Homeಕರ್ನಾಟಕಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

ಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿರುವ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಶನಿವಾರ ನೋಟಿಸ್ ಜಾರಿ ಮಾಡಿದೆ.  ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಮಾಡಿರುವ ನಿರ್ದಿಷ್ಟ ಆರೋಪಗಳ ಕುರಿತಾಗಿ ಸಾಕ್ಷ್ಯಾಧಾರ ಹಾಜರುಪಡಿಸುವಂತೆ ಚುನಾವಣಾ ಆಯೋಗ ತಾಕೀತು ಮಾಡಿದೆ. ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

”ರೇಟ್​ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರು. ರೇಟ್​ ಕಾರ್ಡ್ ನೀಡಿದ್ದು ಯತ್ನಾಳ್​, ಗೂಳಿಹಟ್ಟಿ ಶೇಖರ್, ​ಹೆಚ್​.ವಿಶ್ವನಾಥ್ ಎಂದು ಡಿಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಸಿಎಂ ಸ್ಥಾನಕ್ಕೆ ರೇಟ್​ ಎಷ್ಟು ಎಂಬುವುದನ್ನು ಬಿಜೆಪಿಯವರೇ ಹೇಳಿದ್ದಾರೆ. ಮಂತ್ರಿ ಸ್ಥಾನಕ್ಕೆ ಎಷ್ಟು ರೇಟ್​​, ಮಠಗಳ ಸ್ವಾಮೀಜಿಗಳಿಂದ ಎಷ್ಟು ರೇಟ್​. ಈ ರೇಟ್​ ಕಾರ್ಡ್​ ನೀಡಿದ್ದು ಬಿಜೆಪಿಯವರೇ. ಬಿಜೆಪಿಯವರೇ ನೀಡಿದ ರೇಟ್​​​ ಕಾರ್ಡ್​ನ್ನು ನಾವು ನೀಡಿದ್ದೇವೆ ಅಷ್ಟೇ” ಎಂದು ಹೇಳಿದ್ದಾರೆ.

ಮತದಾನಕ್ಕೆ ಮೂರೇ ದಿನ ಬಾಕಿ ಉಳಿದಿದ್ದು, ಈ ನಡುವೆ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಹಿರಾತು ಬಿಡುಗಡೆ ಮಾಡಿದೆ. ಇದು ನೀತಿ ಸಂಹಿತೆ ಉಲ್ಲಂಘನೆ ಎಂದು ಬಿಜೆಪಿ ದೂರು ನೀಡಿದ್ದು, ಚುನಾವಣಾ ಆಯೋಗ ಕೂಡಾ ಜಾಹಿರಾತನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123(4), ಐಪಿಸಿ ಸೆಕ್ಷನ್ 171 ಜಿ ಅಡಿ ಅಪರಾಧವಾಗಿದೆ. ಕಾಂಗ್ರೆಸ್ ಪಕ್ಷದ ಜಾಹೀರಾತಿನಲ್ಲಿನ ನಿರ್ದಿಷ್ಟ ಭ್ರಷ್ಟಾಚಾರ ಆರೋಪಗಳು ಚುನಾವಣೆ ಪ್ರಕ್ರಿಯೆ ಮೇಲೂ ಪರಿಣಾಮ ಬೀರಬಹುದಾದ ಕಾರಣ ನಾಳೆಯೇ ಭ್ರಷ್ಟಾಚಾರ ಆರೋಪಗಳಿಗೆ ಸಾಕ್ಷ್ಯಾಧಾರ ಒದಗಿಸುವಂತೆ ಚುನಾವಣಾ ಆಯೋಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ: ಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು: ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್

ಕಾಂಗ್ರೆಸ್ ಪಕ್ಷವು ಬಿಜೆಪಿಯ ಭ್ರಷ್ಟಾಚಾರದ ವಿಚಾರವಾಗಿ ಮೇ.5 ರಂದು ಪತ್ರಿಕೆಗಳಿಗೆ ಜಾಹಿರಾತು ನೀಡಿತ್ತು. ಇದೀಗ ಚುನಾವಣಾ ಆಯೋಗದ ಈ ಕ್ರಮಕ್ಕೆ ಮುಂದಾಗಿದೆ. ಭ್ರಷ್ಟಾಚಾರ ಆರೋಪಗಳಿರುವ ಆಧಾರರಹಿತ ಜಾಹಿರಾತು ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ದೂರು ಪರಿಶೀಲಿಸಿದ ಚುನಾವಣಾ ಆಯೋಗ ಆರೋಪಗಳ ಬಗ್ಗೆ ನೈಜ ಸಾಕ್ಷ್ಯ ಒದಗಿಸಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಸೂಚನೆ ನೀಡಿದೆ.

