Homeಮುಖಪುಟಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

ಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

- Advertisement -
- Advertisement -

ರಾಜಕೀಯ ತಂತ್ರಜ್ಞ, ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ನಿನ್ನೆ ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಒಟ್ಟಿಗೆ ಊಟ ಮಾಡಿದ್ದಾರೆ. ಸಭೆಯಲ್ಲಿ ಶರದ್ ಪವಾರ್, ಅವರ ಪುತ್ರಿ ಮತ್ತು ಸಂಸದೆ ಸುಪ್ರಿಯ ಸುಳೆ, ಎನ್‌ಸಿಪಿಯ ಜಯಂತ್ ಪಾಟೀಲ್ ಭಾಗವಹಿಸಿದ್ದಾರೆ. ಸಭೆಯ ನಂತರ ಇದು ಖಾಸಗಿ ಭೇಟಿ ಎಂದು ಪ್ರಶಾಂತ್ ಕಿಶೋರ್ ಹೇಳಿದರೆ, ಇದು 2024ರಲ್ಲಿ ನರೇಂದ್ರ ಮೋದಿ ವಿರುದ್ಧದ ವಿರೋಧ ಪಕ್ಷಗಳ ಪ್ರಬಲ ಮೈತ್ರಿಕೂಟಕ್ಕೆ ಸಿದ್ದತೆಯಿರಬಹುದು ಎಂದು NCP ಮುಖಂಡ ನವಾಬ್ ಮಲ್ಲಿಕ್ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಸೌಜನ್ಯದ ಭೇಟಿ ಮತ್ತು ಒಟ್ಟಿಗೆ ಊಟ ಅಷ್ಟೇ. ಇದಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಕಿಶೋರ್ ಹೇಳಿದ್ದಾರೆ. ಆದರೆ ನವಾಬ್ ಮಲ್ಲಿಕ್ “ಸತತ ಎರಡನೇ ಅವಧಿಗೆ ಅಧಿಕಾರದಲ್ಲಿರುವ ಬಿಜೆಪಿಯನ್ನು ಕೆಳಗಿಳಿಸಲು ಪ್ರತಿಪಕ್ಷಗಳ ಒಕ್ಕೂಟದ ವೇದಿಕೆಗೆ ಪವಾರ್ ಒತ್ತಾಯಿಸುತ್ತಿದ್ದಾರೆ. ಪವಾರ್ ಸಾಹೇಬರು ಎಲ್ಲಾ ವಿರೋಧ ಪಕ್ಷಗಳನ್ನು ಬಿಜೆಪಿ ವಿರುದ್ಧ ಒಗ್ಗೂಡಿಸಲು ಕೆಲಸ ಮಾಡುತ್ತಿದ್ದಾರೆ. ಇದು ಸ್ವಾಭಾವಿಕ, ಈ ವಿಷಯವನ್ನು ಚರ್ಚಿಸಲಾಗುವುದು” ಎಂದಿದ್ದಾರೆ.

ಸಭೆ 3 ಗಂಟೆಗಳ ಕಾಲ ನಡೆದಿದೆ. ಆದರೆ ಪ್ರಶಾಂತ್ ಕಿಶೋರ್‌ರವರನ್ನು ಎನ್‌ಸಿಪಿಯ ಚುನಾವಣಾ ತಂತ್ರಗಾರಿಕೆಗೆ ನೇಮಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಸ್ಪಷ್ಟತೆ ದೊರಕಲಿದೆ ಎಂದು ನವಾಬ್ ಮಲ್ಲಿಕ್ ಹೇಳಿದ್ದಾರೆ.

ಇದು ಸೌಜನ್ಯದ ಭೇಟಿ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ​ ಟಿಎಂಸಿ ಮತ್ತು ಡಿಎಂಕೆ ಪಕ್ಷಕ್ಕೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳ ಮುಖಂಡರನ್ನು ಪ್ರಶಾಂತ್ ಕಿಶೋರ್ ಭೇಟಿಯಾಗಿ ಧನ್ಯವಾದ ತಿಳಿಸುತ್ತಿದ್ದಾರೆ ಅವರ ಐಪ್ಯಾಕ್ ತಂಡ ನಿನ್ನೆ ಹೇಳಿತ್ತು.

ತಾನು ಕೆಲಸ ಮಾಡಿದ್ದ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಂಗಾಳದಲ್ಲಿ ಟಿಎಂಸಿ ಭರ್ಜರಿ ಜಯಗಳಿಸುತ್ತಿದ್ದಂತೆ ಪ್ರಶಾಂತ್ ಕಿಶೋರ್‌ ತಾನು ಈ ಕ್ಷೇತ್ರ ತ್ಯಜಿಸುವುದಾಗಿ ಹೇಳಿದ್ದರು. “ಈಗ  ನಾನು ಮಾಡುತ್ತಿರುವುದನ್ನು ಮುಂದುವರಿಸಲು ಬಯಸುವುದಿಲ್ಲ. ನಾನು ಸಾಕಷ್ಟು ಮಾಡಿದ್ದೇನೆ. ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಕ್ಷೇತ್ರವನ್ನು ತ್ಯಜಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು. ಆದರೆ ಈಗ ಅವರು ಶರದ್ ಪವಾರ್‌ರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದ ಸಹಜವಾಗಿ ಕುತೂಹಲ ಕೆರಳಿಸಿದೆ.


ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...