Homeಅಂಕಣಗಳುಟಿಪ್ಪು ವಿರೋಧಿಗಳು ತಮ್ಮವರನ್ನೇ ವಿರೋಧಿಸುತ್ತಿವೆ!

ಟಿಪ್ಪು ವಿರೋಧಿಗಳು ತಮ್ಮವರನ್ನೇ ವಿರೋಧಿಸುತ್ತಿವೆ!

- Advertisement -
- Advertisement -

ಅಧಿಕಾರಕ್ಕೆ ಬಂದಂದಿನಿಂದ ಇಲ್ಲಿಯವರೆಗೆ ಬರೀ ಹಗರಣಗಳಲ್ಲೇ ಮುಳುಗಿದ್ದ ಬಿಜೆಪಿ ಪಾರ್ಟಿಗೆ ಮಾಡಾಳು ವಿರೂಪಾಕ್ಷಪ್ಪನ ಹಗರಣ ಆರೋಪ ಮುಟ್ಟಿನೋಡಿಕೊಳ್ಳುವಂತೆ ಮಾಡಿದೆಯಲ್ಲಾ. ಆದರೇನು ಈ ಬಿಜೆಪಿಗಳನ್ನು ಯಾರೂ ಅವಮಾನ ಮಾಡಲಾಗುವುದಿಲ್ಲ. ಮರ್ಯಾದೆ ಕಳೆಯಲಾಗುವುದಿಲ್ಲ. ಮನಸ್ಸಿಗೆ ನೋವು ಮಾಡಲಾಗುವುದಿಲ್ಲ. ಸದರಿ ಹಗರಣದ ಆರೋಪಕ್ಕೆ ಮಾಧುಸ್ವಾಮಿ ಮತ್ತು ಮುಖ್ಯಮಂತ್ರಿ ಉತ್ತರ ಕೊಟ್ಟಾಗಿದೆ. ಏನೆಂದರೆ, ಲೋಕಾಯುಕ್ತದಲ್ಲಿ ನಿಮ್ಮ ಹಗರಣಗಳೂ ಹೊರಬರಲಿವೆ. ಮಗ ಮಾಡಿದ ಹಗರಣಕ್ಕೆ ಅಪ್ಪ ವಿರೂಪಾಕ್ಷನದೇನು ತಪ್ಪು. ನಿಮ್ಮ ಕಾಲದಲ್ಲಿ ಹಗರಣಗಳೇ ಆಗಿರಲಿಲ್ಲವೆ? ಹೀಗೆ. ಇಂತಹ ಉತ್ತರಗಳಿಂದ ಬಿಜೆಪಿಗಳ ಮನಸ್ಸೇನೆಂಬುದು ನಾಡಿನ ಜನಕ್ಕೆ ಅರಿವಾಗುತ್ತಿದೆ. ಅವೆಲ್ಲಕ್ಕಿಂತ ಮುಖ್ಯವಾಗಿ ಶಾ ಎಂಬಾತ ತನ್ನ ಭಾಷಣದಲ್ಲಿ ಮುಂದೆ ಲಂಚಮುಕ್ತ ಸರಕಾರ ಕೊಡುತ್ತೇವೆ ಎಂದಿದ್ದರು! ಅಲ್ಲಿಗೆ ಈವರೆಗೆ ಲಂಚ ತಿಂದ ಸರಕಾರ ನಡೆಸಿದ್ದೇವೆ ಎಂಬುದನ್ನು ಒಪ್ಪಿಕೊಡಂತಾಯ್ತು. ಈ ಬಿಜೆಪಿಗಳಿಗೆ ತಾವು ಆಡುವ ಮಾತಿನ ಅರ್ಥ ಭಾವ ಒಂದು ತಿಳಿಯುವುದಿಲ್ಲವೆಂಬುದಕ್ಕೆ ಇದು ಸಾಕ್ಷಿ. ಇನ್ನು ನಮ್ಮ ಮಾಡಾಳು ಇರಪಾಕ್ಷಿ ಕೋಟ್ಯಾಧಿಪತಿ ವಡ್ನಾಳು ರಾಜಣ್ಣನನ್ನು ಸೋಲಿಸಿ ಬಂದವರು. ಬರಲಿರುವ ಚುನಾವಣೆಯಲ್ಲಿ ಕೋಟಿಕೋಟಿ ಚೆಲ್ಲಬೇಕಿರುವುದರಿಂದ ಧನ ಸಂಗ್ರಹಕ್ಕೆ ಮಗನನ್ನು ನೇಮಿಸಿದ್ದರು ಅನಿಸುತ್ತೆ. ಮಾಡಾಳನ ಮಗನಂಥವರು ಇನ್ನು ಅದೆಷ್ಟು ಮಂದಿ ಬಿಜೆಪಿಯ ಮಂತ್ರಿ ಶಾಸಕರ ಬೆನ್ನಿಗಿದ್ದಾರೊ ಎಂಬುದು ಆ ಮಾಧುಸ್ವಾಮಿಗೇ ಗೊತ್ತಂತಿಲ್ಲಾ, ಥೂತ್ತೇರಿ.

