ಟುತ್ತಿವೆ. ಟಿಪ್ಪು ಬ್ರಿಟಿಷರ ಪಾಲಿಗೆ ಹುಲಿಯಾಗಿದ್ದ. ಅವರನ್ನ ಭಾರತದಿಂದಲೇ ಓಡಿಸುವ ಶಪಥ ಮಾಡಿದ್ದ. ಆದರೆ ಬ್ರಿಟಿಷರ ಆಡಳಿತದಲ್ಲಿ ಕಲೆಕ್ಟರಾಗಿದ್ದವರು, ಅವರ ಆಸ್ಥಾನದಲ್ಲಿದ್ದವರು, ಮಂತ್ರಿಗಳಾಗಿದ್ದವರು, ದಿವಾನರಾಗಿದ್ದವರು ಏಕೆ ಟಿಪ್ಪು ಬಗ್ಗೆ ಏನೂ ಬರೆಯದೆ ಹೊರಟುಹೋಗಿದ್ದಾರೆ ಎಂಬುದನ್ನು ಸಂಘಿ ವಿದ್ವಾಂಸರು ಅಧ್ಯಯನ ಮಾಡಿದರೆ ತಮ್ಮ ಪೂರ್ವಿಕರ ಭೋಜನದ ಇತಿಹಾಸ ತಿಳಿಯಬಹುದುದಲ್ಲವೆ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....