Homeಮುಖಪುಟಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

ಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

- Advertisement -
- Advertisement -

ರಾಜಕೀಯ ತಂತ್ರಜ್ಞ, ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ನಿನ್ನೆ ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಒಟ್ಟಿಗೆ ಊಟ ಮಾಡಿದ್ದಾರೆ. ಸಭೆಯಲ್ಲಿ ಶರದ್ ಪವಾರ್, ಅವರ ಪುತ್ರಿ ಮತ್ತು ಸಂಸದೆ ಸುಪ್ರಿಯ ಸುಳೆ, ಎನ್‌ಸಿಪಿಯ ಜಯಂತ್ ಪಾಟೀಲ್ ಭಾಗವಹಿಸಿದ್ದಾರೆ. ಸಭೆಯ ನಂತರ ಇದು ಖಾಸಗಿ ಭೇಟಿ ಎಂದು ಪ್ರಶಾಂತ್ ಕಿಶೋರ್ ಹೇಳಿದರೆ, ಇದು 2024ರಲ್ಲಿ ನರೇಂದ್ರ ಮೋದಿ ವಿರುದ್ಧದ ವಿರೋಧ ಪಕ್ಷಗಳ ಪ್ರಬಲ ಮೈತ್ರಿಕೂಟಕ್ಕೆ ಸಿದ್ದತೆಯಿರಬಹುದು ಎಂದು NCP ಮುಖಂಡ ನವಾಬ್ ಮಲ್ಲಿಕ್ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಸೌಜನ್ಯದ ಭೇಟಿ ಮತ್ತು ಒಟ್ಟಿಗೆ ಊಟ ಅಷ್ಟೇ. ಇದಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಕಿಶೋರ್ ಹೇಳಿದ್ದಾರೆ. ಆದರೆ ನವಾಬ್ ಮಲ್ಲಿಕ್ “ಸತತ ಎರಡನೇ ಅವಧಿಗೆ ಅಧಿಕಾರದಲ್ಲಿರುವ ಬಿಜೆಪಿಯನ್ನು ಕೆಳಗಿಳಿಸಲು ಪ್ರತಿಪಕ್ಷಗಳ ಒಕ್ಕೂಟದ ವೇದಿಕೆಗೆ ಪವಾರ್ ಒತ್ತಾಯಿಸುತ್ತಿದ್ದಾರೆ. ಪವಾರ್ ಸಾಹೇಬರು ಎಲ್ಲಾ ವಿರೋಧ ಪಕ್ಷಗಳನ್ನು ಬಿಜೆಪಿ ವಿರುದ್ಧ ಒಗ್ಗೂಡಿಸಲು ಕೆಲಸ ಮಾಡುತ್ತಿದ್ದಾರೆ. ಇದು ಸ್ವಾಭಾವಿಕ, ಈ ವಿಷಯವನ್ನು ಚರ್ಚಿಸಲಾಗುವುದು” ಎಂದಿದ್ದಾರೆ.

ಸಭೆ 3 ಗಂಟೆಗಳ ಕಾಲ ನಡೆದಿದೆ. ಆದರೆ ಪ್ರಶಾಂತ್ ಕಿಶೋರ್‌ರವರನ್ನು ಎನ್‌ಸಿಪಿಯ ಚುನಾವಣಾ ತಂತ್ರಗಾರಿಕೆಗೆ ನೇಮಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಸ್ಪಷ್ಟತೆ ದೊರಕಲಿದೆ ಎಂದು ನವಾಬ್ ಮಲ್ಲಿಕ್ ಹೇಳಿದ್ದಾರೆ.

ಇದು ಸೌಜನ್ಯದ ಭೇಟಿ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ​ ಟಿಎಂಸಿ ಮತ್ತು ಡಿಎಂಕೆ ಪಕ್ಷಕ್ಕೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳ ಮುಖಂಡರನ್ನು ಪ್ರಶಾಂತ್ ಕಿಶೋರ್ ಭೇಟಿಯಾಗಿ ಧನ್ಯವಾದ ತಿಳಿಸುತ್ತಿದ್ದಾರೆ ಅವರ ಐಪ್ಯಾಕ್ ತಂಡ ನಿನ್ನೆ ಹೇಳಿತ್ತು.

ತಾನು ಕೆಲಸ ಮಾಡಿದ್ದ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಂಗಾಳದಲ್ಲಿ ಟಿಎಂಸಿ ಭರ್ಜರಿ ಜಯಗಳಿಸುತ್ತಿದ್ದಂತೆ ಪ್ರಶಾಂತ್ ಕಿಶೋರ್‌ ತಾನು ಈ ಕ್ಷೇತ್ರ ತ್ಯಜಿಸುವುದಾಗಿ ಹೇಳಿದ್ದರು. “ಈಗ  ನಾನು ಮಾಡುತ್ತಿರುವುದನ್ನು ಮುಂದುವರಿಸಲು ಬಯಸುವುದಿಲ್ಲ. ನಾನು ಸಾಕಷ್ಟು ಮಾಡಿದ್ದೇನೆ. ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಕ್ಷೇತ್ರವನ್ನು ತ್ಯಜಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು. ಆದರೆ ಈಗ ಅವರು ಶರದ್ ಪವಾರ್‌ರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದ ಸಹಜವಾಗಿ ಕುತೂಹಲ ಕೆರಳಿಸಿದೆ.


ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...