Homeಅಂಕಣಗಳುಟಿಪ್ಪು ವಿರೋಧಿಗಳು ತಮ್ಮವರನ್ನೇ ವಿರೋಧಿಸುತ್ತಿವೆ!

ಟಿಪ್ಪು ವಿರೋಧಿಗಳು ತಮ್ಮವರನ್ನೇ ವಿರೋಧಿಸುತ್ತಿವೆ!

- Advertisement -
- Advertisement -

ಅಧಿಕಾರಕ್ಕೆ ಬಂದಂದಿನಿಂದ ಇಲ್ಲಿಯವರೆಗೆ ಬರೀ ಹಗರಣಗಳಲ್ಲೇ ಮುಳುಗಿದ್ದ ಬಿಜೆಪಿ ಪಾರ್ಟಿಗೆ ಮಾಡಾಳು ವಿರೂಪಾಕ್ಷಪ್ಪನ ಹಗರಣ ಆರೋಪ ಮುಟ್ಟಿನೋಡಿಕೊಳ್ಳುವಂತೆ ಮಾಡಿದೆಯಲ್ಲಾ. ಆದರೇನು ಈ ಬಿಜೆಪಿಗಳನ್ನು ಯಾರೂ ಅವಮಾನ ಮಾಡಲಾಗುವುದಿಲ್ಲ. ಮರ್ಯಾದೆ ಕಳೆಯಲಾಗುವುದಿಲ್ಲ. ಮನಸ್ಸಿಗೆ ನೋವು ಮಾಡಲಾಗುವುದಿಲ್ಲ. ಸದರಿ ಹಗರಣದ ಆರೋಪಕ್ಕೆ ಮಾಧುಸ್ವಾಮಿ ಮತ್ತು ಮುಖ್ಯಮಂತ್ರಿ ಉತ್ತರ ಕೊಟ್ಟಾಗಿದೆ. ಏನೆಂದರೆ, ಲೋಕಾಯುಕ್ತದಲ್ಲಿ ನಿಮ್ಮ ಹಗರಣಗಳೂ ಹೊರಬರಲಿವೆ. ಮಗ ಮಾಡಿದ ಹಗರಣಕ್ಕೆ ಅಪ್ಪ ವಿರೂಪಾಕ್ಷನದೇನು ತಪ್ಪು. ನಿಮ್ಮ ಕಾಲದಲ್ಲಿ ಹಗರಣಗಳೇ ಆಗಿರಲಿಲ್ಲವೆ? ಹೀಗೆ. ಇಂತಹ ಉತ್ತರಗಳಿಂದ ಬಿಜೆಪಿಗಳ ಮನಸ್ಸೇನೆಂಬುದು ನಾಡಿನ ಜನಕ್ಕೆ ಅರಿವಾಗುತ್ತಿದೆ. ಅವೆಲ್ಲಕ್ಕಿಂತ ಮುಖ್ಯವಾಗಿ ಶಾ ಎಂಬಾತ ತನ್ನ ಭಾಷಣದಲ್ಲಿ ಮುಂದೆ ಲಂಚಮುಕ್ತ ಸರಕಾರ ಕೊಡುತ್ತೇವೆ ಎಂದಿದ್ದರು! ಅಲ್ಲಿಗೆ ಈವರೆಗೆ ಲಂಚ ತಿಂದ ಸರಕಾರ ನಡೆಸಿದ್ದೇವೆ ಎಂಬುದನ್ನು ಒಪ್ಪಿಕೊಡಂತಾಯ್ತು. ಈ ಬಿಜೆಪಿಗಳಿಗೆ ತಾವು ಆಡುವ ಮಾತಿನ ಅರ್ಥ ಭಾವ ಒಂದು ತಿಳಿಯುವುದಿಲ್ಲವೆಂಬುದಕ್ಕೆ ಇದು ಸಾಕ್ಷಿ. ಇನ್ನು ನಮ್ಮ ಮಾಡಾಳು ಇರಪಾಕ್ಷಿ ಕೋಟ್ಯಾಧಿಪತಿ ವಡ್ನಾಳು ರಾಜಣ್ಣನನ್ನು ಸೋಲಿಸಿ ಬಂದವರು. ಬರಲಿರುವ ಚುನಾವಣೆಯಲ್ಲಿ ಕೋಟಿಕೋಟಿ ಚೆಲ್ಲಬೇಕಿರುವುದರಿಂದ ಧನ ಸಂಗ್ರಹಕ್ಕೆ ಮಗನನ್ನು ನೇಮಿಸಿದ್ದರು ಅನಿಸುತ್ತೆ. ಮಾಡಾಳನ ಮಗನಂಥವರು ಇನ್ನು ಅದೆಷ್ಟು ಮಂದಿ ಬಿಜೆಪಿಯ ಮಂತ್ರಿ ಶಾಸಕರ ಬೆನ್ನಿಗಿದ್ದಾರೊ ಎಂಬುದು ಆ ಮಾಧುಸ್ವಾಮಿಗೇ ಗೊತ್ತಂತಿಲ್ಲಾ, ಥೂತ್ತೇರಿ.

