Homeಮುಖಪುಟಶಾಹೀನ್‌ ಬಾಗ್‌ ಪ್ರತಿಭಟನಾಕಾರರೊಂದಿಗೆ ಮಾತುಕತೆ ಸಾಧ್ಯವಿಲ್ಲ: ಸಚಿವೆ ಸ್ಮೃತಿ ಇರಾನಿ

ಶಾಹೀನ್‌ ಬಾಗ್‌ ಪ್ರತಿಭಟನಾಕಾರರೊಂದಿಗೆ ಮಾತುಕತೆ ಸಾಧ್ಯವಿಲ್ಲ: ಸಚಿವೆ ಸ್ಮೃತಿ ಇರಾನಿ

ಪಾಕಿಸ್ತಾನದಂತಹ ದೇಶದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರರಿಗೆ ಆಶ್ರಯ ನೀಡುವ ಸಿಎಎಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ಸಿಎಎ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಶಾಹೀನ್ ಬಾಗ್‌ನಲ್ಲಿ ವಿಷಕಾರಿ ವಾತಾವರಣ ಇರುವುದರಿಂದ ಅವರೊಂದಿಗೆ ಮಾತನಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

“ನಾವು ಮೋದಿಯನ್ನು ಕೊಲ್ಲುತ್ತೇವೆ” ಎಂಬ ಘೋಷಣೆಗಳನ್ನು ಕೂಗುವಂತೆ ಮಕ್ಕಳನ್ನು ತರಬೇತುಗೊಳಿಸುವವರ ಬಗ್ಗೆ ನೀವು ಏನು ಹೇಳುತ್ತೀರಿ? ಜನರು ‘ಭಾರತ್ ತೇರೆ ತುಕ್ಡೆ ಹೊಂಗೆ’ ಎಂದು ಹೇಳಿದಾಗ ನೀವು ಏನು ಹೇಳುತ್ತೀರಿ. ನಾವು 15 ಕೋಟಿ ಎಂದು ಹೇಳುವವರಿಗೆ ನೀವು ಏನು ಹೇಳುತ್ತೀರಿ…?” ಎಂದು ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.

ಪ್ರತಿಭಟನಾಕಾರರು ತಮ್ಮ ಮಕ್ಕಳನ್ನು ಪ್ರತಿಭಟನಾ ಸ್ಥಳಕ್ಕೆ ಏಕೆ ಕರೆತರುತ್ತಾರೆ ಎಂದು ಪ್ರಶ್ನಿಸಿದ ಅವರು, ಚಳಿಗಾಲದಲ್ಲಿ ಮಹಿಳೆಯೊಬ್ಬಳು ತನ್ನ ನಾಲ್ಕು ತಿಂಗಳ ಮಗುವನ್ನು ಪ್ರತಿಭಟನಾ ಸ್ಥಳಕ್ಕೆ ಕರೆತಂದದ್ದು ಅಂತಿಮವಾಗಿ ಶಿಶುವಿನ ಸಾವಿಗೆ ಕಾರಣವಾಯಿತು ಎಂಬುದು ವಿವರಿಸಲಾಗದಷ್ಟು ಆಘಾತಕಾರಿ ಎಂದಿದ್ದಾರೆ.

ಪ್ರತಿಭಟನಾಕಾರರಿಗೆ ಪ್ರತಿಭಟಿಸುವ ಹಕ್ಕಿದೆ ಎಂದು ಒಪ್ಪಿಕೊಂಡ ಅವರು, ಆದರೆ ಕಾಂಗ್ರೆಸ್ ನ ಸಲ್ಮಾನ್ ಖುರ್ಷಿದ್ ಅವರಂತಹ ನಾಯಕರು ಶಾಹೀನ್ ಬಾಗ್ ನಲ್ಲಿ ವಿಭಜಕ ಘೋಷಣೆಗಳೊಂದಿಗೆ ಭಾವೋದ್ರೇಕದ ಮಾತುಗಳನ್ನಾಡುತ್ತಾರೆ ಎಂದು ಆರೋಪಿಸಿದರು.

“ಪಂಡಿತರನ್ನು ಕಾಶ್ಮೀರದಿಂದ ಹೊರಹಾಕಿದಾಗ ಖುರ್ಷಿದ್‌ ಅದೇ ಕಾಳಜಿಯನ್ನು ಏಕೆ ತೋರಿಸಲಿಲ್ಲ?” ಎಂದು ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.

ಶಹೀನ್ ಬಾಗ್‌ ಪ್ರತಿಭಟನೆಯ ಜಾಗವನ್ನು ಬದಲಾಯಿಸುವಂತೆ ಪರಿಹಾರವನ್ನು ಕಂಡುಕೊಳ್ಳಲು ಪ್ರತಿಭಟನಾಕಾರರೊಂದಿಗೆ ಮಾತನಾಡಲು ಸುಪ್ರೀಂ ಕೋರ್ಟ್‌ ಮೂರು ಮಧ್ಯವರ್ತಿಗಳನ್ನು ನೇಮಿಸಿದೆ. ಆದರೆ ಗುರುವಾರ ಮತ್ತು ಶುಕ್ರವಾರದ ಎರಡು ಸುತ್ತಿನ ಮಾತುಕತೆಗಳು ಸಹ ವಿಫಲವಾಗಿವೆ.

ಪಾಕಿಸ್ತಾನದಂತಹ ದೇಶದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರರಿಗೆ ಇದು ಆಶ್ರಯ ನೀಡುತ್ತದೆ ಎಂಬ ಬಗ್ಗೆ ಹೆಮ್ಮೆ ಇದೆ ಎಂದು ಕೇಂದ್ರ ಸಚಿವ ಸ್ಮೃತಿ ಇರಾನಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಸಮರ್ಥಿಸಿಕೊಂಡಿದ್ದಾರೆ.

“ಸಿಖ್ ಅಥವಾ ಹಿಂದೂ ಹುಡುಗಿಯರ ಮೇಲೆ ಅತ್ಯಾಚಾರ ಮತ್ತು ಅವಳ ಅತ್ಯಾಚಾರಿಗಳನ್ನು ಮದುವೆಯಾಗುವಂತೆ ಒತ್ತಾಯಿಸಿದ ಪ್ರಕರಣಗಳು ನಡೆದಿವೆ. ಅವರು ಭಾರತದಲ್ಲಿ ಆಶ್ರಯ ಬಯಸುವ ಜನರು. ಅವರಿಗೆ ಅಗತ್ಯವಾದ ಆಶ್ರಯವನ್ನು ನೀಡುವ ಈ ಕಾನೂನು ನನಗೆ ಹೆಮ್ಮೆ ತಂದಿದೆ ”ಎಂದು ಲಖನೌದ ಹಿಂದೂಸ್ತಾನ್ ಸಮಾಗಂನಲ್ಲಿ ಇರಾನಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...