Homeಮುಖಪುಟಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ...

ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

"ಮಾರ್ಚ್ 2020 ರಿಂದ ಲಾಕ್‌ಡೌನ್ ಜಾರಿಗೊಳಿಸಿದ ನಂತರ, ಭಾರತದ ಅಗ್ರ 100 ಬಿಲಿಯನೇರ್‌ಗಳಿಗೆ ದೊರೆಕಿರುವ ಲಾಭ-ಆದಾಯದ ಪ್ರಮಾಣವು 138 ಮಿಲಿಯನ್ ಬಡ ಜನರಿಗೆ ತಲಾ 94,045 ರೂ ಚೆಕ್ ನೀಡುವಷ್ಟು ಹೆಚ್ಚಾಗಿದೆ"

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗವು ಭಾರತದ ಅತಿ ಶ್ರೀಮಂತರು ಮತ್ತು ಕೋಟ್ಯಾಂತರ ಕಾರ್ಮಿಕರ ನಡುವಿನ ಆದಾಯದ ಅಸಮಾನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶದ ಬಹುಸಂಖ್ಯಾತ ಜನರು ಧೀರ್ಘಕಾಲದ ನಿರುದ್ಯೋಗಿಗಳಾಗಿದ್ದಾರೆ. ಅಲ್ಲದೆ, ಲಾಭ/ಆದಾಯವಿಲ್ಲದ ಜನರು ಮೂಲಭೂತ ಸೌಕರ್ಯಗಳಾದ ಆರೋಗ್ಯವನ್ನು ಪಡೆಯಲೂ ಸಹ ಎಣಗಾಡುತ್ತಿದ್ದಾರೆ ಎಂದು ಆಕ್ಸ್‌ಫಾಂ (Oxfam) ವರದಿಯಲ್ಲಿ ತಿಳಿಸಿದೆ.

ಸೋಮವಾರ, ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ವರದಿ ಮಂಡಿಸಿರುವ ಆಕ್ಸ್‌ಫಾಂ, “ಲಾಕ್‌ಡೌನ್ ಸಮಯದಲ್ಲಿ ದೇಶದ ಬಿಲಿಯನೇರ್‌ಗಳ ಸಂಪತ್ತು ಅಂದಾಜು ಶೇ.35 ರಷ್ಟು ಹೆಚ್ಚಾಗಿದೆ. ಆದರೆ, ಶೇ. 84 ರಷ್ಟು ಕುಟುಂಬಗಳು ವಿವಿಧ ರೀತಿಯ ನಷ್ಟವನ್ನು ಅನುಭವಿಸುತ್ತಿವೆ. ಅಲ್ಲದೆ, 2020ರ ಏಪ್ರಿಲ್ ತಿಂಗಳಿನಲ್ಲಿ ಪ್ರತಿ ಗಂಟೆಗೆ 1.7 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ” ಎಂದು ವರದಿಯಲ್ಲಿ ಹೇಳಿದೆ.

ಮಾರ್ಚ್ 2020 ರಿಂದ ಲಾಕ್‌ಡೌನ್ ಜಾರಿಗೊಳಿಸಿದ ನಂತರ, ಭಾರತದ ಅಗ್ರ 100 ಬಿಲಿಯನೇರ್‌ಗಳಿಗೆ ದೊರೆಕಿರುವ ಲಾಭದ ಪ್ರಮಾಣವು 138 ಮಿಲಿಯನ್ ಬಡ ಜನರಿಗೆ ತಲಾ 94,045 ರೂ ಚೆಕ್ ನೀಡುವಷ್ಟು ಹೆಚ್ಚಾಗಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಕರಾಳತೆ ಹೆಚ್ಚಿನ ರೈತರಿಗೆ ಅರ್ಥವಾದರೆ ಬೆಂಕಿ ಹೊತ್ತಿಕೊಳ್ಳುತ್ತದೆ: ರಾಹುಲ್

“ಸಾಂಕ್ರಾಮಿಕ ರೋಗದ ಸಮಯದಲ್ಲಿ ಒಂದು ಗಂಟೆಯಲ್ಲಿ ಮುಖೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ) ಗಳಿಸಿದ ಆದಾಯವನ್ನು ಒಬ್ಬ ಕೌಶಲ್ಯರಹಿತ ಕೆಲಸಗಾರನು ಗಳಿಸಲು 10,000 ವರ್ಷಗಳು ಬೇಕಾಗುತ್ತವೆ. ಅಲ್ಲದೆ, ಅಂಬಾನಿ ಒಂದು ಸೆಕೆಂಡ್‌ನಲ್ಲಿ ಸಂಪಾದಿಸಿದ್ದನ್ನು ಈ ಕೆಲಸಗಾರ ಸಂಪಾದಿಸಲು ಮೂರು ವರ್ಷಗಳು ಬೇಕಾಗುತ್ತವೆ ಎಂದು ವರದಿ ಹೇಳಿದೆ.