****

ಉಡುಪಿ ಭಟ್ಟನ ಪ್ರಕರಣದಿಂದ ಹಿಡಿದು, ಮೈಸೂರು ರಾಮದಾಸ, ಅತ್ತ ಬೆಳಗಾವಿಯ ಜಾರಕಿಹೊಳಿ, ಹೊನ್ನಾಳಿಯ ರೇಣುಕಾಚಾರಿ, ಹರತಾಳು ಹಾಲಪ್ಪ ಇಂತಹವರ ಹಲವಾರು ಸಾಮಾಜಿಕ ಸಮಸ್ಯಗೆಳಿಂದ ಬಿಜೆಪಿ ನರಳಿದರೂ, ಅದು ಹೇಗೋ ಚೇತರಿಸಿಕೊಳ್ಳುತ್ತದೆಲ್ಲಾ. ಮತ್ತೆ ಹಗರಣಕ್ಕೆ ಸಂಬಂಧಪಟ್ಟವರೆಲ್ಲಾ ಚುನಾವಣೆಯಲ್ಲಿ ಗೆದ್ದು ಬರುವುದು ಸಾಮಾನ್ಯವಾಗಿದೆಯಲ್ಲಾ. ಅಧಿಕಾರ ದುರುಪಯೋಗದಿಂದ ಲೈಂಗಿಕ ಶೋಷಣೆ ಮಾಡಿದ ರೇಣುಕಾಚಾರಿ ವಿರುದ್ಧದ ಆರೋಪದ ಸುದ್ದಿಗೆ ಈ ನಾಡೇನು ಬೆಚ್ಚಲಿಲ್ಲ. ಬದಲಿಗೆ ಶಾಸಕನಾದಾಗ ಸಿಗುವ ಸವಲತ್ತು ನೋಡಿ ದಂಗುಬಡಿದರು. ಜನ ಸಂತ್ರಸ್ತರನ್ನೇ ಕುರಿತು ಆಡಿಕೊಳ್ಳುವುದು ಜಾಸ್ತಿ. ಆಗ ಈಶ್ವರಪ್ಪನೆಂಬ ಮಹಿಳಾವಾದಿ, ’ನೀವು ಆರೋಪ ಮಾಡಿದ ಮಹಿಳೆಯ ಬಗ್ಗೆ ಮಾತ್ರ ಯೋಚಿಸುತ್ತಿದ್ದೀರಿ, ಆದರೆ ರೇಣುಕಾಚಾರಿ ಪತ್ನಿಯ ಬಗ್ಗೆ ಯೋಚಿಸಿದ್ದೀರಾ?’ ಎಂದು ಪ್ರಶ್ನೆ ಕೇಳಿದ್ದರು! ಬಿಜೆಪಿ ಮತದಾರರು ಕನಿಕರದಿಂದ, ’ಪಾಪ ರೇಣುಕಾಚಾರಿಯದೇನೂ ತಪ್ಪಿಲ್ಲ’ ಎಂದುದಲ್ಲದೆ ಆತನನ್ನು ಮತ್ತೆ ಚುನಾವಣೆಯಲ್ಲಿ ಗೆಲ್ಲಿಸಿದರು. ತಮ್ಮ ನಾಯಕನ ವಿರುದ್ಧ ಬಂದ ಸುಳ್ಳು ಜಾತಿ ಸರ್ಟಿಫಿಕೇಟ್ ಆರೋಪ ಪ್ರಕರಣ, ವಂಚನೆ, ಭ್ರಷ್ಟತೆ, ವ್ಯಭಿಚಾರ ಇವೆಲ್ಲಾ ಸಮಸ್ಯೆಯೇ ಅಲ್ಲವೆಂದು ರೇಣುಕಾಚಾರಿಯನ್ನು ಗೆಲ್ಲಿಸಿ ಅರಾಮವಾಗಿರುವ ಒಂದು ವರ್ಗದ ಪ್ರಜೆಗಳ ಮನೋಗತವೇ, ಮಾಡಾಳು ಮೈಮರೆತು ಮೇದದ್ದು ಕೂಡ ಒಂದು ಅಪರಾಧವಾಗಿ ಕಾಣದಂತೆ ಕಾಯುತ್ತದಂತಲ್ಲಾ. ಮುಂದಿನ ಚುನಾವಣೆಯಲ್ಲಿ ಮಾಡಾಳರನ್ನೇ ಗೆಲ್ಲಿಸುವ ಶಪಥವನ್ನು ಅವರ ಮನೆ ಮುಂದೆ ಸೇರಿದ್ದ ಜನ ಮಾಡಿದರಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