****

ಉಡುಪಿ ಭಟ್ಟನ ಪ್ರಕರಣದಿಂದ ಹಿಡಿದು, ಮೈಸೂರು ರಾಮದಾಸ, ಅತ್ತ ಬೆಳಗಾವಿಯ ಜಾರಕಿಹೊಳಿ, ಹೊನ್ನಾಳಿಯ ರೇಣುಕಾಚಾರಿ, ಹರತಾಳು ಹಾಲಪ್ಪ ಇಂತಹವರ ಹಲವಾರು ಸಾಮಾಜಿಕ ಸಮಸ್ಯಗೆಳಿಂದ ಬಿಜೆಪಿ ನರಳಿದರೂ, ಅದು ಹೇಗೋ ಚೇತರಿಸಿಕೊಳ್ಳುತ್ತದೆಲ್ಲಾ. ಮತ್ತೆ ಹಗರಣಕ್ಕೆ ಸಂಬಂಧಪಟ್ಟವರೆಲ್ಲಾ ಚುನಾವಣೆಯಲ್ಲಿ ಗೆದ್ದು ಬರುವುದು ಸಾಮಾನ್ಯವಾಗಿದೆಯಲ್ಲಾ. ಅಧಿಕಾರ ದುರುಪಯೋಗದಿಂದ ಲೈಂಗಿಕ ಶೋಷಣೆ ಮಾಡಿದ ರೇಣುಕಾಚಾರಿ ವಿರುದ್ಧದ ಆರೋಪದ ಸುದ್ದಿಗೆ ಈ ನಾಡೇನು ಬೆಚ್ಚಲಿಲ್ಲ. ಬದಲಿಗೆ ಶಾಸಕನಾದಾಗ ಸಿಗುವ ಸವಲತ್ತು ನೋಡಿ ದಂಗುಬಡಿದರು. ಜನ ಸಂತ್ರಸ್ತರನ್ನೇ ಕುರಿತು ಆಡಿಕೊಳ್ಳುವುದು ಜಾಸ್ತಿ. ಆಗ ಈಶ್ವರಪ್ಪನೆಂಬ ಮಹಿಳಾವಾದಿ, ’ನೀವು ಆರೋಪ ಮಾಡಿದ ಮಹಿಳೆಯ ಬಗ್ಗೆ ಮಾತ್ರ ಯೋಚಿಸುತ್ತಿದ್ದೀರಿ, ಆದರೆ ರೇಣುಕಾಚಾರಿ ಪತ್ನಿಯ ಬಗ್ಗೆ ಯೋಚಿಸಿದ್ದೀರಾ?’ ಎಂದು ಪ್ರಶ್ನೆ ಕೇಳಿದ್ದರು! ಬಿಜೆಪಿ ಮತದಾರರು ಕನಿಕರದಿಂದ, ’ಪಾಪ ರೇಣುಕಾಚಾರಿಯದೇನೂ ತಪ್ಪಿಲ್ಲ’ ಎಂದುದಲ್ಲದೆ ಆತನನ್ನು ಮತ್ತೆ ಚುನಾವಣೆಯಲ್ಲಿ ಗೆಲ್ಲಿಸಿದರು. ತಮ್ಮ ನಾಯಕನ ವಿರುದ್ಧ ಬಂದ ಸುಳ್ಳು ಜಾತಿ ಸರ್ಟಿಫಿಕೇಟ್ ಆರೋಪ ಪ್ರಕರಣ, ವಂಚನೆ, ಭ್ರಷ್ಟತೆ, ವ್ಯಭಿಚಾರ ಇವೆಲ್ಲಾ ಸಮಸ್ಯೆಯೇ ಅಲ್ಲವೆಂದು ರೇಣುಕಾಚಾರಿಯನ್ನು ಗೆಲ್ಲಿಸಿ ಅರಾಮವಾಗಿರುವ ಒಂದು ವರ್ಗದ ಪ್ರಜೆಗಳ ಮನೋಗತವೇ, ಮಾಡಾಳು ಮೈಮರೆತು ಮೇದದ್ದು ಕೂಡ ಒಂದು ಅಪರಾಧವಾಗಿ ಕಾಣದಂತೆ ಕಾಯುತ್ತದಂತಲ್ಲಾ. ಮುಂದಿನ ಚುನಾವಣೆಯಲ್ಲಿ ಮಾಡಾಳರನ್ನೇ ಗೆಲ್ಲಿಸುವ ಶಪಥವನ್ನು ಅವರ ಮನೆ ಮುಂದೆ ಸೇರಿದ್ದ ಜನ ಮಾಡಿದರಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

