Homeಮುಖಪುಟಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

ಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

- Advertisement -
- Advertisement -

ರಾಜಕೀಯ ತಂತ್ರಜ್ಞ, ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ನಿನ್ನೆ ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಒಟ್ಟಿಗೆ ಊಟ ಮಾಡಿದ್ದಾರೆ. ಸಭೆಯಲ್ಲಿ ಶರದ್ ಪವಾರ್, ಅವರ ಪುತ್ರಿ ಮತ್ತು ಸಂಸದೆ ಸುಪ್ರಿಯ ಸುಳೆ, ಎನ್‌ಸಿಪಿಯ ಜಯಂತ್ ಪಾಟೀಲ್ ಭಾಗವಹಿಸಿದ್ದಾರೆ. ಸಭೆಯ ನಂತರ ಇದು ಖಾಸಗಿ ಭೇಟಿ ಎಂದು ಪ್ರಶಾಂತ್ ಕಿಶೋರ್ ಹೇಳಿದರೆ, ಇದು 2024ರಲ್ಲಿ ನರೇಂದ್ರ ಮೋದಿ ವಿರುದ್ಧದ ವಿರೋಧ ಪಕ್ಷಗಳ ಪ್ರಬಲ ಮೈತ್ರಿಕೂಟಕ್ಕೆ ಸಿದ್ದತೆಯಿರಬಹುದು ಎಂದು NCP ಮುಖಂಡ ನವಾಬ್ ಮಲ್ಲಿಕ್ ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಸೌಜನ್ಯದ ಭೇಟಿ ಮತ್ತು ಒಟ್ಟಿಗೆ ಊಟ ಅಷ್ಟೇ. ಇದಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಕಿಶೋರ್ ಹೇಳಿದ್ದಾರೆ. ಆದರೆ ನವಾಬ್ ಮಲ್ಲಿಕ್ “ಸತತ ಎರಡನೇ ಅವಧಿಗೆ ಅಧಿಕಾರದಲ್ಲಿರುವ ಬಿಜೆಪಿಯನ್ನು ಕೆಳಗಿಳಿಸಲು ಪ್ರತಿಪಕ್ಷಗಳ ಒಕ್ಕೂಟದ ವೇದಿಕೆಗೆ ಪವಾರ್ ಒತ್ತಾಯಿಸುತ್ತಿದ್ದಾರೆ. ಪವಾರ್ ಸಾಹೇಬರು ಎಲ್ಲಾ ವಿರೋಧ ಪಕ್ಷಗಳನ್ನು ಬಿಜೆಪಿ ವಿರುದ್ಧ ಒಗ್ಗೂಡಿಸಲು ಕೆಲಸ ಮಾಡುತ್ತಿದ್ದಾರೆ. ಇದು ಸ್ವಾಭಾವಿಕ, ಈ ವಿಷಯವನ್ನು ಚರ್ಚಿಸಲಾಗುವುದು” ಎಂದಿದ್ದಾರೆ.

ಸಭೆ 3 ಗಂಟೆಗಳ ಕಾಲ ನಡೆದಿದೆ. ಆದರೆ ಪ್ರಶಾಂತ್ ಕಿಶೋರ್‌ರವರನ್ನು ಎನ್‌ಸಿಪಿಯ ಚುನಾವಣಾ ತಂತ್ರಗಾರಿಕೆಗೆ ನೇಮಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಸ್ಪಷ್ಟತೆ ದೊರಕಲಿದೆ ಎಂದು ನವಾಬ್ ಮಲ್ಲಿಕ್ ಹೇಳಿದ್ದಾರೆ.

ಇದು ಸೌಜನ್ಯದ ಭೇಟಿ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ​ ಟಿಎಂಸಿ ಮತ್ತು ಡಿಎಂಕೆ ಪಕ್ಷಕ್ಕೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳ ಮುಖಂಡರನ್ನು ಪ್ರಶಾಂತ್ ಕಿಶೋರ್ ಭೇಟಿಯಾಗಿ ಧನ್ಯವಾದ ತಿಳಿಸುತ್ತಿದ್ದಾರೆ ಅವರ ಐಪ್ಯಾಕ್ ತಂಡ ನಿನ್ನೆ ಹೇಳಿತ್ತು.

ತಾನು ಕೆಲಸ ಮಾಡಿದ್ದ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಂಗಾಳದಲ್ಲಿ ಟಿಎಂಸಿ ಭರ್ಜರಿ ಜಯಗಳಿಸುತ್ತಿದ್ದಂತೆ ಪ್ರಶಾಂತ್ ಕಿಶೋರ್‌ ತಾನು ಈ ಕ್ಷೇತ್ರ ತ್ಯಜಿಸುವುದಾಗಿ ಹೇಳಿದ್ದರು. “ಈಗ  ನಾನು ಮಾಡುತ್ತಿರುವುದನ್ನು ಮುಂದುವರಿಸಲು ಬಯಸುವುದಿಲ್ಲ. ನಾನು ಸಾಕಷ್ಟು ಮಾಡಿದ್ದೇನೆ. ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಕ್ಷೇತ್ರವನ್ನು ತ್ಯಜಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು. ಆದರೆ ಈಗ ಅವರು ಶರದ್ ಪವಾರ್‌ರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದ ಸಹಜವಾಗಿ ಕುತೂಹಲ ಕೆರಳಿಸಿದೆ.


ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...