Homeಕರ್ನಾಟಕಅಡಾಸು ಕಂಪನಿಗೆ ಅಡವಿಟೇಜು ಜಾಸ್ತಿಯಂತೆ!

ಅಡಾಸು ಕಂಪನಿಗೆ ಅಡವಿಟೇಜು ಜಾಸ್ತಿಯಂತೆ!

- Advertisement -
- Advertisement -

ಕರ್ನಾಟಕದ ಹಳ್ಳಿಗಳ ಗೋಡೆಗಳ ಮೇಲೆ ಬಿಜೆಪಿಯೇ ಭರವಸೆ ಎಂಬ ವರ್ಣರಂಜಿತ ಬೋರ್ಡ್‌ಗಳು ರಾರಾಜಿಸುತ್ತಿವೆಯಲ್ಲಾ. ಎಂದಿನಂತೆ ಹಳ್ಳಿಗರು ನಿಂತು ನೋಡಿ ಓದಲು ಯತ್ನಿಸುತ್ತ ಭರವಸೆ ಎಂದರೆ ಏನು, ಅದರಲ್ಲೂ ಬಿಜೆಪಿ ಭರವಸೆ ಯಾವುದು ಎಂಬ ಚರ್ಚೆ ಆರಂಭಿಸಿದ್ದಾರೆ. ಏಕೆಂದರೆ ಭರವಸೆ ಎಂಬುದು ಕೇವಲ ಭರವಸೆ ಎಂಬಂತಾಗಿದೆ, ಅದು ನಿಜವಾದ ಮಾತಲ್ಲ. ಅದು ಸದ್ಯದಲ್ಲಿ ತಮ್ಮ ತೆವಲು ತೀರಿಸಿಕೊಳ್ಳಲು ಕೊಡುವ ಹೇಳಿಕೆ ಎಂಬುದು ಹಳ್ಳಿಗರಿಗೆ ಎಂದೋ ಅರ್ಥವಾದ ಸುಳ್ಳು. ಎಲ್ಲಕ್ಕಿಂತ ಮುಖ್ಯವಾಗಿ ಈ ಬಿಜೆಪಿ ಎಂಬುದು ಭರವಸೆ ಪಾರ್ಟಿ. ಭರವಸೆ ಎಂಬುದು ಸುಲಭವಾದ ಸುಳ್ಳು. ಏನು ಭರವಸೆ, ಯಾವ ಭರವಸೆ, ಅದು ಈಡೇರಲು ಹಾಕಿಕೊಂಡ ಕಾರ್ಯತಂತ್ರವೇನು ಎಂಬ ಯಾವ ವಿವರವೂ ಇಲ್ಲದ ಪುರೋಹಿತ ಮಂತ್ರವಿದ್ದಂತೆ ಅದು ಎಂಬುದು ಹಳ್ಳಿಗರಿಗೆ ಈಗಾಗಲೇ ಮನದಟ್ಟಾದ ಸಂಗತಿಯಾದ್ದರಿಂದ ಮೋದಿ ಪಾರ್ಟಿ ಹಳ್ಳಿಗಳ ಗೋಡೆಯ ಮೇಲೆ ಬರೆದಿರುವ ಭರವಸೆಯ ಬೋರ್ಡನ್ನು ’ಅಡಾಸು ಕಂಪನಿಗೆ ಅಡವಿಟೇಜು ಜಾಸ್ತಿಯಂತೆ’ ಎಂಬ ತೀರ್ಮಾನಕ್ಕೆ ಹಳ್ಳಿಗರು ಬಂದಾಗಿದೆಯಂತಲ್ಲಾ. ಹಳ್ಳಿ ರೈತ ಕೊಡುವ ಒಂದು ಉದಾಹರಣೆ ನೋಡಿದರೆ ಸಾಕು; ಬಸವರಾಜ ಬೊಮ್ಮಾಯಿ ಮಂಡಿಸಿದ ಅದ್ಭುತ ಬಜೆಟ್ಟಿನಲ್ಲಿ ರೈತರಿಗೆ ಐದು ಲಕ್ಷ ಬಡ್ಡಿರಹಿತ ಸಾಲ ಎಂಬ ಭರವಸೆ ಕೊಡಲಾಗಿದೆ. ಐದು ಲಕ್ಷ ಪಡೆಯಬೇಕಾದರೆ ಆತನ ಬಳಿಯಿರುವ ಭೂಮಿ ಇಡಬೇಕು, ಅದರ ಮೇಲೆ ಸುರಿಯುವ ಐದು ಲಕ್ಷ; ಇವೆಲ್ಲವನ್ನು ತರ್ಕಿಸಿದರೆ ಸದರಿ ಸಾಲ ಸುಳ್ಳು ಭರವಸೆಯಾಗಿ ಉಳಿಯಲಿದೆ. ಕರ್ನಾಟಕದ ಯಾವ ರೈತನೂ ಈ ಐದು ಲಕ್ಷದ ಸಹವಾಸಕ್ಕೆ ಹೋಗುವುದಿಲ್ಲವಂತಲ್ಲಾ, ಥೂತ್ತೇರಿ.
*****

