Homeಮುಖಪುಟಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ...

ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

"ಮಾರ್ಚ್ 2020 ರಿಂದ ಲಾಕ್‌ಡೌನ್ ಜಾರಿಗೊಳಿಸಿದ ನಂತರ, ಭಾರತದ ಅಗ್ರ 100 ಬಿಲಿಯನೇರ್‌ಗಳಿಗೆ ದೊರೆಕಿರುವ ಲಾಭ-ಆದಾಯದ ಪ್ರಮಾಣವು 138 ಮಿಲಿಯನ್ ಬಡ ಜನರಿಗೆ ತಲಾ 94,045 ರೂ ಚೆಕ್ ನೀಡುವಷ್ಟು ಹೆಚ್ಚಾಗಿದೆ"

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗವು ಭಾರತದ ಅತಿ ಶ್ರೀಮಂತರು ಮತ್ತು ಕೋಟ್ಯಾಂತರ ಕಾರ್ಮಿಕರ ನಡುವಿನ ಆದಾಯದ ಅಸಮಾನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶದ ಬಹುಸಂಖ್ಯಾತ ಜನರು ಧೀರ್ಘಕಾಲದ ನಿರುದ್ಯೋಗಿಗಳಾಗಿದ್ದಾರೆ. ಅಲ್ಲದೆ, ಲಾಭ/ಆದಾಯವಿಲ್ಲದ ಜನರು ಮೂಲಭೂತ ಸೌಕರ್ಯಗಳಾದ ಆರೋಗ್ಯವನ್ನು ಪಡೆಯಲೂ ಸಹ ಎಣಗಾಡುತ್ತಿದ್ದಾರೆ ಎಂದು ಆಕ್ಸ್‌ಫಾಂ (Oxfam) ವರದಿಯಲ್ಲಿ ತಿಳಿಸಿದೆ.

ಸೋಮವಾರ, ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ವರದಿ ಮಂಡಿಸಿರುವ ಆಕ್ಸ್‌ಫಾಂ, “ಲಾಕ್‌ಡೌನ್ ಸಮಯದಲ್ಲಿ ದೇಶದ ಬಿಲಿಯನೇರ್‌ಗಳ ಸಂಪತ್ತು ಅಂದಾಜು ಶೇ.35 ರಷ್ಟು ಹೆಚ್ಚಾಗಿದೆ. ಆದರೆ, ಶೇ. 84 ರಷ್ಟು ಕುಟುಂಬಗಳು ವಿವಿಧ ರೀತಿಯ ನಷ್ಟವನ್ನು ಅನುಭವಿಸುತ್ತಿವೆ. ಅಲ್ಲದೆ, 2020ರ ಏಪ್ರಿಲ್ ತಿಂಗಳಿನಲ್ಲಿ ಪ್ರತಿ ಗಂಟೆಗೆ 1.7 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ” ಎಂದು ವರದಿಯಲ್ಲಿ ಹೇಳಿದೆ.

ಮಾರ್ಚ್ 2020 ರಿಂದ ಲಾಕ್‌ಡೌನ್ ಜಾರಿಗೊಳಿಸಿದ ನಂತರ, ಭಾರತದ ಅಗ್ರ 100 ಬಿಲಿಯನೇರ್‌ಗಳಿಗೆ ದೊರೆಕಿರುವ ಲಾಭದ ಪ್ರಮಾಣವು 138 ಮಿಲಿಯನ್ ಬಡ ಜನರಿಗೆ ತಲಾ 94,045 ರೂ ಚೆಕ್ ನೀಡುವಷ್ಟು ಹೆಚ್ಚಾಗಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಕರಾಳತೆ ಹೆಚ್ಚಿನ ರೈತರಿಗೆ ಅರ್ಥವಾದರೆ ಬೆಂಕಿ ಹೊತ್ತಿಕೊಳ್ಳುತ್ತದೆ: ರಾಹುಲ್

“ಸಾಂಕ್ರಾಮಿಕ ರೋಗದ ಸಮಯದಲ್ಲಿ ಒಂದು ಗಂಟೆಯಲ್ಲಿ ಮುಖೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ) ಗಳಿಸಿದ ಆದಾಯವನ್ನು ಒಬ್ಬ ಕೌಶಲ್ಯರಹಿತ ಕೆಲಸಗಾರನು ಗಳಿಸಲು 10,000 ವರ್ಷಗಳು ಬೇಕಾಗುತ್ತವೆ. ಅಲ್ಲದೆ, ಅಂಬಾನಿ ಒಂದು ಸೆಕೆಂಡ್‌ನಲ್ಲಿ ಸಂಪಾದಿಸಿದ್ದನ್ನು ಈ ಕೆಲಸಗಾರ ಸಂಪಾದಿಸಲು ಮೂರು ವರ್ಷಗಳು ಬೇಕಾಗುತ್ತವೆ ಎಂದು ವರದಿ ಹೇಳಿದೆ.

