Homeಮುಖಪುಟಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

ಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

- Advertisement -
- Advertisement -

ರಾಜಕೀಯ ತಂತ್ರಜ್ಞ, ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ನಿನ್ನೆ ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಒಟ್ಟಿಗೆ ಊಟ ಮಾಡಿದ್ದಾರೆ. ಸಭೆಯಲ್ಲಿ ಶರದ್ ಪವಾರ್, ಅವರ ಪುತ್ರಿ ಮತ್ತು ಸಂಸದೆ ಸುಪ್ರಿಯ ಸುಳೆ, ಎನ್‌ಸಿಪಿಯ ಜಯಂತ್ ಪಾಟೀಲ್ ಭಾಗವಹಿಸಿದ್ದಾರೆ. ಸಭೆಯ ನಂತರ ಇದು ಖಾಸಗಿ ಭೇಟಿ ಎಂದು ಪ್ರಶಾಂತ್ ಕಿಶೋರ್ ಹೇಳಿದರೆ, ಇದು 2024ರಲ್ಲಿ ನರೇಂದ್ರ ಮೋದಿ ವಿರುದ್ಧದ ವಿರೋಧ ಪಕ್ಷಗಳ ಪ್ರಬಲ ಮೈತ್ರಿಕೂಟಕ್ಕೆ ಸಿದ್ದತೆಯಿರಬಹುದು ಎಂದು NCP ಮುಖಂಡ ನವಾಬ್ ಮಲ್ಲಿಕ್ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಸೌಜನ್ಯದ ಭೇಟಿ ಮತ್ತು ಒಟ್ಟಿಗೆ ಊಟ ಅಷ್ಟೇ. ಇದಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಕಿಶೋರ್ ಹೇಳಿದ್ದಾರೆ. ಆದರೆ ನವಾಬ್ ಮಲ್ಲಿಕ್ “ಸತತ ಎರಡನೇ ಅವಧಿಗೆ ಅಧಿಕಾರದಲ್ಲಿರುವ ಬಿಜೆಪಿಯನ್ನು ಕೆಳಗಿಳಿಸಲು ಪ್ರತಿಪಕ್ಷಗಳ ಒಕ್ಕೂಟದ ವೇದಿಕೆಗೆ ಪವಾರ್ ಒತ್ತಾಯಿಸುತ್ತಿದ್ದಾರೆ. ಪವಾರ್ ಸಾಹೇಬರು ಎಲ್ಲಾ ವಿರೋಧ ಪಕ್ಷಗಳನ್ನು ಬಿಜೆಪಿ ವಿರುದ್ಧ ಒಗ್ಗೂಡಿಸಲು ಕೆಲಸ ಮಾಡುತ್ತಿದ್ದಾರೆ. ಇದು ಸ್ವಾಭಾವಿಕ, ಈ ವಿಷಯವನ್ನು ಚರ್ಚಿಸಲಾಗುವುದು” ಎಂದಿದ್ದಾರೆ.

ಸಭೆ 3 ಗಂಟೆಗಳ ಕಾಲ ನಡೆದಿದೆ. ಆದರೆ ಪ್ರಶಾಂತ್ ಕಿಶೋರ್‌ರವರನ್ನು ಎನ್‌ಸಿಪಿಯ ಚುನಾವಣಾ ತಂತ್ರಗಾರಿಕೆಗೆ ನೇಮಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಸ್ಪಷ್ಟತೆ ದೊರಕಲಿದೆ ಎಂದು ನವಾಬ್ ಮಲ್ಲಿಕ್ ಹೇಳಿದ್ದಾರೆ.

ಇದು ಸೌಜನ್ಯದ ಭೇಟಿ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ​ ಟಿಎಂಸಿ ಮತ್ತು ಡಿಎಂಕೆ ಪಕ್ಷಕ್ಕೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳ ಮುಖಂಡರನ್ನು ಪ್ರಶಾಂತ್ ಕಿಶೋರ್ ಭೇಟಿಯಾಗಿ ಧನ್ಯವಾದ ತಿಳಿಸುತ್ತಿದ್ದಾರೆ ಅವರ ಐಪ್ಯಾಕ್ ತಂಡ ನಿನ್ನೆ ಹೇಳಿತ್ತು.

ತಾನು ಕೆಲಸ ಮಾಡಿದ್ದ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಂಗಾಳದಲ್ಲಿ ಟಿಎಂಸಿ ಭರ್ಜರಿ ಜಯಗಳಿಸುತ್ತಿದ್ದಂತೆ ಪ್ರಶಾಂತ್ ಕಿಶೋರ್‌ ತಾನು ಈ ಕ್ಷೇತ್ರ ತ್ಯಜಿಸುವುದಾಗಿ ಹೇಳಿದ್ದರು. “ಈಗ  ನಾನು ಮಾಡುತ್ತಿರುವುದನ್ನು ಮುಂದುವರಿಸಲು ಬಯಸುವುದಿಲ್ಲ. ನಾನು ಸಾಕಷ್ಟು ಮಾಡಿದ್ದೇನೆ. ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಕ್ಷೇತ್ರವನ್ನು ತ್ಯಜಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು. ಆದರೆ ಈಗ ಅವರು ಶರದ್ ಪವಾರ್‌ರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದ ಸಹಜವಾಗಿ ಕುತೂಹಲ ಕೆರಳಿಸಿದೆ.


ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...