ಮಾಧುಸ್ವಾಮಿ ಗೊಣಗಾಟದ ಪ್ರಕಾರ ಈ ಸರಕಾರದ ಅವಧಿ ಮುಗಿಯುವವರೆಗೆ ಹೇಗೋ ದ್ರವಾಹಾರ ನೀಡುತ್ತ ಮುಂದೂಡಿಕೊಂಡು ಹೋಗುತ್ತಾರಂತಲ್ಲಾ. ಎಂಬ ಗೊಣಗಾಟಕ್ಕೆ ಪೂರಕವಾಗಿ ಬೊಮ್ಮಾಯಿಯ ಬಜೆಟ್ಟು ಮಂಡನೆಯಾಗಿದೆಯಲ್ಲಾ. ಇದರಲ್ಲಿ ಪ್ರಧಾನವಾಗಿ ಕಂಡುಬರುವ ಅಂಶ ಯಾವುದೆಂದರೆ ಬೊಮ್ಮಾಯಿ ಬದುಕಿನ ಆದರ್ಶ ಪುರುಷನಾದ ಎಡೂರಪ್ಪ ಮಠಗಳಿಗೆ ಕೊಟ್ಟ ದಾನ-ಅನುದಾನವನ್ನು ಸಾವಿರ ಕೋಟಿ ಏರಿಸಿರುವುದು; ಸಾವಿರಾರು ಮಠಗಳಿರುವಾಗ ಸಾವಿರ ಕೋಟಿ ಅನುದಾನ ಹೆಚ್ಚಿನದೇನಲ್ಲ. ಮಠದ ಜೋಳಿಗೆಗಳು ಎಷ್ಟು ಕೊಟ್ಟರೂ ಇನ್ನೂ ಅಗಲವಾಗಿ ಬಾಯಿ ತೆರೆಯುವಂತಿವೆ. ವಿಷಯ ಅದಲ್ಲ ಪ್ರಜಾಪ್ರಭುತ್ವದ ಸರಕಾರವೊಂದು ಸಾಮಾನ್ಯವಾಗಿ ತಮಗೆ ಸಂಬಂಧಪಡದ ಮಠಗಳಿಗೆ ಸಾಮಾನ್ಯನ ಬೆವರಿನ ಹಣವನ್ನು ಕೋಟಿಗಟ್ಟಲೆ ಕೊಡುವುದು ಎಷ್ಟು ಸರಿ ಎಂಬುದು. ಬಜೆಟ್ ಮಂಡನೆಯ ಸಮಯದಲ್ಲಿ ಮಠಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳ ಬೇಕಾಗುತ್ತದೆ ಅಂದರೆ ನಮ್ಮ ನಡುವಿನ ಮಠಗಳು ಮಠಗಳಾಗಿ ಉಳಿದಿಲ್ಲ; ಅವು ತಮ್ಮ ಆಚಾರ ವಿಚಾರ ವರ್ತನೆಯಿಂದಲೇ ರಾಜಕೀಯದ ಪಾರ್ಟಿಗಳಿಗೆ ಓಟು ಕೇಳುವ ಬೂತುಗಳಂತಾಗಿ ಕುಳಿತಿವೆ. ಇದನ್ನು ಗ್ರಹಿಸಿದ ಬೊಮ್ಮಾಯಿ ಯಾರದೊ ದುಡ್ಡನ್ನು ಎಲ್ಲಮ್ಮನ ಜಾತ್ರೆಯಲ್ಲಿ ಎರಚಿದಂತೆ ಮಠಗಳಿಗೆ ಸುರಿದಿದ್ದಾರೆ. ಈ ಹಣ ಮಠ ತಲುಪುವ ವೇಳೆಗೆ ಹಲವು ಮಠಾಧೀಶರು ಹೇಗೆ ಖರ್ಚು ಮಾಡಬೇಕೆಂಬ ನೀಲನಕ್ಷೆ ತಯಾರಿಸುತ್ತಿದ್ದಾರಂತಲ್ಲಾ. ಅದರಲ್ಲಿ ಹೊಸ ಕಾರು, ಶಯನಾಗೃಹದ ನವೀಕರಣ ಮತ್ತು ಫಾರಿನ್ ಟೂರ್ ಕೂಡ ಸೇರಲಿವೆಯಂತಲ್ಲಾ, ಥೂತ್ತೇರಿ.
*****

