Homeಅಂಕಣಗಳುಟಿಪ್ಪು ವಿರೋಧಿಗಳು ತಮ್ಮವರನ್ನೇ ವಿರೋಧಿಸುತ್ತಿವೆ!

ಟಿಪ್ಪು ವಿರೋಧಿಗಳು ತಮ್ಮವರನ್ನೇ ವಿರೋಧಿಸುತ್ತಿವೆ!

- Advertisement -
- Advertisement -

ಅಧಿಕಾರಕ್ಕೆ ಬಂದಂದಿನಿಂದ ಇಲ್ಲಿಯವರೆಗೆ ಬರೀ ಹಗರಣಗಳಲ್ಲೇ ಮುಳುಗಿದ್ದ ಬಿಜೆಪಿ ಪಾರ್ಟಿಗೆ ಮಾಡಾಳು ವಿರೂಪಾಕ್ಷಪ್ಪನ ಹಗರಣ ಆರೋಪ ಮುಟ್ಟಿನೋಡಿಕೊಳ್ಳುವಂತೆ ಮಾಡಿದೆಯಲ್ಲಾ. ಆದರೇನು ಈ ಬಿಜೆಪಿಗಳನ್ನು ಯಾರೂ ಅವಮಾನ ಮಾಡಲಾಗುವುದಿಲ್ಲ. ಮರ್ಯಾದೆ ಕಳೆಯಲಾಗುವುದಿಲ್ಲ. ಮನಸ್ಸಿಗೆ ನೋವು ಮಾಡಲಾಗುವುದಿಲ್ಲ. ಸದರಿ ಹಗರಣದ ಆರೋಪಕ್ಕೆ ಮಾಧುಸ್ವಾಮಿ ಮತ್ತು ಮುಖ್ಯಮಂತ್ರಿ ಉತ್ತರ ಕೊಟ್ಟಾಗಿದೆ. ಏನೆಂದರೆ, ಲೋಕಾಯುಕ್ತದಲ್ಲಿ ನಿಮ್ಮ ಹಗರಣಗಳೂ ಹೊರಬರಲಿವೆ. ಮಗ ಮಾಡಿದ ಹಗರಣಕ್ಕೆ ಅಪ್ಪ ವಿರೂಪಾಕ್ಷನದೇನು ತಪ್ಪು. ನಿಮ್ಮ ಕಾಲದಲ್ಲಿ ಹಗರಣಗಳೇ ಆಗಿರಲಿಲ್ಲವೆ? ಹೀಗೆ. ಇಂತಹ ಉತ್ತರಗಳಿಂದ ಬಿಜೆಪಿಗಳ ಮನಸ್ಸೇನೆಂಬುದು ನಾಡಿನ ಜನಕ್ಕೆ ಅರಿವಾಗುತ್ತಿದೆ. ಅವೆಲ್ಲಕ್ಕಿಂತ ಮುಖ್ಯವಾಗಿ ಶಾ ಎಂಬಾತ ತನ್ನ ಭಾಷಣದಲ್ಲಿ ಮುಂದೆ ಲಂಚಮುಕ್ತ ಸರಕಾರ ಕೊಡುತ್ತೇವೆ ಎಂದಿದ್ದರು! ಅಲ್ಲಿಗೆ ಈವರೆಗೆ ಲಂಚ ತಿಂದ ಸರಕಾರ ನಡೆಸಿದ್ದೇವೆ ಎಂಬುದನ್ನು ಒಪ್ಪಿಕೊಡಂತಾಯ್ತು. ಈ ಬಿಜೆಪಿಗಳಿಗೆ ತಾವು ಆಡುವ ಮಾತಿನ ಅರ್ಥ ಭಾವ ಒಂದು ತಿಳಿಯುವುದಿಲ್ಲವೆಂಬುದಕ್ಕೆ ಇದು ಸಾಕ್ಷಿ. ಇನ್ನು ನಮ್ಮ ಮಾಡಾಳು ಇರಪಾಕ್ಷಿ ಕೋಟ್ಯಾಧಿಪತಿ ವಡ್ನಾಳು ರಾಜಣ್ಣನನ್ನು ಸೋಲಿಸಿ ಬಂದವರು. ಬರಲಿರುವ ಚುನಾವಣೆಯಲ್ಲಿ ಕೋಟಿಕೋಟಿ ಚೆಲ್ಲಬೇಕಿರುವುದರಿಂದ ಧನ ಸಂಗ್ರಹಕ್ಕೆ ಮಗನನ್ನು ನೇಮಿಸಿದ್ದರು ಅನಿಸುತ್ತೆ. ಮಾಡಾಳನ ಮಗನಂಥವರು ಇನ್ನು ಅದೆಷ್ಟು ಮಂದಿ ಬಿಜೆಪಿಯ ಮಂತ್ರಿ ಶಾಸಕರ ಬೆನ್ನಿಗಿದ್ದಾರೊ ಎಂಬುದು ಆ ಮಾಧುಸ್ವಾಮಿಗೇ ಗೊತ್ತಂತಿಲ್ಲಾ, ಥೂತ್ತೇರಿ.