ಇದ್ದಕ್ಕಿದ್ದಂತೆ ಬೆಲ್ಜಿಯಂನಿಂದ ಹಾರಿಬಂದ ಬಾಲು ಹೆಸರಿನ ಮನುಷ್ಯ ಕುವೆಂಪು ಯೂನಿವರ್ಸಿಟಿ ಆವರಣದಲ್ಲಿ ಹಾರಾಡಿ ಆರೆಸ್ಸೆಸ್ ಭೈಠಕ್‌ನಲ್ಲೂ ಭಾಗವಹಿಸಿ ನಿಮ್ಮಲ್ಲಿ ಸಾಹಿತಿಗಳು, ಕಲಾವಿದರು, ಬುದ್ಧಿವಂತರ ಕೊರತೆಯಿದೆ; ಆದ್ದರಿಂದ ಆ ಬಗ್ಗೆ ಎಚ್ಚರವಹಿಸಿ ಎಂದು ಹೇಳಿದ್ದಲ್ಲದೆ ಭಾರತದಲ್ಲಿ ಭೀಕರ ಜಾತೀಯತೆ ಅಸ್ಪೃಶ್ಯತೆ ಭುಗಿಲೇಳಲು ಬ್ರಿಟಿಷರು ಕಾರಣ ಎಂದು ಹೇಳು ಇಲ್ಲೊಂದೆರಡು ’ಬಾಲು’ಗಳನ್ನು ತಯಾರು ಮಾಡಿ ದೇವನೂರ, ಡಿ. ಎಸ್. ನಾಗಭೂಷಣ್ ಇಂತಹವರೆಲ್ಲಾ ಗದರಿದ ಮೇಲೆ ಮತ್ತೆ ಬೆಲ್ಜಿಯಂಗೆ ಹಾರಿಹೋದುದು ಈಗ ಇತಿಹಾಸ. ಆದರೇನು ಬೆಲ್ಜಿಯಂನಲ್ಲಿ ಕುಳಿತೇ ತನ್ನ ನಿರೂಪಣೆಯ ಜಾಲವನ್ನು ಹರಡುತ್ತಿರುವ ಬಾಲುವಿನ ಬಾಲಬಡುಕರು ಸೆಕ್ಯುಲರ್ ಪದ ಹಿಡಿದುಕೊಂಡು ಬಡಿಯತೊಡಗಿವೆ. ಇನ್ನ ಕೆಲವರು ವಿಜ್ಞಾನವು ಶಂಕರಾಚಾರ್ಯರ ವೇದಾಂತದತ್ತ ವಾಲುತ್ತಿದೆ ಎಂದು ವಾದಿಸತೊಡಗಿದರೆ ಮತ್ತೆ ಕೆಲವು ಸದ್ಯಕ್ಕೆ ತಾವು ಕೈಗೆತ್ತಿಕೊಂಡಿರುವ ಟಿಪ್ಪು ವಿಷಯದಲ್ಲಿ ಬ್ರಿಟಿಷ್ ಲೇಖಕರು ಏನು ಹೇಳಿದ್ದಾರೆಂದು ಹುಡುಕಿ ಅನಾವರಣ ಮಾಡತೊಡಗಿವೆಯಲ್ಲಾ, ಥೂತ್ತೇರಿ.