ಆಗಸ್ಟ್ ತಿಂಗಳಿನಲ್ಲಿ ಅಂಬಾನಿಯನ್ನು ವಿಶ್ವದ ನಾಲ್ಕನೇ ದೊಡ್ಡ ಶ್ರೀಮಂತ ವ್ಯಕ್ತಿ ಎಂದು ಘೋಷಿಸಲಾಗಿತ್ತು. ಇದೇ ಸಂದರ್ಭದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಉದ್ಯೋಗ ಕಳೆದುಕೊಂಡು, ಹಣ, ಆಹಾರ ಮತ್ತು ಆಶ್ರಯವಿಲ್ಲದೆ ಎಣಗಾಡಿದ್ದಾರೆ. ಸಾವಿರಾರು ಕಿಲೋಮೀಟರ್‌ಗಳ ಪ್ರಯಾಣವನ್ನು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಡೆದುಕೊಂಡೇ ಕ್ರಮಿಸಿದ ದುರಂತ ದೃಶ್ಯಗಳು, ಸಾವಿರಾರು ಸಾವುಗಳು ದೇಶದ ಪ್ರಜ್ಞೆಯನ್ನು ಕಲಕಿದವು. ಆದರೆ, ಈ ಸಾವುಗಳ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಸರ್ಕಾರ ಸಂಸತ್ತಿನಲ್ಲಿ ಘೋಷಿಸಿತ್ತು!

ಭಾರತ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ, ಸಾಂಕ್ರಾಮಿಕ ರೋಗದ ಸಮಯದಲ್ಲಿ ಒಂದು ಗಂಟೆಗೆ ₹ 90 ಕೋಟಿ ಗಳಿಸಿದರು. ಅದೇ ಸಮಯದಲ್ಲಿ ದೇಶದ ಸುಮಾರು 24% ಜನರು ತಿಂಗಳಿಗೆ 3,000 ರೂ.ಗಳಿಗಿಂತ ಕಡಿಮೆ ಆದಾಯವನ್ನು ಗಳಿಸಿದ್ದಾರೆ ಎಂದು ವರದಿ ಹೇಳಿದೆ.

ದೇಶದಲ್ಲಿ ಹೇರಲಾದ ಲಾಕ್‌ಡೌನ್‌ನ ಪರಿಣಾಮವು ಸ್ಪಷ್ಟವಾಗುತ್ತಿದ್ದಂತೆ, ಸರ್ಕಾರವು ಸುಮಾರು 20 ಲಕ್ಷ ಕೋಟಿ ಮೌಲ್ಯದ ಆರ್ಥಿಕ ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಿತು. ಪ್ರಧಾನಿ ನರೇಂದ್ರ ಮೋದಿ ಇದನ್ನು ಅವರ “ಆತ್ಮ-ನಿರ್ಭಾರ ಭಾರತ್ (ಸ್ವಾವಲಂಭಿ ಭಾರತ)” ದೂರದೃಷ್ಟಿಯ ಮೂಲಾಧಾರವೆಂದು ಶ್ಲಾಘಿಸಿದರು. ಆದರೆ, ಇದರ ಉಪಯೋಗವಾಗಿರುವುದು ಮಾತ್ರ ಕಾಣುತ್ತಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಅದೇ ವರದಿಯಲ್ಲಿರುವ ಜಾಗತಿಕ ಆವೃತ್ತಿಯು ಸಾಂಕ್ರಾಮಿಕ ರೋಗದ ಸಮಯದಲ್ಲಿ ವಿಶ್ವದಾದ್ಯಂತ ಆದಾಯದ ಅಸಮಾನತೆಗಳಲ್ಲಿನ ಅಂತರವನ್ನು ವಿವರಿಸಿದೆ ಎಂದು ದಿ ಹಿಂದು ವರದಿ ಮಾಡಿದೆ.

ಇಂತಹ ಅಸಮಾನತೆಗಳನ್ನು ಪರಿಹರಿಸಲು ಆಕ್ಸ್‌ಫ್ಯಾಮ್ ಭಾರತ ಸರ್ಕಾರಕ್ಕೆ ಹಲವು ಸಲಹೆಗಳನ್ನು ನೀಡಿದೆ. ಅದರಲ್ಲಿ ಮುಖ್ಯವಾಗಿ, ತಕ್ಷಣವೇ ಕನಿಷ್ಠ ವೇತನವನ್ನು ಪರಿಷ್ಕರಿಸಬೇಕು ಮತ್ತು ಇದನ್ನು ತಕ್ಷವೇ ಜಾರಿಗೆ ತರಬೇಕು ಎಂದು ಸೂಚಿಸಿದೆ.

50 ಲಕ್ಷಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸುವವರ ಮೇಲೆ 2% ಹೆಚ್ಚುವರಿ ತೆರಿಗೆ ಶುಲ್ಕ ವಿಧಿಸಬೇಕು ಮತ್ತು ಸಾಂಕ್ರಾಮಿಕ ಸಮಯದಲ್ಲಿ windfall ಲಾಭಗಳಿಸುವ ಕಂಪನಿಗಳ ಮೇಲೆ ತಾತ್ಕಾಲಿಕ ತೆರಿಗೆಯನ್ನು ಜಾರಿಗೆ ತರಬೇಕು ಎಂದು ಅದು ಸರ್ಕಾರಕ್ಕೆ ಸೂಚಿಸಿದೆ.

“ಇದು ಉತ್ತಮ ಭವಿಷ್ಯವನ್ನು ನಿರ್ಮಿಸಲು ಭಾರತ ಸರ್ಕಾರವು ನಿರ್ದಿಷ್ಟ ಮತ್ತು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವ ಸಮಯ. ಹೆಚ್ಚು ನಾಗರಿಕರು ಸಮಾನ ಮತ್ತು ನ್ಯಾಯಯುತ ಭವಿಷ್ಯವನ್ನು ಬಯಸುತ್ತಾರೆ” ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...