ಇದ್ದಕ್ಕಿದ್ದಂತೆ ಬೆಲ್ಜಿಯಂನಿಂದ ಹಾರಿಬಂದ ಬಾಲು ಹೆಸರಿನ ಮನುಷ್ಯ ಕುವೆಂಪು ಯೂನಿವರ್ಸಿಟಿ ಆವರಣದಲ್ಲಿ ಹಾರಾಡಿ ಆರೆಸ್ಸೆಸ್ ಭೈಠಕ್‌ನಲ್ಲೂ ಭಾಗವಹಿಸಿ ನಿಮ್ಮಲ್ಲಿ ಸಾಹಿತಿಗಳು, ಕಲಾವಿದರು, ಬುದ್ಧಿವಂತರ ಕೊರತೆಯಿದೆ; ಆದ್ದರಿಂದ ಆ ಬಗ್ಗೆ ಎಚ್ಚರವಹಿಸಿ ಎಂದು ಹೇಳಿದ್ದಲ್ಲದೆ ಭಾರತದಲ್ಲಿ ಭೀಕರ ಜಾತೀಯತೆ ಅಸ್ಪೃಶ್ಯತೆ ಭುಗಿಲೇಳಲು ಬ್ರಿಟಿಷರು ಕಾರಣ ಎಂದು ಹೇಳು ಇಲ್ಲೊಂದೆರಡು ’ಬಾಲು’ಗಳನ್ನು ತಯಾರು ಮಾಡಿ ದೇವನೂರ, ಡಿ. ಎಸ್. ನಾಗಭೂಷಣ್ ಇಂತಹವರೆಲ್ಲಾ ಗದರಿದ ಮೇಲೆ ಮತ್ತೆ ಬೆಲ್ಜಿಯಂಗೆ ಹಾರಿಹೋದುದು ಈಗ ಇತಿಹಾಸ. ಆದರೇನು ಬೆಲ್ಜಿಯಂನಲ್ಲಿ ಕುಳಿತೇ ತನ್ನ ನಿರೂಪಣೆಯ ಜಾಲವನ್ನು ಹರಡುತ್ತಿರುವ ಬಾಲುವಿನ ಬಾಲಬಡುಕರು ಸೆಕ್ಯುಲರ್ ಪದ ಹಿಡಿದುಕೊಂಡು ಬಡಿಯತೊಡಗಿವೆ. ಇನ್ನ ಕೆಲವರು ವಿಜ್ಞಾನವು ಶಂಕರಾಚಾರ್ಯರ ವೇದಾಂತದತ್ತ ವಾಲುತ್ತಿದೆ ಎಂದು ವಾದಿಸತೊಡಗಿದರೆ ಮತ್ತೆ ಕೆಲವು ಸದ್ಯಕ್ಕೆ ತಾವು ಕೈಗೆತ್ತಿಕೊಂಡಿರುವ ಟಿಪ್ಪು ವಿಷಯದಲ್ಲಿ ಬ್ರಿಟಿಷ್ ಲೇಖಕರು ಏನು ಹೇಳಿದ್ದಾರೆಂದು ಹುಡುಕಿ ಅನಾವರಣ ಮಾಡತೊಡಗಿವೆಯಲ್ಲಾ, ಥೂತ್ತೇರಿ.

