Homeಕರ್ನಾಟಕಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

ಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿರುವ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಶನಿವಾರ ನೋಟಿಸ್ ಜಾರಿ ಮಾಡಿದೆ.  ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಮಾಡಿರುವ ನಿರ್ದಿಷ್ಟ ಆರೋಪಗಳ ಕುರಿತಾಗಿ ಸಾಕ್ಷ್ಯಾಧಾರ ಹಾಜರುಪಡಿಸುವಂತೆ ಚುನಾವಣಾ ಆಯೋಗ ತಾಕೀತು ಮಾಡಿದೆ. ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

”ರೇಟ್​ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರು. ರೇಟ್​ ಕಾರ್ಡ್ ನೀಡಿದ್ದು ಯತ್ನಾಳ್​, ಗೂಳಿಹಟ್ಟಿ ಶೇಖರ್, ​ಹೆಚ್​.ವಿಶ್ವನಾಥ್ ಎಂದು ಡಿಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಸಿಎಂ ಸ್ಥಾನಕ್ಕೆ ರೇಟ್​ ಎಷ್ಟು ಎಂಬುವುದನ್ನು ಬಿಜೆಪಿಯವರೇ ಹೇಳಿದ್ದಾರೆ. ಮಂತ್ರಿ ಸ್ಥಾನಕ್ಕೆ ಎಷ್ಟು ರೇಟ್​​, ಮಠಗಳ ಸ್ವಾಮೀಜಿಗಳಿಂದ ಎಷ್ಟು ರೇಟ್​. ಈ ರೇಟ್​ ಕಾರ್ಡ್​ ನೀಡಿದ್ದು ಬಿಜೆಪಿಯವರೇ. ಬಿಜೆಪಿಯವರೇ ನೀಡಿದ ರೇಟ್​​​ ಕಾರ್ಡ್​ನ್ನು ನಾವು ನೀಡಿದ್ದೇವೆ ಅಷ್ಟೇ” ಎಂದು ಹೇಳಿದ್ದಾರೆ.

ಮತದಾನಕ್ಕೆ ಮೂರೇ ದಿನ ಬಾಕಿ ಉಳಿದಿದ್ದು, ಈ ನಡುವೆ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಹಿರಾತು ಬಿಡುಗಡೆ ಮಾಡಿದೆ. ಇದು ನೀತಿ ಸಂಹಿತೆ ಉಲ್ಲಂಘನೆ ಎಂದು ಬಿಜೆಪಿ ದೂರು ನೀಡಿದ್ದು, ಚುನಾವಣಾ ಆಯೋಗ ಕೂಡಾ ಜಾಹಿರಾತನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123(4), ಐಪಿಸಿ ಸೆಕ್ಷನ್ 171 ಜಿ ಅಡಿ ಅಪರಾಧವಾಗಿದೆ. ಕಾಂಗ್ರೆಸ್ ಪಕ್ಷದ ಜಾಹೀರಾತಿನಲ್ಲಿನ ನಿರ್ದಿಷ್ಟ ಭ್ರಷ್ಟಾಚಾರ ಆರೋಪಗಳು ಚುನಾವಣೆ ಪ್ರಕ್ರಿಯೆ ಮೇಲೂ ಪರಿಣಾಮ ಬೀರಬಹುದಾದ ಕಾರಣ ನಾಳೆಯೇ ಭ್ರಷ್ಟಾಚಾರ ಆರೋಪಗಳಿಗೆ ಸಾಕ್ಷ್ಯಾಧಾರ ಒದಗಿಸುವಂತೆ ಚುನಾವಣಾ ಆಯೋಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ: ಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು: ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್

ಕಾಂಗ್ರೆಸ್ ಪಕ್ಷವು ಬಿಜೆಪಿಯ ಭ್ರಷ್ಟಾಚಾರದ ವಿಚಾರವಾಗಿ ಮೇ.5 ರಂದು ಪತ್ರಿಕೆಗಳಿಗೆ ಜಾಹಿರಾತು ನೀಡಿತ್ತು. ಇದೀಗ ಚುನಾವಣಾ ಆಯೋಗದ ಈ ಕ್ರಮಕ್ಕೆ ಮುಂದಾಗಿದೆ. ಭ್ರಷ್ಟಾಚಾರ ಆರೋಪಗಳಿರುವ ಆಧಾರರಹಿತ ಜಾಹಿರಾತು ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ದೂರು ಪರಿಶೀಲಿಸಿದ ಚುನಾವಣಾ ಆಯೋಗ ಆರೋಪಗಳ ಬಗ್ಗೆ ನೈಜ ಸಾಕ್ಷ್ಯ ಒದಗಿಸಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಸೂಚನೆ ನೀಡಿದೆ.

