Homeಮುಖಪುಟಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

ಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

- Advertisement -
- Advertisement -

ರಾಜಕೀಯ ತಂತ್ರಜ್ಞ, ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ನಿನ್ನೆ ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಒಟ್ಟಿಗೆ ಊಟ ಮಾಡಿದ್ದಾರೆ. ಸಭೆಯಲ್ಲಿ ಶರದ್ ಪವಾರ್, ಅವರ ಪುತ್ರಿ ಮತ್ತು ಸಂಸದೆ ಸುಪ್ರಿಯ ಸುಳೆ, ಎನ್‌ಸಿಪಿಯ ಜಯಂತ್ ಪಾಟೀಲ್ ಭಾಗವಹಿಸಿದ್ದಾರೆ. ಸಭೆಯ ನಂತರ ಇದು ಖಾಸಗಿ ಭೇಟಿ ಎಂದು ಪ್ರಶಾಂತ್ ಕಿಶೋರ್ ಹೇಳಿದರೆ, ಇದು 2024ರಲ್ಲಿ ನರೇಂದ್ರ ಮೋದಿ ವಿರುದ್ಧದ ವಿರೋಧ ಪಕ್ಷಗಳ ಪ್ರಬಲ ಮೈತ್ರಿಕೂಟಕ್ಕೆ ಸಿದ್ದತೆಯಿರಬಹುದು ಎಂದು NCP ಮುಖಂಡ ನವಾಬ್ ಮಲ್ಲಿಕ್ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಸೌಜನ್ಯದ ಭೇಟಿ ಮತ್ತು ಒಟ್ಟಿಗೆ ಊಟ ಅಷ್ಟೇ. ಇದಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಕಿಶೋರ್ ಹೇಳಿದ್ದಾರೆ. ಆದರೆ ನವಾಬ್ ಮಲ್ಲಿಕ್ “ಸತತ ಎರಡನೇ ಅವಧಿಗೆ ಅಧಿಕಾರದಲ್ಲಿರುವ ಬಿಜೆಪಿಯನ್ನು ಕೆಳಗಿಳಿಸಲು ಪ್ರತಿಪಕ್ಷಗಳ ಒಕ್ಕೂಟದ ವೇದಿಕೆಗೆ ಪವಾರ್ ಒತ್ತಾಯಿಸುತ್ತಿದ್ದಾರೆ. ಪವಾರ್ ಸಾಹೇಬರು ಎಲ್ಲಾ ವಿರೋಧ ಪಕ್ಷಗಳನ್ನು ಬಿಜೆಪಿ ವಿರುದ್ಧ ಒಗ್ಗೂಡಿಸಲು ಕೆಲಸ ಮಾಡುತ್ತಿದ್ದಾರೆ. ಇದು ಸ್ವಾಭಾವಿಕ, ಈ ವಿಷಯವನ್ನು ಚರ್ಚಿಸಲಾಗುವುದು” ಎಂದಿದ್ದಾರೆ.

ಸಭೆ 3 ಗಂಟೆಗಳ ಕಾಲ ನಡೆದಿದೆ. ಆದರೆ ಪ್ರಶಾಂತ್ ಕಿಶೋರ್‌ರವರನ್ನು ಎನ್‌ಸಿಪಿಯ ಚುನಾವಣಾ ತಂತ್ರಗಾರಿಕೆಗೆ ನೇಮಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಸ್ಪಷ್ಟತೆ ದೊರಕಲಿದೆ ಎಂದು ನವಾಬ್ ಮಲ್ಲಿಕ್ ಹೇಳಿದ್ದಾರೆ.

ಇದು ಸೌಜನ್ಯದ ಭೇಟಿ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ​ ಟಿಎಂಸಿ ಮತ್ತು ಡಿಎಂಕೆ ಪಕ್ಷಕ್ಕೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳ ಮುಖಂಡರನ್ನು ಪ್ರಶಾಂತ್ ಕಿಶೋರ್ ಭೇಟಿಯಾಗಿ ಧನ್ಯವಾದ ತಿಳಿಸುತ್ತಿದ್ದಾರೆ ಅವರ ಐಪ್ಯಾಕ್ ತಂಡ ನಿನ್ನೆ ಹೇಳಿತ್ತು.

ತಾನು ಕೆಲಸ ಮಾಡಿದ್ದ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಂಗಾಳದಲ್ಲಿ ಟಿಎಂಸಿ ಭರ್ಜರಿ ಜಯಗಳಿಸುತ್ತಿದ್ದಂತೆ ಪ್ರಶಾಂತ್ ಕಿಶೋರ್‌ ತಾನು ಈ ಕ್ಷೇತ್ರ ತ್ಯಜಿಸುವುದಾಗಿ ಹೇಳಿದ್ದರು. “ಈಗ  ನಾನು ಮಾಡುತ್ತಿರುವುದನ್ನು ಮುಂದುವರಿಸಲು ಬಯಸುವುದಿಲ್ಲ. ನಾನು ಸಾಕಷ್ಟು ಮಾಡಿದ್ದೇನೆ. ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಕ್ಷೇತ್ರವನ್ನು ತ್ಯಜಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು. ಆದರೆ ಈಗ ಅವರು ಶರದ್ ಪವಾರ್‌ರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದ ಸಹಜವಾಗಿ ಕುತೂಹಲ ಕೆರಳಿಸಿದೆ.


ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...