****

ಉಡುಪಿ ಭಟ್ಟನ ಪ್ರಕರಣದಿಂದ ಹಿಡಿದು, ಮೈಸೂರು ರಾಮದಾಸ, ಅತ್ತ ಬೆಳಗಾವಿಯ ಜಾರಕಿಹೊಳಿ, ಹೊನ್ನಾಳಿಯ ರೇಣುಕಾಚಾರಿ, ಹರತಾಳು ಹಾಲಪ್ಪ ಇಂತಹವರ ಹಲವಾರು ಸಾಮಾಜಿಕ ಸಮಸ್ಯಗೆಳಿಂದ ಬಿಜೆಪಿ ನರಳಿದರೂ, ಅದು ಹೇಗೋ ಚೇತರಿಸಿಕೊಳ್ಳುತ್ತದೆಲ್ಲಾ. ಮತ್ತೆ ಹಗರಣಕ್ಕೆ ಸಂಬಂಧಪಟ್ಟವರೆಲ್ಲಾ ಚುನಾವಣೆಯಲ್ಲಿ ಗೆದ್ದು ಬರುವುದು ಸಾಮಾನ್ಯವಾಗಿದೆಯಲ್ಲಾ. ಅಧಿಕಾರ ದುರುಪಯೋಗದಿಂದ ಲೈಂಗಿಕ ಶೋಷಣೆ ಮಾಡಿದ ರೇಣುಕಾಚಾರಿ ವಿರುದ್ಧದ ಆರೋಪದ ಸುದ್ದಿಗೆ ಈ ನಾಡೇನು ಬೆಚ್ಚಲಿಲ್ಲ. ಬದಲಿಗೆ ಶಾಸಕನಾದಾಗ ಸಿಗುವ ಸವಲತ್ತು ನೋಡಿ ದಂಗುಬಡಿದರು. ಜನ ಸಂತ್ರಸ್ತರನ್ನೇ ಕುರಿತು ಆಡಿಕೊಳ್ಳುವುದು ಜಾಸ್ತಿ. ಆಗ ಈಶ್ವರಪ್ಪನೆಂಬ ಮಹಿಳಾವಾದಿ, ’ನೀವು ಆರೋಪ ಮಾಡಿದ ಮಹಿಳೆಯ ಬಗ್ಗೆ ಮಾತ್ರ ಯೋಚಿಸುತ್ತಿದ್ದೀರಿ, ಆದರೆ ರೇಣುಕಾಚಾರಿ ಪತ್ನಿಯ ಬಗ್ಗೆ ಯೋಚಿಸಿದ್ದೀರಾ?’ ಎಂದು ಪ್ರಶ್ನೆ ಕೇಳಿದ್ದರು! ಬಿಜೆಪಿ ಮತದಾರರು ಕನಿಕರದಿಂದ, ’ಪಾಪ ರೇಣುಕಾಚಾರಿಯದೇನೂ ತಪ್ಪಿಲ್ಲ’ ಎಂದುದಲ್ಲದೆ ಆತನನ್ನು ಮತ್ತೆ ಚುನಾವಣೆಯಲ್ಲಿ ಗೆಲ್ಲಿಸಿದರು. ತಮ್ಮ ನಾಯಕನ ವಿರುದ್ಧ ಬಂದ ಸುಳ್ಳು ಜಾತಿ ಸರ್ಟಿಫಿಕೇಟ್ ಆರೋಪ ಪ್ರಕರಣ, ವಂಚನೆ, ಭ್ರಷ್ಟತೆ, ವ್ಯಭಿಚಾರ ಇವೆಲ್ಲಾ ಸಮಸ್ಯೆಯೇ ಅಲ್ಲವೆಂದು ರೇಣುಕಾಚಾರಿಯನ್ನು ಗೆಲ್ಲಿಸಿ ಅರಾಮವಾಗಿರುವ ಒಂದು ವರ್ಗದ ಪ್ರಜೆಗಳ ಮನೋಗತವೇ, ಮಾಡಾಳು ಮೈಮರೆತು ಮೇದದ್ದು ಕೂಡ ಒಂದು ಅಪರಾಧವಾಗಿ ಕಾಣದಂತೆ ಕಾಯುತ್ತದಂತಲ್ಲಾ. ಮುಂದಿನ ಚುನಾವಣೆಯಲ್ಲಿ ಮಾಡಾಳರನ್ನೇ ಗೆಲ್ಲಿಸುವ ಶಪಥವನ್ನು ಅವರ ಮನೆ ಮುಂದೆ ಸೇರಿದ್ದ ಜನ ಮಾಡಿದರಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಇನ್ನು ಶಿವಮೊಗ್ಗದ ಲೀಡರುಗಳೆಲ್ಲ ಗಗನಗಾಮಿಗಳು!