ಬಿಜೆಪಿ ದೂರಿನ ಮೇರೆಗೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡಿದೆ. ಮೇಲ್ನೋಟಕ್ಕೆ ಕಾಂಗ್ರೆಸ್ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಆಯೋಗ ಹೇಳಿದೆ.

”ಸಾಧನೆಯ ಕೊರತೆ, ದುಷ್ಕೃತ್ಯಗಳು, ರಾಜಕೀಯ ವಿರೋಧಿಗಳ ಭ್ರಷ್ಟಾಚಾರ, ಮುಕ್ತ ಆಡಳಿತವನ್ನು ಖಾತರಿಪಡಿಸದಿರುವ ಸಾಮಾನ್ಯ ಉಲ್ಲೇಖಗಳು ಮತ್ತು ಪ್ರಸ್ತಾಪಗಳು ರಾಜಕೀಯ ಪ್ರಚಾರಗಳಲ್ಲಿ ಇರುತ್ತವೆ. ನಿರ್ದಿಷ್ಟ ಆರೋಪಗಳನ್ನು ಪ್ರತ್ಯೇಕಿಸಬೇಕಾಗಿದೆ. ಏಕೆಂದರೆ ಅವುಗಳು ಪರಿಶೀಲಿಸಬೇಕಾದ ಸತ್ಯಗಳಿಂದ ಇರಬೇಕು” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

”ನೀವು ನೀಡಿದ ಜಾಹೀರಾತಿನಲ್ಲಿ ಉಲ್ಲೇಖಿಸಲಾದ ನೇಮಕಾತಿಗಳು, ವರ್ಗಾವಣೆಗಳು, ಉದ್ಯೋಗಗಳು ಮತ್ತು ಕಮಿಷನ್ ಪ್ರಕಾರಗಳ ದರಗಳಿಗೆ ಪುರಾವೆಗಳನ್ನು ಮೇ 7, 2023 ರಂದು ಸಂಜೆ 7 ಗಂಟೆಗಳ ಒಳಗೆ ಯಾವುದೇ ವಿವರಣೆಯೊಂದಿಗೆ ಮತ್ತು ಅದನ್ನು ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸುವ ಮೂಲಕ ಪಕ್ಷ ಮಾಡಿದ ಆರೋಪಗಳನ್ನು ಸಾಬೀತುಪಡಿಸಲು ಪುರಾವೆಗಳನ್ನು ನೀಡಬೇಕು” ಎಂದು ಸೂಚಿಸಿದೆ.

”ಪುರಾವೆಗಳನ್ನು ಸಲ್ಲಿಸಲು ವಿಫಲವಾದರೆ ನೀತಿ ಸಂಹಿತೆಗೆ ಸಂಬಂಧಿತ ಕಾನೂನು ನಿಬಂಧನೆಗಳನ್ನು ನಿಮ್ಮ ವಿರುದ್ಧ ಜರುಗಿಸಲಾಗುವುದು. ಜನಪ್ರತಿನಿಧಿ ಕಾಯ್ದೆ ಮತ್ತು ಐಪಿಸಿಯ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

ಇನ್ನು ಕಾಂಗ್ರೆಸ್ ಪಕ್ಷದ ಜಾಹಿರಾತಿನ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೇಶವಪ್ರಸಾದ್ ವತಿಯಿಂದ ಇಂದು ಲೀಗಲ್ ನೋಟೀಸ್ ಜಾರಿಗೊಳಿಸಲಾಗಿದೆ. ತಕ್ಷಣ ಆರೋಪ ಹಿಂಪಡೆದು ಪತ್ರಿಕೆಗಳಲ್ಲಿ ಕ್ಷಮೆಯಾಚನೆ ಜಾಹಿರಾತು ನೀಡಬೇಕು. ಇಲ್ಲವಾದರೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಸದ್ಯ ಚುನಾವಣಾ ಆಯೋಗ ಮೇ 7 ರವರೆಗೆ ಗಡುವು ನೀಡಿದ್ದು ಕಾಂಗ್ರೆಸ್ ಪಕ್ಷ ಅಷ್ಟರೊಳಗೆ ಸಾಕ್ಷ್ಯಾಧಾರ ಒದಗಿಸಬೇಕಿದೆ.

ಜಾಹೀರಾತಿನಲ್ಲಿ ಏನಿದೆ?

”ಈ ಟ್ರಬಲ್ ಇಂಜಿನ್ ಸರ್ಕಾರ- ಭ್ರಷ್ಟಾಚಾರದ ರೇಟ್ ಕಾರ್ಡ್ 2019-2023” ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದೆ.

