Homeಮುಖಪುಟಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ...

ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

"ಮಾರ್ಚ್ 2020 ರಿಂದ ಲಾಕ್‌ಡೌನ್ ಜಾರಿಗೊಳಿಸಿದ ನಂತರ, ಭಾರತದ ಅಗ್ರ 100 ಬಿಲಿಯನೇರ್‌ಗಳಿಗೆ ದೊರೆಕಿರುವ ಲಾಭ-ಆದಾಯದ ಪ್ರಮಾಣವು 138 ಮಿಲಿಯನ್ ಬಡ ಜನರಿಗೆ ತಲಾ 94,045 ರೂ ಚೆಕ್ ನೀಡುವಷ್ಟು ಹೆಚ್ಚಾಗಿದೆ"

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗವು ಭಾರತದ ಅತಿ ಶ್ರೀಮಂತರು ಮತ್ತು ಕೋಟ್ಯಾಂತರ ಕಾರ್ಮಿಕರ ನಡುವಿನ ಆದಾಯದ ಅಸಮಾನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶದ ಬಹುಸಂಖ್ಯಾತ ಜನರು ಧೀರ್ಘಕಾಲದ ನಿರುದ್ಯೋಗಿಗಳಾಗಿದ್ದಾರೆ. ಅಲ್ಲದೆ, ಲಾಭ/ಆದಾಯವಿಲ್ಲದ ಜನರು ಮೂಲಭೂತ ಸೌಕರ್ಯಗಳಾದ ಆರೋಗ್ಯವನ್ನು ಪಡೆಯಲೂ ಸಹ ಎಣಗಾಡುತ್ತಿದ್ದಾರೆ ಎಂದು ಆಕ್ಸ್‌ಫಾಂ (Oxfam) ವರದಿಯಲ್ಲಿ ತಿಳಿಸಿದೆ.

ಸೋಮವಾರ, ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ವರದಿ ಮಂಡಿಸಿರುವ ಆಕ್ಸ್‌ಫಾಂ, “ಲಾಕ್‌ಡೌನ್ ಸಮಯದಲ್ಲಿ ದೇಶದ ಬಿಲಿಯನೇರ್‌ಗಳ ಸಂಪತ್ತು ಅಂದಾಜು ಶೇ.35 ರಷ್ಟು ಹೆಚ್ಚಾಗಿದೆ. ಆದರೆ, ಶೇ. 84 ರಷ್ಟು ಕುಟುಂಬಗಳು ವಿವಿಧ ರೀತಿಯ ನಷ್ಟವನ್ನು ಅನುಭವಿಸುತ್ತಿವೆ. ಅಲ್ಲದೆ, 2020ರ ಏಪ್ರಿಲ್ ತಿಂಗಳಿನಲ್ಲಿ ಪ್ರತಿ ಗಂಟೆಗೆ 1.7 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ” ಎಂದು ವರದಿಯಲ್ಲಿ ಹೇಳಿದೆ.

ಮಾರ್ಚ್ 2020 ರಿಂದ ಲಾಕ್‌ಡೌನ್ ಜಾರಿಗೊಳಿಸಿದ ನಂತರ, ಭಾರತದ ಅಗ್ರ 100 ಬಿಲಿಯನೇರ್‌ಗಳಿಗೆ ದೊರೆಕಿರುವ ಲಾಭದ ಪ್ರಮಾಣವು 138 ಮಿಲಿಯನ್ ಬಡ ಜನರಿಗೆ ತಲಾ 94,045 ರೂ ಚೆಕ್ ನೀಡುವಷ್ಟು ಹೆಚ್ಚಾಗಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಕರಾಳತೆ ಹೆಚ್ಚಿನ ರೈತರಿಗೆ ಅರ್ಥವಾದರೆ ಬೆಂಕಿ ಹೊತ್ತಿಕೊಳ್ಳುತ್ತದೆ: ರಾಹುಲ್

“ಸಾಂಕ್ರಾಮಿಕ ರೋಗದ ಸಮಯದಲ್ಲಿ ಒಂದು ಗಂಟೆಯಲ್ಲಿ ಮುಖೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ) ಗಳಿಸಿದ ಆದಾಯವನ್ನು ಒಬ್ಬ ಕೌಶಲ್ಯರಹಿತ ಕೆಲಸಗಾರನು ಗಳಿಸಲು 10,000 ವರ್ಷಗಳು ಬೇಕಾಗುತ್ತವೆ. ಅಲ್ಲದೆ, ಅಂಬಾನಿ ಒಂದು ಸೆಕೆಂಡ್‌ನಲ್ಲಿ ಸಂಪಾದಿಸಿದ್ದನ್ನು ಈ ಕೆಲಸಗಾರ ಸಂಪಾದಿಸಲು ಮೂರು ವರ್ಷಗಳು ಬೇಕಾಗುತ್ತವೆ ಎಂದು ವರದಿ ಹೇಳಿದೆ.