ಇದ್ದಕ್ಕಿದ್ದಂತೆ ಬೆಲ್ಜಿಯಂನಿಂದ ಹಾರಿಬಂದ ಬಾಲು ಹೆಸರಿನ ಮನುಷ್ಯ ಕುವೆಂಪು ಯೂನಿವರ್ಸಿಟಿ ಆವರಣದಲ್ಲಿ ಹಾರಾಡಿ ಆರೆಸ್ಸೆಸ್ ಭೈಠಕ್‌ನಲ್ಲೂ ಭಾಗವಹಿಸಿ ನಿಮ್ಮಲ್ಲಿ ಸಾಹಿತಿಗಳು, ಕಲಾವಿದರು, ಬುದ್ಧಿವಂತರ ಕೊರತೆಯಿದೆ; ಆದ್ದರಿಂದ ಆ ಬಗ್ಗೆ ಎಚ್ಚರವಹಿಸಿ ಎಂದು ಹೇಳಿದ್ದಲ್ಲದೆ ಭಾರತದಲ್ಲಿ ಭೀಕರ ಜಾತೀಯತೆ ಅಸ್ಪೃಶ್ಯತೆ ಭುಗಿಲೇಳಲು ಬ್ರಿಟಿಷರು ಕಾರಣ ಎಂದು ಹೇಳು ಇಲ್ಲೊಂದೆರಡು ’ಬಾಲು’ಗಳನ್ನು ತಯಾರು ಮಾಡಿ ದೇವನೂರ, ಡಿ. ಎಸ್. ನಾಗಭೂಷಣ್ ಇಂತಹವರೆಲ್ಲಾ ಗದರಿದ ಮೇಲೆ ಮತ್ತೆ ಬೆಲ್ಜಿಯಂಗೆ ಹಾರಿಹೋದುದು ಈಗ ಇತಿಹಾಸ. ಆದರೇನು ಬೆಲ್ಜಿಯಂನಲ್ಲಿ ಕುಳಿತೇ ತನ್ನ ನಿರೂಪಣೆಯ ಜಾಲವನ್ನು ಹರಡುತ್ತಿರುವ ಬಾಲುವಿನ ಬಾಲಬಡುಕರು ಸೆಕ್ಯುಲರ್ ಪದ ಹಿಡಿದುಕೊಂಡು ಬಡಿಯತೊಡಗಿವೆ. ಇನ್ನ ಕೆಲವರು ವಿಜ್ಞಾನವು ಶಂಕರಾಚಾರ್ಯರ ವೇದಾಂತದತ್ತ ವಾಲುತ್ತಿದೆ ಎಂದು ವಾದಿಸತೊಡಗಿದರೆ ಮತ್ತೆ ಕೆಲವು ಸದ್ಯಕ್ಕೆ ತಾವು ಕೈಗೆತ್ತಿಕೊಂಡಿರುವ ಟಿಪ್ಪು ವಿಷಯದಲ್ಲಿ ಬ್ರಿಟಿಷ್ ಲೇಖಕರು ಏನು ಹೇಳಿದ್ದಾರೆಂದು ಹುಡುಕಿ ಅನಾವರಣ ಮಾಡತೊಡಗಿವೆಯಲ್ಲಾ, ಥೂತ್ತೇರಿ.

