Homeಕರ್ನಾಟಕಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

ಭ್ರಷ್ಟಾಚಾರದ ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ ಕೊಟ್ಟಿದ್ದು: ಆಯೋಗದ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿರುವ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಶನಿವಾರ ನೋಟಿಸ್ ಜಾರಿ ಮಾಡಿದೆ.  ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಮಾಡಿರುವ ನಿರ್ದಿಷ್ಟ ಆರೋಪಗಳ ಕುರಿತಾಗಿ ಸಾಕ್ಷ್ಯಾಧಾರ ಹಾಜರುಪಡಿಸುವಂತೆ ಚುನಾವಣಾ ಆಯೋಗ ತಾಕೀತು ಮಾಡಿದೆ. ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

”ರೇಟ್​ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರು. ರೇಟ್​ ಕಾರ್ಡ್ ನೀಡಿದ್ದು ಯತ್ನಾಳ್​, ಗೂಳಿಹಟ್ಟಿ ಶೇಖರ್, ​ಹೆಚ್​.ವಿಶ್ವನಾಥ್ ಎಂದು ಡಿಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಸಿಎಂ ಸ್ಥಾನಕ್ಕೆ ರೇಟ್​ ಎಷ್ಟು ಎಂಬುವುದನ್ನು ಬಿಜೆಪಿಯವರೇ ಹೇಳಿದ್ದಾರೆ. ಮಂತ್ರಿ ಸ್ಥಾನಕ್ಕೆ ಎಷ್ಟು ರೇಟ್​​, ಮಠಗಳ ಸ್ವಾಮೀಜಿಗಳಿಂದ ಎಷ್ಟು ರೇಟ್​. ಈ ರೇಟ್​ ಕಾರ್ಡ್​ ನೀಡಿದ್ದು ಬಿಜೆಪಿಯವರೇ. ಬಿಜೆಪಿಯವರೇ ನೀಡಿದ ರೇಟ್​​​ ಕಾರ್ಡ್​ನ್ನು ನಾವು ನೀಡಿದ್ದೇವೆ ಅಷ್ಟೇ” ಎಂದು ಹೇಳಿದ್ದಾರೆ.

ಮತದಾನಕ್ಕೆ ಮೂರೇ ದಿನ ಬಾಕಿ ಉಳಿದಿದ್ದು, ಈ ನಡುವೆ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಹಿರಾತು ಬಿಡುಗಡೆ ಮಾಡಿದೆ. ಇದು ನೀತಿ ಸಂಹಿತೆ ಉಲ್ಲಂಘನೆ ಎಂದು ಬಿಜೆಪಿ ದೂರು ನೀಡಿದ್ದು, ಚುನಾವಣಾ ಆಯೋಗ ಕೂಡಾ ಜಾಹಿರಾತನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123(4), ಐಪಿಸಿ ಸೆಕ್ಷನ್ 171 ಜಿ ಅಡಿ ಅಪರಾಧವಾಗಿದೆ. ಕಾಂಗ್ರೆಸ್ ಪಕ್ಷದ ಜಾಹೀರಾತಿನಲ್ಲಿನ ನಿರ್ದಿಷ್ಟ ಭ್ರಷ್ಟಾಚಾರ ಆರೋಪಗಳು ಚುನಾವಣೆ ಪ್ರಕ್ರಿಯೆ ಮೇಲೂ ಪರಿಣಾಮ ಬೀರಬಹುದಾದ ಕಾರಣ ನಾಳೆಯೇ ಭ್ರಷ್ಟಾಚಾರ ಆರೋಪಗಳಿಗೆ ಸಾಕ್ಷ್ಯಾಧಾರ ಒದಗಿಸುವಂತೆ ಚುನಾವಣಾ ಆಯೋಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ: ಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು: ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್

ಕಾಂಗ್ರೆಸ್ ಪಕ್ಷವು ಬಿಜೆಪಿಯ ಭ್ರಷ್ಟಾಚಾರದ ವಿಚಾರವಾಗಿ ಮೇ.5 ರಂದು ಪತ್ರಿಕೆಗಳಿಗೆ ಜಾಹಿರಾತು ನೀಡಿತ್ತು. ಇದೀಗ ಚುನಾವಣಾ ಆಯೋಗದ ಈ ಕ್ರಮಕ್ಕೆ ಮುಂದಾಗಿದೆ. ಭ್ರಷ್ಟಾಚಾರ ಆರೋಪಗಳಿರುವ ಆಧಾರರಹಿತ ಜಾಹಿರಾತು ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ದೂರು ಪರಿಶೀಲಿಸಿದ ಚುನಾವಣಾ ಆಯೋಗ ಆರೋಪಗಳ ಬಗ್ಗೆ ನೈಜ ಸಾಕ್ಷ್ಯ ಒದಗಿಸಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಸೂಚನೆ ನೀಡಿದೆ.