”ಸಿಎಂ ಹುದ್ದೆಗೆ 2500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂಗಳನ್ನು ಬಿಜೆಪಿ ಪಡೆಯುತ್ತದೆ” ಎಂದು ಆರೋಪಿಸಲಾಗಿದೆ.

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್: 5ರಿಂ 15 ಕೋಟಿ ರೂ.,

ಇಂಜಿನಿಯರ್‌: 1ರಿಂದ 5 ಕೋಟಿ ರೂ.

ಸಬ್‌ ರಿಜಿಸ್ಟ್ರಾರ್‌: 50 ಲಕ್ಷ ರೂ.ಗಳಿಂದ 5 ಕೋಟಿ ರೂ.

ಬೆಸ್ಕಾ: 1 ಕೋಟಿ ರೂ.

ಪಿಎಸ್‌ಐ: 80 ಲಕ್ಷ ರೂ.

ಸಹಾಯಕ ಪ್ರಾಧ್ಯಾಪಕ: 50 ಲಕ್ಷ – 70 ಲಕ್ಷ ರೂ.

ಉಪನ್ಯಾಸಕ: 30 ಲಕ್ಷ- 50 ಲಕ್ಷ ರೂ.

ಎಫ್‌ಡಿಎ:30 ಲಕ್ಷ ರೂ.

ಸಹಾಯಕ ಇಂಜಿನಿಯರ್‌: 30 ಲಕ್ಷ ರೂ.

ಬಮುಲ್- 25 ಲಕ್ಷ ರೂ.

ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್‌ 10 ಲಕ್ಷ ರೂ.

ಪೊಲೀಸ್ ಪೇದೆ 10 ಲಕ್ಷ ರೂ.

ಹುದ್ದೆಗಳ ದರ 

ಬಿಡಿಎ ಆಯುಕ್ತ : 10 ಕೋಟಿ – 15 ಕೋಟಿ ರೂ.

ಕೆಪಿಎಸ್‌ಸಿ ಅಧ್ಯಕ್ಷ: 5 ರಿಂದ 15 ಕೋಟಿ ರೂ.

ಡಿಸಿ ಮತ್ತು ಎಸ್‌ಪಿ:  5 ರಿಂದ 15 ಕೋಟಿ ರೂ.

ಉಪಕುಲಪತಿ: 5 ರಿಂದ 10 ಕೋಟಿ ರೂ.

ಎಸಿ ಮತ್ತು ತಹಸೀಲ್ದಾರ್‌ 50 ಲಕ್ಷ- 3 ಕೋಟಿ ರೂ.

ಸರ್ಕಾರದ ಡೀಲ್‌ಗಳು

ಕೋವಿಡ್ ಕಿಟ್ ಪೂರೈಕೆ: 75%

ಪಿಡಬ್ಲ್ಯುಡಿ ಗುತ್ತಿಗೆಗಳು: 40 %

ಮಠಕ್ಕೆ ಅನುದಾನ: 30%

ಉಪಕರಣಗಳ ಪೂರೈಕೆ: 40%

ಮೊಟ್ಟೆ ಪೂರೈಕೆ: 30%

ರಸ್ತೆ ಗುತ್ತಿಗೆಗಳು: 40%

ಹೀಗೆ ಜಾಹೀರಾತಿನಲ್ಲಿ ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. ”ಕಳೆದ ನಾಲ್ಕೇ ವರ್ಷಗಳಲ್ಲಿ 40% ಸರ್ಕಾರ ಕನ್ನಡಿಗರಿಂದ  1,50,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ. ಬದಲಾವಣೆ ಹಾಗೂ ಪ್ರಗತಿಗೆ ನಿಮ್ಮ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚುನಾವಣಾ ಪ್ರಚಾರದ ಸಭೆಗಳಲ್ಲಿ ಮಾತನಾಡಿದ್ದನ್ನೆಲ್ಲಾ ನೀತಿ ಸಂಹಿತೆ ಒಳಗೆ ಬರುವದಾದರೆ ಚುನಾವಣಾ ಪ್ರಚಾರವನ್ನು ತೆಗೆದು ಹಾಕಬೇಕು ಪ್ರಜಾಪ್ರಭುತ್ವದಲ್ಲಿ ಆರೋಪ ಮತ್ತು ಪ್ರತ್ಯಾಾರೂಪಗಳು ಇದ್ದೇ ಇರುತ್ತವೆ ಇದೊಂದು ವಿಚಿತ್ರ ಪ್ರಜಾಪ್ರಭುತ್ವ ಭ್ರಷ್ಟ ಸರ್ಕಾರ ಅಂತ ಹೇಳಿದ್ದನ್ನು ಪ್ರೂವ್ ಮಾಡುವುದು ಹೇಗೆ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...