ಆಗಸ್ಟ್ ತಿಂಗಳಿನಲ್ಲಿ ಅಂಬಾನಿಯನ್ನು ವಿಶ್ವದ ನಾಲ್ಕನೇ ದೊಡ್ಡ ಶ್ರೀಮಂತ ವ್ಯಕ್ತಿ ಎಂದು ಘೋಷಿಸಲಾಗಿತ್ತು. ಇದೇ ಸಂದರ್ಭದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಉದ್ಯೋಗ ಕಳೆದುಕೊಂಡು, ಹಣ, ಆಹಾರ ಮತ್ತು ಆಶ್ರಯವಿಲ್ಲದೆ ಎಣಗಾಡಿದ್ದಾರೆ. ಸಾವಿರಾರು ಕಿಲೋಮೀಟರ್‌ಗಳ ಪ್ರಯಾಣವನ್ನು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಡೆದುಕೊಂಡೇ ಕ್ರಮಿಸಿದ ದುರಂತ ದೃಶ್ಯಗಳು, ಸಾವಿರಾರು ಸಾವುಗಳು ದೇಶದ ಪ್ರಜ್ಞೆಯನ್ನು ಕಲಕಿದವು. ಆದರೆ, ಈ ಸಾವುಗಳ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಸರ್ಕಾರ ಸಂಸತ್ತಿನಲ್ಲಿ ಘೋಷಿಸಿತ್ತು!

ಭಾರತ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ, ಸಾಂಕ್ರಾಮಿಕ ರೋಗದ ಸಮಯದಲ್ಲಿ ಒಂದು ಗಂಟೆಗೆ ₹ 90 ಕೋಟಿ ಗಳಿಸಿದರು. ಅದೇ ಸಮಯದಲ್ಲಿ ದೇಶದ ಸುಮಾರು 24% ಜನರು ತಿಂಗಳಿಗೆ 3,000 ರೂ.ಗಳಿಗಿಂತ ಕಡಿಮೆ ಆದಾಯವನ್ನು ಗಳಿಸಿದ್ದಾರೆ ಎಂದು ವರದಿ ಹೇಳಿದೆ.

ದೇಶದಲ್ಲಿ ಹೇರಲಾದ ಲಾಕ್‌ಡೌನ್‌ನ ಪರಿಣಾಮವು ಸ್ಪಷ್ಟವಾಗುತ್ತಿದ್ದಂತೆ, ಸರ್ಕಾರವು ಸುಮಾರು 20 ಲಕ್ಷ ಕೋಟಿ ಮೌಲ್ಯದ ಆರ್ಥಿಕ ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಿತು. ಪ್ರಧಾನಿ ನರೇಂದ್ರ ಮೋದಿ ಇದನ್ನು ಅವರ “ಆತ್ಮ-ನಿರ್ಭಾರ ಭಾರತ್ (ಸ್ವಾವಲಂಭಿ ಭಾರತ)” ದೂರದೃಷ್ಟಿಯ ಮೂಲಾಧಾರವೆಂದು ಶ್ಲಾಘಿಸಿದರು. ಆದರೆ, ಇದರ ಉಪಯೋಗವಾಗಿರುವುದು ಮಾತ್ರ ಕಾಣುತ್ತಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಅದೇ ವರದಿಯಲ್ಲಿರುವ ಜಾಗತಿಕ ಆವೃತ್ತಿಯು ಸಾಂಕ್ರಾಮಿಕ ರೋಗದ ಸಮಯದಲ್ಲಿ ವಿಶ್ವದಾದ್ಯಂತ ಆದಾಯದ ಅಸಮಾನತೆಗಳಲ್ಲಿನ ಅಂತರವನ್ನು ವಿವರಿಸಿದೆ ಎಂದು ದಿ ಹಿಂದು ವರದಿ ಮಾಡಿದೆ.

ಇಂತಹ ಅಸಮಾನತೆಗಳನ್ನು ಪರಿಹರಿಸಲು ಆಕ್ಸ್‌ಫ್ಯಾಮ್ ಭಾರತ ಸರ್ಕಾರಕ್ಕೆ ಹಲವು ಸಲಹೆಗಳನ್ನು ನೀಡಿದೆ. ಅದರಲ್ಲಿ ಮುಖ್ಯವಾಗಿ, ತಕ್ಷಣವೇ ಕನಿಷ್ಠ ವೇತನವನ್ನು ಪರಿಷ್ಕರಿಸಬೇಕು ಮತ್ತು ಇದನ್ನು ತಕ್ಷವೇ ಜಾರಿಗೆ ತರಬೇಕು ಎಂದು ಸೂಚಿಸಿದೆ.

50 ಲಕ್ಷಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸುವವರ ಮೇಲೆ 2% ಹೆಚ್ಚುವರಿ ತೆರಿಗೆ ಶುಲ್ಕ ವಿಧಿಸಬೇಕು ಮತ್ತು ಸಾಂಕ್ರಾಮಿಕ ಸಮಯದಲ್ಲಿ windfall ಲಾಭಗಳಿಸುವ ಕಂಪನಿಗಳ ಮೇಲೆ ತಾತ್ಕಾಲಿಕ ತೆರಿಗೆಯನ್ನು ಜಾರಿಗೆ ತರಬೇಕು ಎಂದು ಅದು ಸರ್ಕಾರಕ್ಕೆ ಸೂಚಿಸಿದೆ.

“ಇದು ಉತ್ತಮ ಭವಿಷ್ಯವನ್ನು ನಿರ್ಮಿಸಲು ಭಾರತ ಸರ್ಕಾರವು ನಿರ್ದಿಷ್ಟ ಮತ್ತು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವ ಸಮಯ. ಹೆಚ್ಚು ನಾಗರಿಕರು ಸಮಾನ ಮತ್ತು ನ್ಯಾಯಯುತ ಭವಿಷ್ಯವನ್ನು ಬಯಸುತ್ತಾರೆ” ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...