Homeಮುಖಪುಟಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ...

ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

"ಮಾರ್ಚ್ 2020 ರಿಂದ ಲಾಕ್‌ಡೌನ್ ಜಾರಿಗೊಳಿಸಿದ ನಂತರ, ಭಾರತದ ಅಗ್ರ 100 ಬಿಲಿಯನೇರ್‌ಗಳಿಗೆ ದೊರೆಕಿರುವ ಲಾಭ-ಆದಾಯದ ಪ್ರಮಾಣವು 138 ಮಿಲಿಯನ್ ಬಡ ಜನರಿಗೆ ತಲಾ 94,045 ರೂ ಚೆಕ್ ನೀಡುವಷ್ಟು ಹೆಚ್ಚಾಗಿದೆ"

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗವು ಭಾರತದ ಅತಿ ಶ್ರೀಮಂತರು ಮತ್ತು ಕೋಟ್ಯಾಂತರ ಕಾರ್ಮಿಕರ ನಡುವಿನ ಆದಾಯದ ಅಸಮಾನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶದ ಬಹುಸಂಖ್ಯಾತ ಜನರು ಧೀರ್ಘಕಾಲದ ನಿರುದ್ಯೋಗಿಗಳಾಗಿದ್ದಾರೆ. ಅಲ್ಲದೆ, ಲಾಭ/ಆದಾಯವಿಲ್ಲದ ಜನರು ಮೂಲಭೂತ ಸೌಕರ್ಯಗಳಾದ ಆರೋಗ್ಯವನ್ನು ಪಡೆಯಲೂ ಸಹ ಎಣಗಾಡುತ್ತಿದ್ದಾರೆ ಎಂದು ಆಕ್ಸ್‌ಫಾಂ (Oxfam) ವರದಿಯಲ್ಲಿ ತಿಳಿಸಿದೆ.

ಸೋಮವಾರ, ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ವರದಿ ಮಂಡಿಸಿರುವ ಆಕ್ಸ್‌ಫಾಂ, “ಲಾಕ್‌ಡೌನ್ ಸಮಯದಲ್ಲಿ ದೇಶದ ಬಿಲಿಯನೇರ್‌ಗಳ ಸಂಪತ್ತು ಅಂದಾಜು ಶೇ.35 ರಷ್ಟು ಹೆಚ್ಚಾಗಿದೆ. ಆದರೆ, ಶೇ. 84 ರಷ್ಟು ಕುಟುಂಬಗಳು ವಿವಿಧ ರೀತಿಯ ನಷ್ಟವನ್ನು ಅನುಭವಿಸುತ್ತಿವೆ. ಅಲ್ಲದೆ, 2020ರ ಏಪ್ರಿಲ್ ತಿಂಗಳಿನಲ್ಲಿ ಪ್ರತಿ ಗಂಟೆಗೆ 1.7 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ” ಎಂದು ವರದಿಯಲ್ಲಿ ಹೇಳಿದೆ.

ಮಾರ್ಚ್ 2020 ರಿಂದ ಲಾಕ್‌ಡೌನ್ ಜಾರಿಗೊಳಿಸಿದ ನಂತರ, ಭಾರತದ ಅಗ್ರ 100 ಬಿಲಿಯನೇರ್‌ಗಳಿಗೆ ದೊರೆಕಿರುವ ಲಾಭದ ಪ್ರಮಾಣವು 138 ಮಿಲಿಯನ್ ಬಡ ಜನರಿಗೆ ತಲಾ 94,045 ರೂ ಚೆಕ್ ನೀಡುವಷ್ಟು ಹೆಚ್ಚಾಗಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಕರಾಳತೆ ಹೆಚ್ಚಿನ ರೈತರಿಗೆ ಅರ್ಥವಾದರೆ ಬೆಂಕಿ ಹೊತ್ತಿಕೊಳ್ಳುತ್ತದೆ: ರಾಹುಲ್

“ಸಾಂಕ್ರಾಮಿಕ ರೋಗದ ಸಮಯದಲ್ಲಿ ಒಂದು ಗಂಟೆಯಲ್ಲಿ ಮುಖೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ) ಗಳಿಸಿದ ಆದಾಯವನ್ನು ಒಬ್ಬ ಕೌಶಲ್ಯರಹಿತ ಕೆಲಸಗಾರನು ಗಳಿಸಲು 10,000 ವರ್ಷಗಳು ಬೇಕಾಗುತ್ತವೆ. ಅಲ್ಲದೆ, ಅಂಬಾನಿ ಒಂದು ಸೆಕೆಂಡ್‌ನಲ್ಲಿ ಸಂಪಾದಿಸಿದ್ದನ್ನು ಈ ಕೆಲಸಗಾರ ಸಂಪಾದಿಸಲು ಮೂರು ವರ್ಷಗಳು ಬೇಕಾಗುತ್ತವೆ ಎಂದು ವರದಿ ಹೇಳಿದೆ.

