Homeಮುಖಪುಟಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

ಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

- Advertisement -
- Advertisement -

ರಾಜಕೀಯ ತಂತ್ರಜ್ಞ, ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ನಿನ್ನೆ ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಒಟ್ಟಿಗೆ ಊಟ ಮಾಡಿದ್ದಾರೆ. ಸಭೆಯಲ್ಲಿ ಶರದ್ ಪವಾರ್, ಅವರ ಪುತ್ರಿ ಮತ್ತು ಸಂಸದೆ ಸುಪ್ರಿಯ ಸುಳೆ, ಎನ್‌ಸಿಪಿಯ ಜಯಂತ್ ಪಾಟೀಲ್ ಭಾಗವಹಿಸಿದ್ದಾರೆ. ಸಭೆಯ ನಂತರ ಇದು ಖಾಸಗಿ ಭೇಟಿ ಎಂದು ಪ್ರಶಾಂತ್ ಕಿಶೋರ್ ಹೇಳಿದರೆ, ಇದು 2024ರಲ್ಲಿ ನರೇಂದ್ರ ಮೋದಿ ವಿರುದ್ಧದ ವಿರೋಧ ಪಕ್ಷಗಳ ಪ್ರಬಲ ಮೈತ್ರಿಕೂಟಕ್ಕೆ ಸಿದ್ದತೆಯಿರಬಹುದು ಎಂದು NCP ಮುಖಂಡ ನವಾಬ್ ಮಲ್ಲಿಕ್ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಸೌಜನ್ಯದ ಭೇಟಿ ಮತ್ತು ಒಟ್ಟಿಗೆ ಊಟ ಅಷ್ಟೇ. ಇದಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಕಿಶೋರ್ ಹೇಳಿದ್ದಾರೆ. ಆದರೆ ನವಾಬ್ ಮಲ್ಲಿಕ್ “ಸತತ ಎರಡನೇ ಅವಧಿಗೆ ಅಧಿಕಾರದಲ್ಲಿರುವ ಬಿಜೆಪಿಯನ್ನು ಕೆಳಗಿಳಿಸಲು ಪ್ರತಿಪಕ್ಷಗಳ ಒಕ್ಕೂಟದ ವೇದಿಕೆಗೆ ಪವಾರ್ ಒತ್ತಾಯಿಸುತ್ತಿದ್ದಾರೆ. ಪವಾರ್ ಸಾಹೇಬರು ಎಲ್ಲಾ ವಿರೋಧ ಪಕ್ಷಗಳನ್ನು ಬಿಜೆಪಿ ವಿರುದ್ಧ ಒಗ್ಗೂಡಿಸಲು ಕೆಲಸ ಮಾಡುತ್ತಿದ್ದಾರೆ. ಇದು ಸ್ವಾಭಾವಿಕ, ಈ ವಿಷಯವನ್ನು ಚರ್ಚಿಸಲಾಗುವುದು” ಎಂದಿದ್ದಾರೆ.

ಸಭೆ 3 ಗಂಟೆಗಳ ಕಾಲ ನಡೆದಿದೆ. ಆದರೆ ಪ್ರಶಾಂತ್ ಕಿಶೋರ್‌ರವರನ್ನು ಎನ್‌ಸಿಪಿಯ ಚುನಾವಣಾ ತಂತ್ರಗಾರಿಕೆಗೆ ನೇಮಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಸ್ಪಷ್ಟತೆ ದೊರಕಲಿದೆ ಎಂದು ನವಾಬ್ ಮಲ್ಲಿಕ್ ಹೇಳಿದ್ದಾರೆ.

ಇದು ಸೌಜನ್ಯದ ಭೇಟಿ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ​ ಟಿಎಂಸಿ ಮತ್ತು ಡಿಎಂಕೆ ಪಕ್ಷಕ್ಕೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳ ಮುಖಂಡರನ್ನು ಪ್ರಶಾಂತ್ ಕಿಶೋರ್ ಭೇಟಿಯಾಗಿ ಧನ್ಯವಾದ ತಿಳಿಸುತ್ತಿದ್ದಾರೆ ಅವರ ಐಪ್ಯಾಕ್ ತಂಡ ನಿನ್ನೆ ಹೇಳಿತ್ತು.

ತಾನು ಕೆಲಸ ಮಾಡಿದ್ದ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಂಗಾಳದಲ್ಲಿ ಟಿಎಂಸಿ ಭರ್ಜರಿ ಜಯಗಳಿಸುತ್ತಿದ್ದಂತೆ ಪ್ರಶಾಂತ್ ಕಿಶೋರ್‌ ತಾನು ಈ ಕ್ಷೇತ್ರ ತ್ಯಜಿಸುವುದಾಗಿ ಹೇಳಿದ್ದರು. “ಈಗ  ನಾನು ಮಾಡುತ್ತಿರುವುದನ್ನು ಮುಂದುವರಿಸಲು ಬಯಸುವುದಿಲ್ಲ. ನಾನು ಸಾಕಷ್ಟು ಮಾಡಿದ್ದೇನೆ. ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಕ್ಷೇತ್ರವನ್ನು ತ್ಯಜಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು. ಆದರೆ ಈಗ ಅವರು ಶರದ್ ಪವಾರ್‌ರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದ ಸಹಜವಾಗಿ ಕುತೂಹಲ ಕೆರಳಿಸಿದೆ.


ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...