ಬಿಜೆಪಿ ದೂರಿನ ಮೇರೆಗೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡಿದೆ. ಮೇಲ್ನೋಟಕ್ಕೆ ಕಾಂಗ್ರೆಸ್ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಆಯೋಗ ಹೇಳಿದೆ.

”ಸಾಧನೆಯ ಕೊರತೆ, ದುಷ್ಕೃತ್ಯಗಳು, ರಾಜಕೀಯ ವಿರೋಧಿಗಳ ಭ್ರಷ್ಟಾಚಾರ, ಮುಕ್ತ ಆಡಳಿತವನ್ನು ಖಾತರಿಪಡಿಸದಿರುವ ಸಾಮಾನ್ಯ ಉಲ್ಲೇಖಗಳು ಮತ್ತು ಪ್ರಸ್ತಾಪಗಳು ರಾಜಕೀಯ ಪ್ರಚಾರಗಳಲ್ಲಿ ಇರುತ್ತವೆ. ನಿರ್ದಿಷ್ಟ ಆರೋಪಗಳನ್ನು ಪ್ರತ್ಯೇಕಿಸಬೇಕಾಗಿದೆ. ಏಕೆಂದರೆ ಅವುಗಳು ಪರಿಶೀಲಿಸಬೇಕಾದ ಸತ್ಯಗಳಿಂದ ಇರಬೇಕು” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

”ನೀವು ನೀಡಿದ ಜಾಹೀರಾತಿನಲ್ಲಿ ಉಲ್ಲೇಖಿಸಲಾದ ನೇಮಕಾತಿಗಳು, ವರ್ಗಾವಣೆಗಳು, ಉದ್ಯೋಗಗಳು ಮತ್ತು ಕಮಿಷನ್ ಪ್ರಕಾರಗಳ ದರಗಳಿಗೆ ಪುರಾವೆಗಳನ್ನು ಮೇ 7, 2023 ರಂದು ಸಂಜೆ 7 ಗಂಟೆಗಳ ಒಳಗೆ ಯಾವುದೇ ವಿವರಣೆಯೊಂದಿಗೆ ಮತ್ತು ಅದನ್ನು ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸುವ ಮೂಲಕ ಪಕ್ಷ ಮಾಡಿದ ಆರೋಪಗಳನ್ನು ಸಾಬೀತುಪಡಿಸಲು ಪುರಾವೆಗಳನ್ನು ನೀಡಬೇಕು” ಎಂದು ಸೂಚಿಸಿದೆ.

”ಪುರಾವೆಗಳನ್ನು ಸಲ್ಲಿಸಲು ವಿಫಲವಾದರೆ ನೀತಿ ಸಂಹಿತೆಗೆ ಸಂಬಂಧಿತ ಕಾನೂನು ನಿಬಂಧನೆಗಳನ್ನು ನಿಮ್ಮ ವಿರುದ್ಧ ಜರುಗಿಸಲಾಗುವುದು. ಜನಪ್ರತಿನಿಧಿ ಕಾಯ್ದೆ ಮತ್ತು ಐಪಿಸಿಯ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

ಇನ್ನು ಕಾಂಗ್ರೆಸ್ ಪಕ್ಷದ ಜಾಹಿರಾತಿನ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೇಶವಪ್ರಸಾದ್ ವತಿಯಿಂದ ಇಂದು ಲೀಗಲ್ ನೋಟೀಸ್ ಜಾರಿಗೊಳಿಸಲಾಗಿದೆ. ತಕ್ಷಣ ಆರೋಪ ಹಿಂಪಡೆದು ಪತ್ರಿಕೆಗಳಲ್ಲಿ ಕ್ಷಮೆಯಾಚನೆ ಜಾಹಿರಾತು ನೀಡಬೇಕು. ಇಲ್ಲವಾದರೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಸದ್ಯ ಚುನಾವಣಾ ಆಯೋಗ ಮೇ 7 ರವರೆಗೆ ಗಡುವು ನೀಡಿದ್ದು ಕಾಂಗ್ರೆಸ್ ಪಕ್ಷ ಅಷ್ಟರೊಳಗೆ ಸಾಕ್ಷ್ಯಾಧಾರ ಒದಗಿಸಬೇಕಿದೆ.

ಜಾಹೀರಾತಿನಲ್ಲಿ ಏನಿದೆ?

”ಈ ಟ್ರಬಲ್ ಇಂಜಿನ್ ಸರ್ಕಾರ- ಭ್ರಷ್ಟಾಚಾರದ ರೇಟ್ ಕಾರ್ಡ್ 2019-2023” ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದೆ.

