Homeಕರ್ನಾಟಕಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

ಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿರುವ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಶನಿವಾರ ನೋಟಿಸ್ ಜಾರಿ ಮಾಡಿದೆ.  ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಮಾಡಿರುವ ನಿರ್ದಿಷ್ಟ ಆರೋಪಗಳ ಕುರಿತಾಗಿ ಸಾಕ್ಷ್ಯಾಧಾರ ಹಾಜರುಪಡಿಸುವಂತೆ ಚುನಾವಣಾ ಆಯೋಗ ತಾಕೀತು ಮಾಡಿದೆ. ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

”ರೇಟ್​ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರು. ರೇಟ್​ ಕಾರ್ಡ್ ನೀಡಿದ್ದು ಯತ್ನಾಳ್​, ಗೂಳಿಹಟ್ಟಿ ಶೇಖರ್, ​ಹೆಚ್​.ವಿಶ್ವನಾಥ್ ಎಂದು ಡಿಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಸಿಎಂ ಸ್ಥಾನಕ್ಕೆ ರೇಟ್​ ಎಷ್ಟು ಎಂಬುವುದನ್ನು ಬಿಜೆಪಿಯವರೇ ಹೇಳಿದ್ದಾರೆ. ಮಂತ್ರಿ ಸ್ಥಾನಕ್ಕೆ ಎಷ್ಟು ರೇಟ್​​, ಮಠಗಳ ಸ್ವಾಮೀಜಿಗಳಿಂದ ಎಷ್ಟು ರೇಟ್​. ಈ ರೇಟ್​ ಕಾರ್ಡ್​ ನೀಡಿದ್ದು ಬಿಜೆಪಿಯವರೇ. ಬಿಜೆಪಿಯವರೇ ನೀಡಿದ ರೇಟ್​​​ ಕಾರ್ಡ್​ನ್ನು ನಾವು ನೀಡಿದ್ದೇವೆ ಅಷ್ಟೇ” ಎಂದು ಹೇಳಿದ್ದಾರೆ.

ಮತದಾನಕ್ಕೆ ಮೂರೇ ದಿನ ಬಾಕಿ ಉಳಿದಿದ್ದು, ಈ ನಡುವೆ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಹಿರಾತು ಬಿಡುಗಡೆ ಮಾಡಿದೆ. ಇದು ನೀತಿ ಸಂಹಿತೆ ಉಲ್ಲಂಘನೆ ಎಂದು ಬಿಜೆಪಿ ದೂರು ನೀಡಿದ್ದು, ಚುನಾವಣಾ ಆಯೋಗ ಕೂಡಾ ಜಾಹಿರಾತನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123(4), ಐಪಿಸಿ ಸೆಕ್ಷನ್ 171 ಜಿ ಅಡಿ ಅಪರಾಧವಾಗಿದೆ. ಕಾಂಗ್ರೆಸ್ ಪಕ್ಷದ ಜಾಹೀರಾತಿನಲ್ಲಿನ ನಿರ್ದಿಷ್ಟ ಭ್ರಷ್ಟಾಚಾರ ಆರೋಪಗಳು ಚುನಾವಣೆ ಪ್ರಕ್ರಿಯೆ ಮೇಲೂ ಪರಿಣಾಮ ಬೀರಬಹುದಾದ ಕಾರಣ ನಾಳೆಯೇ ಭ್ರಷ್ಟಾಚಾರ ಆರೋಪಗಳಿಗೆ ಸಾಕ್ಷ್ಯಾಧಾರ ಒದಗಿಸುವಂತೆ ಚುನಾವಣಾ ಆಯೋಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ: ಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು: ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್

ಕಾಂಗ್ರೆಸ್ ಪಕ್ಷವು ಬಿಜೆಪಿಯ ಭ್ರಷ್ಟಾಚಾರದ ವಿಚಾರವಾಗಿ ಮೇ.5 ರಂದು ಪತ್ರಿಕೆಗಳಿಗೆ ಜಾಹಿರಾತು ನೀಡಿತ್ತು. ಇದೀಗ ಚುನಾವಣಾ ಆಯೋಗದ ಈ ಕ್ರಮಕ್ಕೆ ಮುಂದಾಗಿದೆ. ಭ್ರಷ್ಟಾಚಾರ ಆರೋಪಗಳಿರುವ ಆಧಾರರಹಿತ ಜಾಹಿರಾತು ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ದೂರು ಪರಿಶೀಲಿಸಿದ ಚುನಾವಣಾ ಆಯೋಗ ಆರೋಪಗಳ ಬಗ್ಗೆ ನೈಜ ಸಾಕ್ಷ್ಯ ಒದಗಿಸಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಸೂಚನೆ ನೀಡಿದೆ.