ಆಗಸ್ಟ್ ತಿಂಗಳಿನಲ್ಲಿ ಅಂಬಾನಿಯನ್ನು ವಿಶ್ವದ ನಾಲ್ಕನೇ ದೊಡ್ಡ ಶ್ರೀಮಂತ ವ್ಯಕ್ತಿ ಎಂದು ಘೋಷಿಸಲಾಗಿತ್ತು. ಇದೇ ಸಂದರ್ಭದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಉದ್ಯೋಗ ಕಳೆದುಕೊಂಡು, ಹಣ, ಆಹಾರ ಮತ್ತು ಆಶ್ರಯವಿಲ್ಲದೆ ಎಣಗಾಡಿದ್ದಾರೆ. ಸಾವಿರಾರು ಕಿಲೋಮೀಟರ್‌ಗಳ ಪ್ರಯಾಣವನ್ನು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಡೆದುಕೊಂಡೇ ಕ್ರಮಿಸಿದ ದುರಂತ ದೃಶ್ಯಗಳು, ಸಾವಿರಾರು ಸಾವುಗಳು ದೇಶದ ಪ್ರಜ್ಞೆಯನ್ನು ಕಲಕಿದವು. ಆದರೆ, ಈ ಸಾವುಗಳ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಸರ್ಕಾರ ಸಂಸತ್ತಿನಲ್ಲಿ ಘೋಷಿಸಿತ್ತು!

ಭಾರತ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ, ಸಾಂಕ್ರಾಮಿಕ ರೋಗದ ಸಮಯದಲ್ಲಿ ಒಂದು ಗಂಟೆಗೆ ₹ 90 ಕೋಟಿ ಗಳಿಸಿದರು. ಅದೇ ಸಮಯದಲ್ಲಿ ದೇಶದ ಸುಮಾರು 24% ಜನರು ತಿಂಗಳಿಗೆ 3,000 ರೂ.ಗಳಿಗಿಂತ ಕಡಿಮೆ ಆದಾಯವನ್ನು ಗಳಿಸಿದ್ದಾರೆ ಎಂದು ವರದಿ ಹೇಳಿದೆ.

ದೇಶದಲ್ಲಿ ಹೇರಲಾದ ಲಾಕ್‌ಡೌನ್‌ನ ಪರಿಣಾಮವು ಸ್ಪಷ್ಟವಾಗುತ್ತಿದ್ದಂತೆ, ಸರ್ಕಾರವು ಸುಮಾರು 20 ಲಕ್ಷ ಕೋಟಿ ಮೌಲ್ಯದ ಆರ್ಥಿಕ ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಿತು. ಪ್ರಧಾನಿ ನರೇಂದ್ರ ಮೋದಿ ಇದನ್ನು ಅವರ “ಆತ್ಮ-ನಿರ್ಭಾರ ಭಾರತ್ (ಸ್ವಾವಲಂಭಿ ಭಾರತ)” ದೂರದೃಷ್ಟಿಯ ಮೂಲಾಧಾರವೆಂದು ಶ್ಲಾಘಿಸಿದರು. ಆದರೆ, ಇದರ ಉಪಯೋಗವಾಗಿರುವುದು ಮಾತ್ರ ಕಾಣುತ್ತಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಅದೇ ವರದಿಯಲ್ಲಿರುವ ಜಾಗತಿಕ ಆವೃತ್ತಿಯು ಸಾಂಕ್ರಾಮಿಕ ರೋಗದ ಸಮಯದಲ್ಲಿ ವಿಶ್ವದಾದ್ಯಂತ ಆದಾಯದ ಅಸಮಾನತೆಗಳಲ್ಲಿನ ಅಂತರವನ್ನು ವಿವರಿಸಿದೆ ಎಂದು ದಿ ಹಿಂದು ವರದಿ ಮಾಡಿದೆ.

ಇಂತಹ ಅಸಮಾನತೆಗಳನ್ನು ಪರಿಹರಿಸಲು ಆಕ್ಸ್‌ಫ್ಯಾಮ್ ಭಾರತ ಸರ್ಕಾರಕ್ಕೆ ಹಲವು ಸಲಹೆಗಳನ್ನು ನೀಡಿದೆ. ಅದರಲ್ಲಿ ಮುಖ್ಯವಾಗಿ, ತಕ್ಷಣವೇ ಕನಿಷ್ಠ ವೇತನವನ್ನು ಪರಿಷ್ಕರಿಸಬೇಕು ಮತ್ತು ಇದನ್ನು ತಕ್ಷವೇ ಜಾರಿಗೆ ತರಬೇಕು ಎಂದು ಸೂಚಿಸಿದೆ.

50 ಲಕ್ಷಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸುವವರ ಮೇಲೆ 2% ಹೆಚ್ಚುವರಿ ತೆರಿಗೆ ಶುಲ್ಕ ವಿಧಿಸಬೇಕು ಮತ್ತು ಸಾಂಕ್ರಾಮಿಕ ಸಮಯದಲ್ಲಿ windfall ಲಾಭಗಳಿಸುವ ಕಂಪನಿಗಳ ಮೇಲೆ ತಾತ್ಕಾಲಿಕ ತೆರಿಗೆಯನ್ನು ಜಾರಿಗೆ ತರಬೇಕು ಎಂದು ಅದು ಸರ್ಕಾರಕ್ಕೆ ಸೂಚಿಸಿದೆ.

“ಇದು ಉತ್ತಮ ಭವಿಷ್ಯವನ್ನು ನಿರ್ಮಿಸಲು ಭಾರತ ಸರ್ಕಾರವು ನಿರ್ದಿಷ್ಟ ಮತ್ತು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವ ಸಮಯ. ಹೆಚ್ಚು ನಾಗರಿಕರು ಸಮಾನ ಮತ್ತು ನ್ಯಾಯಯುತ ಭವಿಷ್ಯವನ್ನು ಬಯಸುತ್ತಾರೆ” ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...