ಬಿಜೆಪಿ ಪಾರ್ಟಿಯ ಮೆಂಟಲ್‌ಕೇಸ್ ವಿಭಾಗದಿಂದ ತಪ್ಪಿಸಿಕೊಂಡಂತೆ ಕಾಣುವ ಮುತಾಲಿಕ್ ಎಂಬಾತ ಹಿಂದಿಗಿಂತಲೂ ಮುಸ್ಲಿಮರನ್ನು ಟೀಕಿಸಲು ನಾಲಿಗೆಯನ್ನು ಹರಿತ ಮಾಡಿಕೊಳ್ಳುತ್ತಿದ್ದಾರಲ್ಲಾ. ಈತನ ಮುಸ್ಲಿಂ ಹೆಣ್ಣುಮಕ್ಕಳ ಬಗೆಗಿನ ದ್ವೇಷದ ಮಾತಿಗೆ ಆ ಕಡೆಯಿಂದ ಯಾವ ಪ್ರತ್ಯುತ್ತರವೂ ಬಂದಿಲ್ಲ. ಇದನ್ನ ಅವಮಾನವೆಂದು ಪರಿಗಣಿಸಿದ ಮುತಾಲಿಕ್ ತನ್ನ ಮತೀಯ ಕಿಚ್ಚಿನ ಹೇಳಿಕೆಗಳನ್ನ ಮುಂದುವರಿಸಿದ್ದಾರೆ. ಹೇಗಾದರೂ ಮಾಡಿ ಬಿಜೆಪಿ ಸೇರಿ ಶಾಸಕನಾಗಿ ಸದನದಲ್ಲಿ ತನ್ನ ಅಮೋಘವಾದ ಭಾಷಣ ಕಟ್ಟುವ ಕನಸು ಕಂಡಿದ್ದ ಮುತಾಲಿಕರನ್ನು ಹಿಂದೊಮ್ಮೆ ಬಿಜೆಪಿ ಪಾರ್ಟಿಗೆ ಸೇರಿಸಿಕೊಳ್ಳಲಾಗಿತ್ತು. ಆದರೆ ಅಲ್ಲಾಗಲೇ ಪ್ರವರ್ಧಮಾನಕ್ಕೆ ಬಂದಿದ್ದ ಸಿ.ಟಿ ರವಿ, ರೇಣುಕಾಚಾರಿ, ಅಶ್ವತ್ಥನಾರಾಯಣ, ಯತ್ನಾಳ್ ಇಂತಹ ನಾಯಕರ ವರ್ಚಸ್ಸಿಗೆ ಧಕ್ಕೆಯುಂಟಾಗುತ್ತದೆಂದು ಬಿಜೆಪಿ ತೀರ್ಮಾನ ತೆಗೆದುಕೊಂಡು ಸೂರ್ಯಾಸ್ತಮಾನಕ್ಕೂ ಮುನ್ನ ಮುತಾಲಿಕರನ್ನು ಪಾರ್ಟಿಯಿಂದ ತೆಗೆದು ಬಿಸಾಡಲಾಯ್ತು. ಇದು ಬಿಜೆಪಿಯ ಒಂದು ದೊಡ್ಡ ದಾಖಲೆಯಾಗಿದೆ. ಏಕೆಂದರೆ ಪಾರ್ಟಿಗೆ ಸೇರಿಸಿಕೊಂಡ ನಾಲ್ಕುಗಂಟೆ ಅವಧಿಯಲ್ಲೇ ಯಾರನ್ನಾದರೂ ಮೂಲೆಗೆಸೆದದ್ದು ಇತಿಹಾಸದಲ್ಲಿ ಎಂದೂ ನಡೆದಿಲ್ಲ. ಆದರೇನು? ಮುತಾಲಿಕರ ಮನಸ್ಸು ಅಘಾತಗೊಂಡ ಕಾರಣವಾಗಿ, ಹೆಚ್ಚು ಮುಸ್ಲಿಮರನ್ನ ಬೈದಷ್ಟೂ ತನ್ನ ಬದುಕಿನ ಏಕೈಕ ಧ್ಯೇಯವಾದ ಶಾಸಕತ್ವ ದಕ್ಕುವುದೆಂದು ಭಾವಿಸಿರುವ ಆತ ಮತಿಗೆಟ್ಟಂತೆ ಮಾತನಾಡುತ್ತಿರುವುದು ಸದ್ಯದ ಮನರಂಜನೆಯಾಗಿದೆಯಂತಲ್ಲಾ, ಥೂತ್ತೇರಿ.
*****