ಆಗಸ್ಟ್ ತಿಂಗಳಿನಲ್ಲಿ ಅಂಬಾನಿಯನ್ನು ವಿಶ್ವದ ನಾಲ್ಕನೇ ದೊಡ್ಡ ಶ್ರೀಮಂತ ವ್ಯಕ್ತಿ ಎಂದು ಘೋಷಿಸಲಾಗಿತ್ತು. ಇದೇ ಸಂದರ್ಭದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಉದ್ಯೋಗ ಕಳೆದುಕೊಂಡು, ಹಣ, ಆಹಾರ ಮತ್ತು ಆಶ್ರಯವಿಲ್ಲದೆ ಎಣಗಾಡಿದ್ದಾರೆ. ಸಾವಿರಾರು ಕಿಲೋಮೀಟರ್‌ಗಳ ಪ್ರಯಾಣವನ್ನು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಡೆದುಕೊಂಡೇ ಕ್ರಮಿಸಿದ ದುರಂತ ದೃಶ್ಯಗಳು, ಸಾವಿರಾರು ಸಾವುಗಳು ದೇಶದ ಪ್ರಜ್ಞೆಯನ್ನು ಕಲಕಿದವು. ಆದರೆ, ಈ ಸಾವುಗಳ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಸರ್ಕಾರ ಸಂಸತ್ತಿನಲ್ಲಿ ಘೋಷಿಸಿತ್ತು!

ಭಾರತ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ, ಸಾಂಕ್ರಾಮಿಕ ರೋಗದ ಸಮಯದಲ್ಲಿ ಒಂದು ಗಂಟೆಗೆ ₹ 90 ಕೋಟಿ ಗಳಿಸಿದರು. ಅದೇ ಸಮಯದಲ್ಲಿ ದೇಶದ ಸುಮಾರು 24% ಜನರು ತಿಂಗಳಿಗೆ 3,000 ರೂ.ಗಳಿಗಿಂತ ಕಡಿಮೆ ಆದಾಯವನ್ನು ಗಳಿಸಿದ್ದಾರೆ ಎಂದು ವರದಿ ಹೇಳಿದೆ.

ದೇಶದಲ್ಲಿ ಹೇರಲಾದ ಲಾಕ್‌ಡೌನ್‌ನ ಪರಿಣಾಮವು ಸ್ಪಷ್ಟವಾಗುತ್ತಿದ್ದಂತೆ, ಸರ್ಕಾರವು ಸುಮಾರು 20 ಲಕ್ಷ ಕೋಟಿ ಮೌಲ್ಯದ ಆರ್ಥಿಕ ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಿತು. ಪ್ರಧಾನಿ ನರೇಂದ್ರ ಮೋದಿ ಇದನ್ನು ಅವರ “ಆತ್ಮ-ನಿರ್ಭಾರ ಭಾರತ್ (ಸ್ವಾವಲಂಭಿ ಭಾರತ)” ದೂರದೃಷ್ಟಿಯ ಮೂಲಾಧಾರವೆಂದು ಶ್ಲಾಘಿಸಿದರು. ಆದರೆ, ಇದರ ಉಪಯೋಗವಾಗಿರುವುದು ಮಾತ್ರ ಕಾಣುತ್ತಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಅದೇ ವರದಿಯಲ್ಲಿರುವ ಜಾಗತಿಕ ಆವೃತ್ತಿಯು ಸಾಂಕ್ರಾಮಿಕ ರೋಗದ ಸಮಯದಲ್ಲಿ ವಿಶ್ವದಾದ್ಯಂತ ಆದಾಯದ ಅಸಮಾನತೆಗಳಲ್ಲಿನ ಅಂತರವನ್ನು ವಿವರಿಸಿದೆ ಎಂದು ದಿ ಹಿಂದು ವರದಿ ಮಾಡಿದೆ.

ಇಂತಹ ಅಸಮಾನತೆಗಳನ್ನು ಪರಿಹರಿಸಲು ಆಕ್ಸ್‌ಫ್ಯಾಮ್ ಭಾರತ ಸರ್ಕಾರಕ್ಕೆ ಹಲವು ಸಲಹೆಗಳನ್ನು ನೀಡಿದೆ. ಅದರಲ್ಲಿ ಮುಖ್ಯವಾಗಿ, ತಕ್ಷಣವೇ ಕನಿಷ್ಠ ವೇತನವನ್ನು ಪರಿಷ್ಕರಿಸಬೇಕು ಮತ್ತು ಇದನ್ನು ತಕ್ಷವೇ ಜಾರಿಗೆ ತರಬೇಕು ಎಂದು ಸೂಚಿಸಿದೆ.

50 ಲಕ್ಷಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸುವವರ ಮೇಲೆ 2% ಹೆಚ್ಚುವರಿ ತೆರಿಗೆ ಶುಲ್ಕ ವಿಧಿಸಬೇಕು ಮತ್ತು ಸಾಂಕ್ರಾಮಿಕ ಸಮಯದಲ್ಲಿ windfall ಲಾಭಗಳಿಸುವ ಕಂಪನಿಗಳ ಮೇಲೆ ತಾತ್ಕಾಲಿಕ ತೆರಿಗೆಯನ್ನು ಜಾರಿಗೆ ತರಬೇಕು ಎಂದು ಅದು ಸರ್ಕಾರಕ್ಕೆ ಸೂಚಿಸಿದೆ.

“ಇದು ಉತ್ತಮ ಭವಿಷ್ಯವನ್ನು ನಿರ್ಮಿಸಲು ಭಾರತ ಸರ್ಕಾರವು ನಿರ್ದಿಷ್ಟ ಮತ್ತು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವ ಸಮಯ. ಹೆಚ್ಚು ನಾಗರಿಕರು ಸಮಾನ ಮತ್ತು ನ್ಯಾಯಯುತ ಭವಿಷ್ಯವನ್ನು ಬಯಸುತ್ತಾರೆ” ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...