Homeಮುಖಪುಟಶಾಹೀನ್‌ ಬಾಗ್‌ ಪ್ರತಿಭಟನಾಕಾರರೊಂದಿಗೆ ಮಾತುಕತೆ ಸಾಧ್ಯವಿಲ್ಲ: ಸಚಿವೆ ಸ್ಮೃತಿ ಇರಾನಿ

ಶಾಹೀನ್‌ ಬಾಗ್‌ ಪ್ರತಿಭಟನಾಕಾರರೊಂದಿಗೆ ಮಾತುಕತೆ ಸಾಧ್ಯವಿಲ್ಲ: ಸಚಿವೆ ಸ್ಮೃತಿ ಇರಾನಿ

ಪಾಕಿಸ್ತಾನದಂತಹ ದೇಶದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರರಿಗೆ ಆಶ್ರಯ ನೀಡುವ ಸಿಎಎಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ಸಿಎಎ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಶಾಹೀನ್ ಬಾಗ್‌ನಲ್ಲಿ ವಿಷಕಾರಿ ವಾತಾವರಣ ಇರುವುದರಿಂದ ಅವರೊಂದಿಗೆ ಮಾತನಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

“ನಾವು ಮೋದಿಯನ್ನು ಕೊಲ್ಲುತ್ತೇವೆ” ಎಂಬ ಘೋಷಣೆಗಳನ್ನು ಕೂಗುವಂತೆ ಮಕ್ಕಳನ್ನು ತರಬೇತುಗೊಳಿಸುವವರ ಬಗ್ಗೆ ನೀವು ಏನು ಹೇಳುತ್ತೀರಿ? ಜನರು ‘ಭಾರತ್ ತೇರೆ ತುಕ್ಡೆ ಹೊಂಗೆ’ ಎಂದು ಹೇಳಿದಾಗ ನೀವು ಏನು ಹೇಳುತ್ತೀರಿ. ನಾವು 15 ಕೋಟಿ ಎಂದು ಹೇಳುವವರಿಗೆ ನೀವು ಏನು ಹೇಳುತ್ತೀರಿ…?” ಎಂದು ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.

ಪ್ರತಿಭಟನಾಕಾರರು ತಮ್ಮ ಮಕ್ಕಳನ್ನು ಪ್ರತಿಭಟನಾ ಸ್ಥಳಕ್ಕೆ ಏಕೆ ಕರೆತರುತ್ತಾರೆ ಎಂದು ಪ್ರಶ್ನಿಸಿದ ಅವರು, ಚಳಿಗಾಲದಲ್ಲಿ ಮಹಿಳೆಯೊಬ್ಬಳು ತನ್ನ ನಾಲ್ಕು ತಿಂಗಳ ಮಗುವನ್ನು ಪ್ರತಿಭಟನಾ ಸ್ಥಳಕ್ಕೆ ಕರೆತಂದದ್ದು ಅಂತಿಮವಾಗಿ ಶಿಶುವಿನ ಸಾವಿಗೆ ಕಾರಣವಾಯಿತು ಎಂಬುದು ವಿವರಿಸಲಾಗದಷ್ಟು ಆಘಾತಕಾರಿ ಎಂದಿದ್ದಾರೆ.

ಪ್ರತಿಭಟನಾಕಾರರಿಗೆ ಪ್ರತಿಭಟಿಸುವ ಹಕ್ಕಿದೆ ಎಂದು ಒಪ್ಪಿಕೊಂಡ ಅವರು, ಆದರೆ ಕಾಂಗ್ರೆಸ್ ನ ಸಲ್ಮಾನ್ ಖುರ್ಷಿದ್ ಅವರಂತಹ ನಾಯಕರು ಶಾಹೀನ್ ಬಾಗ್ ನಲ್ಲಿ ವಿಭಜಕ ಘೋಷಣೆಗಳೊಂದಿಗೆ ಭಾವೋದ್ರೇಕದ ಮಾತುಗಳನ್ನಾಡುತ್ತಾರೆ ಎಂದು ಆರೋಪಿಸಿದರು.

“ಪಂಡಿತರನ್ನು ಕಾಶ್ಮೀರದಿಂದ ಹೊರಹಾಕಿದಾಗ ಖುರ್ಷಿದ್‌ ಅದೇ ಕಾಳಜಿಯನ್ನು ಏಕೆ ತೋರಿಸಲಿಲ್ಲ?” ಎಂದು ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.

ಶಹೀನ್ ಬಾಗ್‌ ಪ್ರತಿಭಟನೆಯ ಜಾಗವನ್ನು ಬದಲಾಯಿಸುವಂತೆ ಪರಿಹಾರವನ್ನು ಕಂಡುಕೊಳ್ಳಲು ಪ್ರತಿಭಟನಾಕಾರರೊಂದಿಗೆ ಮಾತನಾಡಲು ಸುಪ್ರೀಂ ಕೋರ್ಟ್‌ ಮೂರು ಮಧ್ಯವರ್ತಿಗಳನ್ನು ನೇಮಿಸಿದೆ. ಆದರೆ ಗುರುವಾರ ಮತ್ತು ಶುಕ್ರವಾರದ ಎರಡು ಸುತ್ತಿನ ಮಾತುಕತೆಗಳು ಸಹ ವಿಫಲವಾಗಿವೆ.

ಪಾಕಿಸ್ತಾನದಂತಹ ದೇಶದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರರಿಗೆ ಇದು ಆಶ್ರಯ ನೀಡುತ್ತದೆ ಎಂಬ ಬಗ್ಗೆ ಹೆಮ್ಮೆ ಇದೆ ಎಂದು ಕೇಂದ್ರ ಸಚಿವ ಸ್ಮೃತಿ ಇರಾನಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಸಮರ್ಥಿಸಿಕೊಂಡಿದ್ದಾರೆ.

“ಸಿಖ್ ಅಥವಾ ಹಿಂದೂ ಹುಡುಗಿಯರ ಮೇಲೆ ಅತ್ಯಾಚಾರ ಮತ್ತು ಅವಳ ಅತ್ಯಾಚಾರಿಗಳನ್ನು ಮದುವೆಯಾಗುವಂತೆ ಒತ್ತಾಯಿಸಿದ ಪ್ರಕರಣಗಳು ನಡೆದಿವೆ. ಅವರು ಭಾರತದಲ್ಲಿ ಆಶ್ರಯ ಬಯಸುವ ಜನರು. ಅವರಿಗೆ ಅಗತ್ಯವಾದ ಆಶ್ರಯವನ್ನು ನೀಡುವ ಈ ಕಾನೂನು ನನಗೆ ಹೆಮ್ಮೆ ತಂದಿದೆ ”ಎಂದು ಲಖನೌದ ಹಿಂದೂಸ್ತಾನ್ ಸಮಾಗಂನಲ್ಲಿ ಇರಾನಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...