ಇದನ್ನೂ ಓದಿ: ಹಠಾತ್ ಜನಸಂಖ್ಯೆ ಏರಲು ಕಾರಣವೇನು? – ಯಾಹೂ

ಇತ್ತ ಸಾಹಿತ್ಯ ಪರಿಷತ್‌ನ ಚಟುವಟಿಕೆಗಳು ಶಾನೆ ತಮಾಶೆಯಿಂದ ಕೂಡಿವೆಯಂತಲ್ಲಾ. ಈ ಮಹೇಶ ಜೋಶಿ ಎಂಬ ಸಾಹಿತ್ಯ ಪರಿಷತ್ ವಿದೂಶಕನ ವಿಷಯ ಬಂದಾಗಲೆಲ್ಲಾ ಪತ್ರಕರ್ತರು ನಾಡೋಜ ಮಹೇಶ ಜೋಷಿ ಎಂದು ಬರೆಯತೊಡಗಿವೆ. ಇದು ಈತನ ಬೇಡಿಕೆಯೋ ಅಥವ ಮಾರಿಕೊಂಡ ಪತ್ರಕರ್ತರ ಚೇಷ್ಟೆಯೋ ಎಂಬುದು ನಿಗೂಢವಾಗಿದೆ. ಇದು ಹಾಳುಬಿದ್ದು ಹೋಗಲಿ, ಸಾಹಿತ್ಯ ಪರಿಷತ್‌ನ ದತ್ತಿನಿಧಿ ಪ್ರಶಸ್ತಿಗಾಗಿ ಜೋಶಿ ಮುಂದಾಳತ್ವದ ತಂಡ 53 ಕೃತಿಗಳನ್ನ ಆರಿಸಿದೆ. ಈ ಅದ್ಭುತ ಕೃತಿಗಳ ಪ್ರಶಸ್ತಿ 250ರೂಗಳಿಂದ ಹಿಡಿದು ಹತ್ತು ಸಾವಿರದವರೆಗೂ ಇದೆಯಂತೆ. 250ರೂ ಪಡೆಯಲು ಯಾವ ಅಳುಕೂ ಇಲ್ಲವಾಗಿ, ಸದರಿ ಕೃತಿಕಾರರು 250ರೂ ತೆಗೆದುಕೊಂಡು ಅನತಿ ದೂರದಲ್ಲಿರುವ ವಿದ್ಯಾರ್ಥಿ ಭವನದಲ್ಲಿ ಮಸಾಲೆದೋಸೆ ತಿಂದು ಮನೆಗೆ ಬರುವ ತೀರ್ಮಾನ ತೆಗೆದುಕೊಂಡಿದ್ದಲ್ಲದೆ ಈ ಮಹೇಶ್ ಜೋಶಿ ಸಾಹಿತ್ಯಾಭಿರುಚಿಗೆ ಅಚ್ಚರಿಕೊಂಡಿದ್ದಾರಂತೆ. ಸಾಹಿತ್ಯಕ್ಕೂ ಇವರಿಗೂ ದೂರದ ಸಂಬಂಧ ಎಂಬುದು ಈತ ಸಾಹಿತ್ಯ ಪರಿಷತ್ ಪರಿಚಾರಕ ಹುದ್ದೆಗೆ ಮಂತ್ರಿ ಮಹೋದಯರ ಸವಲತ್ತು ಬೇಕೆಂದು ರಚ್ಚೆ ಹಿಡಿದಾಗಲೇ ತಿಳಿದಿತ್ತು. ಈಗ ಈತ ದತ್ತಿನಿಧಿ ಪ್ರಶಸ್ತಿಯೊಂದಕ್ಕೆ ಆಯ್ಕೆ ಮಾಡಿದ ಕೃತಿಗಳಲ್ಲಿ ಇಡ್ಲಿ ಸಾಂಬರ್ ಮತ್ತು ವಡೆ ಪ್ರಸ್ತಾಪ ಐದು ಪುಟಕೋಮ್ಮೆ ದಾಖಲಾಗಿದೆ; ಈ ಕೃತಿಯನ್ನ ಜೋಶಿ ತಂಡ ಜೊಲ್ಲು ಸುರಿಸುತ್ತಲೇ ಆಯ್ಕೆ ಮಾಡಿದೆಯಂತಲ್ಲಾ. ಅಂತಹ ವಿವರಗಳನ್ನುಳ್ಳ ಪುಸ್ತಕವನ್ನ ಪ್ರಶಸ್ತಿಗೆ ಆಯ್ಕೆ ಮಾಡುವುದರಲ್ಲಿ ಯಾವ ಅಚ್ಚರಿಯೂ ಇಲ್ಲವಂತಲ್ಲಾ, ಥೂತ್ತೇರಿ.

ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...