Homeಕರ್ನಾಟಕವರುಣದಲ್ಲಿ ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ ಪ್ರತಿಕ್ರಿಯೆ

ವರುಣದಲ್ಲಿ ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ವಿ.ಸೋಮಣ್ಣ ಐದು ದಿನಗಳ ಕಾಲ ಪ್ರಚಾರ ಹಮ್ಮಿಕೊಂಡಿದ್ದು, ಮೊದಲ ದಿನವೇ ಕೆಲವು ಯುವಕರು ಸಿದ್ದರಾಮಯ್ಯನವರಿಗೆ ಜೈಕಾರ ಕೂಗಿ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಸೋಮಣ್ಣನವರಿಗೆ ಘೇರಾವ್ ಹಾಕಿರುವ ಘಟನೆ ಕ್ಷೇತ್ರದ ಭುಗತಹಳ್ಳಿಯಲ್ಲಿ ನಡೆದಿದೆ. ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದು ವರದಿಯಾಗಿದೆ. ಇದನ್ನು ನಮ್ಮ‌ ಪಕ್ಷದ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೆ ಅದು ಸರಿ ಅಲ್ಲ. ಎಲ್ಲ ಅಭ್ಯರ್ಥಿಗಳಿಗೂ ಮುಕ್ತ ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು” ಎಂದಿದ್ದಾರೆ.

”ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದಕ್ಕೆ ಅಡ್ಡಿ ಪಡಿಸಬಾರದು. ಅಂತಿಮವಾಗಿ ಮತದಾರರು ತಮ್ಮ ಆಯ್ಕೆಯನ್ನು ತಾವೇ ನಿರ್ಧರಿಸುತ್ತಾರೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಏನಿದು ಘಟನೆ:

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಾಷಣ ಮಾಡುತ್ತಿದ್ದ ವೇಳೆ ಯುವಕನೋರ್ವ, ಸಚಿವ ಸೋಮಣ್ಣ ಅವರಿಗೆ ಪ್ರಶ್ನೆ ಕೇಳಿದ್ದಾನೆ. ಭಾಷಣ ಮುಗಿಯುವವರೆಗೂ ಕಾಯುವಂತೆ ಸೋಮಣ್ಣ ಸೂಚನೆ ನೀಡಿದ್ದರು. ಬಳಿಕ ಸೋಮಣ್ಣನವರ ಭಾಷಣ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಪರ ಘೋಷಣೆ ಕೂಗಲಾಗಿದೆ. ಮತ್ತೊಂದು ಯುವಕರ ಗುಂಪು ಬಿಜೆಪಿ ಮತ್ತು ಸೋಮಣ್ಣನವರ ಪರ ಘೋಷಣೆ ಕೂಗಿದೆ. ಹೀಗಾಗಿ ಭುಗತಹಳ್ಳಿಯಲ್ಲಿ ಪ್ರಚಾರವನ್ನು ಕೈಬಿಟ್ಟು ಸೋಮಣ್ಣನವರು ಬೇರೊಂದು ಗ್ರಾಮಕ್ಕೆ ತೆರಳಿದರು.

ಇದನ್ನೂ ಓದಿ: ವರುಣಾ: ಸೋಮಣ್ಣನವರಿಗೆ ಘೇರಾವ್, ಸಿದ್ದರಾಮಯ್ಯನವರಿಗೆ ಜೈಕಾರ

ವರುಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋದವರಿಗೂ ಪ್ರತಿಭಟನೆಯ ಬಿಸಿ

ಈ ಹಿಂದೆ ಏಪ್ರಿಲ್ 18ರಂದು ಸಹ ಸೋಮಣ್ಣ ವರುಣಾ ಕ್ಷೇತ್ರದ ಲಲಿತಾದ್ರಿಪುರದಲ್ಲಿ ಪ್ರಚಾರಕ್ಕೆ ಬಂದಿದ್ದ ವೇಳೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು. ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಮತ ಕೇಳಲು ಬಂದಿದ್ದೀರಿ ಎಂದು ಪ್ರಶ್ನಿಸಿ ಗಲಾಟೆ ಮಾಡಿದ್ದರು. ಮೈಸೂರು ಕೊಡಗು ಬಿಜೆಪಿ ಸಂಸದ ಸಂಸದ ಪ್ರತಾಪ್ ಸಿಂಹ ಅವರಿಗೂ ಪ್ರತಿಭಟನೆಯ ಬಿಸಿ ತಟ್ಟಿತ್ತು. ಯುವಕನೋರ್ವ ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿತ್ತು.