ಬಿಜೆಪಿ ದೂರಿನ ಮೇರೆಗೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡಿದೆ. ಮೇಲ್ನೋಟಕ್ಕೆ ಕಾಂಗ್ರೆಸ್ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಆಯೋಗ ಹೇಳಿದೆ.

”ಸಾಧನೆಯ ಕೊರತೆ, ದುಷ್ಕೃತ್ಯಗಳು, ರಾಜಕೀಯ ವಿರೋಧಿಗಳ ಭ್ರಷ್ಟಾಚಾರ, ಮುಕ್ತ ಆಡಳಿತವನ್ನು ಖಾತರಿಪಡಿಸದಿರುವ ಸಾಮಾನ್ಯ ಉಲ್ಲೇಖಗಳು ಮತ್ತು ಪ್ರಸ್ತಾಪಗಳು ರಾಜಕೀಯ ಪ್ರಚಾರಗಳಲ್ಲಿ ಇರುತ್ತವೆ. ನಿರ್ದಿಷ್ಟ ಆರೋಪಗಳನ್ನು ಪ್ರತ್ಯೇಕಿಸಬೇಕಾಗಿದೆ. ಏಕೆಂದರೆ ಅವುಗಳು ಪರಿಶೀಲಿಸಬೇಕಾದ ಸತ್ಯಗಳಿಂದ ಇರಬೇಕು” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

”ನೀವು ನೀಡಿದ ಜಾಹೀರಾತಿನಲ್ಲಿ ಉಲ್ಲೇಖಿಸಲಾದ ನೇಮಕಾತಿಗಳು, ವರ್ಗಾವಣೆಗಳು, ಉದ್ಯೋಗಗಳು ಮತ್ತು ಕಮಿಷನ್ ಪ್ರಕಾರಗಳ ದರಗಳಿಗೆ ಪುರಾವೆಗಳನ್ನು ಮೇ 7, 2023 ರಂದು ಸಂಜೆ 7 ಗಂಟೆಗಳ ಒಳಗೆ ಯಾವುದೇ ವಿವರಣೆಯೊಂದಿಗೆ ಮತ್ತು ಅದನ್ನು ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸುವ ಮೂಲಕ ಪಕ್ಷ ಮಾಡಿದ ಆರೋಪಗಳನ್ನು ಸಾಬೀತುಪಡಿಸಲು ಪುರಾವೆಗಳನ್ನು ನೀಡಬೇಕು” ಎಂದು ಸೂಚಿಸಿದೆ.

”ಪುರಾವೆಗಳನ್ನು ಸಲ್ಲಿಸಲು ವಿಫಲವಾದರೆ ನೀತಿ ಸಂಹಿತೆಗೆ ಸಂಬಂಧಿತ ಕಾನೂನು ನಿಬಂಧನೆಗಳನ್ನು ನಿಮ್ಮ ವಿರುದ್ಧ ಜರುಗಿಸಲಾಗುವುದು. ಜನಪ್ರತಿನಿಧಿ ಕಾಯ್ದೆ ಮತ್ತು ಐಪಿಸಿಯ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

ಇನ್ನು ಕಾಂಗ್ರೆಸ್ ಪಕ್ಷದ ಜಾಹಿರಾತಿನ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೇಶವಪ್ರಸಾದ್ ವತಿಯಿಂದ ಇಂದು ಲೀಗಲ್ ನೋಟೀಸ್ ಜಾರಿಗೊಳಿಸಲಾಗಿದೆ. ತಕ್ಷಣ ಆರೋಪ ಹಿಂಪಡೆದು ಪತ್ರಿಕೆಗಳಲ್ಲಿ ಕ್ಷಮೆಯಾಚನೆ ಜಾಹಿರಾತು ನೀಡಬೇಕು. ಇಲ್ಲವಾದರೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಸದ್ಯ ಚುನಾವಣಾ ಆಯೋಗ ಮೇ 7 ರವರೆಗೆ ಗಡುವು ನೀಡಿದ್ದು ಕಾಂಗ್ರೆಸ್ ಪಕ್ಷ ಅಷ್ಟರೊಳಗೆ ಸಾಕ್ಷ್ಯಾಧಾರ ಒದಗಿಸಬೇಕಿದೆ.

ಜಾಹೀರಾತಿನಲ್ಲಿ ಏನಿದೆ?

”ಈ ಟ್ರಬಲ್ ಇಂಜಿನ್ ಸರ್ಕಾರ- ಭ್ರಷ್ಟಾಚಾರದ ರೇಟ್ ಕಾರ್ಡ್ 2019-2023” ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದೆ.