”ಸಿಎಂ ಹುದ್ದೆಗೆ 2500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂಗಳನ್ನು ಬಿಜೆಪಿ ಪಡೆಯುತ್ತದೆ” ಎಂದು ಆರೋಪಿಸಲಾಗಿದೆ.

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್: 5ರಿಂ 15 ಕೋಟಿ ರೂ.,

ಇಂಜಿನಿಯರ್‌: 1ರಿಂದ 5 ಕೋಟಿ ರೂ.

ಸಬ್‌ ರಿಜಿಸ್ಟ್ರಾರ್‌: 50 ಲಕ್ಷ ರೂ.ಗಳಿಂದ 5 ಕೋಟಿ ರೂ.

ಬೆಸ್ಕಾ: 1 ಕೋಟಿ ರೂ.

ಪಿಎಸ್‌ಐ: 80 ಲಕ್ಷ ರೂ.

ಸಹಾಯಕ ಪ್ರಾಧ್ಯಾಪಕ: 50 ಲಕ್ಷ – 70 ಲಕ್ಷ ರೂ.

ಉಪನ್ಯಾಸಕ: 30 ಲಕ್ಷ- 50 ಲಕ್ಷ ರೂ.

ಎಫ್‌ಡಿಎ:30 ಲಕ್ಷ ರೂ.

ಸಹಾಯಕ ಇಂಜಿನಿಯರ್‌: 30 ಲಕ್ಷ ರೂ.

ಬಮುಲ್- 25 ಲಕ್ಷ ರೂ.

ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್‌ 10 ಲಕ್ಷ ರೂ.

ಪೊಲೀಸ್ ಪೇದೆ 10 ಲಕ್ಷ ರೂ.

ಹುದ್ದೆಗಳ ದರ 

ಬಿಡಿಎ ಆಯುಕ್ತ : 10 ಕೋಟಿ – 15 ಕೋಟಿ ರೂ.

ಕೆಪಿಎಸ್‌ಸಿ ಅಧ್ಯಕ್ಷ: 5 ರಿಂದ 15 ಕೋಟಿ ರೂ.

ಡಿಸಿ ಮತ್ತು ಎಸ್‌ಪಿ:  5 ರಿಂದ 15 ಕೋಟಿ ರೂ.

ಉಪಕುಲಪತಿ: 5 ರಿಂದ 10 ಕೋಟಿ ರೂ.

ಎಸಿ ಮತ್ತು ತಹಸೀಲ್ದಾರ್‌ 50 ಲಕ್ಷ- 3 ಕೋಟಿ ರೂ.

ಸರ್ಕಾರದ ಡೀಲ್‌ಗಳು

ಕೋವಿಡ್ ಕಿಟ್ ಪೂರೈಕೆ: 75%

ಪಿಡಬ್ಲ್ಯುಡಿ ಗುತ್ತಿಗೆಗಳು: 40 %

ಮಠಕ್ಕೆ ಅನುದಾನ: 30%

ಉಪಕರಣಗಳ ಪೂರೈಕೆ: 40%

ಮೊಟ್ಟೆ ಪೂರೈಕೆ: 30%

ರಸ್ತೆ ಗುತ್ತಿಗೆಗಳು: 40%

ಹೀಗೆ ಜಾಹೀರಾತಿನಲ್ಲಿ ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. ”ಕಳೆದ ನಾಲ್ಕೇ ವರ್ಷಗಳಲ್ಲಿ 40% ಸರ್ಕಾರ ಕನ್ನಡಿಗರಿಂದ  1,50,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ. ಬದಲಾವಣೆ ಹಾಗೂ ಪ್ರಗತಿಗೆ ನಿಮ್ಮ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚುನಾವಣಾ ಪ್ರಚಾರದ ಸಭೆಗಳಲ್ಲಿ ಮಾತನಾಡಿದ್ದನ್ನೆಲ್ಲಾ ನೀತಿ ಸಂಹಿತೆ ಒಳಗೆ ಬರುವದಾದರೆ ಚುನಾವಣಾ ಪ್ರಚಾರವನ್ನು ತೆಗೆದು ಹಾಕಬೇಕು ಪ್ರಜಾಪ್ರಭುತ್ವದಲ್ಲಿ ಆರೋಪ ಮತ್ತು ಪ್ರತ್ಯಾಾರೂಪಗಳು ಇದ್ದೇ ಇರುತ್ತವೆ ಇದೊಂದು ವಿಚಿತ್ರ ಪ್ರಜಾಪ್ರಭುತ್ವ ಭ್ರಷ್ಟ ಸರ್ಕಾರ ಅಂತ ಹೇಳಿದ್ದನ್ನು ಪ್ರೂವ್ ಮಾಡುವುದು ಹೇಗೆ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...