ಬಿಜೆಪಿ ದೂರಿನ ಮೇರೆಗೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡಿದೆ. ಮೇಲ್ನೋಟಕ್ಕೆ ಕಾಂಗ್ರೆಸ್ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಆಯೋಗ ಹೇಳಿದೆ.

”ಸಾಧನೆಯ ಕೊರತೆ, ದುಷ್ಕೃತ್ಯಗಳು, ರಾಜಕೀಯ ವಿರೋಧಿಗಳ ಭ್ರಷ್ಟಾಚಾರ, ಮುಕ್ತ ಆಡಳಿತವನ್ನು ಖಾತರಿಪಡಿಸದಿರುವ ಸಾಮಾನ್ಯ ಉಲ್ಲೇಖಗಳು ಮತ್ತು ಪ್ರಸ್ತಾಪಗಳು ರಾಜಕೀಯ ಪ್ರಚಾರಗಳಲ್ಲಿ ಇರುತ್ತವೆ. ನಿರ್ದಿಷ್ಟ ಆರೋಪಗಳನ್ನು ಪ್ರತ್ಯೇಕಿಸಬೇಕಾಗಿದೆ. ಏಕೆಂದರೆ ಅವುಗಳು ಪರಿಶೀಲಿಸಬೇಕಾದ ಸತ್ಯಗಳಿಂದ ಇರಬೇಕು” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

”ನೀವು ನೀಡಿದ ಜಾಹೀರಾತಿನಲ್ಲಿ ಉಲ್ಲೇಖಿಸಲಾದ ನೇಮಕಾತಿಗಳು, ವರ್ಗಾವಣೆಗಳು, ಉದ್ಯೋಗಗಳು ಮತ್ತು ಕಮಿಷನ್ ಪ್ರಕಾರಗಳ ದರಗಳಿಗೆ ಪುರಾವೆಗಳನ್ನು ಮೇ 7, 2023 ರಂದು ಸಂಜೆ 7 ಗಂಟೆಗಳ ಒಳಗೆ ಯಾವುದೇ ವಿವರಣೆಯೊಂದಿಗೆ ಮತ್ತು ಅದನ್ನು ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸುವ ಮೂಲಕ ಪಕ್ಷ ಮಾಡಿದ ಆರೋಪಗಳನ್ನು ಸಾಬೀತುಪಡಿಸಲು ಪುರಾವೆಗಳನ್ನು ನೀಡಬೇಕು” ಎಂದು ಸೂಚಿಸಿದೆ.

”ಪುರಾವೆಗಳನ್ನು ಸಲ್ಲಿಸಲು ವಿಫಲವಾದರೆ ನೀತಿ ಸಂಹಿತೆಗೆ ಸಂಬಂಧಿತ ಕಾನೂನು ನಿಬಂಧನೆಗಳನ್ನು ನಿಮ್ಮ ವಿರುದ್ಧ ಜರುಗಿಸಲಾಗುವುದು. ಜನಪ್ರತಿನಿಧಿ ಕಾಯ್ದೆ ಮತ್ತು ಐಪಿಸಿಯ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

ಇನ್ನು ಕಾಂಗ್ರೆಸ್ ಪಕ್ಷದ ಜಾಹಿರಾತಿನ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೇಶವಪ್ರಸಾದ್ ವತಿಯಿಂದ ಇಂದು ಲೀಗಲ್ ನೋಟೀಸ್ ಜಾರಿಗೊಳಿಸಲಾಗಿದೆ. ತಕ್ಷಣ ಆರೋಪ ಹಿಂಪಡೆದು ಪತ್ರಿಕೆಗಳಲ್ಲಿ ಕ್ಷಮೆಯಾಚನೆ ಜಾಹಿರಾತು ನೀಡಬೇಕು. ಇಲ್ಲವಾದರೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಸದ್ಯ ಚುನಾವಣಾ ಆಯೋಗ ಮೇ 7 ರವರೆಗೆ ಗಡುವು ನೀಡಿದ್ದು ಕಾಂಗ್ರೆಸ್ ಪಕ್ಷ ಅಷ್ಟರೊಳಗೆ ಸಾಕ್ಷ್ಯಾಧಾರ ಒದಗಿಸಬೇಕಿದೆ.

ಜಾಹೀರಾತಿನಲ್ಲಿ ಏನಿದೆ?

”ಈ ಟ್ರಬಲ್ ಇಂಜಿನ್ ಸರ್ಕಾರ- ಭ್ರಷ್ಟಾಚಾರದ ರೇಟ್ ಕಾರ್ಡ್ 2019-2023” ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದೆ.