****

ಇನ್ನೂರು ವರ್ಷದ ಹಿಂದೆ ಆಳಿಹೋದ ಟಿಪ್ಪು ಸಮಾಧಿ ಅಗೆಯುತ್ತ ಬಿಜೆಪಿಗಳು ಕುಳಿತಿರುವಾಗಲೇ ಚಿಕ್ಕಮಗಳೂರಿನ ಉರಿಗೌಡ ಮತ್ತು ಬೆಂಗಳೂರಿನ ನಂಜೇಗೌಡ ಸೇರಿಕೊಂಡು ಮಂಡ್ಯಕ್ಕೆ ಉರಿತಾಗಿಸುವ ಸುದ್ದಿ ಕೇಳಿದ ಮೋದಿ ಮಂಡ್ಯದಿಂದಲೇ ರೋಡ್ ಶೋ ಮಾಡುವ ತೀರ್ಮಾನ ತೆಗೆದುಕೊಂಡರಂತಲ್ಲಾ. ಅಷ್ಟಕ್ಕೂ ಟಿಪ್ಪು ವಿಷಯಕ್ಕೆ ಮರುಜೀವ ಕೊಡುತ್ತಿರುವ ಮಡಕೇರಿ ಕಡೆಯ ಅಡ್ನಾಡಿ ಸಂಶೋಧನೆಯ ವಾದದ ಪ್ರಕಾರ ಟಿಪ್ಪು ಸಾವಿರಾರು ಜನರನ್ನು ಇಸ್ಲಾಂ ಮತಾಂತರ ಮಾಡಿದ ಎಂದು ಬಡಿದುಕೊಳ್ಳುತ್ತಿರುವುದು. ಇದೇನು ಅಲ್ಲಗಳೆವ ಸಂಗತಿಯಲ್ಲ. ಇದಕ್ಕೆ ದಾಖಲೆಗಳಿವೆ. ಟಿಪ್ಪು ರಾಜನಾದ ಮೇಲೆ ದಂಗೆ ಎದ್ದ ಕೊಡಗಿನ ಕೆಲವರನ್ನ ಮತಾಂತರ ಮಾಡಿದ ಎನ್ನಲಾಗುತ್ತದೆ. ಆ ನಂತರ, ಟಿಪ್ಪು ಸತ್ತ ಕೂಡಲೇ ಆತ ಮತಾಂತರ ಮಾಡಿದವರನ್ನು ಮರಳಿ ಅವರ ಧರ್ಮ (ಜಾತಿ ಯಾವುದಕ್ಕೆ ಎಂಬ ಪ್ರಶ್ನೆ ಬೇರೆಯದ್ದು) ಕರೆತರಬಹುದಿತ್ತಲ್ಲವಾ? ಆ ಕೆಲಸವನ್ನು ಮಾಡದೆ ಅಂದು ಮತಾಂತರಗೊಂಡ ಕೊಡವರು ಮತ್ತು ಲಿಂಗಾಯತರನ್ನು ಇಂದು ದ್ವೇಷ ಮಾಡುತ್ತಿರುವ ಮಂದಮತಿಗಳಿಗೆ ತಾವು ತಮ್ಮವರನ್ನೇ ದ್ವೇಷ ಮಾಡುತ್ತಿದ್ದೇವೆ ಎಂಬುದು ಅರಿವಿಗೇ ಬಂದಿಲ್ಲವಲ್ಲಾ, ಥೂತ್ತೇರಿ.