”ಸಿಎಂ ಹುದ್ದೆಗೆ 2500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂಗಳನ್ನು ಬಿಜೆಪಿ ಪಡೆಯುತ್ತದೆ” ಎಂದು ಆರೋಪಿಸಲಾಗಿದೆ.

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್: 5ರಿಂ 15 ಕೋಟಿ ರೂ.,

ಇಂಜಿನಿಯರ್‌: 1ರಿಂದ 5 ಕೋಟಿ ರೂ.

ಸಬ್‌ ರಿಜಿಸ್ಟ್ರಾರ್‌: 50 ಲಕ್ಷ ರೂ.ಗಳಿಂದ 5 ಕೋಟಿ ರೂ.

ಬೆಸ್ಕಾ: 1 ಕೋಟಿ ರೂ.

ಪಿಎಸ್‌ಐ: 80 ಲಕ್ಷ ರೂ.

ಸಹಾಯಕ ಪ್ರಾಧ್ಯಾಪಕ: 50 ಲಕ್ಷ – 70 ಲಕ್ಷ ರೂ.

ಉಪನ್ಯಾಸಕ: 30 ಲಕ್ಷ- 50 ಲಕ್ಷ ರೂ.

ಎಫ್‌ಡಿಎ:30 ಲಕ್ಷ ರೂ.

ಸಹಾಯಕ ಇಂಜಿನಿಯರ್‌: 30 ಲಕ್ಷ ರೂ.

ಬಮುಲ್- 25 ಲಕ್ಷ ರೂ.

ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್‌ 10 ಲಕ್ಷ ರೂ.

ಪೊಲೀಸ್ ಪೇದೆ 10 ಲಕ್ಷ ರೂ.

ಹುದ್ದೆಗಳ ದರ 

ಬಿಡಿಎ ಆಯುಕ್ತ : 10 ಕೋಟಿ – 15 ಕೋಟಿ ರೂ.

ಕೆಪಿಎಸ್‌ಸಿ ಅಧ್ಯಕ್ಷ: 5 ರಿಂದ 15 ಕೋಟಿ ರೂ.

ಡಿಸಿ ಮತ್ತು ಎಸ್‌ಪಿ:  5 ರಿಂದ 15 ಕೋಟಿ ರೂ.

ಉಪಕುಲಪತಿ: 5 ರಿಂದ 10 ಕೋಟಿ ರೂ.

ಎಸಿ ಮತ್ತು ತಹಸೀಲ್ದಾರ್‌ 50 ಲಕ್ಷ- 3 ಕೋಟಿ ರೂ.

ಸರ್ಕಾರದ ಡೀಲ್‌ಗಳು

ಕೋವಿಡ್ ಕಿಟ್ ಪೂರೈಕೆ: 75%

ಪಿಡಬ್ಲ್ಯುಡಿ ಗುತ್ತಿಗೆಗಳು: 40 %

ಮಠಕ್ಕೆ ಅನುದಾನ: 30%

ಉಪಕರಣಗಳ ಪೂರೈಕೆ: 40%

ಮೊಟ್ಟೆ ಪೂರೈಕೆ: 30%

ರಸ್ತೆ ಗುತ್ತಿಗೆಗಳು: 40%

ಹೀಗೆ ಜಾಹೀರಾತಿನಲ್ಲಿ ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. ”ಕಳೆದ ನಾಲ್ಕೇ ವರ್ಷಗಳಲ್ಲಿ 40% ಸರ್ಕಾರ ಕನ್ನಡಿಗರಿಂದ  1,50,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ. ಬದಲಾವಣೆ ಹಾಗೂ ಪ್ರಗತಿಗೆ ನಿಮ್ಮ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚುನಾವಣಾ ಪ್ರಚಾರದ ಸಭೆಗಳಲ್ಲಿ ಮಾತನಾಡಿದ್ದನ್ನೆಲ್ಲಾ ನೀತಿ ಸಂಹಿತೆ ಒಳಗೆ ಬರುವದಾದರೆ ಚುನಾವಣಾ ಪ್ರಚಾರವನ್ನು ತೆಗೆದು ಹಾಕಬೇಕು ಪ್ರಜಾಪ್ರಭುತ್ವದಲ್ಲಿ ಆರೋಪ ಮತ್ತು ಪ್ರತ್ಯಾಾರೂಪಗಳು ಇದ್ದೇ ಇರುತ್ತವೆ ಇದೊಂದು ವಿಚಿತ್ರ ಪ್ರಜಾಪ್ರಭುತ್ವ ಭ್ರಷ್ಟ ಸರ್ಕಾರ ಅಂತ ಹೇಳಿದ್ದನ್ನು ಪ್ರೂವ್ ಮಾಡುವುದು ಹೇಗೆ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...