Homeಮುಖಪುಟಬಿಜೆಪಿ ಮುಗಿಸಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು: ಕಾಂಗ್ರೆಸ್

ಬಿಜೆಪಿ ಮುಗಿಸಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು: ಕಾಂಗ್ರೆಸ್

- Advertisement -
- Advertisement -

ಸಿಎಂ ಬಿ.ಎಸ್‌ ಯಡಿಯೂರಪ್ಪನವರ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ! ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ನಳಿನ್ ಕುಮಾರ್ ಕಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರವರದು ಎನ್ನಲಾದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಮತ್ತು ಸಚಿವ ಯೋಗೇಶ್ವರ್ ಅವರ ವಿರುದ್ಧ ಪಕ್ಷದ ರಾಜ್ಯಾಧ್ಯಕ್ಷರಾಗಿ ಕ್ರಮ ಕೈಗೊಂಡಿರಲಿಲ್ಲ. ಏಕೆಂದರೆ ಸಂಚಿನ ಸೂತ್ರದಾರನೇ ನಳಿನ್ ಕುಮಾರ್ ಕಟೀಲ್” ಎಂದು ಆರೋಪಿಸಿದೆ.

ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಬಗ್ಗೆ ಯಡಿಯೂರಪ್ಪನವರಿಗೆ
ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಹಾಗೂ ಕೆ.ಎಸ್ ಈಶ್ವರಪ್ಪ ಅವರು ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ! ಕಾಮಿಡಿ ಪಾತ್ರ ಮಾಡುತ್ತಿದ್ದ ಕಟೀಲ್, ಈಗ ಬಿಜೆಪಿಯ ಹಲವರಿಗೆ ವಿಲ್ಲನ್ ಪಾತ್ರಧಾರಿಯಾಗಿದ್ದಾರೆ! ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

 

ಯಡಿಯೂರಪ್ಪ ಹಾಗೂ ಈಶ್ವರಪ್ಪನವರು ರಾಜಕಾರಣಕ್ಕೆ ಬಂದಾಗ ನಳಿನ್ ಕುಮಾರ್ ಕಟೀಲ್ ಗೋಲಿ ಆಡುವುದನ್ನೂ ಕಲಿತಿರಲಿಲ್ಲ! ಮಂಗಳೂರು ಭಾಗದಲ್ಲಿ ಅಬ್ಬೇಪಾರಿಯಾಗಿ ತಿರುಗುತ್ತಿದ್ದ ಕಟೀಲ್ ಇಂದು ಪಕ್ಷ ಕಟ್ಟಿದವರನ್ನೇ ಮೂಲೆಗುಂಪು ಮಾಡಲು ಸಜ್ಜಾಗಿದ್ದಾರೆ. ಬಿಜೆಪಿಯನ್ನ ಮುಳುಗಿಸಲು ಬೇರೆ ಯಾರ ಪ್ರಯತ್ನವೂ ಬೇಡ, ಕಟೀಲ್ ಒಬ್ಬರೇ ಸಾಕು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
“ಕರ್ನಾಟಕ ಸಿಎಂ ಬದಲಾವಣೆಯಾಗಲಿದ್ದಾರೆ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾತು” ಎಂಬ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಆದರೆ ಆಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟೀಕರಣ ನೀಡಿರುವ ನಳಿನ್ ಕುಮಾರ್ ಕಟೀಲ್, ಆ ಆಡಿಯೋ ನನ್ನದಲ್ಲ. ನನಗೆ ಕಳಂಕ ತರಲು ನಕಲಿ ಆಡಿಯೋ ಸೃಷ್ಟಿಸಲಾಗಿದೆ. ನನ್ನ ದನಿಯನ್ನು ಅನುಕರಿಸಿ ಯಾರೋ ಆಡಿಯೋ ತಯಾರು ಮಾಡಿದ್ದಾರೆ. ಅದನ್ನು ಕಿಡಿಗೇಡಿಗಳು ವಾಟ್ಸಾಪ್‌ನಲ್ಲಿ ಷೇರ್ ಮಾಡಿ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. ಈ ಕುರಿತು ಸಮಗ್ರ ತನಿಖೆಯಾಗಬೇಕೆಂದು ಒತ್ತಾಯಿಸಿದ್ದರು.

 

ಟ್ವಿಟರ್‌ನಲ್ಲಿ ಸದಾ ಆರೋಪ ಪ್ರತ್ಯಾರೋಪದಲ್ಲಿ ತೊಡಗುವ ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ಟ್ವಿಟರ್ ಹ್ಯಾಂಡಲ್‌ಗಳು ದೋಷಾರೋಪಣೆ ಮಾಡುತ್ತವೆ. ಸದ್ಯ ಕಾಂಗ್ರೆಸ್ ಪಕ್ಷವು ನಳಿನ್ ಕುಮಾರ್ ಕಟೀಲ್ ಅವರನ್ನು ಯಡಿಯೂರಪ್ಪ ವಿರುದ್ಧ ಕತ್ತಿ ಮಸೆಯುತ್ತಿರುವ ಮೀರ್ ಸಾದಿಕ್ ಎಂದು ಕರೆದಿದೆ. ಈ ಜಗಳ ಎಲ್ಲಿಗೆ ಹೋಗಿ ನಿಲ್ಲಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ..: ಆಡಿಯೋ ನನ್ನದಲ್ಲ ಎಂದ ನಳಿನ್ ಕುಮಾರ್ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...