****

ಇತ್ತ ಬೆಲ್ಜಿಯಂ ಬಾಲು ಕಡೆಯವರು ಟಿಪ್ಪು ಮತಾಂಧ ಮತ್ತು ಕ್ರೂರಿ ಎಂಬುದನ್ನು ಸಾಬೀತುಪಡಿಸಲೋಸ್ಕರ ಇತಿಹಾಸ ಪುಸ್ತಕಗಳನ್ನು ಕೆದಕುತ್ತಾ ಕುಳಿತಿವೆಯಂತೆ. ಅದೂ ಬ್ರಿಟಿಷ್ ಲೇಖಕರು ಬರೆದ ಕೃತಿಗಳನ್ನು. ಈ ಪೈಕಿ ಫ್ರಾನ್ಸಿಸ್ ಬುಖನನ್ ಕುರಿತು ಅಧ್ಯಯನ ಮಾಡುತ್ತಿರುವ ಸಂಘಿ ವಿದ್ವಾಂಸರು, ಅದರಲ್ಲಿ ಟಿಪ್ಪು ಬಗ್ಗೆ ಒಂದು ಸಣ್ಣ ಟೀಕೆ ಕಂಡರೂ ಅದನ್ನು ರಾಷ್ಟ್ರೋತ್ಥಾನ ಸಾಹಿತ್ಯದ ಪದಪುಂಜ ಬಳಸಿ ಮರುಕಟ್ಟುತ್ತಿವೆ. ಟಿಪ್ಪು ಬ್ರಿಟಿಷರ ಪಾಲಿಗೆ ಹುಲಿಯಾಗಿದ್ದ. ಅವರನ್ನ ಭಾರತದಿಂದಲೇ ಓಡಿಸುವ ಶಪಥ ಮಾಡಿದ್ದ. ಆದರೆ ಬ್ರಿಟಿಷರ ಆಡಳಿತದಲ್ಲಿ ಕಲೆಕ್ಟರಾಗಿದ್ದವರು, ಅವರ ಆಸ್ಥಾನದಲ್ಲಿದ್ದವರು, ಮಂತ್ರಿಗಳಾಗಿದ್ದವರು, ದಿವಾನರಾಗಿದ್ದವರು ಏಕೆ ಟಿಪ್ಪು ಬಗ್ಗೆ ಏನೂ ಬರೆಯದೆ ಹೊರಟುಹೋಗಿದ್ದಾರೆ ಎಂಬುದನ್ನು ಸಂಘಿ ವಿದ್ವಾಂಸರು ಅಧ್ಯಯನ ಮಾಡಿದರೆ ತಮ್ಮ ಪೂರ್ವಿಕರ ಭೋಜನದ ಇತಿಹಾಸ ತಿಳಿಯಬಹುದುದಲ್ಲವೆ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....