ಗುರುವಾರ ಸಂಸದ ಪ್ರತಾಪ್ ಸಿಂಹ್ ಅವರು ಕುಪ್ಯ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಅವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದರು. ಅವರ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ಪ್ರತಾಪ ಸಿಂಹ ಕಕ್ಕಾಬಿಕ್ಕಿಯಾಗಿ ನಿಂತಿರುವ ವಿಡಿಯೋ, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.

”ನಾವು ಬಂದಿರುವುದೇ ಸಂವಿಧಾನ ಬದಲಾಯಿಸುವುದಕ್ಕೆ ಎಂದು ಬಿಜೆಪಿಯವರು ಹೇಳಿದ್ದೀರಿ. ಸಂವಿಧಾನ ರಚಿಸಿದ ಅಂಬೇಡ್ಕರ್ ಅಭಿಮಾನಿಗಳಾದ ನಾವು ನಿಮ್ಮನ್ನು ಹೇಗೆ ಬೆಂಬಲಿಸುವುದು?” ಎಂದು ಗ್ರಾಮಸ್ಥರು ಕೇಳಿದ್ದರು.

”ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ನಿಮ್ಮದೇ ಸರ್ಕಾರವಿದ್ದಾಗ ರಸ್ತೆರಾಜ ಎಂದು ಬಿರುದು ಕೊಟ್ಟಿದ್ರಿ. ಈಗ ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ನಿರ್ಮಾಣವಾದ ಮೇಲೆ ಅವರ ವಿರುದ್ಧವೇ ಆರೋಪ ಮಾಡುತ್ತಿದ್ದೀರಿ ಇದು ಸರಿಯೇ?” ಎಂದು ಕೇಳಿ ತರಾಟೆಗೆ ತೆಗೆದುಕೊಂಡಿದ್ದರು.

”ಸಂಸದ ವಿ.ಶ್ರೀನಿವಾಸ ಪ್ರಸಾದ್ ಈವರೆಗೂ ನಮ್ಮೂರಿಗೆ ಬಂದೇ ಇಲ್ಲ” ಎಂದೂ ದೂರಿದ್ದರು.

ಪ್ರತಾಪ್ ಸಿಂಹ ಅವರು ಈ ಹಿಂದೆ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ಹೇಳಿಕೆಗಳ ಬಗ್ಗೆಯೇ ಪ್ರಶ್ನೆ ಮಾಡಿದ ಗ್ರಾಮಸ್ಥರು, ”ಸಿದ್ದರಾಮಯ್ಯ ಮೈಸೂರಿಗೆ ನೀಡಿರುವ ಕೊಡುಗೆ ಏನು ಎಂದೆಲ್ಲಾ ಕೇಳಿದ್ದೀರಿ. ಅವರ ಪಕ್ಕ ಹೋಗಿ ಕುಳಿತುಕೊಳ್ಳಿ ಆಗ ಎಲ್ಲವೂ ನಿಮಗೆ ಗೊತ್ತಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

”ಅಕ್ಕಿ ಮೋದಿಯದು, ಚೀಲ ಸಿದ್ದರಾಮಯ್ಯ ಅವರದ್ದು ಎಂದು ಆರೋಪಿಸುತ್ತೀರಲ್ಲಾ ನೀವೇನು ಕೊಡುಗೆ ಕೊಟ್ಟಿದ್ದೀರಿ? ನಿಮ್ಮ ಸರ್ಕಾರದಲ್ಲಿ ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ಕೊಡುತ್ತಿಲ್ಲವೇಕೆ? ಅಡುಗೆ ಅನಿಲ ಸಿಲಿಂಡರ್ ಬೆಲೆ ಇಷ್ಟೊಂದು ಜಾಸ್ತಿಯಾಗಿದೆಯಲ್ಲ ಏಕೆ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...