****

ಇನ್ನೂರು ವರ್ಷದ ಹಿಂದೆ ಆಳಿಹೋದ ಟಿಪ್ಪು ಸಮಾಧಿ ಅಗೆಯುತ್ತ ಬಿಜೆಪಿಗಳು ಕುಳಿತಿರುವಾಗಲೇ ಚಿಕ್ಕಮಗಳೂರಿನ ಉರಿಗೌಡ ಮತ್ತು ಬೆಂಗಳೂರಿನ ನಂಜೇಗೌಡ ಸೇರಿಕೊಂಡು ಮಂಡ್ಯಕ್ಕೆ ಉರಿತಾಗಿಸುವ ಸುದ್ದಿ ಕೇಳಿದ ಮೋದಿ ಮಂಡ್ಯದಿಂದಲೇ ರೋಡ್ ಶೋ ಮಾಡುವ ತೀರ್ಮಾನ ತೆಗೆದುಕೊಂಡರಂತಲ್ಲಾ. ಅಷ್ಟಕ್ಕೂ ಟಿಪ್ಪು ವಿಷಯಕ್ಕೆ ಮರುಜೀವ ಕೊಡುತ್ತಿರುವ ಮಡಕೇರಿ ಕಡೆಯ ಅಡ್ನಾಡಿ ಸಂಶೋಧನೆಯ ವಾದದ ಪ್ರಕಾರ ಟಿಪ್ಪು ಸಾವಿರಾರು ಜನರನ್ನು ಇಸ್ಲಾಂ ಮತಾಂತರ ಮಾಡಿದ ಎಂದು ಬಡಿದುಕೊಳ್ಳುತ್ತಿರುವುದು. ಇದೇನು ಅಲ್ಲಗಳೆವ ಸಂಗತಿಯಲ್ಲ. ಇದಕ್ಕೆ ದಾಖಲೆಗಳಿವೆ. ಟಿಪ್ಪು ರಾಜನಾದ ಮೇಲೆ ದಂಗೆ ಎದ್ದ ಕೊಡಗಿನ ಕೆಲವರನ್ನ ಮತಾಂತರ ಮಾಡಿದ ಎನ್ನಲಾಗುತ್ತದೆ. ಆ ನಂತರ, ಟಿಪ್ಪು ಸತ್ತ ಕೂಡಲೇ ಆತ ಮತಾಂತರ ಮಾಡಿದವರನ್ನು ಮರಳಿ ಅವರ ಧರ್ಮ (ಜಾತಿ ಯಾವುದಕ್ಕೆ ಎಂಬ ಪ್ರಶ್ನೆ ಬೇರೆಯದ್ದು) ಕರೆತರಬಹುದಿತ್ತಲ್ಲವಾ? ಆ ಕೆಲಸವನ್ನು ಮಾಡದೆ ಅಂದು ಮತಾಂತರಗೊಂಡ ಕೊಡವರು ಮತ್ತು ಲಿಂಗಾಯತರನ್ನು ಇಂದು ದ್ವೇಷ ಮಾಡುತ್ತಿರುವ ಮಂದಮತಿಗಳಿಗೆ ತಾವು ತಮ್ಮವರನ್ನೇ ದ್ವೇಷ ಮಾಡುತ್ತಿದ್ದೇವೆ ಎಂಬುದು ಅರಿವಿಗೇ ಬಂದಿಲ್ಲವಲ್ಲಾ, ಥೂತ್ತೇರಿ.

****

ಇತ್ತ ಬೆಲ್ಜಿಯಂ ಬಾಲು ಕಡೆಯವರು ಟಿಪ್ಪು ಮತಾಂಧ ಮತ್ತು ಕ್ರೂರಿ ಎಂಬುದನ್ನು ಸಾಬೀತುಪಡಿಸಲೋಸ್ಕರ ಇತಿಹಾಸ ಪುಸ್ತಕಗಳನ್ನು ಕೆದಕುತ್ತಾ ಕುಳಿತಿವೆಯಂತೆ. ಅದೂ ಬ್ರಿಟಿಷ್ ಲೇಖಕರು ಬರೆದ ಕೃತಿಗಳನ್ನು. ಈ ಪೈಕಿ ಫ್ರಾನ್ಸಿಸ್ ಬುಖನನ್ ಕುರಿತು ಅಧ್ಯಯನ ಮಾಡುತ್ತಿರುವ ಸಂಘಿ ವಿದ್ವಾಂಸರು, ಅದರಲ್ಲಿ ಟಿಪ್ಪು ಬಗ್ಗೆ ಒಂದು ಸಣ್ಣ ಟೀಕೆ ಕಂಡರೂ ಅದನ್ನು ರಾಷ್ಟ್ರೋತ್ಥಾನ ಸಾಹಿತ್ಯದ ಪದಪುಂಜ ಬಳಸಿ ಮರುಕಟ್ಟುತ್ತಿವೆ. ಟಿಪ್ಪು ಬ್ರಿಟಿಷರ ಪಾಲಿಗೆ ಹುಲಿಯಾಗಿದ್ದ. ಅವರನ್ನ ಭಾರತದಿಂದಲೇ ಓಡಿಸುವ ಶಪಥ ಮಾಡಿದ್ದ. ಆದರೆ ಬ್ರಿಟಿಷರ ಆಡಳಿತದಲ್ಲಿ ಕಲೆಕ್ಟರಾಗಿದ್ದವರು, ಅವರ ಆಸ್ಥಾನದಲ್ಲಿದ್ದವರು, ಮಂತ್ರಿಗಳಾಗಿದ್ದವರು, ದಿವಾನರಾಗಿದ್ದವರು ಏಕೆ ಟಿಪ್ಪು ಬಗ್ಗೆ ಏನೂ ಬರೆಯದೆ ಹೊರಟುಹೋಗಿದ್ದಾರೆ ಎಂಬುದನ್ನು ಸಂಘಿ ವಿದ್ವಾಂಸರು ಅಧ್ಯಯನ ಮಾಡಿದರೆ ತಮ್ಮ ಪೂರ್ವಿಕರ ಭೋಜನದ ಇತಿಹಾಸ ತಿಳಿಯಬಹುದುದಲ್ಲವೆ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...