****

ಇನ್ನೂರು ವರ್ಷದ ಹಿಂದೆ ಆಳಿಹೋದ ಟಿಪ್ಪು ಸಮಾಧಿ ಅಗೆಯುತ್ತ ಬಿಜೆಪಿಗಳು ಕುಳಿತಿರುವಾಗಲೇ ಚಿಕ್ಕಮಗಳೂರಿನ ಉರಿಗೌಡ ಮತ್ತು ಬೆಂಗಳೂರಿನ ನಂಜೇಗೌಡ ಸೇರಿಕೊಂಡು ಮಂಡ್ಯಕ್ಕೆ ಉರಿತಾಗಿಸುವ ಸುದ್ದಿ ಕೇಳಿದ ಮೋದಿ ಮಂಡ್ಯದಿಂದಲೇ ರೋಡ್ ಶೋ ಮಾಡುವ ತೀರ್ಮಾನ ತೆಗೆದುಕೊಂಡರಂತಲ್ಲಾ. ಅಷ್ಟಕ್ಕೂ ಟಿಪ್ಪು ವಿಷಯಕ್ಕೆ ಮರುಜೀವ ಕೊಡುತ್ತಿರುವ ಮಡಕೇರಿ ಕಡೆಯ ಅಡ್ನಾಡಿ ಸಂಶೋಧನೆಯ ವಾದದ ಪ್ರಕಾರ ಟಿಪ್ಪು ಸಾವಿರಾರು ಜನರನ್ನು ಇಸ್ಲಾಂ ಮತಾಂತರ ಮಾಡಿದ ಎಂದು ಬಡಿದುಕೊಳ್ಳುತ್ತಿರುವುದು. ಇದೇನು ಅಲ್ಲಗಳೆವ ಸಂಗತಿಯಲ್ಲ. ಇದಕ್ಕೆ ದಾಖಲೆಗಳಿವೆ. ಟಿಪ್ಪು ರಾಜನಾದ ಮೇಲೆ ದಂಗೆ ಎದ್ದ ಕೊಡಗಿನ ಕೆಲವರನ್ನ ಮತಾಂತರ ಮಾಡಿದ ಎನ್ನಲಾಗುತ್ತದೆ. ಆ ನಂತರ, ಟಿಪ್ಪು ಸತ್ತ ಕೂಡಲೇ ಆತ ಮತಾಂತರ ಮಾಡಿದವರನ್ನು ಮರಳಿ ಅವರ ಧರ್ಮ (ಜಾತಿ ಯಾವುದಕ್ಕೆ ಎಂಬ ಪ್ರಶ್ನೆ ಬೇರೆಯದ್ದು) ಕರೆತರಬಹುದಿತ್ತಲ್ಲವಾ? ಆ ಕೆಲಸವನ್ನು ಮಾಡದೆ ಅಂದು ಮತಾಂತರಗೊಂಡ ಕೊಡವರು ಮತ್ತು ಲಿಂಗಾಯತರನ್ನು ಇಂದು ದ್ವೇಷ ಮಾಡುತ್ತಿರುವ ಮಂದಮತಿಗಳಿಗೆ ತಾವು ತಮ್ಮವರನ್ನೇ ದ್ವೇಷ ಮಾಡುತ್ತಿದ್ದೇವೆ ಎಂಬುದು ಅರಿವಿಗೇ ಬಂದಿಲ್ಲವಲ್ಲಾ, ಥೂತ್ತೇರಿ.

****

ಇತ್ತ ಬೆಲ್ಜಿಯಂ ಬಾಲು ಕಡೆಯವರು ಟಿಪ್ಪು ಮತಾಂಧ ಮತ್ತು ಕ್ರೂರಿ ಎಂಬುದನ್ನು ಸಾಬೀತುಪಡಿಸಲೋಸ್ಕರ ಇತಿಹಾಸ ಪುಸ್ತಕಗಳನ್ನು ಕೆದಕುತ್ತಾ ಕುಳಿತಿವೆಯಂತೆ. ಅದೂ ಬ್ರಿಟಿಷ್ ಲೇಖಕರು ಬರೆದ ಕೃತಿಗಳನ್ನು. ಈ ಪೈಕಿ ಫ್ರಾನ್ಸಿಸ್ ಬುಖನನ್ ಕುರಿತು ಅಧ್ಯಯನ ಮಾಡುತ್ತಿರುವ ಸಂಘಿ ವಿದ್ವಾಂಸರು, ಅದರಲ್ಲಿ ಟಿಪ್ಪು ಬಗ್ಗೆ ಒಂದು ಸಣ್ಣ ಟೀಕೆ ಕಂಡರೂ ಅದನ್ನು ರಾಷ್ಟ್ರೋತ್ಥಾನ ಸಾಹಿತ್ಯದ ಪದಪುಂಜ ಬಳಸಿ ಮರುಕಟ್ಟುತ್ತಿವೆ. ಟಿಪ್ಪು ಬ್ರಿಟಿಷರ ಪಾಲಿಗೆ ಹುಲಿಯಾಗಿದ್ದ. ಅವರನ್ನ ಭಾರತದಿಂದಲೇ ಓಡಿಸುವ ಶಪಥ ಮಾಡಿದ್ದ. ಆದರೆ ಬ್ರಿಟಿಷರ ಆಡಳಿತದಲ್ಲಿ ಕಲೆಕ್ಟರಾಗಿದ್ದವರು, ಅವರ ಆಸ್ಥಾನದಲ್ಲಿದ್ದವರು, ಮಂತ್ರಿಗಳಾಗಿದ್ದವರು, ದಿವಾನರಾಗಿದ್ದವರು ಏಕೆ ಟಿಪ್ಪು ಬಗ್ಗೆ ಏನೂ ಬರೆಯದೆ ಹೊರಟುಹೋಗಿದ್ದಾರೆ ಎಂಬುದನ್ನು ಸಂಘಿ ವಿದ್ವಾಂಸರು ಅಧ್ಯಯನ ಮಾಡಿದರೆ ತಮ್ಮ ಪೂರ್ವಿಕರ ಭೋಜನದ ಇತಿಹಾಸ ತಿಳಿಯಬಹುದುದಲ್ಲವೆ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...