”ಸಿಎಂ ಹುದ್ದೆಗೆ 2500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂಗಳನ್ನು ಬಿಜೆಪಿ ಪಡೆಯುತ್ತದೆ” ಎಂದು ಆರೋಪಿಸಲಾಗಿದೆ.

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್: 5ರಿಂ 15 ಕೋಟಿ ರೂ.,

ಇಂಜಿನಿಯರ್‌: 1ರಿಂದ 5 ಕೋಟಿ ರೂ.

ಸಬ್‌ ರಿಜಿಸ್ಟ್ರಾರ್‌: 50 ಲಕ್ಷ ರೂ.ಗಳಿಂದ 5 ಕೋಟಿ ರೂ.

ಬೆಸ್ಕಾ: 1 ಕೋಟಿ ರೂ.

ಪಿಎಸ್‌ಐ: 80 ಲಕ್ಷ ರೂ.

ಸಹಾಯಕ ಪ್ರಾಧ್ಯಾಪಕ: 50 ಲಕ್ಷ – 70 ಲಕ್ಷ ರೂ.

ಉಪನ್ಯಾಸಕ: 30 ಲಕ್ಷ- 50 ಲಕ್ಷ ರೂ.

ಎಫ್‌ಡಿಎ:30 ಲಕ್ಷ ರೂ.

ಸಹಾಯಕ ಇಂಜಿನಿಯರ್‌: 30 ಲಕ್ಷ ರೂ.

ಬಮುಲ್- 25 ಲಕ್ಷ ರೂ.

ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್‌ 10 ಲಕ್ಷ ರೂ.

ಪೊಲೀಸ್ ಪೇದೆ 10 ಲಕ್ಷ ರೂ.

ಹುದ್ದೆಗಳ ದರ 

ಬಿಡಿಎ ಆಯುಕ್ತ : 10 ಕೋಟಿ – 15 ಕೋಟಿ ರೂ.

ಕೆಪಿಎಸ್‌ಸಿ ಅಧ್ಯಕ್ಷ: 5 ರಿಂದ 15 ಕೋಟಿ ರೂ.

ಡಿಸಿ ಮತ್ತು ಎಸ್‌ಪಿ:  5 ರಿಂದ 15 ಕೋಟಿ ರೂ.

ಉಪಕುಲಪತಿ: 5 ರಿಂದ 10 ಕೋಟಿ ರೂ.

ಎಸಿ ಮತ್ತು ತಹಸೀಲ್ದಾರ್‌ 50 ಲಕ್ಷ- 3 ಕೋಟಿ ರೂ.

ಸರ್ಕಾರದ ಡೀಲ್‌ಗಳು

ಕೋವಿಡ್ ಕಿಟ್ ಪೂರೈಕೆ: 75%

ಪಿಡಬ್ಲ್ಯುಡಿ ಗುತ್ತಿಗೆಗಳು: 40 %

ಮಠಕ್ಕೆ ಅನುದಾನ: 30%

ಉಪಕರಣಗಳ ಪೂರೈಕೆ: 40%

ಮೊಟ್ಟೆ ಪೂರೈಕೆ: 30%

ರಸ್ತೆ ಗುತ್ತಿಗೆಗಳು: 40%

ಹೀಗೆ ಜಾಹೀರಾತಿನಲ್ಲಿ ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. ”ಕಳೆದ ನಾಲ್ಕೇ ವರ್ಷಗಳಲ್ಲಿ 40% ಸರ್ಕಾರ ಕನ್ನಡಿಗರಿಂದ  1,50,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ. ಬದಲಾವಣೆ ಹಾಗೂ ಪ್ರಗತಿಗೆ ನಿಮ್ಮ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚುನಾವಣಾ ಪ್ರಚಾರದ ಸಭೆಗಳಲ್ಲಿ ಮಾತನಾಡಿದ್ದನ್ನೆಲ್ಲಾ ನೀತಿ ಸಂಹಿತೆ ಒಳಗೆ ಬರುವದಾದರೆ ಚುನಾವಣಾ ಪ್ರಚಾರವನ್ನು ತೆಗೆದು ಹಾಕಬೇಕು ಪ್ರಜಾಪ್ರಭುತ್ವದಲ್ಲಿ ಆರೋಪ ಮತ್ತು ಪ್ರತ್ಯಾಾರೂಪಗಳು ಇದ್ದೇ ಇರುತ್ತವೆ ಇದೊಂದು ವಿಚಿತ್ರ ಪ್ರಜಾಪ್ರಭುತ್ವ ಭ್ರಷ್ಟ ಸರ್ಕಾರ ಅಂತ ಹೇಳಿದ್ದನ್ನು ಪ್ರೂವ್ ಮಾಡುವುದು ಹೇಗೆ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...